ಉಡುಪಿ: ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ಗೂಂಡಾಗಿರಿ ಖಂಡಿಸಿ ಪ್ರತಿಭಟನೆ

ಉಡುಪಿ ಜಿಲ್ಲೆಯಲ್ಲಿ ಮಲ್ಪೆ ಬಂದರಿನಲ್ಲಿ ಶ್ರಮಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಈ ಪ್ರತಿಭಟನೆ ನಡೆಸಲಾಯಿತು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಉಡುಪಿ ಜಿಲ್ಲೆ ಹಾಗೂ ಇತರೆ ಸಮಾನ ಮನಸ್ಕ ಸಂಘಟನೆಗಳು ಪ್ರತಿಭಟನೆಗೆ ನೇತೃತ್ವ ನೀಡಿದರು.. ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ಸುಂದರ್ ಮಾಸ್ಟರ್, ಮಲ್ಪೆ ಬಂದರಿನಲ್ಲಿ ಎಲ್ಲರಿಗೂ ಸಮಾನವಾಗಿ ದುಡಿಯುವ…

Read More

ಭಾರತೀಯ ಜನತಾ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಜನಾ ಸಭೆ; ‘ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026’ ಚಾಲನೆ

ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ರ ಭಾಗವಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ಯೋಜನಾ ಸಭೆ ಇಂದು 04 ಮಾರ್ಚ್ 2026 ರಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉದ್ಘಾಟಿಸಿ ಮಾತಾನಾಡಿ ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಶಿಸ್ತು ಮತ್ತು ರಾಷ್ಟ್ರಭಕ್ತಿಯೊಂದಿಗೆ ಸಾಗಲು ಈ ಪ್ರಶಿಕ್ಷಣ ವರ್ಗವು ಭದ್ರ ಬುನಾದಿಯಾಗಲಿದೆ ಎಂದರು….

Read More

ಕಾರ್ಮಿಕ ಸಂಹಿತೆಗಳ ವಿರುದ್ಧ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಮಂಗಳೂರು: ಮಾ.4: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನಾ ಪ್ರದರ್ಶನವು ಇಂದು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು ಜರುಗಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಾಯಿತ ವಿವಿಧ ಯೂನಿಯನ್‌ಗಳು ಹಾಗೂ ಕಾರ್ಮಿಕ ಸಂಘಟನೆಗಳ ಸದಸ್ಯರು Centre of Indian Trade Unions (CITU) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಪ್ರತ್ಯೇಕ ಮನವಿಗಳನ್ನು ಸಲ್ಲಿಸುವ ಮೂಲಕ ಕಾರ್ಮಿಕ ಸಂಹಿತೆಗಳ ವಿರುದ್ಧ ತಮ್ಮ ಆಕ್ಷೇಪಣೆಗಳನ್ನು ದಾಖಲಿಸಿದರು. ಕೇಂದ್ರ ಸರಕಾರವು ಕಾರ್ಮಿಕ ವರ್ಗವನ್ನು ಗುಲಾಮಗಿರಿಯತ್ತ ತಳ್ಳಲು ಸಂಚು…

Read More

ಕೆನರಾ ಕಾಲೇಜಿಗೆ ʻಸ್ವಾಯತ್ತ’ ಮಾನ್ಯತೆ, ಉದ್ಯೋಗಾಧಾರಿತ ಹೊಸ ಕೋರ್ಸ್‌ಗಳು ಶೀಘ್ರದಲ್ಲಿ ಆರಂಭ

ಮಂಗಳೂರು: ಕಳೆದ ಐದು ದಶಕಗಳಿಂದ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ಬಂದಿರುವ Canara Collegeಗೆ ‘ಸ್ವಾಯತ್ತತೆ’ (Autonomy) ಸ್ಥಾನಮಾನ ಲಭಿಸಿದ್ದು, 2025-26ನೇ ಶೈಕ್ಷಣಿಕ ವರ್ಷದಿಂದ ಈ ಬದಲಾವಣೆ ಜಾರಿಗೆ ಬರಲಿದೆ ಎಂದು ಸಂಸ್ಥೆಯ ಪ್ರಮುಖರು ತಿಳಿಸಿದರು. ನಗರದ The Ocean Pearl ಹೋಟೆಲ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಹರ್ಷ ವ್ಯಕ್ತಪಡಿಸಿದ Canara High School Association ಅಧ್ಯಕ್ಷ ಡಿ. ವಾಸುದೇವ ಕಾಮತ್, “1973ರಲ್ಲಿ ಸ್ಥಾಪನೆಯಾದ ನಮ್ಮ ಕಾಲೇಜು ಇಂದು Mangalore University ವ್ಯಾಪ್ತಿಯಲ್ಲಿ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ…

Read More

ಮಂಗಳೂರು ಡಿಸೈನ್ ಸಮಿಟ್ 2026: ಸ್ಥಿರ ಭವಿಷ್ಯದತ್ತ ನಗರ ಚಿಂತನೆ

ಮಂಗಳೂರು: ನಗರಗಳ ಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯತ್ತ ದಾರಿ ತೋರಿಸುವ ಉದ್ದೇಶದಿಂದ “ಮಂಗಳೂರು ಡಿಸೈನ್ ಸಮಿಟ್ 2026” ಕಾರ್ಯಕ್ರಮವು ಮಾರ್ಚ್ 7 ಹಾಗೂ 8ರಂದು ನಗರದ St Aloysius Deemed to be Universityಯಲ್ಲಿ ನಡೆಯಲಿದೆ ಎಂದು ಸಮಿತಿಯ ನಿರ್ದೇಶಕಿ ಅಲ್ಕಾ ಮನೋಜ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿಟ್‌ನ ಪ್ರಮುಖ ಭಾಷಣಗಳು ಎರಿಕ್ ಮಥಿಯಾಸ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಾಗಾರಗಳು ಮದರ್ ತೆರೇಸಾ ಪೀಸ್ ಪಾರ್ಕ್‌ನಲ್ಲಿ ಆಯೋಜಿಸಲಾಗಿದೆ ಎಂದರು. ನಗರ ಯೋಜನೆ, ಸಮುದ್ರ…

Read More

ಸರ್ವಧರ್ಮ ಭಾವೈಕ್ಯತೆಯ ಸಂದೇಶ ಸಾರಲಿರುವ ಧಾರ್ಮಿಕ ಮುಖಂಡರು

ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 11ನೇ ವರ್ಷದ ಇಫ್ತಾರ್ ಸೌಹಾರ್ಧ ಕೂಟವು ಮಾರ್ಚ್ 7 ರಂದು ಮಂಗಳೂರಿನ ಜೆಪ್ಪು ಮೋರ್ಗನ್ಸ್‌ ಗೇಟ್ ನ ಪಾಲೇಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ ಎಂದು ಮಾಜಿ ಕಾರ್ಪೋರೇಟರ್ ಜೆ.ನಾಗೇಂದ್ರ ಕುಮಾರ್ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಕಳೆದ 10 ವರ್ಷಗಳಿಂದ ಸರ್ವಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ ಹಬ್ಬ, ಕ್ರಿಸ್ಮಸ್ ಸಂಭ್ರಮಾಚರಣೆ ಹಾಗೂ ರಂಜಾನ್ ಹಬ್ಬವನ್ನು ಮಂಗಳೂರಿನ ಹಲವು ಕಡೆಗಳಲ್ಲಿ ಸರ್ವಧರ್ಮಿಯರು ಸೇರಿಕೊಂಡು…

Read More

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಪೊಲೀಸರ ವಶದಿಂದ ಪರಾರಿ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ

ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಸುಳ್ಯದ ಎಸ್‌ಸಿ‌ಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.118/24 ಪ್ರಕರಣ (ಕಲಂ 121(1), 132, 262 BNS) ಸಂಬಂಧ ತನಿಖೆಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ…

Read More

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಕಾಮೆಂಟ್: ಭಟ್ಕಳ ಮೂಲದ ಆರೋಪಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ಉಳ್ಳಾಲ ಮಸೀದಿಗೆ ಬಾಂಬ್ ಸ್ಪೋಟದ ಕಾಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ‌ದೇವಿನಗರ ನಿವಾಸಿ ಶಂಕರ್‌ ಮಸ್ತಪ್ಪ ಮೊಗೆರ್ (35)‌ ಎಂದು ಪೊಲೀಸರು ತಿಳಿಸಿದ್ದಾರೆ. ಈತ ʼshankar11916ʼ ಎಂಬ Instagram ಖಾತೆಯಲ್ಲಿ “Support maadi bro ullal masjid hatra bomb blast madthini” ಎಂದು ಪೋಸ್ಟ್‌ ಮಾಡಿದ್ದು, ಇದು ವೈರಲ್‌ ಆಗಿತ್ತು. ಇದನ್ನು ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ದೊಡ್ಡಮನಿ ಅವರು…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ತೃತೀಯ ದಿನ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ತೃತೀಯ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಗಾನ ಕಲಾವಿದರೂ ನಾಟಕ ರಚನೆಕಾರರೂ,ವಾಗ್ಮಿಗಳೂ ಆದ ಕದ್ರಿ ನವನೀತ ಶೆಟ್ಟಿ ಮಾತನಾಡುತ್ತಾ ಯಕ್ಷಗಾನ ಕ್ಷೇತ್ರದ ತನ್ನ ಅನುಭವಗಳನ್ನು ಮೆಲುಕು ಹಾಕುತ್ತಾ ಯಕ್ಷಗಾನ ಕ್ಷೇತ್ರಕ್ಕೆ ಬರುವ ಹೊಸ ಕಲಾವಿದರು ಮೊದಲು ಉತ್ತಮ ಪ್ರೇಕ್ಷಕರಾಗಬೇಕು ಹಾಗಾದರೆ ಮಾತ್ರ ಅವರು ಕಲಾವಿದರಾಗಬಲ್ಲರು ಎಂದು ಹೇಳುತ್ತಾ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ತಾಳಮದ್ದಳೆ ಅಷ್ಟಾಹ ಕಾರ್ಯಕ್ರಮ ಯಶಸ್ವಿಯಾಗಿ…

Read More

ಮಾರ್ಚ್ 5 ಕ್ಕೆ ಗೋ ನಂದಿ ಪರಿವಾರ ರಥಯಾತ್ರೆಗೆ ಚಾಲನೆ … !

ಮಂಗಳೂರು:ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿರುವ ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ವತಿಯಿಂದ ಗೋ ನಂದಿ ಪರಿವಾರ ರಥಯಾತ್ರೆಯು ಅಡ್ಯಾರು ಕಟ್ಟೆಯಿಂದ ಮಾರ್ಚ್ 5 ಕ್ಕೆ ಉದ್ಘಾಟನೆಗೊಂಡು ಅಡ್ಯಾರಿನ ವೀರಾಂಜನೇಯ ದೇವಸ್ಥಾನದಲ್ಲಿ ಸಪ್ತಾಹದ ಆಚರಣೆಗೆ ಅಣಿಯಾಗಲಿದೆ ಎಂದು ಗೋಸೇವಾ ಗತಿವಿಧಿಯ ದಕ್ಷಿಣ ಪ್ರಾಂತ ಗೋ-ಸೇವಾ ಸಂಯೋಜಕ ಪ್ರವೀಣ್ ಸರಳಾಯ ತಿಳಿಸಿದರು ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಗೋ ನಂದಿ ಪರಿವಾರ ರಥಯಾತ್ರೆಯ ಪ್ರಮುಖ ಉದ್ದೇಶ ಗೋ ರಕ್ಷಣೆಯಾಗಿದೆ . ಗೋ…

Read More
error: Content is protected !!