ಮಂಜೇಶ್ವರಂ ಬೀಚ್ನಲ್ಲಿ ಭದ್ರತೆ ಹೆಚ್ಚಿಸಲು ಆಗ್ರಹ
ಮಂಜೇಶ್ವರಂ: ಶಾಲಾ ರಜೆ ಹಿನ್ನೆಲೆಯಲ್ಲಿ ದಿನವೂ ಸಾವಿರಾರು ಮಂದಿ ಪ್ರವಾಸಿಗರು ಹಾಗೂ ಕುಟುಂಬ ಸಮೇತವಾಗಿ ಮಂಜೇಶ್ವರಂ ಬೀಚ್ಗೆ ಭೇಟಿ ನೀಡುತ್ತಿರುವುದರಿಂದ, ಇಲ್ಲಿ ತಕ್ಷಣ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ. ಇತ್ತೀಚೆಗೆ ಸಮುದ್ರ ಅಲೆಯಲ್ಲಿ ಸಿಲುಕಿ ಮೃತಪಟ್ಟ 18 ವರ್ಷದ ಯುವಕನ ಘಟನೆ ಆತಂಕವನ್ನು ಹೆಚ್ಚಿಸಿದೆ. ಬೀಚ್ ಹಾಗೂ ಸಮುದ್ರ ತೀರ ಪ್ರದೇಶಗಳಲ್ಲಿ ಸಮರ್ಪಕ ಭದ್ರತಾ ವ್ಯವಸ್ಥೆಗಳ ಕೊರತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಮುದ್ರಕ್ಕೆ ಇಳಿಯುವವರಿಗೆ ಹಾಗೂ ಮಕ್ಕಳೊಂದಿಗೆ ಬರುವ ಕುಟುಂಬಗಳಿಗೆ ಸುರಕ್ಷತೆ ಒದಗಿಸಲು ಲೈಫ್ಗಾರ್ಡ್ಗಳು,…