ವರ್ಕಾಡಿ ವಲಯದ ಬಂಟರ ಸಂಘ ಆಯೋಜಿಸಿದ ಜನಮನ ರಂಜಿಸಿದ ಆಟಿಡೊಂಜಿ ಕೂಟ ಕಾರ್ಯಕ್ರಮ
ವರ್ಕಾಡಿ ವಲಯದ ಬಂಟರ ಸಂಘ ಆಯೋಜಿಸಿದ ಆಟಿಡೊಂಜಿ ಕೂಟ ಕಾರ್ಯಕ್ರಮವು ಜುಲೈ 27 ಆದಿತ್ಯವಾರ ಬೆಳಿಗ್ಗೆ ಕೋಳ್ಯೂರು ಆಡಿಟೋರಿಯಂನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆನೇಕಲ್ಲು ಛತ್ರ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಎನ್. ಟಿ. ರೈ ನಾಣಿಲ್ತಡಿಯವರು ಕಾರ್ಯಕ್ರಮ ಉದ್ಧಾಟಿಸಿದರು. ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ರವೀಂದ್ರ ರೈ ಕಲ್ಲಿಮಾರು ಆಟಿಯ ದಿನದ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಶ್ರೀನಾಥ್ ಕೊಂಡೆ ಚಕ್ರಕೋಡಿ , ಸುಧೀಶ್ಚಂದ್ರ…