ಗಡಿಯಲ್ಲಿ ಸೈನಿಕರಿದ್ದಾರೆ ದೇಶದ ಒಳಗಿರುವ ದೇಶದ್ರೋಹಿಗಳನ್ನು ದೇಶಪ್ರೇಮಿಗಳು ನಾಶ ಮಾಡಬೇಕು – ಮಾಜಿ ಸೈನಿಕ ವಿಜಯ್ ಕುಮಾರ್.

ಹೊಸಂಗಡಿ – ಪಾಕಿಸ್ತಾನವನ್ನು ನಾಶ ಮಾಡಲು ಭಾರತಕ್ಕೆ ಒಂದು ದಿನವೂ ಬೇಡ ಆದರೆ ದೇಶದ ಒಳಗಿರುವ ದೇಶದ್ರೋಹಿಗಳನ್ನು ನಿಗ್ರಹ ಮಾಡಬೇಕಾದದ್ದು ದೇಶಪ್ರೇಮಿಗಳ ಕರ್ತವ್ಯ ಎಂದು ನಿವೃತ್ತ ಕಮಂಡರ್ ವಿಜಯ ಕುಮಾರ್ ಕಣ್ವತೀರ್ಥ ಹೇಳಿದರು ಹೊಸಂಗಡಿಯಲ್ಲಿ ಬಿಜೆಪಿ ಮಂಡಲ ಸಮಿತಿ ಹಮ್ಮಿಕೊಂಡ ಭಾರತ್ ಶೌರ್ಯ ತಿರಂಗ ಯಾತ್ರೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿ ಮಾಜಿ ಜಿಲ್ಲಾ ಪ್ರ ಕಾರ್ಯದರ್ಶಿ ವಿಜಯ್ ರೈ ಉದ್ಘಾಟಿಸಿದರು, ಆಧುನಿಕ ಜಗತ್ತಿನಲ್ಲಿ ನರೇಂದ್ರ ಮೋದಿ ನೇತೃತ್ವದ ಭಾರತ ಬಲಿಷ್ಠ ಸೈನಿಕ ಶಕ್ತಿಯನ್ನು…

Read More

ಮಂಜೇಶ್ವರ: ಆಂಬ್ಯುಲೆನ್ಸ್ ಸೇರಿದಂತೆ ಐದು ವಾಹನಗಳು ಪರಸ್ಪರ ಡಿಕ್ಕಿ,ಆಂಬ್ಯುಲೆನ್ಸ್ ನಲ್ಲಿದ್ದ  ಮಹಿಳೆ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ: ಬಿರುಸಾಗಿ ಸುರಿಯುತ್ತಿದ್ದ ಮಳೆಗೆ ಹತ್ತು ವರ್ಷದ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯುತಿದ್ದ ಆಂಬ್ಯುಲೆನ್ಸ್ ಸೇರಿದಂತೆ ಐದು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ  ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಣ್ಣೂರು ನಿವಾಸಿ ಶಾಹಿನಾ (48) ಸಾವನ್ನಪ್ಪಿದ ದುರ್ದೈವಿ. ಜೊತೆಯಾಗಿದ್ದ ಬಾಲಕನ ಚಿಕ್ಕಮ್ಮ ಚಿಂತಾ ಜನಕ ಸ್ಥಿತಿಯಲ್ಲಿ ನಿಘಾ ಘಟಕದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಯಗೊಂಡ ಇತರ 5 ಮಂದಿ ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಮಂಗಳವಾರ ಸಂಜೆ ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾಸರಗೋಡು…

Read More

ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಬುಲೆನ್ಸ್ ಸೇರಿದಂತೆ 5ವಾಹನಗಳು ಅಪಘಾತ.

ಅಪಘಾತದಲ್ಲಿ ಒಬ್ಬಾತ ಸಾವನ್ನಪ್ಪಿದ್ದಾರೆ. 5ಮಂದಿಗೆ ತೀವ್ರ ಗಾಯ ತೀವ್ರವಾದ ಮಳೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ

Read More

ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಉತ್ಸಾಹ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸುವ ಉದ್ದೇಶದಿಂದ ಬೇಸಿಗೆ ಶಿಬಿರ

ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಉತ್ಸಾಹ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸುವ ಉದ್ದೇಶದಿಂದ ಬೇಸಿಗೆ ಶಿಬಿರಕ ಅದ್ದೂರಿಯಾಗಿ ನಡೆಯಿತು.ಈ ಶಿಬಿರವು ಮಕ್ಕಳಲ್ಲಿನ ವಿವಿಧ ಪ್ರತಿಭೆಗಳನ್ನು ಹೊರತೆಗೆದು ಅವುಗಳನ್ನು ಕಾರ್ಯಗತಗೊಳಿಸಲು ಅನುಕೂಲ ಮಾಡಿ ಕೊಟ್ಟಿತು. ಈ ಶಿಬಿರದಲ್ಲಿ ವಿವಿಧ ಪ್ರಾಯೋಗಿಕ ಹಾಗೂ ಮನರಂಜನೆ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಈ ಪೈಕಿ ವಿದ್ಯಾರ್ಥಿಗಳಿಗೆ ಶಾರೀರಿಕ ತಾಳ್ಮೆ ಮತ್ತು ಆತ್ಮರಕ್ಷಣೆ ಕಲೆ ಕಲಿಸುವ ಉದ್ದೇಶದೊಂದಿಗೆ ಕರಾಟೆ ತರಬೇತಿ, ಸುಂದರ ಲಿಪಿ ಬರವಣಿಗೆಯ ಕಲೆ ಕ್ಯಾಲಿಗ್ರಫಿ…

Read More

ರಾಜೀವ್ ಗಾಂಧಿ ಸ್ಮೃತಿ ದಿನಾಚರಣೆ ಯಶಸ್ವಿಗೊಳಿಸಲು ಕರೆ

ದಿವಂಗತ ಮಾಜಿ ಪ್ರಧಾನಿ, ಎಐಸಿಸಿ ಅಧ್ಯಕ್ಷರಾಗಿದ್ದ ರಾಜೀವ್ ಗಾಂಧಿಯವರ ಸ್ಮೃತಿ ದಿನಾಚರಣೆಯನ್ನು ಮೇ ತಿಂಗಳ 21 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ತೀರ್ಮಾನಿಸಿದ್ದು, ಪ್ರಸ್ತುತ ಕಾರ್ಯಕ್ರಮ ಯಶಸ್ಹಿಗೊಳಿಸಲು ಪಕ್ಷದ ವಿವಿಧ ಹಂತಗಳ ನಾಯಕರು ಮತ್ತು ಕಾರ್ಯಕರ್ತರಲ್ಲಿ ಕರೆ ನೀಡಿದೆ. ಹೊಸಂಗಡಿಯಲ್ಲಿ ನಡೆದ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ವಹಿಸಿದ್ದರು.ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಖಲೀಲ್ ಬಜಾಲ್ ರಿಗೆ ಪಕ್ಷದ…

Read More

ಕುಲಾಲ ವೇದಿಕೆ ವತಿಯಿಂದ ಕುಲಾಲ ಟ್ರೋಫಿ-2025

ಮಂಜೇಶ್ವರ ಕುಲಾಲ ವೇದಿಕೆಯ ಆಶ್ರಯದಲ್ಲಿ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸ್ವಜಾತಿ ಬಂಧುಗಳ ವಿವಿಧ ತಂಡಗಳನ್ನೊಳಗೊಂಡ ‘ಕುಲಾಲ ಟ್ರೋಫಿ-2025’ ಕ್ರಿಕೆಟ್ ಪಂದ್ಯಾಟ ಇಲ್ಲಿನ ಪಂಚಾಯತ್ ಮೈದಾನದಲ್ಲಿ ಯಶಸ್ವಿಯಾಗಿ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕುಲಾಲ ವೇದಿಕೆ ಮಂಜೇಶ್ವರ ಇದರ ಹಿರಿಯ ಮಾರ್ಗದರ್ಶಕರಾದ ಚಂದ್ರಶೇಖರ ಮೀಯಪದವು ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ವಿ. ಕುಲಾಲ್ ಔಪಚಾರಿಕವಾಗಿ ಉದ್ಘಾಟಿಸಿದರು. ಮಂಜೇಶ್ವರ ಗ್ರಾಮ ಪಂಚಾಯತ್ ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಚೇರ್ಮನ್ ಆಗಿರುವ ಯಾದವ್ ಬಡಾಜೆ, ದಾಸ್…

Read More

ಕಣ್ವತೀರ್ಥ ಬೀಚ್ ರಸ್ತೆ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಕಣ್ವಕಣ್ಣುತೀರ್ಥ ಬೀಚ್ ರಸ್ತೆ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

ಮಂಜೇಶ್ವರ : ಕೇರಳ ಸರಕಾರದ ಅಭಿವೃದ್ಧಿ ಯೋಜನೆಯ ಭಾಗವಾಗಿ ಕಾಸರಗೋಡು ಡೆವಲಪ್ಮೆಂಟ್ ಫಂಡ್ ನಿಂದ ಲಭಿಸಿದ 2 ಕೋಟಿ 37 ಲಕ್ಷ ರೂಪಾಯಿ ಖರ್ಚಿನಲ್ಲಿ ನಿರ್ಮಾಣಗೊಂಡ 1350 ಮೀಟರ್ ಕಣ್ಟತೀರ್ಥ ಬೀಚ್ ರಸ್ತೆಯನ್ನು ಕೇರಳದ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ರಾಜ್ಯದ 14 ಜಿಲ್ಲೆಗಳಲ್ಲಿ 60 ರಸ್ತೆಗಳನ್ನು ಒಂದೇ ದಿನದಲ್ಲಿ ಮುಖ್ಯ ಮಂತ್ರಿಯವರು ಲೋಕಾರ್ಪಣೆಗೊಳಿಸಿದ್ದಾರೆ. ಲೋಕೋಪಯೋಗಿ ಹಾಗೂ ಪ್ರವಾಸೋಧ್ಯಮ ಇಲಾಖೆಯ ಸಚಿವ ಮೊಹಮ್ಮದ್ ರಿಯಾಝ್ ಅಧ್ಯಕ್ಷತೆ ವಹಿಸಿದರು. ಮಂಜೇಶ್ವರದ ಅಭಿವೃದ್ಧಿಯ ರೂವಾರಿ ಎಂದೇ…

Read More

ಮಂಜೇಶ್ವರ :ರಾಷ್ಟ್ರೀಯ ಹೆದ್ದಾರಿ ಪಾದಾಚಾರಿ ಮೇಲ್ಸೇತುವೆ ಕಾಮಗಾರಿ ಗೆ ಚಾಲನೆ.

ಮಂಜೇಶ್ವರ: ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರು ಎರಡೂ ದಿಕ್ಕುಗಳಿಗೆ ದಾಟಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ಪಾದಾಚಾರಿ ಮೇಲ್ಸೇತುವೆಯ ನಿರ್ಮಾಣ ಕಾಮಗಾರಿಗೆ ಚಾಲನೆ ದೊರಕಿತು. ಮೇಲ್ಸೇತುವೆ ನಿರ್ಮಾಣ ಸ್ಥಳದ ಬಗ್ಗೆ ಕೆಲವೊಂದು ಮಂದಿ ರೈಲು ನಿಲ್ದಾಣದ ಸಮೀಪ ಫ್ಲೈಓವರ್ ಬೇಕೆಂಬ ಬೇಡಿಕೆ ಇಟ್ಟಿದ್ದರೂ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರಿನವರು ಬೇಡಿಕೆ ಇಟ್ಟಿದ್ದ ಸ್ಥಳದಲ್ಲೇ ಇದೀಗ ಕಾಮಗಾರಿ ಆರಂಭಗೊಂಡಿರುವುದನ್ನು ಹೋರಾಟ ಕ್ರಿಯಾ ಸಮಿತಿ ಹಾಗೂ ಊರವರು ಸ್ವಾಗತಿಸಿದ್ದಾರೆ. ಈ ಪಾದಾಚಾರಿ ಮೇಲ್ಸೇತುವೆ ನಿರ್ಮಾಣದಿಂದಾಗಿ…

Read More

ಸೀತಾಂಗೋಳಿಯಲ್ಲಿ ಹಾರ್ಡ್ ವೇರ್ ಅಂಗಡಿ ಅಗ್ನಿಗಾಹುತಿ

ಸೀತಾಂಗೋಳಿ: ಇಲ್ಲಿನ ಪುತ್ತಿಗೆ ರಸ್ತೆಯ ಮುಕಾರಿಗದ್ದೆಯಲ್ಲಿ ನೂತನವಾಗಿ ಆರಂಭಗೊಂಡ ಆರ್ಶ್ ಹಾರ್ಡ್ ವೇರ್ ಅಂಗಡಿ ಅಗ್ನಿ ಅನಾಹುತಕ್ಕೊಳಗಾಗಿದೆ. ಇಂದು ಬೆಳಿಗ್ಗೆ 9ಗಂಟೆಯ ವೇಳೆಗೆ ಮುಚ್ಚಿದ್ದ ಅಂಗಡಿಯೊಳಗಿಂದ ಹೊಗೆ ಏಳುವುದನ್ನು ಕಂಡು ನಾಗರಿಕರು ನೀಡಿದ ಮಾಹಿತಿಯಂತೆ ಅಗ್ನಿ ಶಾಮಕ ದಳದವರು ಮತ್ತು ಪೋಲೀಸರು ಆಗಮಿಸಿದರು. ಅಗ್ನಿ ಶಾಮಕ ದಳದ ಕಾಸರಗೋಡು, ಉಪ್ಪಳ ಘಟಕದ 4 ವಾಹನ ಬಂದರೂ ತಕ್ಷಣ ಅಗ್ನಿ ನಂದಿಸಲಿಕ್ಕಾಗಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.ಬದಿಯಡ್ಕ ಬಳಿಯ ಅರ್ಷಾದ್ ಎಂಬವರ ಮಾಲಕತ್ವದ ಸಂಸ್ಥೆ ಇದಾಗಿದೆ. ಕುಂಬಳೆ ಪೋಲೀಸರು ಸ್ಥಳದಲ್ಲಿದ್ದಾರೆ. ಅಗ್ನಿ…

Read More

ಪೆಟ್ರೋಲ್ ಬಂಕ್ ಟ್ಯಾಂಕ್ ನಿರ್ಮಾಣಕ್ಕೆ ಅಗೆದ ಹೊಂಡದಲ್ಲಿ ಜೀರ್ಣಾವಸ್ಥೆಯಲ್ಲಿ ಪುರುಷ ಶವ ಪತ್ತೆ

ಮಂಜೇಶ್ವರ : ಪೆರಿಯ ನವೋದಯ ನಗರದಲ್ಲಿ ನಿರ್ಮಾಣದಲ್ಲಿರುವ ಪೆಟ್ರೋಲ್ ಬಂಕ್ ನ ಟ್ಯಾಂಕ್ ನಿರ್ಮಿಸಲು ಅಗೆದ ಹೊಂಡದಲ್ಲಿ ಜೀರ್ಣಾವಸ್ಥೆಯಲ್ಲಿರುವ ಪುರುಷನ ಶವವೊಂದು ಪತ್ತೆಯಾಗಿದೆ. ಶವದ ಗುರುತು ಪತ್ತೆಯಾಗಿಲ್ಲ. ಗುರುವಾರ ಮಧ್ಯಾಹ್ನದ ಸುಮಾರಿಗೆ ಆಳವಿರುವ ಹೊಂಡದಲ್ಲಿ ಶವ ಮಣ್ಣಿನಲ್ಲಿ ಕೊಳೆತು ಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದೆ.ಪೆಟ್ರೋಲ್ ಬಂಕ್ ಪರಿಸರದಲ್ಲಿ ದುರ್ಗಂಧ ಭೀರಿದ ಹಿನ್ನೆಲೆಯಲ್ಲಿ ಪರಿಸರದ ಮನೆಯವರು ಆಗಮಿಸಿ ನಡೆಸಿದ ಶೋಧದಲ್ಲಿ ಶವ ಪತ್ತೆಯಾಗಿದೆ. ಶವ 3 ದಿನ ಹಳೆಯದಾಗಿರಬಹುದಾಗಿ ಶಂಕಿಸಲಾಗಿದೆ. ಮಾಹಿತಿ ಅರಿತು ಊರವರು ಹಾಗೂ ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Read More
error: Content is protected !!