ಅಂಗಡಿಯ ಮುಂಭಾಗದಲ್ಲಿ ಅಪಾರ ಪ್ರಮಾಣದ ರಕ್ತದ ಕಲೆ ಪತ್ತೆ-ಸ್ಥಳೀಯರಲ್ಲಿ ಆತಂಕ

ಮಂಜೇಶ್ವರ: ಶನಿವಾರ ಬೆಳಿಗ್ಗೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿ ಪದವು ಎಂಬಲ್ಲಿನ ಒಂದು ಅಂಗಡಿಯ ಮುಂಭಾಗದಲ್ಲಿ ಅಪಾರ ಪ್ರಮಾಣದ ರಕ್ತದ ಕಲೆ ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಕುತೂಹಲವನ್ನು ಮೂಡಿಸಿದೆ. ಅದೇ ರೀತಿಯಾಗಿ, ಸಮೀಪದಲ್ಲಿನ ಮನೆಯೊಂದರ ಮುಂದೆಯೂ ಇದೇ ರೀತಿಯ ರಕ್ತದ ಗುರುತುಗಳು ಕಾಣಿಸಿಕೊಂಡಿವೆ. ಸ್ಥಳೀಯ ನಿವಾಸಿಗಳ ಪ್ರಕಾರ, ಇಂತಹ ಅಪರೂಪದ ದೃಶ್ಯ ಅವರು ಈವರೆಗೆ ಕಂಡಿರಲಿಲ್ಲ. “ಬೆಳಗ್ಗೆ ಅಂಗಡಿಗೆ ಹೋಗುತ್ತಿದ್ದಾಗ ರಕ್ತದ ಗುರುತುಗಳು ಕಂಡು ಬೆಚ್ಚಿಬಿದ್ದೆವು. ನೈಜವಾಗಿ ಏನು ನಡೆದಿದೆ ಎಂಬುದು ಇನ್ನೂ…

Read More

ಹಿರಿಯರ ಕನಸುಗಳಿಗೆ ತಣ್ಣೀರೆರಚಿದ ಛಿದ್ರ ಶಕ್ತಿಗಳ ವಿರುದ್ಧ ಕಾಂಗ್ರೆಸ್ ಹೋರಾಟ- ರಮಾನಾಥ ರೈ

ಕಾಸರಗೋಡು: ವಿದೇಶಿ ಗುಲಾಮಗಿರಿಯಿಂದ ದೇಶವನ್ನು ಸ್ವತಂತ್ರಗೊಳಿಸಿದ ತ್ಯಾಗಮಯಿ ಕಾಂಗ್ರೆಸ್ ನಾಯಕರು ಕಂಡ ಶಾಂತ ಸುಂದರ ಭಾರತದ ಕನಸನ್ನು ಭಗ್ನಗೊಳಿಸಿದ ಮತೀಯ ಶಕ್ತಿಗಳ ವಿರುದ್ಧ ನೈಜ ದೇಶಪ್ರೇಮಿಗಳಾದ ಕಾಂಗ್ರೆಸಿಗರು ಸಂಧಿಯಿಲ್ಲದ ಹೋರಾಟ ನಡೆಸುವ ಮೂಲಕ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಗೊಳಿಸಲು ಶ್ರಮಿಸಬೇಕಿದೆ. ಇದರ ಜೊತೆಗೆ ಮಾದಕ ದ್ರವ್ಯ ಮುಂತಾದ ಸಾಮಾಜಿಕ ಪಿಡುಗುಗಳ ವಿರುದ್ಧವೂ ಹೋರಾಟ ಚಾಲ್ತಿಯಲ್ಲಿಡಬೇಕು ಎಂದು ಕರ್ನಾಟಕದ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಬಿ.ರಮಾನಾಥ ರೈಯವರು ಕರೆ ನೀಡಿದ್ದಾರೆ. ಅವರು ಮಂಗಲ್ಪಾಡಿ ಮಂಡಲ ಕಾಂಗ್ರೆಸ್…

Read More

ಮುಡಿಮಾರಿನ ಯುವಕರಿಂದ ರಸ್ತೆ ಶ್ರಮದಾನ

ಪಾವೂರು :ಸ್ವಾತಂತ್ರ್ಯ ದಿವಸ ಮುಡಿಮಾರು ಬಸ್ಟ್ಯಾಂಡಿನಿಂದ ಮುಡಿಮಾರು ಮಲರಾಯ ಕ್ಷೇತ್ರದವರೆಗೆ ರಸ್ತೆಯನ್ನು ಮುಡಿಮಾರಿನ ಯುವಕರು ಶ್ರಮದಾನದ ಮೂಲಕ ದುರಸ್ಥಿಗೊಳಿಸಿದರು. ರಸ್ತೆಯಲ್ಲಿ ವಾಹನಗಳು ಬಿಡಿ ಶಾಲಾ-ಕಾಲೇಜು ಕೆಲಸಕ್ಕೆ ಹೋಗುವ ಮಹಿಳೆಯರು ದಿನ ನಿತ್ಯ ಆ ರಸ್ತೆಯಲ್ಲಿ ನಡೆದುಕೊಂಡು ಹೋಗುವುದಕ್ಕೂ ಪರದಾಡುತ್ತಿದ್ದರು.ಇಂಥ ದುಸ್ಥಿತಿಗೆ ತಲುಪಿರುವ ರಸ್ತೆಯನ್ನು ಮುಡಿಮಾರಿನ ಯುವಕರು ರಸ್ತೆಯ ಬದಿಯಲ್ಲಿರುವ ಮರದ ಕೊಂಬೆಗಳನ್ನು ಕಡಿದು ರಸ್ತೆಯಲ್ಲಿರುವ ಹೊಂಡಗಳನ್ನು ಕಲ್ಲುಗಳಿಂದ ಮುಚ್ಚಿ ರಸ್ತೆಯನ್ನು ದುರಸ್ಥಿಗೊಳಿಸಿದರು.

Read More

ಸಾಮಾಜಿಕ ಪಿಡುಗುಗಳ ವಿರುದ್ಧ ಜನಾಂದೋಲನ -ಕಾಂಗ್ರೆಸ್ ಘೋಷಣೆ

ಕಾಸರಗೋಡು: ಮಾದಕ ದ್ರವ್ಯ ಮತ್ತಿತರ ಸಾಮಾಜಿಕ ಪಿಡುಗುಗಳು ಜನತೆಯ ಆರೋಗ್ಯದ ಮೇಲೆ ಮಾತ್ರವಲ್ಲ, ಒಟ್ಟು ದೇಶದ ಹಿತಾಸಕ್ತಿಯ ಮೇಲಿನ ದಾಳಿ ಎಂದೇ ಪರಿಗಣಿಸಬೇಕಾಗಿದೆ. ಇದು ನಾಡಿನ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಸಕಲ ವಲಯಗಳನ್ನೂ ವಿಕಲಗೊಳಿಸುವ ಮಹಾಮಾರಿಗಳಾಗಿವೆ. ಇದರ ವಿರುದ್ಧ ಪರಿಣಾಮಕಾರಿ ಜನಾಂದೋಲನ ನಡೆಸಲು ಕಾಂಗ್ರೆಸಿಗರು ಮುಂದಾಗಬೇಕು ಎಂದು ಇಂಟಕ್ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಹಾಗೂ ವರ್ಕಾಡಿ ಮಂಡಲ ಕಾಂಗ್ರೆಸ್ ಉಸ್ತುವಾರಿ ಶ್ರೀ ಶಾಹುಲ್ ಹಮೀದ್ ಪೆರ್ಲ ಕರೆ ನೀಡಿದ್ದಾರೆ.ಎಐಸಿಸಿ ಹಾಗೂ ಕೆಪಿಸಿಸಿ ಆದೇಶ ಪ್ರಕಾರ…

Read More

ಪಾವೂರು ಅಂಗನವಾಡಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ.

ಮಂಜೇಶ್ವರ :ಪಾವೂರು ಅಂಗನವಾಡಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ವರ್ಕಾಡಿ ಪಂಚಾಯತ್ ಸದಸ್ಯೆ ಕಾಮುರುಂನ್ನಿಸ ಮುಸ್ತಾಫಾ ದೋಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ,ಇಬ್ರಾಹಿಂ ಹಾಜಿ ಕೊಂಬಗುರಿ ,ಮುಸ್ತಾಫಾ ಮಚಂಬಾಡಿ ,ಶಾಫಿ ಭಂಡಾಸಾಲೆ, ಜಾಫರ್ ಪಾವೂರು ,ಶಾಫಿ ಪಾವೂರು ಭದ್ರು ಕುಂಡಾಪು ,ಅಬ್ಬೊಕರ್ ಕೊಂಬಗುರಿ, ಅಂಗನವಾಡಿ ಪುಟಾಣಿ ಮಕ್ಕಳು ಮಹಿಳೆಯರು ಊರಿನ ಜನರು ಭಾಗವಹಿಸಿದರು .ಅಂಗನವಾಡಿ ಕಾರ್ಯಕರ್ತೆ ಸೈಲಜಾ ಸ್ವಾಗತಿಸಿ ಸಹಾಯಕ ಕಾರ್ಯಕರ್ತೆ ಸುಚಿತ್ರ ವಂದಿಸಿದರು

Read More

ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ.

ಬಾಯಾರು :ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ವಿಜೃಂಭಣೆಯಿಂದ ಜರಗಿತು.ಶ್ರೀ ಸತ್ಯನಾರಾಯಣ ಭಟ್, ಸೇರಾಜೆ, ಚೀಫ್ ಮ್ಯಾನೇಜರ್, ರಿಫೈನರಿ ಆಫೀಸರ್, ಎಂ.ಆರ್.ಪಿ.ಎಲ್., ಮಂಗಳೂರು, ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ಮಾತನಾಡುತ್ತಾ ,”ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನವನ್ನು ಸ್ಮರಿಸಿ, ಚಾರಿತ್ರ್ಯದಿಂದಲೇ ಭಾರತ ವಿಶ್ವಗುರು “ಎಂಬುದಾಗಿ ಮಕ್ಕಳಿಗೆ ಹಿತವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪೆಲತ್ತಡ್ಕ ರಾಮಕೃಷ್ಣ ಭಟ್, ಉಪಾಧ್ಯಕ್ಷರು, ಪ್ರಶಾಂತಿ ಸೇವಾ ಟ್ರಸ್ಟ್ ಇವರು ವಹಿಸಿದ್ದರು.ಶ್ರೀ ಮಾಣಿಪ್ಪಾಡಿ ನಾರಾಯಣ ಭಟ್,…

Read More

ನೀರ್ಚಾಲ್ ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಮಜೀರ್ಪಳ್ಳ ಕಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರ್ಚಾಲ್ ಕಾರ್ಯ ಕ್ಷೇತ್ರದ ವತಿಯಿಂದ ನೀರ್ಚಾಲ್ ಸಮೀಪದ ಶ್ರೀ ಅಯ್ಯಪ್ಪ ಭಜನಾ ಮಂದಿರ ಮಜೀರ್ಪಳ್ಳ ಕಟ್ಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಿನ್ನೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧಕ್ಷರಾದ ಶ್ರೀ ನವೀನಾಕ್ಷ ಮಜೀರ್ಪಳ್ಳ ಕಟ್ಟೆ, ಪದಾಧಿಕಾರಿಗಳು , ನೀರ್ಚಾಲ್ ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ನಳಿನಾಕ್ಷಿ , ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Read More

ಚಕ್ರವರ್ತಿ ಹೊಸಂಗಡಿ ಕ್ಲಬ್ಬಿನಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಜೇಶ್ವರ: 79 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಚಕ್ರವರ್ತಿ ಹೊಸಂಗಡಿ ಕ್ಲಬ್ಬಿನಲ್ಲಿ ನಡೆಯಿತು.ಧ್ವಜಾರೋಹಣ ಯಾಕೋಬ್ ಹೊಸಂಗಡಿಯವರು ನೆರವೇರಿಸಿದರು.ನಾಲ್ಕು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ಟುಗಳನ್ನು ನೀಡಲಾಯಿತು.ನ್ಯಾಯವಾದಿ ನವೀನ್ ರಾಜ್ ಕೆಜೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಶ್ರೀಮತಿ ಪ್ರಿಯಾರವರು ಸುಭಾಷಂಶಣೆಗೈದರು. ದಿನಕರ್ ಹೊಸಂಗಡಿ ನಿರೂಪಿಸಿದರು.

Read More

ಆಂಜನೇಯ ಫ್ರೆಂಡ್ಸ್ ಕ್ಲಬ್ ಕಣ್ವತೀರ್ಥ – 79 ನೇ ಸ್ವಾತಂತ್ರ್ಯ ದಿನಾಚರಣೆ

ಮಂಜೇಶ್ವರ : ಕಣ್ವತೀರ್ಥದ ಆಂಜನೇಯ ಫ್ರೆಂಡ್ಸ್ ಕ್ಲಬ್ ನವರು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಂಜನೇಯ ಮೈದಾನ ಕಣ್ವತೀರ್ಥದಲ್ಲಿ ಸಂಭ್ರಮದಿಂದ ಆಚರಿಸಿದರು . ಧ್ವಜಾರೋಹಣವನ್ನು ಯುವ ಉದ್ಯಮಿ, ಸಮಾಜ ಸೇವಕರಾದ ಶ್ರೀ ಪವನ್ ಅಂಜರೆಯವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ 21 ನೇ ವಾರ್ಡ್ ನ ಪಂಚಾಯತ್ ಸದಸ್ಯ ಲಕ್ಷ್ಮಣ್ ಕುಚ್ಚಿಕ್ಕಾಡ್ , ಧಾರ್ಮಿಕ ಚಿಂತಕರು, ಸಮಾಜ ಸೇವಕರಾದ ಶ್ರೀನಿವಾಸ್ ಭಟ್ ,ಆಂಜನೇಯ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಸುನಿಲ್ .ಪಿ ಕಣ್ವತೀರ್ಥರವರು ಅತಿಥಿಗಳಾಗಿ ಭಾಗವಹಿಸಿದ್ದರು.

Read More

🙏ಹರಿಜಲ್ ಶ್ರೀ ಮಹಾವಿಷ್ಣು ದೇವಸ್ಥಾನದ ಮೇಲ್ಚಾವಣಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ D.D ಹಸ್ತಾಂತರ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಾಸರಗೋಡು ತಾಲೂಕಿನ ಮೊಗ್ರಾಲ್ ಪುತ್ತೂರು ಸಮೀಪದ ಹರಿಜಲ್ ಶ್ರೀ ಮಹಾವಿಷ್ಣು ದೇವಸ್ಥಾನದ ಮೇಲ್ಚವಾನಿ ನಿರ್ಮಾಣಕ್ಕೆ 50,000 ರೂಪಾಯಿ ಮೊತ್ತ D.Dಯನ್ನ ನಿನ್ನೆ ಕಾಸರಗೋಡು ತಾಲೂಕಿನ ಯೋಜನಾಧಿಕಾರಿ ಶ್ರೀ ದಿನೇಶ್ ಅವರು ಶ್ರೀ ಮಹಾವಿಷ್ಣು ದೇವಸ್ಥಾನದ ಸಮಿತಿಯ ಅಧಕ್ಷರ ಹಾಗೂ ಪದಾಧಿಕಾರಿಗಳ ಉಪ್ಪಸ್ಥಿತಿಯಲ್ಲಿ ಸಮಿತಿಯರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಸಮಿತಿಯ ಅಧಕ್ಷರಾದ ಶ್ರೀ ಉಮೇಶ್ ಕಡಪುರ , ಪದಾಧಿಕಾರಿಗಳಾದ ಶಿವಪ್ಪ ಗಟ್ಟಿ , ಶ್ರೀನಿವಾಸ , ಸುಂದರ ,…

Read More
error: Content is protected !!