ಕಾಸರಗೋಡಿನಲ್ಲಿ ಬಾಲಗೋಕುಲ ವಾರ್ಷಿಕ ಮಹಾಸಭೆಗೆ ಚಾಲನೆ

ಕಾಸರಗೋಡು: ಬಾಲಗೋಕುಲ ವಾರ್ಷಿಕ ಮಹಾಸಭೆಗೆ ಕಾಸರಗೋಡಿನಲ್ಲಿ ಭಾನುವಾರ ಚಾಲನೆ ದೊರೆಯಿತು. ಕೇಂದ್ರ ಸಚಿವ ಶ್ರೀಪಾದ್ ಯಶೋ ನಾಯಕ್ ಮಹಾಸಭೆಯನ್ನು ಉದ್ಘಾಟಿಸಿದರು. ಉತ್ತರ ಕೇರಳ ರಾಜ್ಯಾಧ್ಯಕ್ಷ ಎಂ. ಸತ್ಯನ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಿ. ಸದಾನಂದನ್ ಮಾಸ್ಟರ್, ಸಂಸದರು ಭಾಗವಹಿಸಿದರು. ಕೊಂಡೆಯೂರು ನಿತ್ಯಾನಂದ ಯೋಗಾಶ್ರಮದ ಸ್ವಾಮಿ ಯೋಗಾನಂದ ಸರಸ್ವತಿ ಆಶೀರ್ವಚನ ನೀಡಿದರು. ಬಾಲಗೋಕುಲಂ ರಾಜ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್ ಮುಖ್ಯ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ವರ್ಕಿಂಗ್ ಚೇರ್ಮನ್ ನಿವೃತ್ತ ಎಸ್‌ಪಿ ಹರಿಶ್ಚಂದ್ರ ನಾಯಕ್, ಬಾಲಸಾಹಿತಿ ಪ್ರಕಾಶನ ಚೇರ್ಮನ್…

Read More

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ:ಸೀತಾಂಗೋಳಿ ಕಾರ್ಯಕ್ಷೇತ್ರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಸೀತಾಂಗೋಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೀತಾಂಗೋಳಿ ಕಾರ್ಯಕ್ಷೇತ್ರದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಕುದ್ರೆಪ್ಪಾಡಿಯ ರಚನಾ ಕ್ಲಬ್‌ನಲ್ಲಿ ನಡೆಯಿತು. ಕಾರ್ಯಕ್ಷೇತ್ರದ ನೂತನ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾವತಿ ಮುಗುಮೇರ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಶ್ರೀ ಪ್ರದೀಪ್ ಮುಂಡಾನ್ ತಡ್ಕ, ಕಾರ್ಯದರ್ಶಿಯಾಗಿ ಶ್ರೀಮತಿ ಧನ್ಯಶ್ರೀ, ಜಂಟಿ ಕಾರ್ಯದರ್ಶಿಯಾಗಿ ಶ್ರೀಮತಿ ಪವಿತ್ರಾ ಹಾಗೂ ಕೋಶಾಧಿಕಾರಿಯಾಗಿ ಶ್ರೀಮತಿ ಸರಿತಾ ಆಯ್ಕೆಯಾದರು. ದಾಖಲೆ ಸಮಿತಿ ಸದಸ್ಯರಾಗಿ ಶ್ರೀ ಕಿರಣ್, ಶ್ರೀಮತಿ ಪಲ್ಲವಿ, ಶ್ರೀಮತಿ ಸರಿತಾ ಹಾಗೂ ಶ್ರೀಮತಿ ಶಾರದಾ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ವಲಯದ…

Read More

ಸುಳ್ಯ ತಾ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು, ಜು. 13:* ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಸದಸ್ಯರಾಗಿರುವ, ಸಾಹಿತ್ಯ–ಸಂಸ್ಕೃತಿ ಪೋಷಕರಾದ ಶ್ರೀ ಚಂದ್ರಶೇಖರ ಪೇರಾಲು ಅವರನ್ನು ಗಡಿನಾಡು ಕಾಸರಗೋಡಿನ ಖ್ಯಾತ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ವತಿಯಿಂದ ಪ್ರದಾನ ಮಾಡಲಾಗುವ ಪ್ರತಿಷ್ಠಿತ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ – 2026”ಗೆ ಆಯ್ಕೆ ಮಾಡಲಾಗಿದೆ. ಜುಲೈ 26ರಂದು ಕನ್ನಡ ಭವನದ *ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ…

Read More

ದೇಗುಲಗಳ ಪುನರ್ ಪ್ರತಿಷ್ಠೆಯಂತ ಕಾರ್ಯಗಳು ಹಿಂಧೂ ಸಮಾಜದ ಒಗ್ಗಟ್ಟಿಗೆ ಪೂರಕವಾಗಲಿ. ಎಡನೀರು ಶ್ರೀಗಳು.

ಕಾಸರಗೋಡು: ಅಣಂಗೂರು ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಶ್ರೀ ದೇವಿಯ ರಜತ ಫಲಕದ ಪುನರ್ ಪ್ರತಿಷ್ಠೆ ಹಾಗೂ ಶ್ರೀ ನಾಗನ ಕಟ್ಟೆಯ ಪುನರ್ ನಿರ್ಮಾಣ ಮತ್ತು ಪ್ರತಿಷ್ಠಾ ಮಹೋತ್ಸವದ ಧನಸಂಗ್ರಹಕ್ಕೆ ಚಾಲನೆ ನೀಡುವ ಉದ್ದೇಶದಿಂದ ‘ಶ್ರೀ ಶಾರದಾ ನಿಧಿ’ ಲಕ್ಕಿ ಕೂಪನ್ ಅನ್ನು ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಮಹೋತ್ಸವ ಸಮಿತಿಯ ರಕ್ಷಾಧಿಕಾರಿಯೂ ಆಗಿರುವ ಕೊಡುಗೈ ದಾನಿ ವಸಂತ ಪೈ ಬದಿಯಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದರು….

Read More

ಅಂತಾರಾಷ್ಟ್ರೀಯ ಯೋಗರತ್ನ ನಾಗರತ್ನ ಎಸ್. ಹಿರೇಮಠ ಅವರಿಗೆ “ಕನ್ನಡ ಪಯಸ್ವಿನಿ ಯೋಗರತ್ನ ಅಚೀವ್ಮೆಂಟ್ ಅವಾರ್ಡ್–2026”

ಕಾಸರಗೋಡು, ಜು. 12: ಕನ್ನಡಪರ ಹೋರಾಟಗಾರ್ತಿ, ಕವಯತ್ರಿ, ಲೇಖಕಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂರು ಚಿನ್ನದ ಪದಕಗಳನ್ನು ಪಡೆದಿರುವ ಯೋಗರತ್ನ ನಾಗರತ್ನ ಎಸ್. ಹಿರೇಮಠ ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ವತಿಯಿಂದ ಪ್ರದಾನವಾಗುವ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಯೋಗರತ್ನ ಅಚೀವ್ಮೆಂಟ್ ಅವಾರ್ಡ್–2026” ಘೋಷಿಸಲಾಗಿದೆ. ಬೆಂಗಳೂರು ಪದ್ಮನಾಭನಗರ ನಿವಾಸಿಯಾಗಿರುವ ನಾಗರತ್ನ ಎಸ್. ಹಿರೇಮಠ ಅವರು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷೆಯಾಗಿ, ಕನ್ನಡ ಜಾನಪದ ಪರಿಷತ್ ಮಹಿಳಾ ಅಧ್ಯಕ್ಷೆಯಾಗಿ ಹಾಗೂ ಪದ್ಮನಾಭನಗರ ಶರಣ ಸಾಹಿತ್ಯ ಮಹಿಳಾ…

Read More

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಾರ್ಕಲಿ ಸಲೀಂ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ”

ಕಾಸರಗೋಡು, : ಮಂಡ್ಯ ಜಿಲ್ಲೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ, ಕವಿ, ಸಾಹಿತಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಾರ್ಕಲಿ ಸಲೀಂ (ಸಲೀಂಪಾಷ) ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ವತಿಯಿಂದ ಪ್ರದಾನವಾಗುವ ಪ್ರತಿಷ್ಠಿತ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಘೋಷಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚಿಣ್ಯ ಗ್ರಾಮದವರಾದ ಸಲೀಂಪಾಷ ಅವರು ದಿ. ಷೇಕ್ ಮಹಮದ್ ಹಾಗೂ ಮಹಬೂಬ್ ಜಾನ್ ಅವರ ಪುತ್ರರಾಗಿದ್ದು, 1971ರ ಮಾರ್ಚ್ 20ರಂದು ಜನಿಸಿದ್ದಾರೆ. ಪ್ರಾಥಮಿಕ…

Read More

ಲಕ್ಷ್ಮೀ ವಿ ಭಟ್ ಇವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026

ಕಾಸರಗೋಡು : ನಿವೃತ್ತ ಶಿಕ್ಷಕಿ, ಸಾಹಿತಿ ಮಂಜೇಶ್ವರದ ತಲಂಜೇರಿಯ ಲಕ್ಷ್ಮಿ ವಿ ಭಟ್ ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಗೌರವ…

Read More

ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಳ್ಳತನ: 10 ಪವನ್ ಚಿನ್ನ ದೋಚಿದ ಕಳ್ಳರು

​ಮಂಜೇಶ್ವರ: ಕುಟುಂಬದವರು ಮಸೀದಿಗೆ ತೆರಳಿದ್ದ ಒಂದು ಗಂಟೆಯ ಅಂತರದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು 10 ಪವನ್ ಚಿನ್ನಾಭರಣಗಳನ್ನು ದೋಚಿರುವ ಘಟನೆ ಪೈವಳಿಕೆ ಪಂಚಾಯತ್‌ನ ಕೈಯಾರಿನಲ್ಲಿ ನಡೆದಿದೆ.​ಪಾಲಕ್ಕಾಡ್ ಮೂಲದ ಹೋಟೆಲ್ ಉದ್ಯಮಿ ಯೂಸುಫ್ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಭಾನುವಾರ ರಾತ್ರಿ ಯೂಸುಫ್ ಅವರ ಪತ್ನಿ ಮೈಮೂನಾ ಮತ್ತು ಮಕ್ಕಳು ಸ್ಥಳೀಯ ಕೈಯಾರ್ ಮಸೀದಿಯಲ್ಲಿ ನಡೆಯುತ್ತಿದ್ದ ‘ಸ್ವಲಾತ್’ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಕಾರ್ಯಕ್ರಮ ಮುಗಿಸಿ ರಾತ್ರಿ ಎಂಟೂವರೆ ಗಂಟೆ ಸುಮಾರಿಗೆ ಮನೆಗೆ ವಾಪಸಾದಾಗ, ಮನೆಯ ಒಳಭಾಗದಲ್ಲಿ ಅಸ್ತವ್ಯಸ್ತವಾಗಿರುವುದನ್ನು ಕಂಡು…

Read More

ಕಾಸರಗೋಡು ಕಡಲತೀರದಲ್ಲಿ ತಲೆಯಿಲ್ಲದ ಪುರುಷನ ಶವ ಪತ್ತೆ: ಸಾವಿನ ಸುತ್ತ ನಿಗೂಢತೆ

ಕಾಸರಗೋಡು: ಜಿಲ್ಲೆಯ ಕಡಲತೀರದಲ್ಲಿ ತಲೆಯಿಲ್ಲದ ಸ್ಥಿತಿಯಲ್ಲಿ ಪುರುಷನೊಬ್ಬನ ಮೃತದೇಹ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮೃತದೇಹವು ಸಂಪೂರ್ಣ ವಿರೂಪಗೊಂಡಿದ್ದು, ಮಾಂಸ ಕಳಚಿ ಮೂಳೆಗಳು ಕಾಣಿಸುವಷ್ಟು ಹದಗೆಟ್ಟಿರುವುದರಿಂದ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ. ಶನಿವಾರ ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಟೌನ್ ಪೊಲೀಸರು ಮಹಜರು ನಡೆಸಿ, ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ಪೊಲೀಸರ ಪ್ರಾಥಮಿಕ ಅಂದಾಜಿನ ಪ್ರಕಾರ, ಮೃತದೇಹಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಹಳೆಯದಾಗಿರಬಹುದು. ಮೂರು ದಿನಗಳೊಳಗೆ ಮೃತನ…

Read More

ಟ್ಯೂಷನ್‌ಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ತಳ್ಳಿ ಗಾಯ: ಕೈ ಮೂಳೆ ಮುರಿದು, ಮಹಿಳೆ ವಿರುದ್ಧ ಜಾಮೀನು ರಹಿತ ಪ್ರಕರಣ

ಮಂಜೇಶ್ವರ: ಕುಂಬಳೆಯಲ್ಲೊಂದು ಆಘಾತಕಾರಿ ಘಟನೆ ನಡೆದಿದ್ದು, ಟ್ಯೂಷನ್‌ಗೆ ತೆರಳುತ್ತಿದ್ದ ಆರನೇ ತರಗತಿಯ ವಿದ್ಯಾರ್ಥಿನಿಯನ್ನು ಮಹಿಳೆಯೊಬ್ಬರು ತಳ್ಳಿದ ಪರಿಣಾಮ ಬಾಲಕಿಯ ಬಲಗೈ ಮೂಳೆ ಮುರಿದಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಕುಂಬಳೆ ಪೊಲೀಸರು ಆರೋಪಿತ ಮಹಿಳೆ ವಿರುದ್ಧ ಜಾಮೀನು ರಹಿತ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ. ಶುಕ್ರವಾರ ಸಂಜೆ ಶಾಲೆ ಮುಗಿಸಿ ಕಣಿಪುರ ದೇವಸ್ಥಾನದ ಸಮೀಪವಿರುವ ಶಿಕ್ಷಕಿಯ ಮನೆಗೆ ಟ್ಯೂಷನ್‌ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ದಾರಿಯಲ್ಲಿ ಬಾಲಕಿಯನ್ನು ತಡೆದ ಮಹಿಳೆ, “ನೀವು…

Read More
error: Content is protected !!