ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಮಿಂಚುತ್ತಿರುವ ವಕೀಲ ಡಿ. ಪದ್ಮನಾಭ ಕುಮಾರ್ …. ! 8 ಬಾರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚಾಂಪಿಯನ್‌ಷಿಪ್‌ … !

ಮಂಗಳೂರು:ಅಬುದಾಬಿಯಲ್ಲಿ ಫೆಬ್ರವರಿ 4ರಿಂದ 15ರವರೆಗೆ ನಡೆದ ಅಂತರಾಷ್ಟ್ರೀಯ ಮಾಸ್ಟರ್ಸ್ ಗೇಮ್ಸ್ 2026ರಲ್ಲಿ ಮಂಗಳೂರು ಮೂಲದ ವಕೀಲ ಡಿ. ಪದ್ಮನಾಭ ಕುಮಾರ್ ಗಮನಾರ್ಹ ಸಾಧನೆ ಮಾಡಿ ಚಾಂಪಿಯನ್ನಾಗಿ ಹೊರಹೊಮ್ಮಿದ್ದು ಈ ಮೂಲಕ 8 ಬಾರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚಾಂಪಿಯನ್ ಆಗಿರುವುದಾಗಿ ಸ್ವತಃ ಅವರೇ ಹೇಳಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿಯಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಈ ಕ್ರೀಡಾಕೂಟದಲ್ಲಿ 25,000 ಕ್ರೀಡಾಪಟುಗಳು 125 ರಾಷ್ಟ್ರಗಳಿಂದ ಭಾಗವಹಿಸಿದ್ದರು. 27ಕ್ಕೂ ಹೆಚ್ಚು ಕ್ರೀಡೆಗಳು 38 ಸ್ಥಳಗಳಲ್ಲಿ ಆಯೋಜಿಸಲ್ಪಟ್ಟಿತ್ತು ಎಂದರು . ನಾನು…

Read More

ಟ್ರೆಕ್ಕಿಂಗ್ ಹೋಗಿದ್ದ ಮೆಡಿಕಲ್ ಶಾಪ್ ಮಾಲಕಿ ನದಿಯಲ್ಲಿ‌ ಮುಳುಗಿ ದುರಂತ ಅಂತ್ಯ … !

ಉಡುಪಿ:ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರಂದು ನಡೆದಿದೆ.ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಮೃತಪಟ್ಟ ಮಹಿಳೆ. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು. ಈ ವೇಳೆ ಶುಭಶ್ರೀ‌ ಅವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.

Read More

ಮಾಜಿ ಪ್ರಧಾನಿ ದೇವೆಗೌಡರು ಕರಾವಳಿ ಪ್ರವಾಸ ! ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮನ… !

ಕಡಬ :ಭಾರತ ಸರಕಾರದ ಮಾಜಿ ಪ್ರಧಾನ ಮಂತ್ರಿಗಳಾದ ಎಚ್ ಡಿ ದೇವೆ ಗೌಡರು ರವಿವಾರ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೆಲಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೇ ಸುಬ್ರಹ್ಮಣ್ಯದ ವಿವಿಐಪಿ ಅತಿಥಿಗ್ರಹಕ್ಕೆ ಬಂದರು.ಈ ಸಂಧರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂದಿ ಮಾಜಿ ಪ್ರಧಾನಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಅತಿಥಿಗ್ರಹದಲ್ಲಿ ವಿಶ್ರಾಂತಿ ಪಡೆದು ರಾತ್ರಿ…

Read More

ಕಡಲನಗರಿಯಲ್ಲಿ ಇವಾಲ್ವ್ 5ನೇ ವಾರ್ಷಿಕೋತ್ಸವ: ಮಹಿಳಾ ಉದ್ಯಮಿಗಳಿಗೆ ಬಲವಾದ ವೇದಿಕೆ

ಮಂಗಳೂರು:ನಗರದ ಉದ್ಯಮಶೀಲ ಚೈತನ್ಯ ಮತ್ತೊಮ್ಮೆ ಮೆರೆದಿದೆ. ಮಹಿಳಾ ಉದ್ಯಮಿಗಳ ಸಂಘಟನೆ Evolve – A Women Entrepreneurs’ Association ತನ್ನ 5ನೇ ವಾರ್ಷಿಕೋತ್ಸವ ಶನಿವಾರ ಮಂಗಳೂರಿನ Ocean Pearl ನಲ್ಲಿ ‘ಬಿಜ್ ಇನ್‌ಸೈಟ್ಸ್’ ವಾರ್ಷಿಕ ಬಿಸಿನೆಸ್ ಕಾನ್ಕ್ಲೇವ್ ಮೂಲಕ ಅದ್ದೂರಿಯಾಗಿ ಆಚರಿಸಿದೆ. ಮಂಗಳೂರಿನ ಮಹಿಳಾ ಉದ್ಯಮಿಗಳ ಪ್ರಮುಖ ವೇದಿಕೆಯಾಗಿ ಬೆಳೆದಿರುವ ಇವಾಲ್ವ್, ಕಳೆದ ಐದು ವರ್ಷಗಳಲ್ಲಿ ತನ್ನ ಸದಸ್ಯತ್ವವನ್ನು ಐದು ಪಟ್ಟು ಹೆಚ್ಚಿಸಿಕೊಂಡು ಗಮನಾರ್ಹ ಸಾಧನೆ ಮಾಡಿದೆ. ಮಹಿಳಾ ಉದ್ಯಮಶೀಲತೆ, ಸ್ಟಾರ್ಟ್‌ಅಪ್ ವೃದ್ಧಿ, ನೆಟ್‌ವರ್ಕಿಂಗ್ ಹಾಗೂ ನಾಯಕತ್ವ…

Read More

ಮಂಗಳೂರು ಸರಸ್ ಮೇಳಕ್ಕೆ ನೀರಸ ಸ್ಪಂದನೆ: ಮಹಿಳಾ ವ್ಯಾಪಾರಿಗಳಲ್ಲಿ ನಿರಾಸೆ

ಮಂಗಳೂರು: ರಾಷ್ಟ್ರ ಮಟ್ಟದ ಸರಸ್ ಮೇಳಕ್ಕೆ ಭಾರಿ ಸಂಖ್ಯೆಯಲ್ಲಿ ಜನರ ಪ್ರತಿಕ್ರಿಯೆ ನಿರೀಕ್ಷೆ ಮಾಡಿದ್ದ ಆಯೋಜಕರಿಗೆ ಕರಾವಳಿಯ ಮಂಗಳೂರಿನಲ್ಲಿ ನಿರಾಶೆಯ ಛಾಯೆ ಮೂಡಿದೆ. ಕಳೆದ 8 ದಿನಗಳಿಂದ ನಡೆಯುತ್ತಿರುವ ಸರಸ್ ಮೇಳಕ್ಕೆ ಮುಗಿ ಬೀಳಬೇಕಿದ್ದ ಜನರಿಂದ ನೀರಸ ಪ್ರತಿಕ್ರಿಯೆ ಉಂಟಾಗಿದೆ. ಇನ್ನು ಕೆಲ ಸ್ವಸಹಾಯ ಗುಂಪಿನ ಮಹಿಳಾ ವ್ಯಾಪಾರಿಗಳು ಕೈತುಂಬ ವ್ಯಾಪಾರ ಆಗದೇ ಕೈ ಸುಟ್ಟುಕೊಂಡಿದ್ದಾರೆ. ಕೆಲ ವ್ಯಾಪಾರಿಗಳು ಇಡೀ ದಿನ ವ್ಯಾಪಾರ ಮಾಡಿದರೂ ಆಹಾರ, ತಿಂಡಿ ತಿನಿಸುಗಳು ಮಾರಾಟ ಆಗದೇ ಇರುವುರಿಂದ ಬಿಸಾಡುವಂತಹ ಅಪರೂಪದ ಘಟನೆಗಳು…

Read More

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಅಭಾವ: ಕಾಂಗ್ರೆಸ್ ಆಡಳಿತದ ನಿರ್ಲಕ್ಷ್ಯಕ್ಕೆ ವೇದವ್ಯಾಸ ಕಾಮತ್ ಕಿಡಿ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ರೋಗಿಗಳನ್ನು ಪರದಾಡುವ ಸ್ಥಿತಿಗೆ ತಂದಿಟ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತೊಮ್ಮೆ ಬಟಾಬಯಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಔಷಧಗಳ ಕೃತಕ ಕೊರತೆ ಸೃಷ್ಟಿಸಿ ಬಡ ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಡ ಜನರ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವಾಗಿದೆ. ನಮ್ಮ ಜಿಲ್ಲೆಯಲ್ಲಿಯೂ ಅನೇಕರು ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳುತ್ತಿದ್ದು ಸ್ಪಂದನೆ ನೀಡಬೇಕಾಗಿದ್ದ ಆರೋಗ್ಯ…

Read More

ಪುತ್ತೂರು ಮಹಿಳಾ ಕಾಲೇಜು ಪ್ರಾಂಶುಪಾಲರ ವರ್ಗಾವಣೆ: ಶಾಸಕರ ಸೇಡಿನ ಕ್ರಮ – ಸಂಜೀವ ಮಠಂದೂರು ಆರೋಪ

ಪುತ್ತೂರು: ಮಹಿಳಾ ಕಾಲೇಜಿನ ಪ್ರಾಂಶುಪಾಲರ ವರ್ಗಾವಣೆಯ ವಿಚಾರ ಮಾದ್ಯಮದಲ್ಲಿ ನೋಡಿದ್ದೇನೆ. ಇದೊಂದು ಶಾಸಕರ ಸೇಡಿನ ಕ್ರಮದಂತೆ ಕಾಣುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಮಾಧ್ಯಮದೊಂದಿಗೆ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡಲು ಹಕ್ಕಿದೆ. ಪ್ರಜಾಪ್ರಭುತ್ವದಲ್ಲಿ ಅನುಮತಿ ಪಡೆದೇ ಪ್ರತಿಭಟನೆ ಮಾಡಬೇಕೆಂದು ಏನು ಇಲ್ಲ. ವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಪ್ರತಿಭಟನೆಯಿಂದ ಸಾರ್ವನಿಕರಿಗೆ ಅಡ್ಡಿಯಾಗುತ್ತಿದೆಯಾ? ಎಂಬುದು ಮಾತ್ರ ನೋಡಬೇಕಿದ್ದು. ಮಹಿಳಾ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಸಾರ್ವಜನಿಕರಿಗೆ, ವಾಹನಗಳಿಗೆ ಅಡ್ಡಿಯಾಗಿಲ್ಲ. ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು 18 ವರ್ಷ ಪ್ರಾಯದ…

Read More

ಪುತ್ತೂರು ಮಹಿಳಾ ಕಾಲೇಜು: ಮೂಲಭೂತ ಸಮಸ್ಯೆ ಬಗೆಹರಿಸಲಾಗದ ಶಾಸಕ ಅಶೋಕ್ ರೈ ಅವರಿಂದ ಪ್ರಾಂಶುಪಾಲರ ಅಮಾನತಿನ ‘ಒಣ ಪ್ರತಿಷ್ಠೆ’ – ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ

ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮೂಲಭೂತ ಸೌಕರ್ಯಗಳ ಕೊರತೆ ಮತ್ತು ವಿಪರೀತ ಧೂಳಿನ ಸಮಸ್ಯೆಯಿಂದ ಬೇಸತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಿಸಿರುವ ಪುತ್ತೂರು ಶಾಸಕ ಅಶೋಕ್ ರೈ ಅವರ ದ್ವೇಷದ ರಾಜಕಾರಣವನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಉಗ್ರವಾಗಿ ಖಂಡಿಸಿದ್ದಾರೆ. ವಿದ್ಯಾರ್ಥಿನಿಯರ ಹಿತಾಸಕ್ತಿಗೆ ಸ್ಪಂದಿಸಿದ ಪ್ರಾಮಾಣಿಕ ಅಧಿಕಾರಿಯನ್ನು ಬಲಿಪಶು ಮಾಡುವ ಬದಲು, ನಿಯಮ…

Read More

ಹೈದರಾಬಾದಲ್ಲಿ ಕುಳಿತು ಸೈಬರ್ ವಂಚನೆ ಮಾಡುತ್ತಿದ್ದ ಸೈಬರ್ ವಂಚಕರ ಬಂಧನ

ಹೈದರಾಬಾದಲ್ಲಿ ಕುಳಿತು ಸೈಬರ್ ವಂಚನೆ ಮಾಡುತ್ತಿದ್ದ ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣಾ ಅ.ಕ್ರ. 09/2026, ಕಲಂ. 66(ಸಿ), 66(ಡಿ) ಐಟಿ ಕಾಯ್ದೆ & ಕಲಂ. 308(5), 318(4), 319(2),111 ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ-2023ರಂತೆ ಕೇಸ್ ದಾಖಲಾಗಿತ್ತು. ಬಂಧಿತರನ್ನು ಶೇಖ್ ಕರೀಮುಲ್ಲಾ @ ರಸೂಲ್, ಬುಡಿದಿನ್ನೆ ವಂಶಿ @ ಗುರು, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ, ಬಡೆ ಶ್ರೀನಿವಾಸ್, ಉತ್ಪಲ ಸಂತೋಷ್ ಕೃಷ್ಣ ಎಂದು ಗುರುತಿಸಲಾಗಿದೆ. ಈ…

Read More

ದೇರಳಕಟ್ಟೆ ಯಲ್ಲಿ ಶೇಖರಣೆ ಗೊಂಡ ತ್ಯಾಜ್ಯ ನೀರು: ಪ್ರತಿಭಟನೆ

ತುಳು ನಾಡ ರಕ್ಷಣಾ ವೇದಿಕೆ ಹಾಗೂ ಆಟೋರಿಕ್ಷಾ ಚಾಲಕ ಘಟಕದ ಆಶ್ರಯದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ನಿಂತಿರುವ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಆಡುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಒದಗಿಸಿ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ಸಭೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಬಳಿ ಇರುವ ರಿಕ್ಷಾ ಪಾರ್ಕ್ ನಲ್ಲಿ ನಡೆಯಿತು. ತುಳು ನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ, ದೇರಳಕಟ್ಟೆ ಪರಿಸರ ದಲ್ಲಿ ನಿರ್ಮಾಣ ಆಗಿರುವ ಬಹು ಮಹಡಿ ಕಟ್ಟಡ ಗಳ…

Read More
error: Content is protected !!