ಕೀಳೂರಿನಲ್ಲಿ ಗುಂಡಾಗಿರಿ: ಪ್ರವಾಸಿ ಯುವಕನಿಗೆ ಚಾಕು ಇರಿತ, ಗಂಭೀರ ಗಾಯ

ಕಾಸರಗೋಡು: ಕೀಳೂರು ಪ್ರದೇಶದಲ್ಲಿ ಗುಂಡಾಸಂಘದ ದಾಳಿ ನಡೆದಿದ್ದು, ಪ್ರವಾಸಿ ಯುವಕನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೀಳೂರಿನ ಮಹಮ್ಮದ್ ಕುಂಜಿ ಅವರ ಪುತ್ರ ಹಾಗೂ ಗಲ್ಫ್ ದೇಶದಲ್ಲಿ ಉದ್ಯೋಗದಲ್ಲಿರುವ ಮಿಗ್ದಾದ್ (32) ಗಾಯಗೊಂಡ ವ್ಯಕ್ತಿ. ಅವರನ್ನು ಕಾಸರಗೋಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಗಾಯಾಳು ಮಿಗ್ದಾದ್ ನೀಡಿದ ಮಾಹಿತಿ ಪ್ರಕಾರ,ಕಾಞ್ಞಂಗಾಡಿನಲ್ಲಿ ಆಟ ವೀಕ್ಷಿಸಿ ತಮ್ಮ ಸಹೋದರ, ಇಬ್ಬರು ಚಿಕ್ಕ ಮಕ್ಕಳು ಮತ್ತು ಸ್ನೇಹಿತರೊಂದಿಗೆ ರಾತ್ರಿ ಸುಮಾರು 11 ಗಂಟೆಗೆ ಕಾರಿನಲ್ಲಿ…

Read More

ಕುಂಬಳೆಯಲ್ಲಿ ಯುವಕನ ಹತ್ಯೆ ಯತ್ನ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಕಾಸರಗೋಡು: ಕುಂಬಳೆಯ ಕೃಷ್ಣನಗರ ಸಮೀಪ ಯುವಕನನ್ನು ಹತ್ಯೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಕುಂಬಳೆ ಕುಂಟಾಗಿರಡ್ಕ ಪ್ರದೇಶದ ಮಹಮ್ಮದ್ ಹಾಶಿಂ (ಆಶಿಂ), ಅಬು ಜಾಸಿಂ (ಜಾಸಿ), ರಮೀಸ್ ರೋಷಾಲ್ ಫಿರೋಸ್ (ರಮೀಸ್), ಮಿನ್ಹಾಜ್ ಅಬ್ದುಲ್ಲ (ಮಿನ್ಹಾಜ್), ಫಝಲ್ ರಹ್ಮಾನ್ (ಪಜಿಲು) ಮತ್ತು ಮೊಹಿಯುದ್ದೀನ್ ನಿಹಾಲ್ (ನಿಹಾಲ್) ಇವರು ಕುಂಬಳ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಂತಕೃಷ್ಣನ್ ಆರ್ ಮೆನನ್ ಅವರ ಮುಂದೆ ಶರಣಾಗಿದ್ದಾರೆ. ಮಾರ್ಚ್ 30ರಂದು ಮಧ್ಯರಾತ್ರಿ ಸುಮಾರು 12 ಗಂಟೆಗೆ ಕುಂಬಳೆ…

Read More

ಆನೆಕಲ್ಲು ಶಾಲೆಯಲ್ಲಿ ಮೂರು ದಿನಗಳ ವೈವಿಧ್ಯ ಬೇಸಿಗೆ ಶಿಬಿರ ಆರಂಭ

ಆನೆಕಲ್ಲು: ಎಸ್. ಎಸ್. ಕೆ ಕಾಸರಗೋಡು ಹಾಗೂ ಬಿ. ಆರ್. ಸಿ ಮಂಜೇಶ್ವರ ಆಶ್ರಯದಲ್ಲಿ ಮೂರು ದಿನಗಳ ವೈವಿಧ್ಯ ಬೇಸಿಗೆ ಶಿಬಿರವು ಆನೆಕಲ್ಲು ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾದ ಹರ್ಷಾದ್ ವರ್ಕಾಡಿ ನೆರವೇರಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅಶೋಕ್ ಕೊಡ್ಲಮೊಗರು ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ, ಶಾಲಾ ಮುಖ್ಯೋಪಾಧ್ಯಯರಾದ ರವಿಶಂಕರ್ , ಸಿತಾರ ಟೀಚರ್ ಶುಭ ಹಾರೈಸಿದರು. ಬಿ .ಪಿ. ಸಿ ರಾಜ ಗೋಪಾಲನ್ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು….

Read More

ಕಾಸರಗೋಡಿನ ಕೇರಳ ಕೆ. ಎಸ್.ಆರ್. ಟಿ.ಸಿ.ಫಾಸ್ಟ್ ಪ್ಯಾಸೆಂಜರ್ ಬಸ್ಸು ಬೀರಿ ಬಸ್ ಸ್ಟಾಪ್ ನಲ್ಲಿ ನಿಲುಗಡೆಗೆ ಒತ್ತಾಯಿಸಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಿಗೆ ಮನವಿ

ಕಾಸರಗೋಡು ಮಂಗಳೂರು ಅಂತರ ರಾಜ್ಯ ಮಾರ್ಗದಲ್ಲಿ ವೇಗವಾಗಿ ಸಂಚರಿಸುವ ಕೇರಳ ಕೆ.ಎಸ್.ಆರ್. ಟಿ.ಸಿ ಫಾಸ್ಟ್ ಪ್ಯಾಸೆಂಜರ್ ಬಸ್, ಬೀರಿ ಬಸ್ ಸ್ಟಾಪ್ ನಲ್ಲಿ ನಿಲುಗಡೆಯಾಗಬೇಕೆಂದು ಕಾಸರಗೋಡು ಕಡೆಗೆ ದಿನನಿತ್ಯ ಹೋಗಿ ಬರುವ ಬಸ್ಸು ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ.ಈ ಫಾಸ್ಟ್ ಪ್ಯಾಸೆಂಜರ್ ಕೆ. ಎಸ್.ಆರ್. ಟಿ. ಸಿ ಬಸ್ಸು ತಲಪಾಡಿ ಮತ್ತು ತೊಕ್ಕೋಟು ಬಸ್ ಸ್ಟಾಪ್ ನಲ್ಲಿ ಮಾತ್ರ ನಿಲುಗಡೆಯಿದೆ. ದಿನಂಪ್ರತಿ ನೂರಾರು ಸಂಖ್ಯೆಯಲ್ಲಿ ಕಾಸರಗೋಡು ಬೀರಿ ಮಾರ್ಗವಾಗಿ ಉದ್ಯೋಗ ವ್ಯವಹಾರ ಹಾಗೂ ಇನ್ನಿತರ ಕೌಟುಂಬಿಕ ಅಗತ್ಯಗಳಿಗಾಗಿ ಪ್ರಯಾಣಿಸುವ ದಿನನಿತ್ಯದ…

Read More

ನಾಲ್ಕು ವರ್ಷಗಳಿಂದ ನೀರಿಲ್ಲ, ಆದರೂ ಬಿಲ್–ಜಪ್ತಿ ನೋಟಿಸ್: ಮಾಡ ಕೊಳಕೆಯ ಜನರ ಆಕ್ರೋಶ

​ಮಂಜೇಶ್ವರ: ಅಭಿವೃದ್ಧಿಯ ಹೆಸರಿನಲ್ಲಿ ಜನರ ಮೂಲಭೂತ ಹಕ್ಕನ್ನೇ ಕಸಿದುಕೊಳ್ಳುವುದು ಎಷ್ಟು ಸರಿ? ಮಂಜೇಶ್ವರ ಗ್ರಾಮ ಪಂಚಾಯಿತಿಯ 23ನೇ ವಾರ್ಡ್ ವ್ಯಾಪ್ತಿಯ ಮಾಡ ಕೊಳಕೆ ನಿವಾಸಿಗಳ ಇಂದಿನ ಸ್ಥಿತಿ ನೋಡಿದರೆ ವ್ಯವಸ್ಥೆಯ ಮೇಲೆ ಅಸಹ್ಯ ಹುಟ್ಟದಿರದು. ಕಳೆದ ನಾಲ್ಕು ವರ್ಷಗಳಿಂದ ಕುಡಿಯುವ ನೀರಿಲ್ಲದೆ ಇಲ್ಲಿನ ಕುಟುಂಬಗಳು ನರಕಯಾತನೆ ಅನುಭವಿಸುತ್ತಿದ್ದರೂ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ‘ಕುರುಡಾಗಿ’ ಕುಳಿತಿದ್ದಾರೆ. ​ತಲಪಾಡಿಯಿಂದ ಚೆಂಗಳವರೆಗಿನ ರಸ್ತೆ ಕಾಮಗಾರಿ ಆರಂಭವಾದಾಗ ಅಭಿವೃದ್ಧಿಯ ಕನಸು ಕಂಡಿದ್ದ ಜನರಿಗೆ ಇಂದು ಆ ರಸ್ತೆಯೇ ಶಾಪವಾಗಿ ಪರಿಣಮಿಸಿದೆ. ಕಾಮಗಾರಿ…

Read More

ಕಾಸರಗೋಡು ಕನ್ನಡ ಭವನ ಪ್ರಕಾಶನದ 3ನೇ ವಾರ್ಷಿಕೋತ್ಸವ ಇಂದು – ಪುಸ್ತಕ ಬಿಡುಗಡೆ, ಪ್ರತಿಭಾ ಪುರಸ್ಕಾರ

Kasaragod: ಕನ್ನಡ ಭವನದ ಅಂಗ ಸಂಸ್ಥೆಯಾದ ಕನ್ನಡ ಭವನ ಪ್ರಕಾಶನದ ಮೂರನೇ ವಾರ್ಷಿಕೋತ್ಸವವು ಇಂದು (ಏಪ್ರಿಲ್ 22) ಸಂಜೆ 5 ಗಂಟೆಗೆ ಕನ್ನಡ ಭವನ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಪತ್ರಕರ್ತ ಹಾಗೂ ಕನ್ನಡ ಭವನ ಗೌರವ ಅಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಭವನ ನಿರ್ದೇಶಕ ಹಾಗೂ ಧಾರ್ಮಿಕ ಮುಂದಾಳು ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಸಾಧನೆಗೈದ ಇಬ್ಬರು ಪ್ರತಿಭಾವಂತರಿಗೆ ಗೌರವ ಸಮರ್ಪಣೆ ನಡೆಯಲಿದೆ. ಎಂ.ಬಿ.ಬಿ.ಎಸ್.,…

Read More

ಸ್ಕೂಟರ್‌ನಲ್ಲಿ ಮಾದಕ ವಸ್ತು ಸಾಗಾಟ:19.340 ಗ್ರಾಂ ಎಂ.ಡಿ.ಎಂ.ಎ ಸಹಿತ ಯುವಕನ ಬಂಧನ

ಕಾಸರಗೋಡು: ಸ್ಕೂಟರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 19.340 ಗ್ರಾಂ ಎಂ.ಡಿ.ಎಂ.ಎ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ಕರ್ನಾಟಕದ ಪೆರುಮಣ್ಣೂರು, ಕಲ್ಲಾಪು ನಿವಾಸಿಯಾದ ಸಯ್ಯಿದ್ ಆಫ್ರೀದಿ (28) ಬಂಧಿತನಾಗಿದ್ದಾನೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ಶಿರಿಯ ಮುಟ್ಟಮ್ ಪ್ರದೇಶದಲ್ಲಿ ಪೇಟ್ರೋಲಿಂಗ್ ನಡೆಸುತ್ತಿದ್ದ ವೇಳೆ ಸರ್ವೀಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ಕರ್ನಾಟಕ ನೋಂದಣಿ ಸಂಖ್ಯೆಯ ಸ್ಕೂಟರ್ ಅನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಆರೋಪಿಯ ಬಳಿ ಇದ್ದ ಮಾದಕ ವಸ್ತು ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಮಂಜೇಶ್ವರ ರೈಲ್ವೆ ನಿಲ್ದಾಣಕ್ಕೆ ಅಭಿವೃದ್ಧಿಯ ಸ್ಪರ್ಶ: ಮೂಲಸೌಕರ್ಯ ವೃದ್ಧಿಗೆ ಡಿಆರ್‌ಎಂ ಮಧುಕರ್ ರಾವ್ ಭರವಸೆ

ಮಂಜೇಶ್ವರ: ಮಂಜೇಶ್ವರ ರೈಲ್ವೆ ನಿಲ್ದಾಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮಧುಕರ್ ರಾವ್ ತಿಳಿಸಿದ್ದಾರೆ. ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಜನಪ್ರತಿನಿಧಿಗಳು, ಪ್ರಯಾಣಿಕರು ಹಾಗೂ ನಿಲ್ದಾಣ ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಅವರು, ಹಲವು ಪ್ರಮುಖ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಮಳೆಗಾಲದಲ್ಲಿ ನಿಲ್ದಾಣ ಆವರಣದಲ್ಲಿ ನೀರು ನಿಲ್ಲದಂತೆ ತಡೆಯಲು ಸುಸಜ್ಜಿತ ಚರಂಡಿ ವ್ಯವಸ್ಥೆ ನಿರ್ಮಿಸಲಾಗುವುದು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಪ್ಲಾಟ್‌ಫಾರ್ಮ್‌ನ ಎರಡೂ ಬದಿಗಳಲ್ಲಿ ಮೇಲ್ಛಾವಣಿ ನಿರ್ಮಾಣಕ್ಕೂ ಕ್ರಮ…

Read More

ಬೇಕೂರಿನಲ್ಲಿ ಪೈಪ್‌ಲೈನ್ ಸ್ಫೋಟ – ಮಿನಿ ಪ್ರವಾಹ, ಮನೆಗೆ ಹಾನಿ, ನೀರು ಸರಬರಾಜು ಸ್ಥಗಿತದ ಭೀತಿ

ಬೇಕೂರು: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ವಿವಿಧ ವಾರ್ಡ್‌ಗಳಿಗೆ ನೀರು ಸರಬರಾಜು ಮಾಡುವ ಬೇಕೂರಿನ ಜಲಸಂಪನ್ಮೂಲ ಘಟಕದಲ್ಲಿ ಇಂದು ಬೆಳಗ್ಗೆ ಭಾರೀ ಅವಘಡ ಸಂಭವಿಸಿದೆ. ಬೇಕೂರು ಮಿಲ್ ಸಮೀಪದಲ್ಲಿರುವ ಚೆಂಬರ್‌ನಲ್ಲಿ ಪೈಪ್‌ಲೈನ್ ತುಂಡಾಗಿ, ದೊಡ್ಡ ಪ್ರಮಾಣದ ನೀರು ಹೊರಹರಿದು ಮಿನಿ ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಇಂದು ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಸಂಭವಿಸಿದ್ದು, ಸ್ಥಳೀಯ ಸ್ಕ್ರಾಪ್ ಅಂಗಡಿ ಮಾಲೀಕ ಗಫೂರ್ ಅವರ ಮನೆಗೆ ನೀರು ನುಗ್ಗಿ, ಹಿತ್ತಲಿನಲ್ಲಿದ್ದ ಮರಗಿಡಗಳು ಹಾಗೂ ಅನೇಕ ವಸ್ತುಗಳು ಸಂಪೂರ್ಣ…

Read More

ಮಂಜೇಶ್ವರ ಬೀಚ್‌ನಲ್ಲಿ ಕಸದ ಪರ್ವತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೀನುಗಾರರು–ಪ್ರವಾಸಿಗರ ಆಕ್ರೋಶ

ಮಂಜೇಶ್ವರ: ಪ್ರವಾಸಿ ಆಕರ್ಷಣೆಯಾಗಿ ಹೆಸರು ಮಾಡಿರುವ ಮಂಜೇಶ್ವರ ಬೀಚ್ ಇದೀಗ ಕಸದ ಗುಡ್ಡಗಳ ಕೇಂದ್ರವಾಗುತ್ತಿದೆ. ಬೀಚ್ ಸಮೀಪದ ಎಲ್ಲ ಪ್ರದೇಶಗಳು ಈಗ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳಿಂದ ತುಂಬಿ ಹರಿಯುತ್ತಿವೆ. ಪ್ರತಿದಿನ ನೂರಾರು ಜನರು ಭೇಟಿ ನೀಡುವ ಈ ಪ್ರದೇಶದಲ್ಲಿ ಮಲಿನತೆ ಹೆಚ್ಚುತ್ತಿರುವುದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಬೀಚ್‌ಗೆ ಬರುವ ಪ್ರವಾಸಿಗರು ಮತ್ತು ಹತ್ತಿರದ ವಾಟರ್ ಥೀಮ್ ಪಾರ್ಕ್‌ಗೆ ಆಗಮಿಸುವವರು ಆಹಾರದ ಅವಶೇಷಗಳು ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ಎಸೆಯುತ್ತಿರುವುದು ಸಾಮಾನ್ಯವಾಗಿದೆ. ಕಸದ ರಾಶಿ ಹೆಚ್ಚಾಗುತ್ತಿದ್ದಂತೆ ಬೀದಿ ನಾಯಿಗಳ…

Read More
error: Content is protected !!