ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಖಂಡಿಸಿ ಪ್ರತಿಭಟನೆ

ಮಂಗಳೂರು, ಜೂ.11: ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಯತ್ನವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ರಿ), ಸಿಐಟಿಯು (CITU) ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ನಗರಪಾಲಿಕೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದಾಳಿ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರಸನ್ನ ರವಿ…

Read More

ಬಂಟ್ವಾಳ ಆಡಳಿತ ಸೌಧದ ಲಿಪ್ಟ್‌ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು: ತಪ್ಪಿದ ಭಾರೀ ಅನಾಹುತ

ಬಂಟ್ವಾಳ, ಜೂ.11: ಬಂಟ್ವಾಳ ಆಡಳಿತ ಸೌಧದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅಳವಡಿಸಲಾಗಿರುವ ಲಿಪ್ಟ್‌ನಲ್ಲಿ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು ಆತಂಕದ ಕ್ಷಣಗಳನ್ನು ಅನುಭವಿಸಿದ ಘಟನೆ ಮಧ್ಯಾಹ್ನ ನಡೆದಿದೆ. ಆಡಳಿತ ಸೌಧದ ಮೇಲಿನ ಮೂರು ಅಂತಸ್ತುಗಳಿಗೆ ತೆರಳಲು ಸಾರ್ವಜನಿಕರು ಲಿಪ್ಟ್ ಬಳಸುತ್ತಿದ್ದು, ಮಧ್ಯಾಹ್ನ ಸುಮಾರು 12.45ರಿಂದ 1.30ರ ಅವಧಿಯಲ್ಲಿ ಕಚೇರಿ ಕೆಲಸಕ್ಕೆ ಬಂದಿದ್ದ ಇಬ್ಬರು ಲಿಪ್ಟ್ ಒಳಗೆ ಸಿಲುಕಿಕೊಂಡಿದ್ದರು. ಲಿಪ್ಟ್‌ನೊಳಗಿದ್ದ ವ್ಯಕ್ತಿಗಳು ಮೊಬೈಲ್ ಮೂಲಕ ತಮ್ಮ ಸ್ನೇಹಿತರಿಗೆ ಮಾಹಿತಿ ನೀಡಿದ್ದು, ಬಳಿಕ ಅವರು ತಹಶೀಲ್ದಾರ್ ಅವರನ್ನು…

Read More

ಕೊರಗ ಜನಾಂಗದ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ: ತಹಶೀಲ್ದಾರ್ ಗೈರಿಗೆ ಸಭೆಯಲ್ಲಿ ಆಕ್ರೋಶ

ಬಂಟ್ವಾಳ, ಜೂ.11: ಆದಿವಾಸಿ ಕೊರಗ ಜನಾಂಗದವರ ತಾಲೂಕು ಮಟ್ಟದ ಅಭಿವೃದ್ಧಿ ಸಮಿತಿ ಸಭೆಯು ತಾ.ಪಂ. ಕಾರ್ಯನಿರ್ವಹಣಾಧಿಕಾರಿ (ಇ.ಒ.) ಸಚಿನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬಿಸಿರೋಡಿನ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿನಯ ಕುಮಾರಿ ಅವರ ಉಪಸ್ಥಿತಿಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳು ಮತ್ತು ಕೊರಗ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಕೊರಗ ಜನಾಂಗಕ್ಕೆ ಸರ್ಕಾರದಿಂದ ಹಲವು ಯೋಜನೆಗಳಿದ್ದರೂ, ಮಾಹಿತಿ ಕೊರತೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವು ಕಟ್ಟಕಡೆಯ ಫಲಾನುಭವಿಗಳಿಗೂ…

Read More

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬ

ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ ಮೋರೆಯಲ್ಲಿ ಶಾಲೆ ಕಡೆ ಹೆಜ್ಜೆ ಹಾಕುವ ಮಕ್ಕಳು ಶಾಲೆಯಲ್ಲಿ ಮತ್ತೆ ನಿತ್ಯದ ಪಾಠ ನೋಟ್ಸ್ ಗಳಲ್ಲಿ ಒಗ್ಗಿಕೊಳ್ಳಲು ಸ್ವಲ್ಪ ದಿನಗಳಾದರು ಬೇಕೆನ್ನುವುದು ಸಾಮಾನ್ಯ ಸಂಗತಿ. ಮಕ್ಕಳು ಸಂತಸದ ಕಲಿಕೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಮತ್ತು ಇಷ್ಟಪಟ್ಟು ಓದಿಕೊಳ್ಳುವಂತಾಗಬೇಕೆನ್ನುವ ಉದ್ದೇಶದಿಂದ ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಮಳೆ ಹಬ್ಬ…

Read More

ರಂಗೋತ್ಸವ ಸಂವಿಧಾನ ಶಿಲ್ಪಿಗೆ, ಹಸಿರು ಕ್ರಾಂತಿಯ ಹರಿಕಾರರಿಗೆ ನೀಡಿದ ಅಪೂರ್ವ ಗೌರವ: ಡಾ. ಸಿ. ಸೋಮಶೇಖರ್

ಬೆಂಗಳೂರು: ಕಳೆದ ನಾಲ್ಕೂವರೆ ದಶಕಗಳಿಂದ ವಿ .ಕೆ.ಎಂ ಕಲಾವಿದರು ಸಂಸ್ಥೆಯಿಂದ ಡಾ. ಬಿ. ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳವನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಇದು ಸಂವಿಧಾನ ಶಿಲ್ಪಿ ಹಾಗೂ ಹಸಿರು ಕ್ರಾಂತಿಯ ಹರಿಕಾರರಿಬ್ಬರಿಗೂ ನೀಡಿದ ಅಪೂರ್ವ ಗೌರವಾಗಿದೆ ಎಂದು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಸಿ ಸೋಮಶೇಖರ್ ಅಭಿಪ್ರಾಯಪಟ್ಟರು. ಬುಧವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ನಿರತರ 45 ನೇ ವರ್ಷದ ರಂಗೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…

Read More

ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು

ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್ ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು…

Read More

ಪರಮ ಏಕಾದಶಿ ವೈಭವ: ಶ್ರೀ ವಿಠೋಭ ರುಕುಮಾಯಿ ಸನ್ನಿಧಿಯಲ್ಲಿ ಭಕ್ತಿಸಾಗರ

ಮಂಗಳೂರು, ಜೂ.11: ಅಧಿಕ ಮಾಸದ ಪವಿತ್ರ ಪರಮ ಏಕಾದಶಿ ಪ್ರಯುಕ್ತ ಮಂಗಳೂರಿನ ವಿ.ಟಿ. ರಸ್ತೆಯ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದಲ್ಲಿ ಭಕ್ತಿ, ಸಂಭ್ರಮ ಹಾಗೂ ವೈಭವ ಮನೆ ಮಾಡಿದೆ. ಶ್ರೀ ಮಹಾವಿಷ್ಣುವಿಗೆ ಅತ್ಯಂತ ಪ್ರಿಯವಾದ ಪರಮ ಏಕಾದಶಿಯ ಅಂಗವಾಗಿ ದೇವಳವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ದೇವರಿಗೆ ಪ್ರಿಯವಾದ ವಿವಿಧ ತರಕಾರಿ, ಹಣ್ಣು-ಹಂಪಲು ಹಾಗೂ ಸುಂದರ ಪುಷ್ಪಗಳಿಂದ ಸಿಂಗಾರಗೊಂಡಿರುವ ಶ್ರೀ ವಿಠೋಭ ರುಕುಮಾಯಿ ದೇವರ ದಿವ್ಯ ಅಲಂಕಾರ ಭಕ್ತರನ್ನು ಆಕರ್ಷಿಸುತ್ತಿದೆ. ಬೆಳಿಗ್ಗೆಯಿಂದಲೇ ವಿವಿಧ ಭಜನಾ ಮಂಡಳಿಗಳ ಸಂಕೀರ್ತನೆಯ ನಾದದೊಂದಿಗೆ ದೇವಳದಲ್ಲಿ…

Read More

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೆಸ್ಕಾಂ ಸಿಬ್ಬಂದಿಗೆ ಹೃದಯಾಘಾತ: ಉದ್ಯೋಗಿ ಸಾವು

ಬಂಟ್ವಾಳ, ಜೂ.11: ಕರ್ತವ್ಯದಲ್ಲಿದ್ದ ವೇಳೆ ಮೆಸ್ಕಾಂ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು–ಕುಂದಾಯಗೋಳಿ ಪ್ರದೇಶದಲ್ಲಿ ನಡೆದಿದೆ. ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ (55) ಮೃತ ದುರ್ದೈವಿ. ಅವರು ಮೆಸ್ಕಾಂ ಪಾಣೆಮಂಗಳೂರು ಶಾಖೆಯಲ್ಲಿ ಸಹಾಯಕ ಮೆಕ್ಯಾನಿಕ್ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಧ್ಯಾಹ್ನ ವೇಳೆ ಶಂಭೂರು ಸಮೀಪದ ಕುಂದಾಯಗೋಳಿಯಲ್ಲಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಚಂದ್ರಶೇಖರ ನಾಯ್ಕ ಅವರು ಸಹೋದ್ಯೋಗಿಗಳೊಂದಿಗೆ ಕಂಬ…

Read More

ಬಡ ಮಕ್ಕಳ ಶಿಕ್ಷಣ ಹಾಗೂ ಪೌಷ್ಟಿಕ ಆಹಾರಕ್ಕಾಗಿ ಫುಡ್ ಟ್ರಕ್ ಹಸ್ತಾಂತರ

ಮಂಗಳೂರು, ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲಾ 317ಡಿ ಹಾಗೂ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಫೌಂಡೇಶನ್ (ಎಲ್‌ಸಿಐಎಫ್) ಸಹಯೋಗದಲ್ಲಿ ಸಮಾಜದ ಬಡ ಮಕ್ಕಳ ಶಿಕ್ಷಣ ಮತ್ತು ಆಹಾರದ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ರೂಪಿಸಲಾದ “ಫುಡ್ ಟ್ರಕ್” ಅನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅವರು ಅಕ್ಷಯ ಪಾತ್ರ ಫೌಂಡೇಶನ್‌ಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷರಾದ ಸನಂದನ ದಾಸ್ ಪ್ರಭು ಹಾಗೂ ನಕುಲ್ ಕೃಷ್ಣ ದಾಸ್ ಪ್ರಭು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಥಮ…

Read More

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು, ಜೂ.11: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಪ್ಪಳ ಪಚ್ಚಿಲಾಂಬರ್ ನಿವಾಸಿ ಫಝಲ್ (31) ಬಂಧಿತ ಆರೋಪಿ. ಈತ ಉಳ್ಳಾಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 76/2021ರ ಅಡಿಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಹಾಗೂ 21(ಬಿ) ಪ್ರಕರಣದ ಆರೋಪಿಯಾಗಿದ್ದನು. 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಫಝಲ್ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಉಪ್ಪಳದಲ್ಲಿರುವ ಆತನ ನಿವಾಸದಿಂದ ಪೊಲೀಸರು ಬಂಧಿಸಿ ಮಂಗಳೂರಿನ ಜಿಲ್ಲಾ ಪ್ರಧಾನ ಸತ್ರ…

Read More
error: Content is protected !!