ಪೊಸೋಟು ಪ್ರದೇಶದಲ್ಲಿ ಜಲಾವೃತ ಭೀತಿ; ಶಾಶ್ವತ ಪರಿಹಾರಕ್ಕೆ ಒತ್ತಾಯ: ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆಗಾಲದಲ್ಲಿ ಮತ್ತೆ ಜಲಾವೃತ ಭೀತಿ

ಮಂಜೇಶ್ವರ : ನೂತನವಾಗಿ ಕಾಮಗಾರಿ ಪೂರ್ಣಗೊಂಡ ಷಟ್ಪಥ ರಸ್ತೆಯ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕೆಲಸದ ವೈಖರಿಯಿಂದಾಗಿ ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳು ಮತ್ತೊಮ್ಮೆ ಆತಂಕದ ದಿನಗಳನ್ನು ಎದುರಿಸುತ್ತಿದ್ದಾರೆ. ಮಳೆಗಾಲದ ಆರಂಭದಲ್ಲೇ ಸುರಿಯುತ್ತಿರುವ ಮಳೆಗೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ, ಪೊಸೋಟು ಮಲ್ಹರ್ ವಿದ್ಯಾಸಂಸ್ಥೆ ಮತ್ತು ಪರಿಸರದ ಮನೆಗಳು ಜಲಾವೃತವಾಗುವ ಭೀತಿಯಲ್ಲಿವೆ. ಪ್ರಮುಖ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ‘ಯುಲ್ ಸಿಸಿ’ ಕಂಪನಿಯು ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ಸರಾಗವಾಗಿ…

Read More

ಕಾಸರಗೋಡು ಕನ್ನಡ ಗ್ರಾಮದಲ್ಲಿ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026

ನವೆಂಬರ್ 7 ಮತ್ತು 8ರಂದು ಕೇರಳ-ಕರ್ನಾಟಕ ಉತ್ಸವ, ಕನ್ನಡ ರಾಜ್ಯೋತ್ಸವ ಸಂಭ್ರಮ ಕಾಸರಗೋಡು, ಜೂನ್ 9: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ 2026ರ ನವೆಂಬರ್ 7 ಮತ್ತು 8ರಂದು ಕಾಸರಗೋಡಿನ ಮೀಪುಗುರಿ-ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಐತಿಹಾಸಿಕ 8ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಲಾಗಿದೆ. ಕಳೆದ 36 ವರ್ಷಗಳಿಂದ…

Read More

ಅನಂತಪುರ ಉದ್ದಿಮೆ ಪಾರ್ಕ್ ದುರ್ನಾತ ವಿರೋಧಿಸಿ ಬೃಹತ್ ಪ್ರತಿಭಟನೆ

ಮಾಲಿನ್ಯಕ್ಕೆ ಶಾಶ್ವತ ಪರಿಹಾರ, ಆರೋಗ್ಯಕ್ಕೆ ಹಾನಿಕಾರಕ ಕೈಗಾರಿಕೆಗಳ ಮುಚ್ಚುವಂತೆ ಆಗ್ರಹ ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್‌ನ ಕಾರ್ಖಾನೆಗಳಿಂದ ಹೊರಸೂಸುತ್ತಿರುವ ತೀವ್ರ ದುರ್ನಾತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಸ್ಥಳೀಯರ ಆರೋಗ್ಯಕ್ಕೆ ಮಾರಕವಾಗಿರುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿ ಸೋಮವಾರ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮಾರ್ಚ್ ನಡೆಯಿತು. ನಾಯ್ಕಾಪಿನಿoದ ಆರಂಭವಾದ ಪ್ರತಿಭಟನಾ ಜಾಥಾಕ್ಕೆ ನೂರಾರು ಮಂದಿ ಸ್ಥಳೀಯರು ಭಾಗವಹಿಸಿದ್ದು, ಮಂಜೇಶ್ವರ ಶಾಸಕ A. K. M. Ashraf ಚಾಲನೆ ನೀಡಿದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಅನಂತಪುರ…

Read More

​ಮಂಜೇಶ್ವರದಲ್ಲಿ ಕಳಪೆ ಕಾಮಗಾರಿಯ ಅಟ್ಟಹಾಸ: 6 ತಿಂಗಳಲ್ಲೇ ಕಿತ್ತುಬಂದ 14 ಲಕ್ಷದ ರಸ್ತೆ

​ಮಂಜೇಶ್ವರ: ಮಂಜೇಶ್ವರ ಬ್ಲಾಕ್ ಪಂಚಾಯತ್ ಅನುದಾನದಲ್ಲಿ ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ‘ಮಂಜೇಶ್ವರ ಓಲ್ಡ್ ಎಂ.ಸಿ.ಸಿ’ ಕಾಂಕ್ರೀಟ್ ರಸ್ತೆ, ಇಂಟರ್‌ಲಾಕ್ ಮತ್ತು ಚರಂಡಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದೀಗ ಮೊದಲ ಮಾನ್ಸೂನ್ ಮಳೆಗೆ ತನ್ನ ಅಸಲಿ ಬಣ್ಣವನ್ನು ಹೊರಹಾಕಿದೆ.​ಕಾಮಗಾರಿ ಮುಗಿದು ಕೇವಲ 6 ತಿಂಗಳು ಕಳೆಯುವಷ್ಟರಲ್ಲೇ ರಸ್ತೆಯ ಕಾಂಕ್ರೀಟ್ ಜಲ್ಲಿಕಲ್ಲುಗಳು ಸಂಪೂರ್ಣವಾಗಿ ಕೊಚ್ಚಿಹೋಗಿವೆ. ಚರಂಡಿಯ ಅಕ್ಕಪಕ್ಕದ ಭಾಗಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ರಸ್ತೆ ಯಾವುದೇ ಕ್ಷಣದಲ್ಲೂ ಕುಸಿಯುವ ಭೀತಿಯಲ್ಲಿದೆ. ಈ ಅವ್ಯವಸ್ಥೆಯನ್ನು ಕಂಡು ಸಾರ್ವಜನಿಕರು…

Read More

“ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಹೊಸಂಗಡಿಯಲ್ಲಿ CITU ಧರಣಿ”

ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಗೆದುರಾಗಿ citu ಹೊಸಂಗಡಿ ಪೋಸ್ಟ್ ಆಫೀಸ್ ಬಳಿ ಧರಣಿ ಸಂಘಟಿಸಲಾಯಿತು. ಧರಣಿ ಯನ್ನು citu ಜಿಲ್ಲಾ ಉಪಾಧ್ಯಕ್ಷೆ ಕಾo ಬೇಬಿ ಶೆಟ್ಟಿ ಉದ್ಘಾಟಿಸಿ ,ಕೇಂದ್ರ ಸರ್ಕಾರ ಪಶ್ಚಿಮ ಏಷ್ಯಾ ಯುದ್ದದ ಕಾರಣ ನೀಡಿ ಬಂಡವಾಳ ಶಾಹಿಗಳಿಗೆ ದೇಶದ ಬಡಜನತೆಯನ್ನೂ ಕೊಳ್ಳೆ ಒಡೆಯಲು ಲೈಸೆನ್ಸ್ ಕೊಟ್ಟಂತಾಗಿದೆ . ನಗರ ಪ್ರದೇಶದಲ್ಲಿ ಹೋಟೆಲ್ ಗಳು ಬಂದ್ ಮಾಡಲಾಗಿದೆ ,ಆಹಾರ ಸಮೇತ ಸಿಗದ ಪರಿಸ್ಥಿತಿ ಬಂದಿದೆ .ಇದರಿಂದಾಗಿ ಕಾರ್ಮಿಕ ಕೆಲಸ ನಷ್ಟ ವಾಗಿದೆ,…

Read More

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಮೊದಲ ಹಂತದಲ್ಲಿ ಆರ್ಡಿನರಿ ಬಸ್‌ಗಳಿಗೆ ಮಾತ್ರ ಸೀಮಿತ?100 ದಿನಗಳ ಪ್ರಾಯೋಗಿಕ ಜಾರಿ ಕುರಿತು ಸರ್ಕಾರ ಚಿಂತನೆ

ತಿರುವನಂತಪುರ: ರಾಜ್ಯದಲ್ಲಿ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಯೋಜನೆಯನ್ನು ಮೊದಲ ಹಂತದಲ್ಲಿ ಸಾಮಾನ್ಯ (ಆರ್ಡಿನರಿ) ಬಸ್‌ಗಳಿಗೆ ಮಾತ್ರ ಸೀಮಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ತಾಂತ್ರಿಕ ಹಾಗೂ ಆರ್ಥಿಕ ಅಂಶಗಳ ಕುರಿತು ಸಾರಿಗೆ ಸಚಿವರು ಮುಖ್ಯಮಂತ್ರಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ಆರಂಭಿಕ ಹಂತದಲ್ಲಿ ಆರ್ಡಿನರಿ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಕುರಿತು ಒಮ್ಮತ ವ್ಯಕ್ತವಾಗಿದೆ. ಈ ವ್ಯವಸ್ಥೆಯನ್ನು 100 ದಿನಗಳ ಕಾಲ ಜಾರಿಗೆ ತಂದು, ಅದರ ಕಾರ್ಯಸಾಧ್ಯತೆ, ಪ್ರಯಾಣಿಕರ…

Read More

ಸಂತಡ್ಕ ಮಾಡ ಕ್ಷೇತ್ರದಲ್ಲಿ ಮಹಾರುದ್ರಯಾಗ-ಗಿರಿಜಾ ಕಲ್ಯಾಣೋತ್ಸವ ವೈಭವ

ಸಂತಡ್ಕ, ಜೂನ್ 7: ಲೋಕ ಕಲ್ಯಾಣದ ದಿವ್ಯ ಸಂಕಲ್ಪದೊಂದಿಗೆ ಸಂತಡ್ಕದ ಮಾಡ ಕ್ಷೇತ್ರದಲ್ಲಿ ಮಹಾರುದ್ರಯಾಗ, ಶ್ರೀ ಗಿರಿಜಾ ಕಲ್ಯಾಣೋತ್ಸವ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನಾ ಸಮಾರಂಭವು ಭಾನುವಾರ ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಸಮ್ಮಿಲನವಾಗಿದ್ದ ಈ ಕಾರ್ಯಕ್ರಮಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ದೈವಾನುಗ್ರಹಕ್ಕೆ ಪಾತ್ರರಾದರು. ಕ್ಷೇತ್ರದಲ್ಲಿ ಆಯೋಜಿಸಲಾದ ಮಹಾರುದ್ರಯಾಗವು ಲೋಕ ಕಲ್ಯಾಣ, ಸಮಾಜದಲ್ಲಿ ಶಾಂತಿ-ಸೌಹಾರ್ದತೆ ನೆಲೆಸುವುದು, ಪ್ರಕೃತಿ ವಿಕೋಪಗಳ ಶಮನ ಹಾಗೂ ಸಾಂಕ್ರಾಮಿಕ ರೋಗ-ರುಜಿನಗಳಿಂದ ಜನರು ಮುಕ್ತರಾಗಲಿ ಎಂಬ…

Read More

ಕುಂಬಳೆಯಲ್ಲಿ ‘ಚಿರಂಜೀವಿ’ ಸಂಸ್ಥೆಯಿಂದ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಶೈಕ್ಷಣಿಕ ಸಾಧಕರಿಗೆ ಸನ್ಮಾನ; ಶಿಕ್ಷಣದ ಮಹತ್ವ ಸಾರಿದ ಗಣ್ಯರು

ಕುಂಬಳೆ ಜೂನ್ 8: ಶಿಕ್ಷಣದ ಮೂಲಕ ಸಮಾಜದ ಉನ್ನತಿಗೆ ಕೊಡುಗೆ ನೀಡುವ ಉದ್ದೇಶದಿಂದ ಕುಂಬಳೆಯ ಚಿರಂಜೀವಿ (ರಿ.) ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿತು. ಕಾರ್ಯಕ್ರಮದಲ್ಲಿ 109 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಗಿದ್ದು, ವಿವಿಧ ಪರೀಕ್ಷೆಗಳಲ್ಲಿ ಸಾಧನೆಗೈದ ಒಂಬತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್…

Read More

ಅಡೂರಿನಲ್ಲಿ ಮಣ್ಣುಕುಸಿತ ದುರಂತ: ಇಬ್ಬರು ಬಾಲಕರ ಜೀವಬಲಿ

ಕಾಸರಗೋಡು, ಜೂನ್ 8: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು ಸಮೀಪದ ಸಂಚಕ್ಕಡವು ಪ್ರದೇಶದಲ್ಲಿ ಸಂಭವಿಸಿದ ಭೀಕರ ಮಣ್ಣುಕುಸಿತ ದುರಂತದಲ್ಲಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಸಾವನ್ನಪ್ಪಿದವರನ್ನು ಅಬೂಬಕ್ಕರ್ ಅವರ ಪುತ್ರರಾದ ಮುನ್ಸೀರ್ (10) ಹಾಗೂ ಮುಜಮ್ಮಿಲ್ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕನನ್ನು ತಕ್ಷಣವೇ ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇತ್ತೀಚೆಗೆ ಗೃಹಪ್ರವೇಶ ನಡೆದ ಮನೆಯ ಸಮೀಪ…

Read More

ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ: ನೂತನ ಪದಾಧಿಕಾರಿಗಳ ಆಯ್ಕೆ

ಸುಂಕದಕಟ್ಟೆ, ಜೂನ್ 8: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮ್ಮೇಳನವು ಸುಂಕದಕಟ್ಟೆಯ ಬಿಜೆಪಿ ಕಾರ್ಯಾಲಯದಲ್ಲಿ ಯಶಸ್ವಿಯಾಗಿ ನಡೆಯಿತು. ಸಮಿತಿ ಅಧ್ಯಕ್ಷೆ ವನಿತಾ ಜೆ. ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ಯಶವಂತಿ ಬೆಜ್ಜ, ಪಂಚಾಯತ್ ಸದಸ್ಯರಾದ ಚಂದ್ರಶೇಖರ ವರ್ಕಾಡಿ, ತುಳಸಿ ವರ್ಕಾಡಿ ಹಾಗೂ ರವಿ ಎಂ.ಕೆ. ಕೊಲ್ಯೂರು ಶುಭಾಶಯಗಳನ್ನು ತಿಳಿಸಿ ಮಾತನಾಡಿದರು. ಸಮ್ಮೇಳನದ ಸಮಾರೋಪ ಭಾಷಣವನ್ನು ಬಿಎಂಎಸ್ ಜಿಲ್ಲಾ…

Read More
error: Content is protected !!