ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ಇಬ್ಬರಿಗೆ ಮೂರು ತಿಂಗಳ ಸಜೆ -ತೀರ್ಪು ಪ್ರಕಟಿಸಿದ ನ್ಯಾಯಾಲಯ

ಕಾಸರಗೋಡು : ಡೆಪ್ಯೂಟಿ ತಹಶೀಲ್ದಾರ್ ರನ್ನು ತಡೆದು ಆಕ್ರಮಿಸಿ ಹಲ್ಲೆಗೈದ ಕೇಸಿನಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರ ವಿರುದ್ಧ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷಾ ತೀರ್ಪಿಗೆ ಜಿಲ್ಲಾ ನ್ಯಾಯಾಲಯ ಅನುಮೋದನೆ ನೀಡಿದೆ. ಮೂರು ತಿಂಗಳ ಸಜೆ ಸಹಿತ 20ಸಾವಿರ ರೂ ದಂಡ ವಿಧಿಸಿ ಕಾಸರಗೋಡು ಪ್ರಥಮದರ್ಜೆ ನ್ಯಾಯಾಲಯ ಶಿಕ್ಷೆ ವಿಧಿಸಿತು. ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ತಿಂಗಳು ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ಆದೇಶಿಸಲಾಗಿದೆ. ಶಾಸಕ ಎಕೆಎಂ ಅಶ್ರಫ್ ಹೊರತಾಗಿ ಬಶೀರ್ ಅಬ್ದುಲ್ಲ ಕಾಜ, ಕಾಯಿಂಞಿ…

Read More

ಬಾಳಿಯೂರಿನಲ್ಲಿ ಎರಡು ತಿಂಗಳ ಉಚಿತ ಯಕ್ಷಗಾನ ತರಬೇತಿ ಆರಂಭ.

ಮಂಜೇಶ್ವರ : ಬೆಂಗಳೂರಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಇದರ ಪ್ರಾಯೋಜಕತ್ವದಲ್ಲಿ ಶ್ರೀ ಅಯ್ಯಪ್ಪ ಕೃಪ ಯಕ್ಷಗಾನ ಅಧ್ಯಯನ ಕೇಂದ್ರ ಬಾಳಿಯೂರು ಸಂಸ್ಥೆಯ ಆಶ್ರಯದಲ್ಲಿ ಎರಡು ತಿಂಗಳ ಉಚಿತ ಯಕ್ಷಗಾನ ತರಬೇತಿಯ ಉದ್ಘಾಟನಾ ಸಮಾರಂಭವು ನಡೆಯಿತು. ಇಲ್ಲಿನ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ಶ್ರೀ ಸಂಕಬೈಲು ಸತೀಶ್ ಅಡಪ್ಪ ಉದ್ಘಾಟಿಸಿದರು. ಯಕ್ಷಗಾನ ಗುರುಗಳಾದ ಶ್ರೀ ಶೇಖರ ಶೆಟ್ಟಿ ಬಾಯಾರು, ಶ್ರೀ ರಾಧಾಕೃಷ್ಣ ರೈ ಶ್ರೀಮತಿ ತಾರಾಮಣಿ ವಿ ರೈ, ಯೋಗೇಶ್…

Read More

ಭಾರೀ ಗಾಳಿಗೆ ಭಾರೀ ಗಾತ್ರದ ಮಾವಿನ ಮರ ಧಾರಾಶಾಯಿ

ಐನೂರು ವರ್ಷಗಳ ಇತಿಹಾಸ ಸಾರುವ ಪಾವೂರು ಪೊಯ್ಯ “ಕಟ್ಟೆಜಾತ್ರೆ” (ದೊಂಪದ ಜಾತ್ರೆ) ನಡೆಯುವ ಬೃಹತ್ ‘ಮಾವಿನ ಮರ’ ಮಧ್ಯಾಹ್ನ ಬೀಸಿದ ಭಾರಿ ಗಾಳಿಗೆ ಧಾರಾಶಾಯಿ, ಮಂಜೇಶ್ವರ: “ಕಟ್ಟೆ ಜಾತ್ರೆ” (ದೊಂಪದ ಜಾತ್ರೆ) ನಡೆಯುವ ಇತಿಹಾಸ ಸಾರುವ ಕಟ್ಟೆಯ ಬೃಹತ್ ಮಾವಿನ ಮರವೊಂದು ಇಂದು ಅಪರಾಹ್ನ 3 ಗಂಟೆಗೆ ಬೀಸಿದ ಭಾರಿ ಗಾಳಿಗೆ ಧಾರಾಶಾಯಿಯಾದ ಘಟನೆ ಮಂಜೇಶ್ವರ ಪಾವೂರಿನಲ್ಲಿ ನಡೆದಿದೆ. ಇಲ್ಲಿನ ಪೊಯ್ಯ ಶ್ರೀ ಚಾಮುಂಡಿ ಬಂಟ ಪರಿವಾರ ದೈವಗಳ ಆದಿಸ್ಥಳದ ಕಟ್ಟೆಯಲ್ಲಿರುವ ಬೃಹತ್ ಮಾವಿನ ಮರವೊಂದು ಮಧ್ಯಭಾಗದಿಂದಲೇ…

Read More

ವರ್ಕಾಡಿಯಲ್ಲಿ ನಡೆದ ಭೀಬತ್ಸ ಘಟನೆ :ಬೆಂಕಿ ಹಚ್ಚಿ ತಾಯಿಯನ್ನು ಕೊಂದ ಮಗ, ನೆರೆಮನೆಯ ಮಹಿಳೆಗೂ ಗಂಭೀರ

ರಾತ್ರಿ ಹೊತ್ತು ಮನೆಯಲ್ಲಿ ಮಲಗಿದೆ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ನಡೆದಿದ್ದು ತಾಯಿ ಸಾವನ್ನಪ್ಪಿದ್ದಾರೆ ನೆರೆಮನೆಯ ಮಹಿಳೆ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರ್ಕಾಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್ ಮೊಂತೇರೋರವರ ಪತ್ನಿ ಹಿಲ್ಡಾ (60) ಮೃತಪಟ್ಟ ಮಹಿಳೆ. ಪುತ್ರ ಮೇಲ್ವಿನ್ ಈ ಕೃತ್ಯವೆಸಗಿಧ್ಧಾನೆ. ನೆರೆಮನೆಯ ವಿಕ್ಟರ್ ರವರ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಜೂನ್ 26 ಗುರುವಾರ ಮುಂಜಾನೆ ಈ ಘಟನೆ…

Read More

ಬಾಕುಡ ಸಮಾಜ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ತುಳಸೀದಾಸ್ ಮಂಜೇಶ್ವರ, ಪ್ರ .ಕಾರ್ಯದರ್ಶಿಯಾಗಿ ಸುಮಂಗಲ ಪೊಸೋಟು ಆಯ್ಕೆ

ಮಂಜೇಶ್ವರ: ಬಾಕುಡ ಸಮಾಜ ಸೇವಾ ಸಮಿತಿಯ ಮಹಾಸಭೆ ಇತ್ತೀಚಿಗೆ ಹೊಸಂಗಡಿಯ ಗೇಟ್ ವೇ ಸಭಾಂಗಣದಲ್ಲಿ ಜರಗಿತು. ಸಭೆಯನ್ನು ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶಂಕರ ಅಡ್ಕ ಉಧ್ಘಾಟಿಸಿದರು.ಸಭೆಯಲ್ಲಿ ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಣೇಶ್ ಮಂಗಳೂರು ,ಅಧ್ಯಕ್ಷೆ ಶ್ರೀಮತಿ ಸುಜಾತ ಮಂಜೇಶ್ವರ , ಗೌರವಾಧ್ಯಕ್ಷ ವಿಜಯ ಪಂಡಿತ್ ಮಂಗಲ್ಪಾಡಿ,ಕೋಶಾಧಿಕಾರಿ ಮಂಜುನಾಥ್ ಕಾರ್ಲೆ ,ರಾಮ ಕಿನ್ನಿಗೋಳಿ , ಕಾರ್ಯದರ್ಶಿ ತುಳಸೀದಾಸ್ ಮಂಜೇಶ್ವರ, , ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷರಾದ ನವೀನ…

Read More

ಧಾರ್ಮಿಕ, ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ ರಂಗದ ಮುಂದಾಳು ತುಳಸಿದಾಸ್ ಮಂಜೇಶ್ವರ-ಬಾಕುಡ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ

ಮಂಜೇಶ್ವರ: ಧಾರ್ಮಿಕ, ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ ರಂಗದ ಮುಂದಾಳು ತುಳಸಿದಾಸ್ ಮಂಜೇಶ್ವರ ಬಾಕುಡ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ಸಂಜೆ ಹೊಸಂಗಡಿ ಗೇಟ್ ವೇ ಸಭಾಂಗಣದಲ್ಲಿ ನಡೆದ ಬಾಕುಡ ಸಮಾಜದ ಕೇಂದ್ರ ಸಮಿತಿಯ ಸಭೆಯಲ್ಲಿ ಸಮಾಜದ ಹಿರಿಯರ ಸಮಕ್ಷಮದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡು, ಅಧಿಕಾರವನ್ನ ಪಡಕೊಂಡರು. ತುಳಸಿದಾಸ್ ಮಂಜೇಶ್ವರ್ ರವರು ಪ್ರಸ್ತುತ ರೈಲ್ವೆ ಇಲಾಖೆಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಮಂಜೇಶ್ವರ ಚೌಕಿಯಲ್ಲಿರುವ ಬ್ರೈಟ್ ಆರ್ಟ್ಸ್ & ಸ್ಪೋರ್ಟ್ಸ್ ಸೋಶಿಯಲ್ ವೆಲ್ವೇರ್ ಕ್ಲಬ್ಬಿನ ಮಾಜಿ…

Read More

ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ ಯನ್ನು ಭಾರತ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇಲ್ಲಿ ಆಚರಿಸಲಾಯಿತು ಯೋಗ ಶಿಕ್ಷಕ ಶ್ರೀ ಪ್ರವೀಣ್ ಪ್ರಥ್ವಿ ಯೋಗ ಕೇಂದ್ರ ಪ್ರತಾಪನಗರ ಇವರು ಯೋಗದ ಬಗ್ಗೆ ಮಾಹಿತಿ ನೀಡಿ ಯೋಗಾಭ್ಯಾಸ ನಡೆಸಿದರು. ಧಾರ್ಮಿಕ ಮುಖಂಡ ಶ್ರೀ ದಾಸಪ್ಪ ಸಾಮಾನಿ ಕಯ್ಯಾರು ಇವರು ಶುಭಸಂಸಾಸನೆ ಗೈದರು ಭಜನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು ದುರ್ಗಾ ಶಕ್ತಿ ಕುಣಿತ ಭಜನಾ…

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಸಿಪಿಐ (ಎಂ) ಮಂಜೇಶ್ವರ ಲೋಕಲ್ ಸಮಿತಿ ನೇತೃತ್ವದಲ್ಲಿ ಯುದ್ಧ ವಿರೋಧಿ ರಾಲಿ.

ಇರಾನ್ ಇಸ್ರೇಲ್ ಯುದ್ಧ ವಿರುದ್ಧ ರಾಲಿ ಸಿಪಿಐ(ಎಂ) ಮಂಜೇಶ್ವರ ಲೋಕಲ್ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಪೇಟೆಯಲ್ಲಿ ಜರಗಿತು. ಇಸ್ರೇಲ್ ನಿರಂತರವಾಗಿ ನೆರೆ ರಾಷ್ಟ್ರಗಳನ್ನು ವಿನಾ ಕಾರಣ ಆಕ್ರಮಿಸುವ ಸಂದರ್ಭದಲ್ಲಿ ಯುದ್ಧ ಬೇಡವೇ ಬೇಡ ಎಂಬ ಘೋಷಣೆಯೊಂದಿಗೆ ಸಿಪಿಐ(ಎಂ) ಮಂಜೇಶ್ವರ ಲೋಕಲ್ ವತಿಯಿಂದ ಪ್ರತಿಭಟನಾ ಸಭೆ ಹಾಗೂ ರಾಲಿ ನಡೆಸಲಾಯಿತು. ಪ್ರತಿಭಟನಾ ರಾಲಿಯನ್ನು ಸಿಪಿಐ(ಎಂ) ಮಂಜೇಶ್ವರ ಏರಿಯಾ ಸಮಿತಿ ಸದಸ್ಯರೂ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಬೇಬಿ ಶೆಟ್ಟಿ ಉದ್ಘಾಟಿಸಿದರು. ಗಂಗಾಧರ ದುರ್ಗಿಪಳ್ಳ ಅಧ್ಯಕ್ಷತೆ ವಹಿಸಿದರು. ಸಿಪಿಐ(ಎಂ) ಮಂಜೇಶ್ವರ ಏರಿಯಾ…

Read More
error: Content is protected !!