ಮಹಿಳೆಯ ಮನೆಗೆ ನುಗ್ಗಿ ಬ್ಲ್ಯಾಕ್‌ಮೇಲ್: ಚಿನ್ನಾಭರಣ, ₹55 ಸಾವಿರ ದೋಚಿದ ಐವರು ಬಂಧನ

ಕಾಸರಗೋಡು : ಮಹಿಳೆಯ ಮನೆಗೆ ಅಕ್ರಮವಾಗಿ ನುಗ್ಗಿ, ಆಕೆ ಮತ್ತು ಆಕೆಯ ಗಂಡುಸ್ನೇಹಿತನನ್ನು ಬೆದರಿಸಿ ಚಿನ್ನಾಭರಣ ಹಾಗೂ ಹಣ ದೋಚಿದ್ದ ಐವರು ಆರೋಪಿಗಳನ್ನು ವಿದ್ಯಾನ್‌ಗರ್ ಪೊಲೀಸರು ಬಂಧಿಸಿದ್ದಾರೆ. ​ಬಂಧಿತರನ್ನು ಬಿ. ಶರೀಫ್, ಮೊಹಮ್ಮದ್ ಸಾಲಿಹ್, ಉಮರ್ ಮುಖ್ತಾರ್, ಮೊಹಮ್ಮದ್ ಶಿಹಾನ್ ಮತ್ತು ಅಬ್ದುಲ್ ರಶೀದ್ ಎಂದು ಗುರುತಿಸಲಾಗಿದೆ. ಕಳೆದ ಜುಲೈ 21 ರಂದು ಈ ಘಟನೆ ನಡೆದಿದ್ದು, ಮನೆಗೆ ಬಂದಿದ್ದ ಗಂಡುಸ್ನೇಹಿತನ ಜೊತೆ ಮಹಿಳೆಯನ್ನು ಸೇರಿಸಿ ಫೋಟೋ ತೆಗೆದಿದ್ದ ಆರೋಪಿಗಳು, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದರು. ನಂತರ…

Read More

ಪ್ರಿಯದರ್ಶಿನಿ ಬಸ್‌ನಲ್ಲಿ ಹಣ ಕಳವು: ಪಿಗ್ಮಿ ಏಜೆಂಟ್‌ನಿಂದ 20,000 ರೂಪಾಯಿ ಎಗರಿಸಿದ ಕಳ್ಳರು

​ ಕುಂಬಳೆ : ಕಾಸರಗೋಡಿನಿಂದ ಮಂಗಳೂರಿಗೆ ಹೊರಟಿದ್ದ ಪ್ರಿಯದರ್ಶಿನಿ ರಸ್ತೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪಿಗ್ಮಿ ಏಜೆಂಟ್‌ ಅವರ 20,000 ರೂಪಾಯಿ ಕಳವಾಗಿದೆ. ​ಕಳತ್ತೂರು ನಿವಾಸಿ ರಾಘವ (49) ಎಂಬುವರು ಬ್ಯಾಂಕ್‌ನಲ್ಲಿ ಹಣ ಜಮಾ ಮಾಡಿ, ಬಳಿಕ ಪಡೆದಿದ್ದ 20 ರೂಪಾಯಿ ಮುಖಬೆಲೆಯ ನೋಟಿನ ಕಟ್ಟುಗಳನ್ನು ತಮ್ಮ ಬ್ಯಾಗ್‌ನಲ್ಲಿ ಇಟ್ಟುಕೊಂಡು ಕುಂಬಳೆಗೆ ಬಸ್ ಹತ್ತಿದ್ದರು.ಬಸ್ ಮೊಗ್ರಾಲ್ ತಲುಪಿದಾಗ ಬ್ಯಾಗ್‌ನ ಜಿಪ್ ತೆರೆದಿರುವುದು ಮತ್ತು ಹಣ ಮಿಸ್ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಸ್ ಅನ್ನು ಕುಂಬಳೆ ಪೊಲೀಸ್…

Read More

ವಿಚಿತ್ರ ಕಳ್ಳತನ: ₹1,500 ಕದ್ದ ಕಳ್ಳ, ದಾಖಲೆಗಳಿದ್ದ ಪರ್ಸ್ ಅಂಚೆಪೆಟ್ಟಿಗೆಯಲ್ಲಿ ಹಾಕಿದ

ಕಾಸರಗೋಡು : ಪಯ್ಯನ್ನೂರಿನಲ್ಲಿ ವಿಚಿತ್ರ ಕಳ್ಳತನವೊಂದು ನಡೆದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನೀಲೇಶ್ವರ ಮೂಲದ ರಾಜೀವನ್ ಎಂಬುವರ ಪರ್ಸ್ ಅನ್ನು ಕಳ್ಳನೊಬ್ಬ ಎಗರಿಸಿದ್ದಾನೆ. ಪರ್ಸ್‌ನಲ್ಲಿದ್ದ 1,500 ರೂಪಾಯಿ ನಗದನ್ನು ಮಾತ್ರ ತಾನು ಇಟ್ಟುಕೊಂಡು, ಎಟಿಎಂ, ಪ್ಯಾನ್ ಮತ್ತು ಇತರ ಪ್ರಮುಖ ದಾಖಲೆಗಳಿದ್ದ ಪರ್ಸ್ ಅನ್ನು 25 ಕಿ.ಮೀ ದೂರದ ಚೆರುಪುಳ ಅಂಚೆ ಪೆಟ್ಟಿಗೆಯಲ್ಲಿ ಹಾಕಿದ್ದಾನೆ. ​ಅಂಚೆ ನೌಕರರು ಈ ಪರ್ಸ್ ಅನ್ನು ಕಂಡುಹಿಡಿದು, ಅದರಲ್ಲಿದ್ದ ವಿಳಾಸದ ಆಧಾರದ ಮೇಲೆ ಮಾಲೀಕ ರಾಜೀವನ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಸೋಮವಾರ…

Read More

ಖ್ಯಾತ ಕವಿ, ಭಾಷಾ ವಿಜ್ಞಾನಿ ವಿ.ಬಿ. ಕುಳಮರ್ವ ಅವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು, ಸೆ. 19: ಕಾಸರಗೋಡು ಕನ್ನಡ ಭವನದ ನೇತೃತ್ವದಲ್ಲಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ಅ.11ರಿಂದ 20ರವರೆಗೆ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅ.18ರಂದು ನಡೆಯುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಖ್ಯಾತ ಕವಿ ಹಾಗೂ ಭಾಷಾ ವಿಜ್ಞಾನಿ ವಿ.ಬಿ. ಕುಳಮರ್ವ ಅವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲಾಗುವುದು. ಅ.18ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕವಿ ಸಮ್ಮೇಳನವು ಸಾಹಿತ್ಯ ಸಂಘಟಕ ಬಿ. ಶ್ರೀನಿವಾಸ್ ಬಹಾದ್ದೂರ್…

Read More

ಮಸ್ಕತ್ ಇಂಡಿಯನ್ ಸ್ಕೂಲ್ ಬಾಸ್ಕೆಟ್‌ಬಾಲ್ ತಂಡಕ್ಕೆ ಮಂಜೇಶ್ವರದ ಅನೋಕಿ ಆರ್. ನಾಯಕಿ

ಮಂಜೇಶ್ವರ: ಅಂತಾರಾಷ್ಟ್ರೀಯ ಶಾಲಾ ಬಾಸ್ಕೆಟ್‌ಬಾಲ್ ಪಂದ್ಯಾಟಕ್ಕೆ ಓಮನ್ ದೇಶದ ಮಸ್ಕತ್ ಇಂಡಿಯನ್ ಸ್ಕೂಲ್ ತಂಡದ ನಾಯಕಿಯಾಗಿ ಮಂಜೇಶ್ವರದ ಅನೋಕಿ ಆರ್. ಆಯ್ಕೆಯಾಗಿದ್ದಾರೆ. ಮಂಜೇಶ್ವರ ಹೊಸಂಗಡಿ ಅಂಗಡಿಪದವು ನಿವಾಸಿಗಳಾದ ಅಶ್ವಿನಿ ಮತ್ತು ರೋಹಿದಾಸ್ ಬಿ.ಎಂ. ದಂಪತಿಯ ಪುತ್ರಿಯಾಗಿರುವ ಅನೋಕಿ ಆರ್. ಪ್ರಸ್ತುತ ಕುಟುಂಬದೊಂದಿಗೆ ಮಸ್ಕತ್‌ನಲ್ಲಿ ವಾಸವಾಗಿದ್ದು, ಮಸ್ಕತ್ ಇಂಡಿಯನ್ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸೆಪ್ಟೆಂಬರ್ 21ರಿಂದ ಬಿಹಾರದಲ್ಲಿ ಅಂತಾರಾಷ್ಟ್ರೀಯ ಶಾಲಾ ಬಾಸ್ಕೆಟ್‌ಬಾಲ್ ಪಂದ್ಯಾಟ ನಡೆಯಲಿದ್ದು, ವಿಶ್ವದ ವಿವಿಧ ದೇಶಗಳ ಇಂಡಿಯನ್ ಸ್ಕೂಲ್ ತಂಡಗಳು ಸೇರಿದಂತೆ ಭಾರತದ ಕೇಂದ್ರೀಯ ತಂಡ…

Read More

ವಿರಾಜ್ ಅಡೂರ್‌ಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ಪುರಸ್ಕಾರ……!

ಕಾಸರಗೋಡು: ಜಿಲ್ಲೆಯ ಖ್ಯಾತ ಕವಿ ವಿರಾಜ್ ಅಡೂರ್ ಅವರು ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ಕ್ಕೆ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅ.11ರಿಂದ 20ರವರೆಗೆ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅ.18ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ‘ಕಾಸರಗೋಡು ದಸರಾ ಕವಿ ಸಮ್ಮೇಳನ’ದಲ್ಲಿ ವಿರಾಜ್ ಅಡೂರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಸಾಹಿತ್ಯ ಸಂಘಟಕ ಬಿ….

Read More

ಮೈಸೂರಿನ ಖ್ಯಾತ ಕವಿ ಡಾ. ತ್ಯಾಗರಾಜ್ ಟಿ. ಅವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಗರಿಮೆ….!

ಕಾಸರಗೋಡು: ಮೈಸೂರಿನ ಖ್ಯಾತ ಕವಿ ಹಾಗೂ ಸಾಹಿತಿ ಡಾ. ತ್ಯಾಗರಾಜ್ ಟಿ. ಅವರು 2026ನೇ ಸಾಲಿನ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ಭವ್ಯ ವೇದಿಕೆಯಲ್ಲಿ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅಕ್ಟೋಬರ್ 18ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಡಾ….

Read More

ಭಜನಾ ಲಾಂಛನ ಮತ್ತು ಸಮವಸ್ತ್ರ ವಿತರಣೆ

ಉಪ್ಪಳ : ಶ್ರೀ ಜೈ ಹನುಮಾನ್ ಕುಣಿತ ಭಜನಾ ತಂಡ ಚಿಗುರುಪಾದೆ ಇದರ ಸಮವಸ್ತ್ರ ಮತ್ತು ಲಾಂಛನವನ್ನು ಇತ್ತೀಚೆಗೆ ಅತಿಥಿ ಗಣ್ಯರ ಸಮ್ಮುಖದಲ್ಲಿ ಚಿಗುರುಪಾದೆಯಲ್ಲಿ ಬಿಡುಗಡೆ ಗೊಳಿಸಲಾಯಿತು. ಸಭೆಯ ಅಧ್ಯಕ್ಷತೆ ಯನ್ನು ಶ್ರೀ ವಸಂತ ಮಾಷ್ಟು ತೊಟ್ಟೆತ್ತೋಡಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಸತೀಶ್ ಕುಮಾರ್ ಕಾಪು ಪ್ರಧಾನ ಸಂಚಾಲಕರು ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು, ಶಂಕರ್ ಪ್ರದೀಪ್ ನಾಯಕ್, ನಾರಾಯಣ ಚಿಗುರುಪಾದೆ, ರಾಜೇಶ್ವರಿ ತೊಟ್ಟೆ ತ್ತೋಡಿ ಸದಾಶಿವ ರಾವ್, ಜಯಪ್ರಕಾಶ್…

Read More

ಗಣೇಶೋತ್ಸವದಲ್ಲಿ ಹಿರಿಯ ವಕೀಲ ಅರುಣ್ ಶ್ಯಾಮ್ ಮಂಜೇಶ್ವರ ಭಾಗಿ

ಮಂಜೇಶ್ವರ: ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಮಂಜೇಶ್ವರ ಅವರು ಮಂಜೇಶ್ವರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಗಣೇಶನ ದರ್ಶನ ಪಡೆದು ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ., ಗಣೇಶೋತ್ಸವ ಸಮಿತಿ ಅಧ್ಯಕ್ಷ ಯಾದವ ಬಡಾಜೆ, ನ್ಯಾ. ನವೀನ್ ರಾಜ್, ಪದ್ಮನಾಭ ಕಡಪರ, ಅವಿನಾಶ್ ಹೆಗ್ಡೆ, ದೇವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹಿಂದೂ ಸಂಘಟನೆಗಳಿಗೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ವಕೀಲರಾಗಿ ಕಾಣಿಸಿಕೊಂಡಿರುವ ಅರುಣ್ ಶ್ಯಾಮ್ ಮಂಜೇಶ್ವರ…

Read More

ಅವೈಜ್ಞಾನಿಕ ಚರಂಡಿ ನಿರ್ಮಾಣ: ಪೊಸೋಟು ಕುಟುಂಬಕ್ಕೆ ನಿಲ್ಲದ ಸಂಕಷ್ಟ – ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

​ಮಂಜೇಶ್ವರ: ನೂತನವಾಗಿ ನಿರ್ಮಿಸಲಾದ ಪಟ್ಪಥ ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಯಿಂದಾಗಿ, ಕಳೆದ ಮೂರು ವರ್ಷಗಳಿಂದ ಪೊಸೋಟು ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ಬದಿಯಲ್ಲಿರುವ ಕುಟುಂಬವೊಂದು ತೀವ್ರ ಸಂಕಷ್ಟ ಎದುರಿಸುತ್ತಿದೆ. ​ಸಮೀಪದ ಗೋವಿಂದ ಪೈ ಕಾಲೇಜು, ಅದರ ತಳಭಾಗ ಸೇರಿದಂತೆ ನಾಲ್ಕೂ ದಿಕ್ಕುಗಳಿಂದ ಹರಿದುಬರುವ ಮಳೆ ನೀರು ಹಾಗೂ ತ್ಯಾಜ್ಯ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಸಮಸ್ಯೆಗೆ ಮೂಲ ಕಾರಣವಾಗಿದೆ. ನಿಯಮಾವಳಿಗಳಿಗೆ ವ್ಯತಿರಿಕ್ತವಾಗಿ ಹರಿದು ಬರುವ ಕಲುಷಿತ ನೀರು ನೇರವಾಗಿ…

Read More
error: Content is protected !!