ಪೊಸೋಟು ಪ್ರದೇಶದಲ್ಲಿ ಜಲಾವೃತ ಭೀತಿ; ಶಾಶ್ವತ ಪರಿಹಾರಕ್ಕೆ ಒತ್ತಾಯ: ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆಗಾಲದಲ್ಲಿ ಮತ್ತೆ ಜಲಾವೃತ ಭೀತಿ
ಮಂಜೇಶ್ವರ : ನೂತನವಾಗಿ ಕಾಮಗಾರಿ ಪೂರ್ಣಗೊಂಡ ಷಟ್ಪಥ ರಸ್ತೆಯ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕೆಲಸದ ವೈಖರಿಯಿಂದಾಗಿ ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳು ಮತ್ತೊಮ್ಮೆ ಆತಂಕದ ದಿನಗಳನ್ನು ಎದುರಿಸುತ್ತಿದ್ದಾರೆ. ಮಳೆಗಾಲದ ಆರಂಭದಲ್ಲೇ ಸುರಿಯುತ್ತಿರುವ ಮಳೆಗೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ, ಪೊಸೋಟು ಮಲ್ಹರ್ ವಿದ್ಯಾಸಂಸ್ಥೆ ಮತ್ತು ಪರಿಸರದ ಮನೆಗಳು ಜಲಾವೃತವಾಗುವ ಭೀತಿಯಲ್ಲಿವೆ. ಪ್ರಮುಖ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ‘ಯುಲ್ ಸಿಸಿ’ ಕಂಪನಿಯು ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ಸರಾಗವಾಗಿ…