272 .16 ಲೀಟರ್ ವಿದೇಶಿ ಮದ್ಯ ವಶ ಪಡಿಸಿದ ಅಬಕಾರಿ ಇಲಾಖೆ ಪರಾರಿಯಾದ ಆರೋಪಿಗಳು

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 272.16 ಲೀಟರ್ ಕರ್ನಾಟಕ ನಿರ್ಮಿತ ವಿದೇಶ ಮದ್ಯವನ್ನು ಕಾಸರಗೋಡು ಚೌಕಿ, ಸಿಪಿ.ಸಿ.ಆ‌ರ್.ಐ. ಪರಿಸರದಿಂದ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಕ್ಸೆಸ್ ಎನ್ಫೋರ್ಸ್ ಮೆಂಟ್ & ಆಂಟಿ ನರ್ಕೋಟಿಕ್ ಸ್ಪೆಶಲ್ ತಂಡ ಹಾಗೂ ಎಕ್ಸೆಸ್ ಸರ್ಕಲ್ ಆಫೀಸ್ ತಂಡದ ನೇತೃತ್ವದಲ್ಲಿ ಕುಂಬಳೆ ಆರಿಕ್ಕಾಡಿ ಬಳಿ ವಾಹನ ತಪಾಸಣೆ ನಡೆಸುವ ವೇಳೆ ಕಾರೊಂದು ನಿಲ್ಲಿಸದೆ ಪರಾರಿಯಾಗಿತ್ತು. ಈ ಕಾರನ್ನು ಬೆನ್ನಟ್ಟಿ ಚೌಕಿ ಪರಿಸರದಿಂದ ಹಿಡಿದಾಗ ಕರ್ಣಾಟಕ ನಿರ್ಮಿತ ವಿದೇಶ ಮದ್ಯ ವಶಪಡಿಸಲಾಗಿದೆ. ಕಾರಿನಲ್ಲಿದ್ದವರು ಓಡಿ ಪರಾರಿಯಾದರು. ಅಸಿಸ್ಟೆಂಟ್…

Read More

ಸಾರ್ವಜನಿಕ ಶಿಕ್ಷಣವನ್ನು ಅಧ:ಪತನಗೊಳಿಸಿದ ಎಡರಂಗ ಸರಕಾರದ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಡಿಡಿಇ ಕಚೇರಿ ಮುಂದೆ ಮಾರ್ಚ್ ಮತ್ತು ಧರಣಿ

ಸಾರ್ವಜನಿಕ ಶಿಕ್ಷಣವನ್ನು ಅಧ:ಪತನಗೊಳಿಸಿದ ಎಡರಂಗ ಸರಕಾರದ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಡಿಡಿಇ ಕಚೇರಿ ಮುಂದೆ ಮಾರ್ಚ್ ಮತ್ತು ಧರಣಿಯನ್ನು ಶನಿವಾರ ನಡೆಸಿತು.ಧರಣಿಯನ್ನು ದೇಶೀಯ ಅಧ್ಯಾಪಕ ಪರಿಷತ್ ನ ರಾಜ್ಯ ಸಮಿತಿ ಉಪಾಧ್ಯಕ್ಷ ಕೆ.ಕೆ ರಾಜೇಶ್ ಉದ್ಘಾಟಿಸಿ ಸರಕಾರ ಅಧ್ಯಾಪಕ ವರ್ಗವನ್ನು ಕಡೆಗಣಿಸುತ್ತಿದೆ. ನ್ಯಾಯವಾಗಿ ಸಿಗಬೇಕಾದ ಸವಲತ್ತುಗಳನ್ನು ಕೊಡದೆ ಶೋಷಣೆ ಮಾಡುತ್ತಿದೆ. ಅಧ್ಯಾಪಕರ ಬದುಕಿಗೆ ಭದ್ರತೆಯೇ ಇಲ್ಲದಾಗಿದೆ. ಸಾರ್ವಜನಿಕ ಶಿಕ್ಷಣ ರಂಗವನ್ನು ಅಧಃಪತನಗೊಳಿಸಿದ ಎಡರಂಗ ಸರಕಾರದ ಕಾರ್ಯವೈಖರಿಯ ವಿರುದ್ಧ ಹೋರಾಡುವ ಸಂದರ್ಭ ಒದಗಿ ಬಂದಿದೆ ಎಂದರು.ಸಾರ್ವಜನಿಕ…

Read More

ಕುಂಜತ್ತೂರು ಎಲ್.ಪಿ. ಶಾಲೆಯ ಸಮೀಪದಲ್ಲಿ ಹೈವೋಲ್ಟೇಜ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಥಾಪನೆ . ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಮಂಜೇಶ್ವರ: ಕೇರಳ-ಕರ್ನಾಟಕ ಗಡಿ ಪ್ರದೇಶದ ಕುಂಜತ್ತೂರು ಸರ್ಕಾರಿ ಎಲ್.ಪಿ. ಶಾಲೆಯ ಪ್ರವೇಶ ದ್ವಾರದ ಸಮೀಪದಲ್ಲಿ ಸ್ಥಾಪಿಸಲಾದ ಹೈವೋಲ್ಟೇಜ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಶಾಲೆಗೆ ಆಗಮಿಸುವ ನೂರಾರು ಮಕ್ಕಳ ಪ್ರಾಣಭದ್ರತೆಗೆ ಇದು ಅಪಾಯಕಾರಿಯಾಗಿರುವುದಾಗಿ ಪೋಷಕರು ಹಾಗೂ ಊರವರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಶಾಲೆಯ ಕಟ್ಟಡಕ್ಕೆ ಸಮೀಪದಲ್ಲಿಯೇ ಈ ಟ್ರಾನ್ಸ್‌ಫಾರ್ಮರ್ ಸ್ಥಾಪನೆಯಾಗಿದ್ದು, ಯಾವುದೇ ಸಮಯದಲ್ಲಾದರೂ ವಿದ್ಯುತ್ ದುರಂತವು ದೈಹಿಕ ಹಾನಿಗೆ ಕಾರಣವಾಗಬಹುದೆಂಬ ಭೀತಿ ಎದುರಾಗಿದೆ. ಶಾಲಾ ಸಮಯದಲ್ಲಿ ಮಕ್ಕಳು ಆಟವಾಡುವಾಗ ಅಥವಾ ಗುಂಪುಗಳಾಗಿ ಸಂಚರಿಸುವಾಗ ಇದೀಗ ಸ್ಥಾಪನೆಯಾಗಿರುವ…

Read More

ಮಂಜೇಶ್ವರ ಪಂಚಾಯತ್ ಅಧ್ಯಕ್ಷೆಯ ಜನವಿರೋಧಿ ನೀತಿ ವಿರುದ್ಧ ಮುಸ್ಲಿಂ ಲೀಗ್ ಧರಣಿ

ಮಂಜೇಶ್ವರ : ಮಂಜೇಶ್ವರ ಪಂಚಾಯತ್ ಬೋರ್ಡ್ ಅಧ್ಯಕ್ಷೆ ಯ ಜನವಿರೋಧಿ ನೀತಿ ವಿರುದ್ಧ ಮಂಜೇಶ್ವರ ಪಂಚಾಯತ್ ಮುಸ್ಲಿಂ ಲೀಗ್ ಸಮಿತಿಯ ನೇತೃತ್ವದಲ್ಲಿ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಯಿತು. ಆಸ್ತಿಗಾರಿಕೆ (ಕಟ್ಟಡ ತೆರಿಗೆ) ಹೆಸರಿನಲ್ಲಿ ತೆಗೆದುಕೊಂಡಿರುವ RR ಕ್ರಮವನ್ನು ಹಿಂತೆಗೆದುಕೊಳ್ಳಬೇಕು, ರಸ್ತೆಗಳ ಇಕ್ಕೆಡೆಗಳಲ್ಲಿ ಗುಬ್ಬೆದ್ದು ನಾರುತ್ತಿರುವ ತ್ಯಾಜ್ಯಗಳನ್ನು ಕೂಡಲೇ ತೆರವುಗೊಳಿಸಬೇಕು, ಬೀದಿ ನಾಯಿಗಳ ಅಟ್ಟಹಾಸಕ್ಕೆ ಪರಿಹಾರ ಕಂಡುಹಿಡಿಯಬೇಕು, ಕಲ್ಯಾಣ ಪಿಂಚಣಿ ಅರ್ಜಿಗಳನ್ನು ವಿಳಂಬವಿಲ್ಲದೆ ಪರಿಶೀಲಿಸಿ ತೀರ್ಮಾನಿಸಬೇಕು, ಪಂಚಾಯತ್ ಅಧ್ಯಕ್ಷರ ಸಾರ್ವಜನಿಕರೊಡನೆ ಇರುವ ವರ್ತನೆ ಸುಧಾರಿಸಬೇಕು ಎಂಬೀ…

Read More

ಕುಂಬಳೆ ಗ್ರಾಮ ಪಂಚಾಯತ್ ಆಡಳಿತ ಪಕ್ಷದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮೇ 26 ರಂದು ಮತಕ್ಕೆ

ಕುಂಬಳೆ ಭ್ರಷ್ಟಾಚಾರ ಹಗರಣದ ಆರೋಪವನ್ನು ಎದುರಿಸುತ್ತಿರುವ ಕುಂಬಳೆ ಗ್ರಾಮ ಪಂಚಾಯತ್ ನ ಮುಸ್ಲಿಂ ಲೀಗ್ ಆಡಳಿತ ಸಮಿತಿಯನ್ನು ಪ್ರಶ್ನಿಸಿ ವಿರೋಧ ಪಕ್ಷ ಬಿಜೆಪಿ ನೀಡಿದ ಅವಿಶ್ವಾಸ ಗೊತ್ತುವಳಿ ಮೇ 26 ರಂದು ನಿರ್ಧಾರವಾಗಲಿದೆ.ಚುನಾವಣಾಧಿಕಾರಿಯಾದ ಬ್ಲಾಕ್ ಪಂಚಾಯತ್ ಕಾರ್ಯದರ್ಶಿ ಜೋನ್ ಎ ಡಿಕ್ರೂಸ್ ರವರಿಗೆ ಬಿಜೆಪಿ ಇತ್ತೀಚಿಗೆ ಅವಿಶ್ವಾಸ ಗೊತ್ತುವಳಿಯ ನೋಟೀಸು ನೀಡಿತ್ತು.ಕುಂಬಳೆ ಪಂಚಾಯತ್ ನಲ್ಲಿ ಕಳೆದ ನಾಲ್ಕು ವರೆ ವರ್ಷಗಳಿಂದ ನಡೆದ ಭ್ರಷ್ಟಾಚಾರದ ತನಿಖೆ ಯಾಗಬೇಕು .ಸರಕಾರಿ ಆಡಳಿತ ಯಂತ್ರ ದುರುಪಯೋಗ ,ಸರಕಾರಿ ಸೊತ್ತು ಕಬಳಿಸಿದವರಿಗೆ ಕಾನೂನಾತ್ಮಕ…

Read More

ಭಾರೀ ಮಳೆಯಿಂದಾಗಿ ವರ್ಕಾಡಿಯ ವಿವಿದೆಡೆ ವ್ಯಾಪಕ ನಾಶನಷ್ಟ:ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಿವಿದೆಡೆ ಬೇಟಿ :

ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ವಿಧಾನಸಭಾ ಕ್ಷೇತ್ರದ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ವರ್ಕಾಡಿ ಬೊಡೋಡಿ, ಮತ್ತು ಪೊಯ್ಯತ್ ಬಯಲು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದೆ. ಅಲ್ಲದೆ, ತಿಮ್ಮಂಗನೂರು ಅಣೆ-ನಡಿಬಯಲು ರಸ್ತೆಯಲ್ಲಿ ಭೂಕುಸಿತದಿಂದಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್., ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ವೋರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯ, ಹಿರಿಯ ಮುಖಂಡ ಧೂಮಪ್ಪ ಶೆಟ್ಟಿ, ಹಾಗೂ…

Read More

ವರ್ಕಾಡಿ ಕಜೆ ಪ್ರದೇಶದಲ್ಲಿ ಭೀಕರ ಭೂಕುಸಿತ .ಅಪಾಯದ ಅಂಚಿನಲ್ಲಿ ಸ್ಥಳೀಯರು

ಮಂಜೇಶ್ವರ: ಮಂಜೇಶ್ವರದ ವರ್ಕಾಡಿ ಕಜೆ ಪ್ರದೇಶದಲ್ಲಿ ಭೂಮಿ ಕುಸಿದು ಅಪಾಯದ ಸ್ಥಿತಿ ಉಂಟಾಗಿದ್ದು, ಸುತ್ತಮುತ್ತಲಿನ ನಿವಾಸಿಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಭೂಕುಸಿತದ ಪರಿಣಾಮವಾಗಿ ಸುಮಾರು 10 ಮೀಟರ್ ಆಳದ ಎರಡು ದೊಡ್ಡ ಗುಂಡಿಗಳು ಸೃಷ್ಟಿಯಾಗಿದೆ. ಈ ಪ್ರದೇಶದಲ್ಲಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಭೂಮಿ ಕುಸಿದಿದ್ದು, ಆ ಭಾಗದ ನೆಲ ಬಿರುಕು ಬಿಟ್ಟಿದೆ. ಈ ಕಾರಣದಿಂದಾಗಿ ಸ್ಥಳೀಯ ನಿವಾಸಿಗಳಾದ ಅವ್ವಮ್ಮ, ಅಸಿಯಮ್ಮ, ಅಹ್ಮದ್ ಕುಞಿ ಮೊಂಟಾದವರನ್ನು ಸ್ಥಳೀಯರ ಸಹಾಯದಿಂದ ಮೊದಲೇ…

Read More

ರಾತ್ರಿ ಸುರಿದ ವರುಣನ ಆರ್ಭಟಕ್ಕೆ ಗುಡ್ಡ ಕುಸಿದು ಮನೆಗೆ ಹಾನಿ. ಮನೆಯವರು ಪ್ರಾಣಾಪಾಯದಿಂದ ಪಾರು

ಕಾಸರಗೋಡು : ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ವರುಣನ ಆರ್ಭಟಕ್ಕೆ ಜನರು ಅಕ್ಷರಶಹ ತತ್ತರಿಸಿ ಹೋಗಿದ್ದಾರೆ . ಗಡಿನಾಡು ಕಾಸರಗೋಡಿನಲ್ಲಿ ನಡೆದ ಘಟನೆ ನಿದ್ರೆಯಲ್ಲಿದ್ದವರಿಗೆ ಒಂದು ಕ್ಷಣ ಯವಲೋಕದ ದರ್ಶನವನ್ನೇ ಮಾಡಿಸಿದೆ .ಹಂಚು ಹಾಕಿದ ಮನೆಯ ಮೇಲೆಯೇ ಗುಡ್ಡ ಕುಸಿದು ಮನೆ ಭಾಗಶಃ ಹಾನಿಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಚಂದ್ರಗಿರಿಯ ನಡಕ್ಕಾಲ್ ಎಂಬಲ್ಲಿ ನಡೆದಿದೆ . ಚಂದ್ರಗಿರಿ ನಡಕ್ಕಾಲ್ ಗ್ರಾಮದಲ್ಲಿ ವಾಸಿಸುವ ಮಿತೇಶ್ ಎಂಬವರ ಮನೆಗೆ ಸಮೀಪದ ಗುಡ್ಡ ನಿನ್ನೆ ರಾತ್ರಿ ಸುರಿದ ಭೀಕರ ಮಳೆಗೆ ಕುಸಿದಿದೆ…

Read More

ಧಾರಾಕಾರವಾಗಿ ಸುರಿಯುವ ಮಳೆಯಿಂದ ಮಂಜೇಶ್ವರದ ಹಲವೆಡೆ ಮನೆ, ಮಸೀದಿ, ವಿದ್ಯಾಸಂಸ್ಥೆಗಳು ಜಲಾವೃತ

ಮಂಜೇಶ್ವರ : ಧಾರಾಕಾರವಾಗಿ ಸುರಿಯುವ ಮಳೆಯಿಂದ ಮಂಜೇಶ್ವರದ ಹಲವೆಡೆ ಮನೆ, ಮಸೀದಿ, ವಿದ್ಯಾಸಂಸ್ಥೆಗಳು ಜಲಾವೃತಗೊಂಡಿದೆಕಳೆದ ಕೆಲವು ದಿನಗಳಿಂದ ಮಂಜೇಶ್ವರ ಉಪ್ಪಳಗಳಲ್ಲಿ ಪ್ರಳಯ ಸಂಭವಿಸಲು ಸಾಧ್ಯತೆ ಇರುವ ಬಗ್ಗೆ ಸಂಬಂಧ ಪಟ್ಟ ಇಲಾಖೆ ಸೂಚನೆ ನೀಡಿದ್ದರೂ ಇದಕ್ಕೆ ಬೇಕಾಗಿ ಪೂರ್ವ ಸಿದ್ಧತೆಗಳನ್ನು ನಡೆಸಬೇಕಾಗಿದ್ದ ಸ್ಥಳೀಯಾಡಳಿತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮೌನವನ್ನು ಪಾಲಿಸಿರುವುದಾಗಿ ಆರೋಪ ಕೇಳಿ ಬಂದಿದೆ. ಕಳೆದ ರಾತ್ರಿ ಸುರಿದ ಬಿರುಸಿನ ಮಳೆಗೆ ವರ್ಕಾಡಿ ಪಂಚಾಯತು ವ್ಯಾಪ್ತಿಯ ಎರಡನೇ ವಾರ್ಡಿನಲ್ಲಿರುವ ಮುಡಿಮಾರು – ಬೇಕರಿ ರಸ್ತೆ ಪೂರ್ಣವಾಗಿ ಕುಸಿದು…

Read More

ರಸ ಗೊಬ್ಬರದ ಬೆಲೆಏರಿಕೆ : ರೈತಸಂಘದ ಪ್ರತಿಭಟನೆ

ಕೇಂದ್ರದ ಮೋದಿ ಸರಕಾರವು ರಾಸಾಯಿನಿಕ ಗೊಬ್ಬರಗಳ ಬೆಲೆ ಯನ್ನು ವಿಪರೀತವಾಗಿ ಹೆಚ್ಚಿಸಿದನ್ನು ಪ್ರತಿಭಟಿಸಿಕೊಂಡು ರೈತ ಸಂಘ(AIKS) ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಪೈವಳಿಕೆ ಅಂಚೆ ಕಚೇರಿಗೆ ರೈತರ ಮಾರ್ಚ್ ಮತ್ತು ಧರಣಿ ನಡೆಯಿತು. ರೈತಸಂಘದ ಜಿಲ್ಲಾ ಉಪಾಧ್ಯಕ್ಷರಾದ ಎ. ಚಂದ್ರಶೇಖರ್ ಉದ್ಘಾಟಿಸಿದರು. ಏರಿಯಾ ಅಧ್ಯಕ್ಷರಾದ ಅಬ್ದುಲ್ ರಸಾಕ್ ಚಿಪ್ಪಾರ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಸಮಿತಿ ಸದಸ್ಯರಾದ ಗೀತಾ ಸಾಮಾಣಿ, ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ, ಪಂಚಾಯತ್ ಸದಸ್ಯರಾದ ಶ್ರೀನಿವಾಸ್ ಭಂಡಾರಿ, ಅಬ್ದುಲ್ಲ ಕೆ, ಶ್ರೀಮತಿ.ರಹಮತ್ ನೇತಾರರಾದ…

Read More
error: Content is protected !!