ಮಂಜೇಶ್ವರ ಗೋವಿಂದ ಪೈ-ಕೆದಂಬಾಡಿ ರಸ್ತೆಯಲ್ಲಿ ಗುಂಡಿ, ನೀರು ನಿಂತು ಜನರ ಆಕ್ರೋಶ
ಮಂಜೇಶ್ವರ: ರಾಜ್ಯ ಸರ್ಕಾರದ ಕಿಫ್ಬಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಂಜೇಶ್ವರ ಗೋವಿಂದ ಪೈ – ಕೆದಂಬಾಡಿ ರಸ್ತೆ ಕಾಮಗಾರಿ ಮುಗಿದ ಬೆನ್ನಲ್ಲೇ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. 2027ರ ತನಕ ರಸ್ತೆಯ ನಿರ್ವಹಣಾ ವಾರಂಟಿ ಅವಧಿ ಇದ್ದರೂ, ಗುತ್ತಿಗೆದಾರನ ಬೇಜವಾಬ್ದಾರಿತನ ಹಾಗೂ ಅಧಿಕಾರಿಗಳ ಮೌನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಿಫ್ಬಿ ಫಂಡ್ನಿಂದ ಮಂಜೂರಾದ 5 ಕೋಟಿ 24 ಲಕ್ಷ ರೂ. ವೆಚ್ಚದಲ್ಲಿ ಈ ರಸ್ತೆಯ ಕಾಮಗಾರಿಯು 2024ರಲ್ಲಿ ಪೂರ್ಣಗೊಂಡಿತ್ತು. ನಿಯಮದಂತೆ ಸತತ ಮೂರು ವರ್ಷಗಳ ಕಾಲ…