ಕುಂಬಳೆ ಪರಿಸರದಲ್ಲಿ ಸರಣಿ ಕಾರು ಅಪಘಾತ ಹಲವರು ಗಾಯದಿಂದ ಪಾರು
ಮಂಜೇಶ್ವರ: ಕುಂಬಳೆ ಸಮೀಪದ ಭಾಸ್ಕರನಗರ ಕೆಎಸ್ಟಿಪಿ ರಸ್ತೆಯಲ್ಲಿ ಗಂಟೆಗಳ ವ್ಯತ್ಯಾಸದಲ್ಲಿ ಎರಡು ಕಾರುಗಳು ಅಪಘಾತಕ್ಕೀಡಾ ಗಿವೆ. ಈ ಪೈಕಿ ಒಂದು ಕಾರಿನಲ್ಲಿದ್ದ ಏಳು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮತ್ತೊಂದು ಕಾರಿನಲ್ಲಿದ್ದ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ಮರಳಿ ಬರುತ್ತಿದ್ದ ಕಳತ್ತೂರು ನಿವಾಸಿಗಳು ಸಂಚರಿಸಿದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿಚರಂಡಿಗೆ ಮಗುಚಿ ಬಿದ್ದಿದೆ. ಅದರಲ್ಲಿದ್ದ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಮತ್ತೊಂದು ಅಪಘಾತ ಕಳೆದ ರಾತ್ರಿ 12.30ರ ವೇಳೆ ಸಂಭವಿಸಿದೆ. ಇದರಲ್ಲಿ…