ಶ್ರೀ ರಾಜ ಬೆಳ್ಚಪ್ಪಾಡ ಸೇವಾ ಟ್ರಸ್ಟ್ ನ ಏಳನೇ ವಾರ್ಷಿಕೋತ್ಸವದ ಅಂಗವಾಗಿ ಬಡಮಕ್ಕಳಿಗೆ ಕಲಿಕೋಪಕರಣ ವಿತರಣೆ
ಮಂಜೇಶ್ವರ : ಶ್ರೀ ರಾಜ ಬೆಳ್ಳಪ್ಪಾಡ ಸೇವಾ ಟ್ರಸ್ಟ್ ಉದ್ಯಾವರ ಮಾಡ ಇದರ ವತಿಯಿಂದ ಸಂಸ್ಥೆಯ 7 ನೇ ವರ್ಷದ ವಾರ್ಷಿಕೋತ್ಸವ ದ ಅಂಗವಾಗಿ ಬಡ ಶಾಲಾ ಮಕ್ಕಳ ಕಲಿಕೆಗೆ ಬೇಕಾದ ಸಾಮಾಗ್ರಿಗಳ ಕಿಟ್ ಳನ್ನು ಉದ್ಯಾವರ ಮಾಡದ ಸತ್ಯ ದೈವಗಳ ಭಂಡಾರ ಮನೆಯಲ್ಲಿ ಪ್ರಾರ್ಥನೆ ಮಾಡಲಾಯಿತು. ಬಳಿಕ ಅನ್ಯ ರಾಜ್ಯದ ವಲಸೆ ಕಾರ್ಮಿಕರ ಬಡ ಮಕ್ಕಳೇ ತುಂಬಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಲಪಾಡಿಯ ವಿದ್ಯಾರ್ಥಿಗಳಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾರ್ಗದರ್ಶಕ ರಾಜ…
