ಇತಿಹಾಸ ಪ್ರಸಿದ್ಧವಾದ ಕೂಡ್ಲು ಶ್ರೀ ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಏಪ್ರಿಲ್ 19ಕ್ಕೆ ಸಿದ್ಧತೆ

ಕಾಸರಗೋಡಿನ ಇತಿಹಾಸ ಪ್ರಸಿದ್ಧವಾದ ಕಾರಣಿಕವುಳ್ಳ ಕೂಡ್ಲು ಮಾರಿಗುಡಿಯೆಂದು ಖ್ಯಾತಿ ಪಡೆದಿರುವ ಕಾಸರಗೋಡು ರಾಮದಾಸನಗರದ ಕೂಡ್ಲು ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಶುದ್ದಿ ಕಲಶ ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ ಸಂಕೀರ್ತನಾ ಕಾರ್ಯಕ್ರಮಗಳೊಂದಿಗೆ ಇದೇ 2026 ಏಪ್ರಿಲ್ 19 ಆದಿತ್ಯವಾರದಂದು ತಂತ್ರೀವರ್ಯರಾದ ಬ್ರಹ್ಮಶ್ರೀ ವಿಷ್ಣು ಪ್ರಕಾಶ ಪಟ್ಟೇರಿ ಕಾವುಮಠ ಇವರ ಮಾರ್ಗದರ್ಶನದಲ್ಲಿ ನಡೆಯಲಿರುವುದು.ಕಾಸರಗೋಡು ದಕ್ಷಿಣ ಕನ್ನಡ ಉಡುಪಿ ಕೊಡಗು ಜಿಲ್ಲೆಯ ಭಗವದ್ಭಕ್ತರು ಹಾಗೂ ಕುಟುಂಬಸ್ಥರು ಆಸ್ತಿಕ ಮಹಾಜನರು,ಊರ ಪರವೂರಿನ ಭಕ್ತಾಧಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.ಧಾರ್ಮಿಕ,ತಾಂತ್ರಿಕ ಸoಪ್ರದಾಯದ ಪ್ರಕಾರ ನಡೆಯುವ…

Read More

ಪ್ರಯಾಣಿಕರಿದ್ದಾಗಲೇ ಬಸ್‌ಗೆ ಇಂಧನ ತುಂಬಿಕೆ — ಸುರಕ್ಷತೆ ಬಗ್ಗೆ ಆತಂಕ

ಉಪ್ಪಳ :ಪ್ರಯಾಣಿಕರು ತುಂಬಿರುವ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ತುಂಬಲಾಗುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಗಂಭೀರ ಆತಂಕ ಉಂಟುಮಾಡಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ಗಳು ಕರ್ನಾಟಕದ ತೊಕ್ಕೊಟ್ಟು ಹಾಗೂ ಕೊಟ್ಟೆಕಾರು ಪ್ರದೇಶದ ಪಂಪ್‌ಗಳಲ್ಲಿ ಇಂಧನ ತುಂಬುತ್ತಿರುವುದಾಗಿ ತಿಳಿದುಬಂದಿದೆ. ಈ ವೇಳೆ ಸುಮಾರು 10 ನಿಮಿಷಗಳ ಕಾಲ ಬಸ್ ನಿಲುಗಡೆ ಆಗುತ್ತಿದ್ದು, ಬಳಿಕ ಟೋಲ್ ಪ್ಲಾಜಾಗಳಲ್ಲಿ ಮತ್ತಷ್ಟು ವಿಳಂಬ ಉಂಟಾಗುತ್ತಿರುವುದರಿಂದ ಪ್ರಯಾಣಿಕರಿಗೆ ಸಮಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರೂ, ಸಂಬಂಧಿಸಿದ…

Read More

ಪರಂಬಳ ಕಯ್ಯಾರಿನಲ್ಲಿ ಭಕ್ತಿಭಾವದ ದೀಪ ಪೂಜೆ

ದುರ್ಗಾ ಶಕ್ತಿ ಕುಣಿತ ಭಜನಾ ತಂಡ, ಪರಂಬಳ ಕಯ್ಯಾರು ಇವರ ವತಿಯಿಂದ ದೀಪ ಪೂಜನ ಕಾರ್ಯಕ್ರಮವು ಶ್ರೀ ಭಾರತ್ ಮಾತಾ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಭಕ್ತಿಭಾವದೊಂದಿಗೆ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಚೆನ್ನಪ್ಪ ಏರುಗಲ್ಲು, ಶ್ರೀ ಗಿರೀಶ್ ಕುಮಾರ್ ಕಯ್ಯಾರು, ಮಹೇಶ್ ಪುಣಿಯೂರು, ಶ್ರೀಮತಿ ರಮ್ಯಾ ಯನ್ ಸೀತಾಂಗೋಳಿ ಹಾಗೂ ಶೇಸಪ್ಪ ಮುಂಡಿತಡ್ಕ ಸೇರಿದಂತೆ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶ್ರೀ ಪುಂಡರೀಕಾಕ್ಷ ಬೆಳ್ಳೂರು (ಯೋಗಾಚಾರ್ಯರು, ಸಾಂದೀಪನಿ ಯೋಗಾಶ್ರಮ) ದೀಪ ಪೂಜನ ವಿಧಿಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ತಂಡದ…

Read More

ಮಂಜೇಶ್ವರ: ಸರ್ವರ್ ಸಮಸ್ಯೆಯಿಂದ ಸ್ಥಗಿತಗೊಂಡ ಸರ್ಕಾರಿ ಸೇವೆಗಳು: ಸಾರ್ವಜನಿಕರ ಪರದಾಟ

ಮಂಜೇಶ್ವರ ತಾಲೂಕಿನಾದ್ಯಂತ ಇಂದು ಬೆಳಗ್ಗೆಯಿಂದ ವಿಲೇಜ್ ಆಫೀಸ್‌ಗಳು ಹಾಗೂ ಅಕ್ಷಯ ಕೇಂದ್ರಗಳು ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳು ಸ್ಥಗಿತಗೊಂಡು ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾದರು. ಆನ್‌ಲೈನ್ ಪೋರ್ಟಲ್‌ಗಳು ತೆರೆಯದ ಕಾರಣ ದೂರದ ಪ್ರದೇಶಗಳಿಂದ ವಿವಿಧ ಅಗತ್ಯಗಳಿಗಾಗಿ ಬಂದ ನೂರಾರು ಜನರು ನಿರಾಶರಾಗಿ ಹಿಂತಿರುಗಬೇಕಾಯಿತು. ರೆವಿನ್ಯೂ ಇಲಾಖೆಯ ವೆಬ್‌ಸೈಟ್‌ಗಳು ಹಾಗೂ ಅಕ್ಷಯ ಕೇಂದ್ರಗಳ ಸರ್ವರ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು, ಆರ್‌ಟಿಸಿ (ಪಹಣಿ) ಸೇರಿದಂತೆ ಪ್ರಮುಖ ದಾಖಲೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಪ್ರತಿಗಳನ್ನು ಪಡೆಯಲು…

Read More

ಮಂಗಲ್ಪಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನ ಹಾಗೂ 29ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ

ಡಾ. ಬಿ ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ ಮಂಗಲ್ಪಾಡಿ ಇದರ 29ನೇ ವಾರ್ಷಿಕೋತ್ಸವ ಮತ್ತು ಸಂವಿದಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಇತ್ತೀಚಿಗೆ ಮಂಗಲ್ಪಾಡಿಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಸದಸ್ಯ ಶ್ರೀ ವಸಂತಕುಮಾರ್ ಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು ಹಾಗೂ ಅಂಬೇಡ್ಕರ್ ವಿಚಾರ ವೇದಿಕೆ ಬದಿಯಡ್ಕ ಇದರ ಸ್ಥಾಪಕ ಸದಸ್ಯರಾದ ಶ್ರೀ ನಾರಾಯಣ ಬಾರಡ್ಕ ಇವರು ಅಂಬೇಡ್ಕರ್ ತತ್ವ ಮತ್ತು ವಿಚಾರಗಳ ಬಗ್ಗೆ ಮಾತನಾಡಿದರು….

Read More

ಕನ್ನಡ ಭವನದ ರೂವಾರಿ ಸಂಧ್ಯಾರಾಣಿ ಟೀಚರಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ. 2026

ಕಾಸರಗೋಡು :ಕಥಾಬಿಂದು ಪ್ರಕಾಶನ, ಉಡುಪಿ ಶಿರೂರು ಶ್ರೀ ಮಠ, ಉಡುಪಿ ಶ್ರೀ ಕೃಷ್ಣ ಮಠ ಸಹಯೋಗದಲ್ಲಿ ನಡೆದ “ಕಥಾಬಿಂದು ಸಾಹಿತ್ಯ ಸಮ್ಮೇಳನ “ಉಡುಪಿ ಶ್ರೀ ಮಠದ ರಾಜಾ0ಗಣದಲ್ಲಿ 12.4.2026 ರಂದು ಉಡುಪಿ ಶ್ರೀ ಮಠದ ಶ್ರೀ ರಮಣ ಆಚಾರ್ಯ ಅವರ ಸರ್ವಾಧ್ಯಕ್ಷತೆಯಲ್ಲಿ, ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ, ಡಾ. ಹರಿಕೃಷ್ಣ ಪುನಃರೂರು, ಕ. ಸಾ. ಪ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಧ್ಯಕ್ಷ, ಕಲ್ಕೂರ ಪ್ರತಿಷ್ಠಾನ ರೂವಾರಿ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ…

Read More

ಬೆಜ್ಜ ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೋತ್ಸವ ಸಂಪನ್ನ

ಮಂಜೇಶ್ವರ : ಬೆಜ್ಜ ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವ ಭಕ್ತಿಭಾವದ ನಡುವೆ ಭವ್ಯವಾಗಿ ಸಂಪನ್ನಗೊಂಡಿತು .ಏಪ್ರಿಲ್ 1ರಂದು ಉತ್ಸವದ ಗೊನೆ ಮುಹೂರ್ತ, ಕೋಳಿಗೂಟ ಹಾಗೂ ಉತ್ಸವದ ಚೆಂಡು ಕಾರ್ಯಕ್ರಮಗಳೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗಿತ್ತು. ಏಪ್ರಿಲ್ 6ರಿಂದ 9ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಏಪ್ರಿಲ್ 6ರಂದು ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆದಿದ್ದು, ಶಾರದಾ ಆರ್ಟ್ಸ್ ತಂಡದಿಂದ ತುಳು ಹಾಸ್ಯಮಯ ನಾಟಕ “ಒಂತೆ ಲೇಟಾ0ಡ್…

Read More

ಉದಯಗಿರಿ ವಿಷ್ಣುಮೂರ್ತಿ ಒತ್ತೆಕೋಲಂ: ನಾಲ್ಕು ವರ್ಷಗಳ ಬಳಿಕ ಭಕ್ತರಿಗೆ ದರ್ಶನ ಸೌಭಾಗ್ಯ

ಕಾಸರಗೋಡು, ಜಿಲ್ಲೆಯಲ್ಲೇ ಅತಿ ಬೃಹತ್ ಒತ್ತೆಕೋಲಂ ಎಂದು ಪ್ರಸಿದ್ಧಿಯಾಗಿರುವ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಲ್ಕು ವರ್ಷಗಳ ವಿರಾಮದ ಬಳಿಕ ಭಕ್ತರಿಗೆ ಮತ್ತೆ ದರ್ಶನ ಸೌಭಾಗ್ಯ ಲಭಿಸಿದೆ. ನಿನ್ನೆ ನಡೆದ ಒತ್ತೆಕೋಲ ಮಹೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಭಾವದಿಂದ ಅದ್ದೂರಿಯಾಗಿ ನೆರವೇರಿತು. ತೆಯ್ಯಮ್ ಆರಾಧನೆಯಲ್ಲಿ ವಿಶಿಷ್ಟ ಸ್ಥಾನ ಹೊಂದಿರುವ ಈ ಒತ್ತೆಕೋಲ ಆಚರಣೆ, ಉಳಿದ ತೆಯ್ಯಮ್‌ಗಳಿಗಿಂತ ಭಿನ್ನವಾಗಿದೆ. ಶ್ರೀ ವಿಷ್ಣುಮೂರ್ತಿ ದೈವವು ಉರಿಯುತ್ತಿರುವ ಬೃಹತ್ ಕೆಂಡದ ರಾಶಿಗೆ ಹಾರುವ ದೃಶ್ಯವು ಭಕ್ತರ ಮನದಲ್ಲಿ ಭಕ್ತಿ ಮತ್ತು…

Read More

ಸಮಾಜ ಸೇವೆಯಲ್ಲಿ ಮಾದರಿಯಾದ ಚಿರಂಜೀವಿ ಕ್ಲಬ್: ಬಡ ಕುಟುಂಬಗಳಿಗೆ ವೈದ್ಯಕೀಯ ನೆರವು

ಕುಂಬಳೆಯ ಚಿರಂಜೀವಿ (ರಿ) ಕ್ಲಬ್ಬಿನ ಮಾಸಿಕ ಸಭೆ ಭಾನುವಾರ ಸಂಜೆ 4 ಗಂಟೆಗೆ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಗಟ್ಟಿ ಕೋಟೆಕಾರ್ ಹಾಗೂ ಉಪಾಧ್ಯಕ್ಷರಾದ ಕೆ.ಸಿ. ಮೋಹನ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಭೆಯನ್ನು ವಿಭಿನ್ನ ರೀತಿಯಲ್ಲಿ ಸಮಾಜ ಸೇವಾ ಕಾರ್ಯಕ್ರಮಗಳ ಮೂಲಕ ಆಯೋಜಿಸಲಾಯಿತು. ಚಿರಂಜೀವಿ ಕ್ಲಬ್ ಮತ್ತು ಸಂಜೀವಿನಿ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ಕುಂಬಳೆ ಸಮೀಪದ ಎರಡು ಬಡ ಕುಟುಂಬಗಳಿಗೆ ವೈದ್ಯಕೀಯ ನೆರವು ನೀಡಲಾಯಿತು. ಶಾಂತಿಪಳ್ಳದ ಶ್ರೀ ಯಶವಂತ್ ಕುಮಾರ್ ಅವರು ಕರುಳು ಸಂಬಂಧಿ ಕಾಯಿಲೆಗೆ…

Read More

ದ್ವಿತೀಯ ಪಿಯುಸಿ ಫಲಿತಾಂಶ: ಮರಿಯಮ್ ಸಾಧನೆಗೆ ರಾಜ್ಯ ಮಟ್ಟದ ಮೆಚ್ಚುಗೆ

ಗಡಿನಾಡಿನ ವಿದ್ಯಾರ್ಥಿಗಳ ಪ್ರತಿಭೆ ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಮಂಜೇಶ್ವರದ ಕುಂಜತ್ತೂರಿನ ವಿದ್ಯಾರ್ಥಿನಿ ಮರಿಯಮ್ ಅವರು 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಒಟ್ಟು 600ರಲ್ಲಿ 576 ಅಂಕಗಳನ್ನು (96%) ಪಡೆದು ವಿಶಿಷ್ಟ ಸಾಧನೆಗೈದಿದ್ದಾರೆ. ಮರಿಯಮ್ ಅವರು ಮಂಗಳೂರಿನ ಬಬ್ಬುಕಟ್ಟೆಯ ಹಿರಾ ವಿಮೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದಾರೆ. ಕಠಿಣ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ ಮತ್ತು ನಿರಂತರ ಪ್ರಯತ್ನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ….

Read More
error: Content is protected !!