ಮಂಜೇಶ್ವರ ಆಟೋ ನಿಲ್ದಾಣ ವಿವಾದ: ಜಿಲ್ಲಾಧಿಕಾರಿ ಆದೇಶವನ್ನು ಗಾಳಿಗೆ ತೂರಿದ ಯು ಎಲ್ ಸಿ ಸಿ ಅಧಿಕೃತರು : ಆಟೋ ಚಾಲಕರಿಗೆ ಬೆಂಬಲವಾಗಿ ಎ ಐ ಟಿ ಯು ಸಿ : ಪ್ರತಿಭಟನೆ : ಸ್ಥಳದಲ್ಲಿ ಸಂಘರ್ಷಾವಸ್ಥೆ : ಕಾಮಗಾರಿ ತಾತ್ಕಾಲಿಕ ತಾತ್ಕಾಲಿಕ ಸ್ಥಗಿತ

ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣದ ಸಮೀಪದ ರಾಗಂ ಜಂಕ್ಷನ್ ಸರ್ವೀಸ್ ರಸ್ತೆಯಲ್ಲಿರುವ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಆಗ್ರಹಿಸುತ್ತಿದ್ದ ಆಟೋ ಚಾಲಕರ ಮನವಿಗೆ ಸ್ಪಂದನೆ ನೀಡುವ ಬದಲು, ಜಿಲ್ಲಾಧಿಕಾರಿಯವರ ಸೂಚನೆಗೆ ವಿರುದ್ಧವಾಗಿ ಅಧಿಕಾರಿಗಳು ಕೆಲಸ ಆರಂಭಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಆಟೋ ಚಾಲಕರ ತಂಡವು ನಿಕಟಪೂರ್ವದಲ್ಲಿ ಮಂಜೇಶ್ವರ ತಾಲೂಕಿನ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಯು ಎಲ್ ಸಿ ಸಿ ಗುತ್ತಿಗೆ ಸಂಸ್ಥೆಯ ಅಧಿಕಾರಿಗಳು…

Read More

ದೀಪಾವಳಿ ನೇಮೋತ್ಸವ ಸಂಪನ್ನ.

ಕಾಸರಗೋಡು : ಕಾಸರಗೋಡು ಕೋಟೆ ಭಾಗಿಲಿನಲ್ಲಿರುವ, ಪಳ್ಳದ ಕೊಟ್ಯ ಶ್ರೀ ಧೂಮಾವತಿ, “ದೀಪಾವಳಿ ನೇಮೋತ್ಸವ “ನಾಗರಕಟ್ಟೆಯ, ಕಾಸರಗೋಡು ಕೋಟೆ ಬಾಗಿಲಿನಲ್ಲಿ ಸಮಸ್ತ ಜನ ಸಮುದಾಯದ ಓಗ್ಗೋಡುವಿಕೆಯಲ್ಲಿ ಸಂಪನ್ನವಾಯಿತು. ಪಳ್ಳದ ಕೊಟ್ಯ ತರವಾಡಿನಿಂದ ಬಂದ ಬಂಡಾರ ಮೆರವಣಿಗೆ, ಗುಳಿಗನ ಕೋಲ, 20.10.2025,ರಂದು ನಡೆದ ಧೂಮಾವತಿ ರಾಜನ್ ದೈವ ಕೋಲ, ಊರವರ ಸಹಕಾರದಲ್ಲಿ, ಕಾಸರಗೋಡು ಕೋಟೆ ನಾಯಕರ ಮನೆ ವಂಶಸ್ತರ ನೇತೃತ್ವದಲ್ಲಿ ವಿಜೃಂಭಣೆ ಯಿಂದ ನಡೆಯಿತು. ಉತ್ಸವ ಸಮಿತಿ ಸಹಕರಿಸಿದ ಸಕಲರೀಗೆ ಧನ್ಯವಾದ ಸಮರ್ಪಸಿದೆ.

Read More

ಅಭಿವೃದ್ಧಿ ಪ್ಯಾಕೇಜ್ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ – ಮಂಜೇಶ್ವರ ಸಾರ್ವಜನಿಕ ಆರೋಗ್ಯ ಕೇಂದ್ರ,ಆಧುನಿಕ ಕಟ್ಟಡದ ಶಿಲಾನ್ಯಾಸ,NHM ನಿಧಿಯಿಂದ ಔಷಧಾಲಯ ಮತ್ತು ವೈಟಿಂಗ್ ಏರಿಯಾ ಉದ್ಘಾಟನೆ

ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಮಂಜೇಶ್ವರ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕಾಗಿ ನಿರ್ಮಿಸುವ ಆಧುನಿಕ ಕಟ್ಟಡದ ಶಿಲಾನ್ಯಾಸ ಹಾಗೂ NHM ನಿಧಿಯಿಂದ ನಿರ್ಮಿಸಲಾದ ಔಷಧಾಲಯ ಮತ್ತು ವೈಟಿಂಗ್ ಏರಿಯಾವನ್ನು ಗೌರವಾನ್ವಿತ ಆರೋಗ್ಯ ಸಚಿವರಾದ ಶ್ರೀಮತಿ ವೀಣಾ ಜಾರ್ಜ್ ಆನ್ ಮಂಗಳವಾರ ಬೆಳಿಗ್ಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರದ ಗೌರವಾನ್ವಿತ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ವಹಿಸಿದರು.. ಈ ಕಾರ್ಯಕ್ರಮದಲ್ಲಿ ತ್ರಿಸ್ಥರ ಪಂಚಾಯತ್ ಪ್ರತಿನಿಧಿಗಳು, ಆರೋಗ್ಯ ಕಾರ್ಯಕರ್ತರು…

Read More

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.

ಮಂಜೇಶ್ವರ: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ಎಸ್.ಎ.ಟಿ ಶಾಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಶೇಕಡ 60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಝೋನಲ್ ಬಿಸಿನೆಸ್ ಹೆಡ್ ಎಸ್.ಎಫ್. ಎಲ್ ಶ್ರೀಜಿತ್ ಏನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೊ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಎಂ.ಎಲ್ ,ಎಸ್.ಎ.ಟಿ ಶಾಲೆಯ ಮುಖ್ಯೋಪದ್ಯಾನಿ…

Read More

ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಿಬೆಳೆಸಿ ಜೀವನವನ್ನೇ ಸಂಘಟನೆಗೆ ತೈದ ನಾಯಕ ಕೆ. ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರ ಉದ್ಘಾಟನೆ .

ವರ್ಕಾಡಿ ಪಂಚಾಯತಿನ ಕೊಡ್ಲಮೊಗರು ಪಾತೂರು ಗ್ರಾಮದಲ್ಲಿ ಸಿ ಪಿ ಐ ಎಂ ಪಕ್ಷದ ಸಂಘಟನೆಗಾಗಿ ಹಗಲಿರುಳು ಎನ್ನದೆ ದುಡಿದು ತನ್ನ ಜೀವನವನ್ನೇ ಜನರ ಹಿತಕ್ಕಾಗಿ ಮುಡಿಪಾಗಿರಿಸಿ ಹಲವಾರು ವರ್ಷಗಳ ಕಾಲ ಲೋಕಲ್ ಕಮಿಟಿ ಕಾರ್ಯದರ್ಶಿಯಾಗಿದ್ದ ಶ್ರೀಯುತ ಕೆ. ಪಕೀರ ಶೆಟ್ಟಿಗಾರ್ ರ ಸವಿ ನೆನಪಿಗಾಗಿ ಕೊಡ್ಲಮೊಗರು ಲೋಕಲ್ ಕಮಿಟಿಯವರು ಊರ ಪರವೂರ ದಾನಿಗಳ ಸಹಕಾರದಿಂದ ನಿರ್ಮಿಸಿದ ಸ್ಮಾರಕ ಮಂದಿರದ ಉದ್ಘಾಟನಾ ಸಮಾರಂಭವು ಅಕ್ಟೊಬರ್ -19 ರಂದು ನಡೆಯಿತು. ಕೆ . ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರವನ್ನು ಸಿ.ಪಿ….

Read More

ಗೂಡುದೀಪ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ ಮೃತ ಪಟ್ಟ ಕುಂಬಳೆಯ ಯುವಕ

ಕುಂಬಳೆ: ದೀಪಾವಳಿ ಅಂಗವಾಗಿ ಮನೆಯ ಚಾವಡಿಯಲ್ಲಿ ಗೂಡು ದೀಪ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ, ಯುವಕನೋರ್ವ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ನಿಧನರಾದ ಘಟನೆ ನಿನ್ನೆ ರಾತ್ರಿ ಕುಂಬಳೆ ಬಳಿಯ ಪುತ್ತಿಗೆಯಲ್ಲಿ ನಡೆದಿದೆ. ಪುತ್ತಿಗೆ ನಿವಾಸಿ ಬಡಗಿ ವೃತ್ತಿ ಮಾಡುತ್ತಿರುವ ನಾಗೇಶ್ ಆಚಾರ್ಯ – ಹೇಮಲತಾ ದಂಪತಿ ಪುತ್ರ ರಾಜೇಶ್ ಆಚಾರ್ಯ (37) ಮೃತಪಟ್ಟ ಯುವಕನಾಗಿದ್ದಾನೆ. ಮರದ ಕೆತ್ತನೆ ಕೆಲಸ ಮಾಡುತ್ತಿರುವ ರಾಜೇಶ್ ಆಚಾರ್ಯರು ದೀಪಾವಳಿ ಅಂಗವಾಗಿ ಕೆಲಸ ಮುಗಿಸಿ ಮನೆಗೆ…

Read More

ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ “ಪೋಷಕರಿಗಾಗಿ ವಿಶೇಷ ಕಾರ್ಯಕ್ರಮ”

ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರಾಗಿರುವ ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪೋಷಕರ ಪಾತ್ರವನ್ನು ಒತ್ತಿ ಹಿಡಿಯುವ ಉದ್ದೇಶದಿಂದ “ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದಲ್ಲಿ ಶಾಲೆಯು “ಪೋಷಕರಿಗಾಗಿ ವಿಶೇಷ ಕಾರ್ಯಕ್ರಮ”ವನ್ನು ಶಾಲೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಶಾಲೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಂಜತ್ತೂರು ದಾರುಸ್ಸಲಾಂ ಮಸೀದಿಯ ಖತೀಬ್ ಮೊಹಮ್ಮದಲಿ ಸಲಫಿ ಅವರು ಮುಖ್ಯ ಉಪನ್ಯಾಸಕವಾಗಿ…

Read More

ದೋಹಾ ಖತಾರಿನಲ್ಲಿ ರಸ್ತೆ ಅಪಘಾತ . ತೂಮಿನಾಡು ನಿವಾಸಿ ಮೃತ್ಯು.

ಮಂಜೇಶ್ವರ : ದೋಹಾ ಖತಾರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ತೂಮಿನಾಡು ನಿವಾಸಿಯಾಗಿರುವ ಯುವಕನೊಬ್ಬ ಬಾನುವಾರ ಖತಾರ್ ಸಮಯ 12.30 ಕ್ಕೆ ದಾರುಣವಾಗಿ ಸಾವನ್ನಪ್ಪಿದ್ದಾನೆ. ತೂಮಿನಾಡು ಹಿಲ್ ಟಾಪ್ ನಗರ ನಿವಾಸಿ ಅಬೂಬಕ್ಕರ್ (ಅಬ್ಬುಚ್ಚ) ಎಂಬವರ ಪುತ್ರ ಹಾರಿಸ್ (39) ಸಾವನ್ನಪ್ಪಿದ ದುರ್ದೈವಿ. ದೋಹಾ ಖತಾರಿನಲ್ಲಿ ಟ್ಯಾಕ್ಸಿ ಚಲಾಯಿಸಿ ಜೀವನ ಸಾಗಿಸುತಿದ್ದ ಹಾರಿಸ್ ಕೆಲವು ದಿನಗಳ ಹಿಂದೆ ಊರಿಗೆ ಬಂದು ಮರಳಿದ್ದಾನೆ. ಬಾನುವಾರದಂದು ಟ್ಯಾಕ್ಸಿ ಚಕ್ರ ಪಂಕ್ಚರ್ ಆಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಬಂಗಾಳಿ ಪ್ರಜೆಯೊಬ್ಬನ ಸಹಾಯದಿಂದ ಪಂಕ್ಚರ್ ಸರಿ…

Read More

ವಿಷ ಜಂತುಗಳಿಗೆ ತಾಣವಾದ ಮಂಜೇಶ್ವರ ಪಂಚಾಯತ್ ರಸ್ತೆ ಗಳ ಬದಿಯಲ್ಲಿ ಬೆಳೆದು ನಿಂತ ಪೊದೆಗಳು .

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ರಸ್ತೆಗಳ ಬದಿಗಳಲ್ಲಿ ಕಾಡು ಪೊದರುಗಳು ನಿಕ್ಕಿಲವಾಗಿ ಬೆಳೆದು ನಿಂತಿದ್ದು, ಇದು ಈಗ ವಿಷಜಂತುಗಳ ತಾಣವಾಗಿ ಮಾರ್ಪಟ್ಟಿದೆ. ಸರ್ಪಗಳು, ವಿಷಪೂರಿತ ಕೀಟಗಳು ಹಾಗೂ ಇತರೆ ಹಾನಿಕರ ಜಂತುಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಈ ಮಾರ್ಗಗಳಿಂದ ನಿತ್ಯವೂ ನೂರಾರು ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ನಡೆದು ಹೋಗುತ್ತಿದ್ದು, ಅವರ ಜೀವದ ಸಲಾಮತಿ ಇದೀಗ ಪ್ರಶ್ನೆಗೆ ಒಳಪಟ್ಟಿದೆ. ಶಾಲಾ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ವಿಶೇಷವಾಗಿ…

Read More

ಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ನೂತನ ಡಿಜಿಟಲ್ ಬೋರ್ಡ್ ಉದ್ಘಾಟನೆ .

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಅಭಿವೃದ್ಧಿಯತ್ತ ಮತ್ತೊಂದು ಹೆಜ್ಜೆಯಾಗಿ ನೂತನ ಡಿಜಿಟಲ್ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಈ ಡಿಜಿಟಲ್ ಬೋರ್ಡ್‌ನ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮಾಂತೇರೋ ಲೋಕಾರ್ಪಣೆ ಗೈದರು.ಉಪಾಧ್ಯಕ್ಷ ಮೊಹಮ್ಮದ್ ಸಿದ್ದೀಖ್ ಅಧ್ಯಕ್ಷತೆ ವಹಿಸಿದರು. ಗ್ರಾಮದ ನಾಗರಿಕರಿಗೆ ನವೀನ ಮಾಹಿತಿ ತಕ್ಷಣ ಲಭ್ಯವಾಗುವಂತಾಗಿಸಲು ಹಾಗೂ ಪಾರದರ್ಶಕ ಆಡಳಿತಕ್ಕೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ ಈ ಬೋರ್ಡ್‌ನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ದಿನನಿತ್ಯದ ಪಠ್ಯಗಳು, ಯೋಜನೆಗಳು, ಪ್ರಕಟಣೆಗಳು ಹಾಗೂ ಸರ್ಕಾರಿ ಸೂಚನೆಗಳ ಬಗ್ಗೆ ಈ ಮೂಲಕ…

Read More
error: Content is protected !!