ಕಾಸರಗೋಡು ಕನ್ನಡ ಗ್ರಾಮೋತ್ಸವ 2025 ನವಂಬರ್ 4ಕ್ಕೆ

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮ ದಿನಾಚರಣೆ – ಜನ್ಮ ವರ್ಷಾಚರಣೆ ,ಅಭಿನಂದನಾ ಕಾರ್ಯಕ್ರಮವನ್ನು ಕೇರಳ – ಕರ್ನಾಟಕ ಸಾಹಿತ್ಯ, ಸಾಂಸ್ಕೃತಿಕ ಉತ್ಸವವನ್ನಾಗಿಸಿ ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ – ‘ಕಾಸರಗೋಡು ಕನ್ನಡ ಗ್ರಾಮೋತ್ಸವ ‘2025 ಎಂಬ ಶೀರ್ಷಿಕೆಯ…

Read More

ಮಂಜೇಶ್ವರದಲ್ಲಿ ಮಿನಿ ಹೈ ಮಾಸ್ಟ್ ಲೈಟ್ ಉದ್ಘಾಟನೆ ವಿಳಂಬ – ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ.

ಮಂಜೇಶ್ವರ: ಮಂಜೇಶ್ವರ ಕಣ್ಣೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮುಂಭಾಗದಲ್ಲಿ ಶಾಸಕರ ನಿಧಿಯಿಂದ ನಿರ್ಮಿಸಲಾಗಿರುವ ಮಿನಿ ಹೈ ಮಾಸ್ಟ್ ಲೈಟ್ ವರ್ಷಗಳಾಗಿ ಸ್ಥಾಪನೆಯಾಗಿದ್ದು, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ತಾಂತ್ರಿಕ ಕಾಮಗಾರಿಗಳು ಪೂರ್ಣಗೊಂಡಿರುವಂತೆಯೇ, ಇನ್ನೂ ಅಧಿಕೃತವಾಗಿ ಉದ್ಘಾಟನೆಯಾಗದೇ ಇರುವುದು ಸ್ಥಳೀಯರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರದೇಶವಾಸಿಗಳ ಹೇಳಿಕೆಯಂತೆ ಈ ಲೈಟ್ ಯೋಜನೆಗೆ ಸುಮಾರು 2 ಲಕ್ಷ ರೂ. ವೆಚ್ಚವಾಗಿದ್ದು, ಬಹುತೇಕ ವರ್ಷದ ಹಿಂದೆ ಕಾಮಗಾರಿ ಪೂರ್ಣಗೊಂಡಿದ್ದರೂ ಈಗಾಗಲೇ ಉದ್ಘಾಟನೆಯಿಲ್ಲದ ಕಾರಣ ಅದು ‘ಊಟಕ್ಕಿಲ್ಲದ ಉಪ್ಪಿನಕಾಯಿ’ ಎಂಬಂತಾಗಿದೆ. ಇದರ ಪರಿಣಾಮವಾಗಿ…

Read More

ಅಭಿವೃದ್ಧಿ ಬಿಟ್ಟಿಯಾಗಿ ಪಡೆದು ದೇಶ ನಾಶ ಮಾಡಬೇಡಿ -ಆದರ್ಶ ಬಿ .ಎಂ

ಕಾಸರಗೋಡು:ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಗುತ್ತಿರುವಾಗ ಇದು ನಮ್ಮ ಸಾಧನೆ ಎಂದ ಎಡರಂಗ ಸರಕಾರ, pwd ಸಚಿವ ರಿಯಾಜ್, ಕಾಸರಗೋಡು ಸಂಸದ ಉಣ್ಣಿತನ್, ಮಂಜೇಶ್ವರ, ಕಾಸರಗೋಡು ಶಾಸಕರು ಗಳು ರಸ್ತೆಯಲ್ಲಿ ನಿಂತು ಫೋಟೋ ತೇಗದದ್ದೇ ತೆಗೆದದ್ದು, ಬಿಜೆಪಿ ಜಿಲ್ಲಾ ಸಮಿತಿಯ ಪ್ರಯತ್ನ ದ ಫಲವಾಗಿ ಕೆಲವು ಕಡೆ ಅಂಡರ್ ಪಾಸ್, ಫುಟ್ ಓವರ್ ಬ್ರಿಡ್ಜ್, ಲಭಿಸಿದಾಗ ಅದು ನಮ್ಮ ಸಾಧನೆ ಎಂದು ಬಿಂಬಿಸಲು ಫ್ಲೆಕ್ಸ್ ಹಾಕಿಸಿದ ಶಾಸಕರುಗಳುಈಗ ಕುಂಬ್ಳೆ ಯಲ್ಲಿ ತಾತ್ಕಾಲಿಕ ಟೋಲ್ ಬರುತ್ತೆ ಅಂತ ರಸ್ತೆ…

Read More

ಮೊಗ್ರಾಲ್ ಪುತ್ತೂರು ರಾ. ಹೆದ್ದಾರಿಗೆ ಲೈಟ್ ಜೋಡಿಸುವಾಗ ದುರ್ಘಟನೆ -ಸಾವಿನ ಸಂಖ್ಯೆ ಎರಡಕ್ಕೇರಿಕೆ

ಕುಂಬಳೆ : ಮೊಗ್ರಾಲ್ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸುವಾಗ ಕ್ರೈನ್ ನಿಂದ ಬಿದ್ದು ಗಾಯಗೊಂಡ ವ್ಯಕ್ತಿಯೂ ಮೃತಪಡುವುದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.ಕೋಝಿಕ್ಕೋಡ್ ಬಳಿಯ ವಡಗರ ನಿವಾಸಿಗಳಾದ ಅಕ್ಷಯ್ (30), ಅಶ್ವಿನ್ (26)ಮೃತ ವ್ಯಕ್ತಿಗಳಾಗಿದ್ದಾರೆ. ಗುರುವಾರ ಮಧ್ಯಾಹ್ನ 12ರ ವೇಳೆಗೆ ಹೆದ್ದಾರಿಗೆ ದೀಪ ಅಳವಡಿಸುವ ವೇಳೆ ಕ್ರೈನ್ ನ ಬಾಕ್ಸ್ ಕಳಚಿದಾಗ, ಕರ್ತವ್ಯದಲ್ಲಿದ್ದ ಇವರಿಬ್ಬರೂ ಬಿದ್ದಿದ್ದರು. ಈ ಪೈಕಿ ಅಕ್ಷಯ್ ಮೊದಲು ಮೃತಪಟ್ಟಿದ್ದರು.ಕುಂಬಳೆ ಸಹಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಅಕ್ಷಯ್ ನ ಮರಣ ಸಂಭವಿಸಿತು. ಅಶ್ವಿನ್…

Read More

ರಾಮಕ್ಷತ್ರಿಯ ಮಹಿಳಾ ಯಕ್ಷವೃಂದ ಜೆಪ್ಪು ಮಂಗಳೂರು ಸ0ಯುಕ್ತ ಆಶ್ರಯದಲ್ಲಿ ನಡೆದ ನುಡಿ ನಮನ, ಕೃತಿ ಬಿಡುಗಡೆ ಸಂಸ್ಮರಣೆ.

ಪರರ ಸೇವೆ ದೇವರ ಸೇವೆ ಎಂಬ ಧ್ಯೇಯವನ್ನು ತನ್ನದಾಗಿಸಿಕೊಂಡು ಬಾಳನ್ನು ಸಾಗಿಸಿದ್ದ ಶ್ರೀಮತಿ ದಿ. ಗಾಯತ್ರಿ ನಾಗೇಶ್ ರಾಮಕ್ಷತ್ರಿಯ ಸಮಾಜದ ಅಭಿಮಾನದ ಪುತ್ರಿ ಬಹುಮುಖ ಪ್ರತಿಭೆಯ ಗಾಯತ್ರಿ ಇವರ ವೈಕುಂಠ ಸಮಾರಾಧನೆ ಕ್ರಿಯೆಯ ದಿನದಂದು ಪೂರ್ವಾಹ್ನ 11.00 ರ ವೇಳೆಗೆ ಮಂಗಳೂರು ಶರವು ದೇವಸ್ಥಾನದ ಸಮೀಪವಿರುವ ಬಾಳಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ಮರೆಯಲಾಗದವರು ವ್ಯಕ್ತಿ ಚಿತ್ರಣ ಕೃತಿ ಕನ್ನಡ ಭವನ ಪ್ರಕಾಶನ ಕಾಸರಗೋಡು, ಇದರ ಸಂಸ್ಥಾಪಕ ಅಧ್ಯಕ್ಷರು ಸಂಚಾಲಕರು ಆಗಿರುವಂತಹ ಡಾ. ವಾಮನ್ ರಾವ್ ಬೇಕಲ್ ಇವರ ನೇತೃತ್ವದಲ್ಲಿ…

Read More

ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ” ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ : ಗಡಿ ಪ್ರದೇಶದಲ್ಲಿ ಗಮನ ಸೆಳೆಯಿತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಂದು ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು. ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ನ ತೀರ್ಪುಗಾರರ ಪರಿಶೀಲನೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಿನ್ನೆಸ್ ದಾಖಲೆಯಲ್ಲಿ ಸ್ಥಾನ…

Read More

“ಭೂದಾನ ಚಳುವಳಿಯೇ, ಭೂಮಸೂದೆ ಕಾಯ್ದೆಗೆ ಪ್ರೇರಣೆ : ಪಿ .ಸೋಮಪ್ಪ

ಮಂಜೇಶ್ವರ : ಮಹಾತ್ಮಾ ಗಾಂಧಿಜಿಯವರ ಅನುಯಾಯಿ, ಸ್ವಾತಂತ್ರ್ಯ ಹೋರಾಟಗಾರ ಆಚಾರ್ಯ ವಿನೋಬಾ ಭಾವೆಯವರ ಭೂದಾನ ಚಳುವಳಿಯಿಂದ ಪ್ರೇರಿತರಾಗಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ಭೂಮಸೂದೆ ಕಾಯ್ದೆಯನ್ನು ಜಾರಿಗೆ ತಂದರು. ಉಳುವವನೇ ಹೊಲದೊಡೆಯ ಎಂಬ ಪರಿಕಲ್ಪನೆ ವಿನೋಬಾ ಭಾವೆಯವರದ್ದಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಸೋಮಪ್ಪ ಹೇಳಿದ್ದಾರೆ. ಅವರು ವರ್ಕಾಡಿಯಲ್ಲಿ ಜರುಗಿದ ಆಚಾರ್ಯ ವಿನೋಬಾ ಭಾವೆಯವರ 130 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿನೋಬಾ – ವೆಂಕಟೇಶರಾವ್ ಶಾಂತಿ ಸೇನಾ ಫೌಂಡೇಶನ್ ಪ್ರಧಾನ ಸಂಚಾಲಕ…

Read More

ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚೆಕ್ ಲೀಫ್ ಕಳವು.

ಮಂಜೇಶ್ವರ: ಮನೆಗೆ ಬೀಗ ಹಾಕಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭದಲ್ಲಿ ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚೆಕ್ ಲೀಫ್ ಕಳವುಗೈದಿರುವ ಬಗ್ಗೆ ದೂರಲಾಗಿದೆ. ಪೆರ್ಮುದೆ ನಿವಾಸಿ ಹಾಗೂ ಗಲ್ಫ್ ಉದ್ಯೋಗಿಯಾಗಿರುವ ರಫೀಕ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 3೦ ಸಾವಿರ ರೂಪಾಯಿ ಹಾಗೂ ಬ್ಯಾಂಕ್‌ನ ಚೆಕ್ ಲೀಫ್ ಕಳವುಗೈದಿದ್ದಾರೆ. ಈ ಬಗ್ಗೆ ರಫೀಕ್‌ರ ಪತ್ನಿ ಶಮ್ನ ಕೆ.ಎ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಶಮ್ನ ಹಾಗೂ ಮಕ್ಕಳು ಈ…

Read More

ಕೆ ಎಸ್‌ ಆರ್‌ ಟಿ ಸಿ ಬಸ್‌ನಲ್ಲಿ ಮದ್ಯ ಸಾಗಾಟ: ಮೊಗ್ರಾಲ್ ನಿವಾಸಿ ಸೆರೆ.

ಮಂಜೇಶ್ವರ: ಸಾರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯವನ್ನು ಅಬಕಾರಿ ತಂಡ ವಶಪಡಿಸಿ ಒಬ್ಬನನ್ನು ಬಂಧಿಸಿದ್ದಾರೆ.ಮೊಗ್ರಾಲ್ ನೀರೋಳ್ ನಿವಾಸಿ ಬಿ. ಶಿವಪ್ರಸಾದ್ (26) ಬಂಧಿತ ವ್ಯಕ್ತಿ. ಈತನ ಬ್ಯಾಗ್‌ನಿಂದ 9 ಲೀಟರ್ ಕರ್ನಾಟಕ ಮದ್ಯ ವಶಪಡಿಸಲಾಗಿದೆ. ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ತಂಡ ಬಸ್‌ನಲ್ಲಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್ ಜಿನು ಜೇಮ್ಸ್ ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ ಎಂ.ವಿ. ಜಿಜಿನ್, ಗ್ರೇಡ್ ಪ್ರಿವೆಂಟೀವ್ ಆಫೀಸರ್ ಪಿ.ಕೆ. ಬಾಬು ರಾಜ್, ಸಿವಿಲ್ ಎಕ್ಸೆಸ್ ಆಫೀಸರ್ ಸುನೀಲ್ ಎಂಬಿವರು…

Read More

ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ 8 ರಿಂದ 14 ರ ಮಧ್ಯೆ ಪ್ರಾಯದ 14 ಮಕ್ಕಳು ತೀವ್ರ ಅಸ್ವಸ್ಥ.

ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ 8 ರಿಂದ 14 ರ ಮಧ್ಯೆ ಪ್ರಾಯದ 14 ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ.ಪಳ್ಳಿಕ್ಕೆರೆ ಸಮೀಪದ ಪೂಚಕ್ಕಾಡಿನ ಹೋಟೆಲೊಂದರಿಂದ ಖರೀದಿಸಲಾದ ಶವರ್ಮ ಸೇವಿಸಿ ಈ ದುರ್ಘಟನೆ ಸಂಭವಿಸಿದೆ. ಇವರೆಲ್ಲರಿಗೂ ಹೊಸದುರ್ಗ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು ಪಳ್ಳಿಕ್ಕೆರೆಯಲ್ಲಿ ನಡೆದ ನಬಿ ದಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮಕ್ಕಳಿಗೆ ನಬಿ ದಿನ ಸಂಘಟಕರು ಆಹಾರ ಪೂರೈಸಲು ತರಿಸಲಾಗಿದ್ದ ಆಹಾರ ಸಾಕಾಗದಿದ್ದಾಗ ಸಮೀಪದ ಹೋಟೆಲೊಂದರಿಂದ ಶವರ್ಮ ಖರೀದಿಸಿ ವಿತರಿಸಿದ್ದರು. ಅದನ್ನು ಸೇವಿಸಿದ ಅರ್ಧ…

Read More
error: Content is protected !!