ಮಂಜೇಶ್ವರ ತೀರ ಪ್ರದೇಶದಲ್ಲಿ ತೀವ್ರಗೊಂಡ ಕಡಲ್ಕೊರೆತ ಸ್ಥಳಕ್ಕೆ ಬೇಟಿ ನೀಡಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ ಸಿ ಪಿ ಎಂ ಜಿಲ್ಲಾ ಸೆಕ್ರಟರಿಯೇಟ್ ಸದಸ್ಯ-ಕೆ ಆರ್ ಜಯಾನಂದ
ಮಂಜೇಶ್ವರ: ಉಪ್ಪಳ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಶಾರದಾ ನಗರ, ಮಣಿಮುಂಡ ಕಡಪ್ಪುರ, ಹನುಮಾನ್ ನಗರ, ಬಾಂಗ್ಲಾ, ಶಾರದಾ ಮಂದಿರ ಸಮೀಪದ ಪ್ರದೇಶ, ಐಲಾ ಹನುಮಾನ್ ನಗರ ಎಂಬಿಡೆಗಳಲ್ಲಿ ಕಡಲ್ಕೊರೆತ ತೀವೃಗೊಂಡಿದೆ. ಅದೇ ರೀತಿ ಪೆರಿಂಗಡಿ ಹಾಗೂ ಬೇರಿಕೆ ಗಳಲ್ಲಿ ಕಡಲ್ಕೊರೆತ ತೀವ್ರ ರೀತಿಯಲ್ಲಿ ಮುಂದುವರಿಯುತ್ತಿದ್ದು, ಸುಮಾರು 5ರಷ್ಟು ವಿದ್ಯುತ್ ಕಂಬಗಳು ಸಮುದ್ರ ಪಾಲಾಗಿವೆ. 20ರಷ್ಟು ಕಂಬಗಳು ಇನ್ನೂ ಅಪಾಯದಂಚಿನಲ್ಲಿದೆ. ಈ ಪರಿಸರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಸುಮಾರು 50ರಷ್ಟು ಮನೆಗಳು ಅಪಾಯದಂಚಿನಲ್ಲಿವೆ. ಈ ಪ್ರದೇಶದಲ್ಲಿ ವಿದ್ಯುತ್…
