ಕುಂಜತ್ತೂರಿನಲ್ಲಿ ಅಪರೂಪದ ಹಣ್ಣುಗಳ ತೋಟ – ಪ್ರವಾಸಿ ಸನ ಸಲೀಂ ಅವರ ಹಸಿರು ಸಾಧನೆ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಜತ್ತೂರಿನಲ್ಲಿ ಅಪರೂಪದ ಹಣ್ಣುಗಳ ತೋಟವು ಎಲ್ಲರ ಗಮನ ಸೆಳೆಯುತ್ತಿದೆ. ಈ ವಿಶಿಷ್ಟ ತೋಟವು ಸ್ಥಳೀಯ ಉದ್ಯಮಿ ಹಾಗೂ ಪ್ರವಾಸಿ ಸನಾ ಸಲೀಂ ಅವರ ಮನೆಯ ಆವರಣದಲ್ಲಿ ಬೆಳೆದು ನಿಂತಿದೆ. ಇಲ್ಲಿ ಕಣ್ಣಿಗೆ ಹಬ್ಬದಂತೆ ಕಾಣುವ ಈಂತಪ್ಪಳ (ಖರ್ಜೂರ) ಮರಗಳು ತುಂಬು ಫಲಗಳಿಂದ ಕಂಗೊಳಿಸುತ್ತಿವೆ. ಈ ತೋಟದಲ್ಲಿ ಬದಾಮ್ ಮಾವು, ಮಲ್ಲಿಕಾ ಮಾವು, ಕಾಲಪ್ಪಾಡಿ ಮಾವು, ಕೆನಿಯನ್ ಮಾವು ಸೇರಿದಂತೆ ವಿವಿಧ ಮಾವಿನ ತಳಿಗಳು ಬೆಳೆಸಲಾಗಿದೆ. ಜೊತೆಗೆ ಚಾಂಪೆ, ಮಲ್ಬೆರಿ, ಮಿರಾಕಲ್ ಫ್ರೂಟ್…

Read More

ಕೇರಳ ಸರಕಾರದ ನೂತನ ಮುಖ್ಯಮಂತ್ರಿಗಳಿಗೆ ಮಲಯಾಳ ಭಾಷಾ ಬಿಲ್ಸ್ – 2025 ಮರು ಪರಿಶೀಲಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮನವಿಗೆ ನಿರ್ಧಾರ

ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ. ಭಾಷಾ ಅಲ್ಪಸಂಖ್ಯಾಕರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಿಕೊಳ್ಳುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ. ರಾಜ್ಯಗಳು ಅಧಿಕೃತ ಭಾಷೆಯನ್ನು ಕಡ್ಡಾಯಗೊಳಿಸುವಾಗ ಈ ಹಕ್ಕುಗಳಿಗೆ ಧಕ್ಕೆಯಾಗದಂತೆ ನೀತಿ – ಕಾನೂನುಗಳನ್ನು ರೂಪಿಸಬೇಕಾಗುತ್ತದೆ. ಭಾಷಾ ಅಲ್ಪ ಸಂಖ್ಯಾಕರ ಮಕ್ಕಳಿಗೆ…

Read More

​ಬೆಳಿಂಜ ಗುತ್ತು: ಪರಂಪರೆಯ ಪುನರುತ್ಥಾನ ಹಾಗೂ ಧರ್ಮ ನೇಮೋತ್ಸವದ ಭಕ್ತಿ ಸಂಭ್ರಮ

​ತುಳುನಾಡಿನ ದೈವಿಕ ಶಕ್ತಿ ಮತ್ತು ಸಾಂಸ್ಕೃತಿಕ ಹಿರಿಮೆಯ ಪ್ರತೀಕಗಳಾದ ‘ಗುತ್ತು’ ಮನೆತನಗಳು, ನಂಬಿಕೆ ಮತ್ತು ಪರಂಪರೆಯ ಜೀವಂತ ನೆಲೆಗಳು. ಅಂತಹ ಶ್ರದ್ಧಾ ಕೇಂದ್ರಗಳಲ್ಲಿ ಒಂದಾದ ಕಾಸರಗೋಡಿನ ಪುಣ್ಯಭೂಮಿಯ ‘ ಬೆಳಿಂಜ ಗುತ್ತು’ ಇಂದು ನವಚೇತನದೊಂದಿಗೆ ಕಂಗೊಳಿಸುತ್ತಿದೆ.​ಹಸಿರು ಸಿರಿಯ ಮಡಿಲಲ್ಲಿರುವ ಈ ಪವಿತ್ರ ತರವಾಡು ಮನೆತನವು ದೈವಿಕ ಸಂಕಲ್ಪದಂತೆ ನವವೈಭವದೊಂದಿಗೆ ಮರುಜನ್ಮ ಪಡೆಯುತ್ತಿದೆ. ವಿದ್ವಾನ್ ಶ್ರೀ ಕೆ. ಬಾಬು ರೈ ಅವರ ಆಶೀರ್ವಚನ ಹಾಗೂ ದೈವಜ್ಞ ಶ್ರೀ ಶಶಿಧರ ಮಾಂಗಾಡ್ ಅವರ ಮಾರ್ಗದರ್ಶನದಂತೆ, ಶ್ರೀ ಬಾಲಕೃಷ್ಣ ಆಳ್ವ ಅವರ…

Read More

ಶಿರಿಯ ಹೊಳೆಯಲ್ಲಿ ಅನಧಿಕೃತ ಮರಳು ಸಂಗ್ರಹ: ಪರಾರಿಯಾಗಿದ್ದ ಲಾರಿ ಮಾಲೀಕ ಬಂಧನ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ವ್ಯಾಪ್ತಿಯ ಶಿರಿಯ ಹೊಳೆಯ ಹೇರೂರು ಪೈಯಾರ್‌ಕಡವಿನಲ್ಲಿ ಅನಧಿಕೃತವಾಗಿ ಮರಳು (ಹೊಯ್ಗೆ) ಸಂಗ್ರಹಿಸುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಇದೀಗ ತಲೆಮರೆಸಿಕೊಂಡಿದ್ದ ಲಾರಿ ಮಾಲೀಕ ಎಂ. ಅಶ್ರಫ್‌ನನ್ನು ಬಂಧಿಸಿದ್ದಾರೆ. ಕಳೆದ ಮಾರ್ಚ್ 30ರಂದು ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ ವೇಳೆ, ಲಾರಿಯಲ್ಲಿದ್ದ ಅಶ್ರಫ್ ಹಾಗೂ ಮರಳು ತುಂಬಿಸುತ್ತಿದ್ದ ಐವರು ಕಾರ್ಮಿಕರು ವಾಹನ ಮತ್ತು ಉಪಕರಣಗಳನ್ನು ಬಿಟ್ಟು ಪರಾರಿಯಾಗಿದ್ದರು. ಬಳಿಕ ಪೊಲೀಸರು ಸ್ಥಳದಲ್ಲಿದ್ದ ಮರಳು ತುಂಬಿದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರು. ಈ…

Read More

ಉಪ್ಪಳ ಎಕ್ಸ್‌ಪೋ–26 ಆರಂಭ: ಮನರಂಜನೆ, ಸ್ಪರ್ಧೆಗಳು, ಫ್ಲವರ್ ಶೋಗೆ ಸಜ್ಜು

ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಅವಧಿ ಕಾಲವನ್ನು ಮನರಂಜನೆಯಿಂದ ಕಳೆಯಲು ‘ಉಪ್ಪಳ ಎಕ್ಸ್‌ಪೋ–26’ ನಾಳೆಯಿಂದ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮವನ್ನು ಏಷಿಯನ್ ಟೂರ್ಸ್ ಆಂಡ್ ಟ್ರಾವೆಲ್ಸ್ ಸಂಸ್ಥೆ ಪ್ರಾಯೋಜಿಸಿದೆ. ಪ್ರತಿದಿನ ಸಂಜೆ 3 ಗಂಟೆಯಿಂದ ರಾತ್ರಿ 10.30ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 8ರಿಂದ 10.30ರವರೆಗೆ ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದರು ಭಾಗವಹಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಕ್ಕಳು ಹಾಗೂ ಹಿರಿಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು ಮತ್ತು ತಕ್ಷಣದ ಬಹುಮಾನ ವಿತರಣೆ ವ್ಯವಸ್ಥೆಯೂ ಇರಲಿದೆ. ಇದರೊಂದಿಗೆ ಫ್ಲವರ್ ಶೋ ಹಾಗೂ ಅಪರೂಪದ…

Read More

5 ವರ್ಷಗಳಿಂದ ಖಾಸಗಿ ಜಾಗದಲ್ಲೇ ಸೇತುವೆ ಸ್ಲಾಬ್‌ಗಳು: ಪಂಚಾಯತ್ ನಿರ್ಲಕ್ಷ್ಯ ಬಯಲು

​ಮಂಜೇಶ್ವರ: ಅಭಿವೃದ್ಧಿ ಕಾಮಗಾರಿಗಳಿಗಾಗಿ ತಂದಿರಿಸಿದ ಸಾಮಗ್ರಿಗಳನ್ನು ಸಕಾಲದಲ್ಲಿ ಬಳಸದಿದ್ದರೆ ಅದು ಸಾರ್ವಜನಿಕರಿಗೆ ಹೇಗೆ ಹೊರೆಯಾಗಬಹುದು ಎಂಬುದಕ್ಕೆ ಮಂಜೇಶ್ವರ ಗ್ರಾಮ ಪಂಚಾಯತ್‌ನ 23ನೇ ವಾರ್ಡ್ ಒಂದು ಜ್ವಲಂತ ಉದಾಹರಣೆಯಾಗಿದೆ. ಇಲ್ಲಿನ ನಿವಾಸಿ ಸನ್ನಿ ಎಂಬುವವರ ಖಾಸಗಿ ಜಾಗದಲ್ಲಿ ಕಾಲು ಸೇತುವೆಗೆ ಬಳಸಬೇಕಾದ ಸ್ಲಾಬ್‌ಗಳನ್ನು ತಂದಿರಿಸಿ ಬರೋಬ್ಬರಿ 5 ವರ್ಷಗಳು ಕಳೆದಿವೆ. ಆದರೆ, ಈವರೆಗೆ ಆ ಸ್ಲಾಬ್‌ಗಳನ್ನು ಅಲ್ಲಿಂದ ತೆರವುಗೊಳಿಸದೆ ಪಂಚಾಯತ್ ಆಡಳಿತವು ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತಿದೆ.​​ಸುಮಾರು ಐದು ವರ್ಷಗಳ ಹಿಂದೆ ಸ್ಥಳೀಯವಾಗಿ ಕಾಲು ಸೇತುವೆಯೊಂದನ್ನು ನಿರ್ಮಿಸುವ ಉದ್ದೇಶದಿಂದ…

Read More

ಡಾ. ಸಚಿನ್ ಬೇಕಲ್‌ಗೆ “ಭರವಸೆಯ ಭಾರತ ರತ್ನ ಪ್ರಶಸ್ತಿ 2026” ಗೌರವ

ಕಾಸರಗೋಡು : ಆಲ್ ಇಂಡಿಯಾ ಲೆವೆಲ್ನಲ್ಲಿ ರಾಂಕ್ ಗಳಿಸಿ ಮುಂಬೈಯ ಕೆ. ಇ. ಎಮ್. ಆಸ್ಪತ್ರೆಯಲ್ಲಿ ನ್ಯೂರೋಸರ್ಜರಿ ಎಮ್. ಸಿ. ಎಚ್. ಉಪರಿಪಠನಕ್ಕೆ ಆಯ್ಕೆಯಾದ ಕಾಸರಗೋಡು ಅನಂಗೂರು ನಿವಾಸಿಯಾದ, ಡಾ. ಸಚಿನ್ ಬೇಕಲ್ ಇವರೀಗೆ ಕಾಸರಗೋಡು ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ದಂಪತಿಗಳು “ಭರವಸೆಯ ಭಾರತ ರತ್ನ ” ಅಭಿನಂದನಾ ಪ್ರಶಸ್ತಿ ನೀಡಿ ಗೌರವಿಸಿದರು. ಧಾರ್ಮಿಕ ರತ್ನ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದ ಕನ್ನಡ ಭವನ…

Read More

“ಕೇರಳ ಮತ್ತೆ ಎಡಪಂಥದೊಂದಿಗೆ; ಆಡಳಿತ ಮುಂದುವರಿಕೆ ಖಚಿತ” – ಎಂ. ಸ್ವರಾಜ್ ಹೇಳಿಕೆ

Kumbla: ಕೇರಳ ಮತ್ತೆ ಎಡಪಂಥದೊಂದಿಗೆ ನಿಂತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಹುಮತದೊಂದಿಗೆ ಆಡಳಿತ ಮುಂದುವರಿಯಲಿದೆ ಎಂದು ಎಂ. ಸ್ವರಾಜ್ ಹೇಳಿದ್ದಾರೆ. ಕುಂಬಳೆಯಲ್ಲಿ ನಡೆದ ಭಾಸ್ಕರ್ ಕುಂಬಳೆ ಅವರ ರಕ್ತಸಾಕ್ಷಿ ದಿನಾಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ವಿಶ್ಲೇಷಿಸಿದರು. 2021ರ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಯಾರು ಆಗಬೇಕು ಎಂಬುದನ್ನು ತೀರ್ಮಾನಿಸಿಕೊಂಡಿತ್ತು ಎಂದು ಅವರು ಟೀಕಿಸಿದರು. “ಎರಡೂವರೆ ವರ್ಷ ಉಮ್ಮನ್ ಚಾಂಡಿ ಹಾಗೂ ನಂತರದ ಅವಧಿಯಲ್ಲಿ ರಮೇಶ್ ಚೆನ್ನಿತಾಲ ಮುಖ್ಯಮಂತ್ರಿ ಆಗಬೇಕು ಎಂಬ…

Read More

ಕನ್ನಡ ಭವನ ಪ್ರಕಾಶನ ವಾರ್ಷಿಕೋತ್ಸವದಲ್ಲಿ ಕೃತಿ ಬಿಡುಗಡೆ – ‘ಭರವಸೆಯ ಭಾರತ ರತ್ನ’ ಪ್ರಶಸ್ತಿ ಪ್ರದಾನ

Kasaragod: ಗಡಿನಾಡಿನ ಹೆಮ್ಮೆಯ ಕನ್ನಡ ಸಂಸ್ಥೆಯಾದ ಕನ್ನಡ ಭವನದ ಅಂಗ ಸಂಸ್ಥೆ ಕನ್ನಡ ಭವನ ಪ್ರಕಾಶನದ ಮೂರನೇ ವಾರ್ಷಿಕೋತ್ಸವ ಸಂಭ್ರಮವು ಏಪ್ರಿಲ್ 22ರಂದು ಕನ್ನಡ ಭವನ ಗ್ರಂಥಾಲಯ ವೇದಿಕೆಯಲ್ಲಿ ಅರ್ಥಪೂರ್ಣವಾಗಿ ಜರುಗಿತು. ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ ರಾಣಿ ಟೀಚರ್ ಅವರ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕನ್ನಡ ಭವನ ನಿರ್ದೇಶಕರಾದ ಡಾ. ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು. ಪತ್ರಕರ್ತ ಹಾಗೂ ರಾಮರಾಜ ಕ್ಷತ್ರಿಯ ಸೇವಾಸಂಘ ಜಿಲ್ಲಾಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ…

Read More

ಮಂಜೇಶ್ವರದಲ್ಲಿ ರಾಜಕಾಲುವೆ ಕಸದ ಗುಡ್ಡ – ಸಾಂಕ್ರಾಮಿಕ ರೋಗ ಭೀತಿ, ಸಾರ್ವಜನಿಕರ ಆಕ್ರೋಶ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಮಳೆ ನೀರು ಸುಗಮವಾಗಿ ಹರಿದು ಹೋಗಲೆಂದು ನಿರ್ಮಿಸಲಾದ ಉದ್ಯಾವರ ಮಾಡ ಪರಿಸರದ ವಾಟರ್ ಚಾನಲ್ (ರಾಜಕಾಲುವೆ), ಇದೀಗ ಕಿಡಿಗೇಡಿಗಳ ಅಕ್ಷಮ್ಯ ವರ್ತನೆಯಿಂದಾಗಿ ‘ಸಾಂಕ್ರಾಮಿಕ ರೋಗಗಳ ತವರು’ ಆಗಿ ಮಾರ್ಪಟ್ಟಿದೆ. ಹೆದ್ದಾರಿಯಿಂದ ಹರಿದು ಬರುವ ನೀರು ಕುಂಡುಕೊಳಕೆ ಹಾಗೂ ಅಂಜರೆ ಮಾರ್ಗವಾಗಿ ಸಮುದ್ರವನ್ನು ಸೇರಬೇಕಿತ್ತು. ಆದರೆ, ಪ್ರಸ್ತುತ ಈ ಕಾಲುವೆಯು ಪ್ಲಾಸ್ಟಿಕ್ ಲೋಟ-ಚೀಲಗಳು, ಹಸಿ ಕಸ ಹಾಗೂ ಹಾದಿಹೋಕರು ಎಸೆಯುವ ಕೋಳಿ ತ್ಯಾಜ್ಯದಿಂದ ತುಂಬಿ ತುಳುಕುತ್ತಿದೆ. ಕಾಲುವೆಯಲ್ಲಿ ನೀರು ಹರಿಯುವ ಬದಲು ಕೊಳೆತ ತ್ಯಾಜ್ಯಗಳು…

Read More
error: Content is protected !!