ಶಾಸಕರ ಆಸ್ತಿ ಅಭಿವೃದ್ಧಿ ನಿಧಿಯ ಭಾಗವಾಗಿ 2020–21 ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಮೀಂಜ ಕೃಷಿ ಭವನದ ಉದ್ಘಾಟನೆ

ಮಂಜೇಶ್ವರ: ಶಾಸಕರ ಆಸ್ತಿ ಅಭಿವೃದ್ಧಿ ನಿಧಿಯ ಭಾಗವಾಗಿ 2020–21 ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಮೀಂಜ ಕೃಷಿ ಭವನವನ್ನು ಗೌರವಾನ್ವಿತ ಕೃಷಿ ಸಚಿವರಾದ ಶ್ರೀ ಪಿ. ಪ್ರಸಾದ್ ಅವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮಂಜೇಶ್ವರ ಶಾಸಕ ಶ್ರೀ ಎ. ಕೆ. ಎಂ. ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. “ರೈತರ ದ್ವಿತೀಯ ಮನೆಯಾಗಿರುವುದು ಕೃಷಿ ಭವನ. ರೈತರಿಗೆ ಉತ್ತಮ ಸೇವೆಗಳು ನೀಡುವ ಉದ್ದೇಶದಿಂದ ಈ ಕೃಷಿ ಭವನದಲ್ಲಿ ಪ್ಲಾಂಟ್ ಹೆಲ್ತ್ ಕ್ಲಿನಿಕ್ (ಸಸ್ಯ ಆರೋಗ್ಯ ಕೇಂದ್ರ) ಕೂಡ…

Read More

ಮಂಜೇಶ್ವರ : ವನಿತಾ ತರಬೇತಿ ಕೇಂದ್ರ ಉದ್ಘಾಟನೆ .

ಮಂಜೇಶ್ವರ ಬಡಾಜೆ ಕಲ್ಲ ದೇವಸ್ಥಾನ ಬಳಿ ಮಂಜೇಶ್ವರ ಗ್ರಾಮ ಪಂಚಾಯತ್ ಅನುದಾನದೊಂದಿಗೆ ನಿರ್ಮಿಸಲಾದ ವನಿತಾ ತರಬೇತಿ ಕೇಂದ್ರದ ಉದ್ಘಾಟನೆ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಮ್ಮದ್ ಸಿದ್ದಿಕ್ ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೋ ದೀಪ ಪ್ರಜ್ವಲನಗೈದು ಉದ್ಧಾಟಿಸಿ ಶುಭ ಹಾರೈಸಿದರು. ಸ್ಫೂರ್ತಿ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಮ್ಯಾನೇಜರ್ ಮಧುಸೂದನ ಬಳ್ಳಕ್ಕುರಾಯ, ಸಿಡಿಎಸ್ ಸದಸ್ಯೆ ಪ್ರಭಾವತಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕುಟುಂಬಶ್ರೀ ಮಂಜೇಶ್ವರ ಚಯರ್ ಪರ್ಸನ್…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣ

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣಗೊಂಡ ದಾಖಲೆಗಳ ಹಸ್ತಾಂತರ ಮತ್ತು ಕಳೆದ 5 ವರ್ಷಗಳಲ್ಲಿ ಪಂಚಾಯತಿನಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ವೀಡಿಯೋ ಬಿಡುಗಡೆ ಹಾಗೂ ಲೈಫ್ ಭವನ ಪದ್ಧತಿಯ ನೂತನ ಫಲಾನುಭವಿಗಳಿಗೆ ಮಾಹಿತಿ ಕಾರ್ಯಕ್ರಮ ಮಂಜೇಶ್ವರ ಗೋವಿಂದ ಪೈ ಗಿಳಿವಿಂಡುನಲ್ಲಿ ಅದ್ದೂರಿಯಾಗಿ ನಡೆಯಿತು. ಮಂಜೇಶ್ವರ ಗ್ರಾಮ ಪಂಚಾಯತ್‌ನ ಆಡಳಿತಾತ್ಮಕ ಪಾರದರ್ಶಕತೆ, ದಕ್ಷತೆ ಮತ್ತು ಸಾರ್ವಜನಿಕ ಸೇವಾ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣಗೊಂಡ ದಾಖಲೆಗಳ ಹಸ್ತಾಂತರ…

Read More

ಕಾಸರಗೋಡು ಜಿಲ್ಲಾ ವಿಜ್ಞಾನೋತ್ಸವ : ಮಂಜೇಶ್ವರದ ಇಬ್ರಾಹಿಂ ಶಾಹಿದ್ ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಜೇಶ್ವರ: ಮಂಜೇಶ್ವರ ಸಿರಾಜುಲ್ ಹುದಾ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಇಬ್ರಾಹಿಂ ಶಾಹಿದ್ ಎಚ್ 2025–26 ಶೈಕ್ಷಣಿಕ ವರ್ಷದ ಕಾಸರಗೋಡು ಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ವೆಬ್‌ಪೇಜ್ ಡಿಸೈನಿಂಗ್ ವಿಭಾಗದಲ್ಲಿ ವಿಜಯ ಸಾಧಿಸಿ. ಇದೀಗ ಈ ಪೋರ ಕೇರಳ ರಾಜ್ಯ ಮಟ್ಟದ ಐಟಿ ಫೇರ್ ಗೆ ಆಯ್ಕೆಗೊಂಡಿದ್ದಾನೆ. ಮಂಜೇಶ್ವರ ಚೌಕಿ ನಿವಾಸಿ, ಸಮಾಜ ಸೇವಕ ಹಾಗೂ ದೃಶ್ಯ ಮಾಧ್ಯಮ ಕ್ಯಾಮರಾಮ್ಯಾನ್ ಮೊಹಮ್ಮದ್ ಹನೀಫ್ ಶಾರ್ಜಾ ಹಾಗೂ ಕದೀಜಾ ದಂಪತಿಗಳ ಪುತ್ರನಾದ ಇಬ್ರಾಹಿಂ ಶಾಹಿದ್, ಬಾಲ್ಯದಿಂದಲೇ ತಾಂತ್ರಿಕ ಕ್ಷೇತ್ರದ ಮೇಲೆ…

Read More

ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದ ಡೆಕೋರ್ ಪ್ಯಾನೆಲ್ ಇಂಡಸ್ಟ್ರೀಸ್ ನಲ್ಲಿ ಬಾಯ್ಲರ್ ಸ್ಟೋಟ .ಓರ್ವ ಸಾವು, ಹಲವರಿಗೆ ಗಾಯ.

ಮಂಜೇಶ್ವರ : ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದ ಡೆಕೋರ್ ಪ್ಯಾನೆಲ್ ಇಂಡಸ್ಟ್ರೀಸ್ ನಲ್ಲಿ ಬಾಯ್ಲರ್ ಸ್ಟೋಟಗೊಂಡು ಸಂಭವಿಸಿದ ದುರಂತದಲ್ಲಿ ಒಬ್ಬ ಘಟನಾ ಸ್ಥಳದಲ್ಲೇ ಸಾವನ್ನಪ್ಪಿ 16 ಮಂದಿ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಪರಿಸರದ ಮನೆ, ಕಾರ್ಖಾನೆಗಳಿಗೆ ಛಿದ್ರಗೊಂಡ ಕಲ್ಲುಗಳು ರಟ್ಟಿದ್ದಲ್ಲದೇ, ಸ್ಫೋಟದ ಕಂಪನಕ್ಕೆ ಅನಂತಪುರ ಕ್ಷೇತ್ರ ಪರಿಸರವೇ ಕಂಪಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸಹಾಯದಿಂದ ಗಾಯಾಳುಗಳನ್ನು…

Read More

ನಾಗರಕಟ್ಟೆ ಶ್ರೀ ಶಾರದಾ ಭಜನಾಶ್ರಮದಿಂದ ಶೃಂಗೇರಿ ಗುರುಪಾದಪೂಜೆ -ಅನುಗ್ರಹ ಪ್ರಾಪ್ತಿ

ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ ಗುರುದೇವ ಶ್ರೀ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿಗಳವರಿಂದ ಕಾಸರಗೋಡು ಕೋಟೆಯ ಪೂರ್ವ ಭಾಗದಲ್ಲಿನ ನಾಗರಕಟ್ಟೆ ಯಲ್ಲಿ ಸಮಾಜದ ಏಳಿಗೆಗಾಗಿ ಸ್ಥಾಪಿಸಿದ “ಶ್ರೀ ಶಾರದಾ ಭಜನಾಶ್ರಮ ” ಇದರ ಜೀರ್ಣೋದ್ದಾರ, ನೂತನ ನಾಗರಕಟ್ಟೆ, ರಕ್ತೇಶ್ವರಿ ಕಟ್ಟೆ ಪುನರ್ ನಿರ್ಮಾಣ ಹಾಗೂ ಡಿಸೆಂಬರ್ ತಿಂಗಳ ನಾಲ್ಕು, ಐದನೇ ತಾರೀಕಿಗೆ ನಡೆಯುವ ಬ್ರಹ್ಮ ಕಲಶ ಪ್ರಯುಕ್ತ, ಶೃಂಗೇರಿ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾ ಸ್ವಾಮೀಜಿ ಗಳಿಗೆ ಪಾದಪೂಜೆ, ವಸ್ತ್ರ ಸಂಹಿತೆಯೊಂದಿಗೆ ನೀಡಿ ಪರಮ…

Read More

ಇತಿಹಾಸ ಪ್ರಸಿದ್ಧ ಮಂಜೇಶ್ವರ ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ಭೇಟಿ ಕೊಟ್ಟ ಕೊಡುಗೈ ದಾನಿ ಅಸ್ತ್ರ ಗ್ರೂಪ್ CEO ಕೆ.ಎಸ್ ಲಂಚುಲಾಲ್ .

ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕೆಲಸಗಳು ಬರದಿಂದ ಸಾಗುತ್ತಿದ್ದು ಇಂದು ಕೊಡುಗೈ ದಾನಿ , ಬಡವರ ಬಂಧು ಅಸ್ತ್ರ ಗ್ರೂಪ್ ನ ಸಿ ಇ ಓ ಲಂಚುಲಾಲ್ ಕೆ. ಎಸ್ ಅವರು ಕ್ಷೇತ್ರಕ್ಕೆ ಭೇಟಿ ಕೊಟ್ಟರು. ಬರದಿಂದ ಸಾಗುವ ಜೀರ್ಣೋದ್ದಾರ ಕೆಲಸವನ್ನು ವೀಕ್ಷಿಸಿ ರೂಪುರೇಷೆ ನೋಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಜೀರ್ಣೋದ್ದಾರ ಸಮಿತಿ ಹಾಗೂ ಆಡಳಿತ ಸಮಿತಿಯಿಂದ ಲಂಚುಲಾಲ್ ರವರಿಗೆ ಕಿರು ಗೌರವಾರ್ಪಣೆಯನ್ನು ಸಮರ್ಪಿಸಿದರು. ಈ ಸಂದರ್ಭ ಮಾತನಾಡಿದ ಲಂಚುಲಾಲ್ ರವರು ..ಮೊದಲು…

Read More

ಮಂಜೇಶ್ವರದ ದಿವ್ಯಾಂಗಿ ಲಾಟರಿ ವ್ಯಾಪಾರಿಗೆ ದ್ವಿಚಕ್ರ ವಾಹನ ಹಸ್ತಾಂತರಿಸಿದ ಅಸ್ತ್ರ ಗ್ರೂಪಿನ ಸಿ ಇ ಓ ಲಂಚುಲಾಲ್.

ಮಂಜೇಶ್ವರದ ಹೊಸಂಗಡಿಯಲ್ಲಿ ಲಾಟರಿ ಮಾರಾಟ ಮಾಡಿ ಜೀವನ ನಿರ್ವಹಿಸುತ್ತಿರುವ ದಿವ್ಯಾಂಗಿ ರೋಹಿತ್ ಹೊಸಂಗಡಿ ಯವರಿಗೆ ಲಂಚುಲಾಲ್ ಅವರು ತಮ್ಮ ಪ್ರಾಣಾಸ್ತ್ರ ಚಾರಿಟೇಬಲ್ ಟ್ರಸ್ಟ್ ಮೂಲಕ ದ್ವಿಚಕ್ರ ವಾಹನವನ್ನು ಕನಿಲ ಶ್ರೀ ಭಗವತಿ ಕ್ಷೇತ್ರದ ವಠಾರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶ್ರೀ ಕ್ಷೇತ್ರದ ಕಾರ್ನವರ ಮೂಲಕ ನೀಡಿದರು. ಮಂಜೇಶ್ವರ ಪಿಲಿಗೊಬ್ಬು ನಡೆಯುವ ಸಂದರ್ಭದಲ್ಲಿ ರೋಹಿತ್ ಅವರ ಬಗ್ಗೆ ಲಂಚುಲಾಲ್ ಅವರಿಗೆ ತಿಳಿಸಲಾಗಿತ್ತು. ಅಂದೇ ನೀಡಿದ ವಾಗ್ದಾನದಂತೆ ಇಂದು ಈ ದ್ವಿಚಕ್ರ ವಾಹನವನ್ನು ಹಸ್ತಾಂತರಿಸಲಾಗಿದೆ. ಮಂಜೇಶ್ವರ ಪಿಲಿಗೊಬ್ಬು ವೇದಿಕೆಯಲ್ಲಿ ಸಾಂಕೇತಿಕವಾಗಿ…

Read More

ಮಂಜೇಶ್ವರ ವಾಮಂಜೂರು ಶ್ರೀ ಶಾಸ್ತವೇಶ್ವರ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಿದ್ಧತೆ .

ಇತಿಹಾಸ ಪಸಿದ್ದ ಮಂಜೇಶ್ವರ ವಾಮಂಜೂರು ಶ್ರೀ ಶಾಸ್ತವೇಶ್ವರ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಿದ್ಧತೆ ನಡೆಯುತ್ತಿದ್ದು ,ಸರಿ ಸುಮಾರು 17 ವರ್ಷಗಳ ಹಿಂದೆ ಕ್ಷೇತ್ರ ಜೀರ್ಣೋದ್ದಾರ ನಡೆದು ಬ್ರಹ್ಮ ಕಲಶ ನಡೆದಿತ್ತು . ಇದೀಗ ಕ್ಷೇತ್ರ ಎದುರಿನಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣಗೊಂಡ ಹಿನ್ನಲೆಯಲ್ಲಿ ಕ್ಷೇತ್ರಕ್ಕೆ ಬೇಟಿಕೊಡುವವರಿಗೆ ಅವ್ಯವಸ್ಥೆ ಉಂಟಾಗಿದ್ದು ಮುಂದೆ ರಾಷ್ಟ್ರೀಯ ಹೆದ್ದಾರಿಯ ಸಮಾನ ಎತ್ತರಕ್ಕೆ ಏರಿಸಿ ಕ್ಷೇತ್ರವನ್ನು ಪುನರ್ ನಿರ್ಮಾಣ ಮಾಡುವ ಯೋಜನೆಯನ್ನು ಹಾಕಿದ್ದು ಈ ಬಗ್ಗೆ ಜೀರ್ಣೋದ್ದಾರ ಸಮಿತಿಯನ್ನು ರಚಿಸುವ ಸಲುವಾಗಿ ಊರ ಪರವೂರ ಭಕ್ತಾದಿಗಳನ್ನು…

Read More

ಸಂಬಂಧಿಕರ ಮನೆಗೆ ಆಗಮಿಸಿದ್ದ ಅನ್ಯ ರಾಜ್ಯದ ಇಬ್ಬರು ಬಾಲಕಿಯರಲ್ಲಿ ಜ್ವರದ ತೀವ್ರ ತೊಂದರೆ ಕಾಣಿಸಿಕೊಂಡ ಪರಿಣಾಮ ಒಬ್ಬಳ ಸಾವು , ಮತ್ತೊಬ್ಬಳು ತೀವ್ರ ನಿಗಾ ಘಟಕದಲ್ಲಿ ದಾಖಲು

ಮಂಜೇಶ್ವರ: ಸಂಬಂಧಿಕರ ಮನೆಗೆ ಆಗಮಿಸಿದ್ದ ಅನ್ಯ ರಾಜ್ಯದ ಇಬ್ಬರು ಬಾಲಕಿಯರಲ್ಲಿ ಜ್ವರದ ತೀವ್ರ ತೊಂದರೆ ಕಾಣಿಸಿಕೊಂಡ ಪರಿಣಾಮ ಒಬ್ಬಳು ಸಾವನ್ನಪ್ಪಿ, ಮತ್ತೊಬ್ಬಳನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿರುವ ದುರ್ಘಟನೆ ಕೇರಳ–ಕರ್ನಾಟಕ ಗಡಿ ಪ್ರದೇಶವಾದ ತೂಮಿನಾಡಿನಲ್ಲಿ ನಡೆದಿದೆ. ಹರ್ಯಾನಾ ಮೂಲದ 9 ವರ್ಷದ ಮಾಹಿ ಎಂಬ ಬಾಲಕಿ ಸಾವನ್ನಪ್ಪಿದರೆ, ಅವಳ ಜೊತೆಯಲ್ಲಿದ್ದ 13 ವರ್ಷದ **ಕಾಣಿಕಾ ಎಂಬ ಬಾಲಕಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರ ಮನೆಗೆ ಬಂದಿದ್ದ ಈ ಇಬ್ಬರು ಬಾಲಕಿಯರು ಅಸ್ವಸ್ಥಗೊಂಡ ಸಂದರ್ಭ ಸ್ಥಳೀಯರಲ್ಲಿ…

Read More
error: Content is protected !!