ಉಪ್ಪಳ ತಾಲೂಕು ಆಸ್ಪತ್ರೆ ಯಲ್ಲಿ ವೈದ್ಯರ ಸಿಬ್ಬಂದಿಗಳ ಕೊರತೆ: ಆಸ್ಪತ್ರೆ ಮುಂಭಾಗದಲ್ಲಿ ಯೂತ್ ಕಾಂಗ್ರೆಸ್ ಧರಣಿ

ವೈದ್ಯರು ಹಾಗೂ ಸಿಬ್ಬಂದಿಗಳು ಸಾಕಷ್ಟು ಇಲ್ಲದೆ ರಾತ್ರಿ ಹೊತ್ತಿನ ಚಿಕಿತ್ಸೆಯನ್ನು ಸ್ಥಗಿತಗೊಳಿಸಿರುವ ಮಂಜೇಶ್ವರ ತಾಲೂಕು ಹೆಡ್ ಕ್ವಾಟರ್ಸ್ ಆಸ್ಪತ್ರೆಗೆ ಇಂಡಿಯನ್ ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮಾರ್ಚ್ ಹಾಗೂ ಧರಣಿ ನಡೆಯಿತು. ನಾಯಬಜಾರ್ ನಲ್ಲಿರುವಆಸ್ಪತ್ರೆ ಗೆ ಯೂತ್ ಕಾಂಗ್ರೆಸ್ ಅಸೆಂಬ್ಲಿ ಸಮಿತಿಯ ಅಧ್ಯಕ್ಷ ಜುನೈದ್ ಉರ್ಮಿ ಇವರ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಸದಸ್ಯ ಹಕ್ಕಿಂ ಕುನ್ನಿಲ್ ಧರಣಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೇರಳ ರಾಜ್ಯ ಸರ್ಕಾರ ಆರೋಗ್ಯ ರಂಗದಲ್ಲಿ ಪೂರ್ಣ ವಿಫಲಗೊಂಡಿದ್ದು,…

Read More

ದೇಲಂಪಾಡಿ ಪ್ರದೇಶದಲ್ಲಿ ಜನರ ಜೀವ ಮತ್ತು ಆಸ್ತಿಯನ್ನು ಸಂರಕ್ಷಿಸಲು ಎಂ.ಎಲ್. ಅಶ್ವಿನಿ ಒತ್ತಾಯ.

ವನ್ಯಜೀವಿಗಳ ಹಾವಳಿ ಹೆಚ್ಚಾಗಿ ಕಂಡುಬರುವ ದೇಲಂಬಾಡಿ ಪಂಚಾಯಿತಿನ ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸಿ, ಸೌರ ಬೇಲಿ, ಬೀದಿ ದೀಪ ಮತ್ತು ಎಚ್ಚರಿಕೆ ವ್ಯವಸ್ಥೆಗಳನ್ನು ಅಳವಡಿಸಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ ಒತ್ತಾಯಿಸಿದ್ದಾರೆ.ಬಿಜೆಪಿ ದೇಲಂಪಾಡಿ ಪ್ರಾದೇಶಿಕ ಸಮಿತಿ ನೇತೃತ್ವದಲ್ಲಿ ಪರಪ್ಪದಲ್ಲಿರುವ ಅರಣ್ಯ ಇಲಾಖೆ ಮರದ ಡಿಪೋದಲ್ಲಿ ನಡೆದ ಧರಣಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು . ಕಾಡು ಪ್ರಾಣಿಗಳ ದಾಳಿಯಿಂದ ಬೆಳೆಗಳು ಹಾನಿಗೊಳಗಾದಾಗ, ಕೇವಲ ಅತ್ಯಲ್ಪ ಪರಿಹಾರವನ್ನು ಮಾತ್ರ ನೀಡಲಾಗುತ್ತದೆ. ಈ ಮೊತ್ತ ಫಲಾನುಭವಿಗಳಿಗೆ ಸಿಗುವಾಗ ಬಹಳಷ್ಟು ವಿಳಂಬವು…

Read More

ಮೂಡಂಬೈಲ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆ.

ಸರಕಾರಿ ಪ್ರೌಢಶಾಲೆ ಮೂಡಂಬೈಲ್ ನಲ್ಲಿ ಜಿಲ್ಲಾ ಪಂಚಾಯತಿನ ವತಿಯಿಂದ ಒದಗಿಸಲಾದ ಆಧುನಿಕ ವ್ಯವಸ್ಥೆಯನ್ನು ಒಳಗೊಂಡಿರುವ ಶೌಚಾಲಯವನ್ನು ಹಾಗೂ ಶುದ್ಧ ಜಲ ನೀರಿನ ಯೋಜನೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಕಮಲಾಕ್ಷಿ ಅವರು ನಿರ್ವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ಲಾ ಪಜಿಂಗರ್ ಅವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಿಂಚಾಯತ್ ಉಪಾಧ್ಯಕ್ಷರಾದ ಜಯರಾಮ ಬಲ್ಲಂಗುಡೆಯಲು ಹಾಗೂ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿಯಾದ ಜಾರ್ಜ್ ಕ್ರಾಸ್ತಾರವರು ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ದಯಾವತಿ ಅವರು ಅತಿಥಿಗಳನ್ನು…

Read More

ವಿವಿಧ ನೂತನ ಸೌಕರ್ಯ ಉದ್ಘಾಟನೆಯೊಂದಿಗೆ ವಾಮಂಜೂರು ಜಿ.ಎಲ್ ಪಿ ಶಾಲೆಯ ಶಾಲಾ ಪ್ರವೇಶೋತ್ಸವ

ಜಿ.ಎಲ್ ಪಿ ಶಾಲೆ ವಾಮಂಜೂರಿನಲ್ಲಿ ಶಾಲಾ ಮಟ್ಟದ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡು ಸದಸ್ಯರಾದ ಶ್ರೀಯುತ ಆದರ್ಶ್ ಬಿ.ಎಂ ವಹಿಸಿದ್ದರು. ಪ್ರವೇಶೋತ್ಸವದ ಉದ್ಘಾಟನೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಮೆಂಬರ್ ಆದ ಶ್ರೀಯುತ ಅಬ್ದುಲ್ ಹಮೀದ್ ಅವರು ನೆರವೇರಿಸಿದರು. ವಾಮಂಜೂರು ಶಾಲಾ ಹಳೆ ವಿದ್ಯಾರ್ಥಿಯಾದ ಶ್ರೀಯುತ ಮುಜಿಬು ರಹಿಮಾನ್ ಇವರು ಕೊಡುಗೆಯಾಗಿ ನೀಡಿದ ಇಂಗಿಷ್ ಭಾಷೆಯ ಲ್ಯಾಬ್ ಹಾಗೂ ಇಂಟರಾಕ್ಟಿವ್ ಪ್ಲಾಟ್ ಪ್ಯಾನಲ್ನ ಉದ್ಘಾಟನೆಯನ್ನು ನಿವೃತ್ತ ಡಿಡಿಇ ಶ್ರೀಯುತ ದಿನೇಶ್ ನೆರವೇರಿಸಿದರು. ಯುಕೆಜಿ ತರಗತಿಯನ್ನು…

Read More

ತುಳುನಾಡ ಕೊಡುಗೈ ದಾನಿಯ ಹುಟ್ಟೂರ ಪ್ರೇಮ; ತನ್ನೂರ ಶಾಲೆಯ ಎಲ್.ಕೆ.ಜಿ., ಯು.ಕೆ.ಜಿ. ವಿಭಾಗವನ್ನು ದತ್ತು ಪಡೆದ ಡಾ. ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ

ಮಂಜೇಶ್ವರ : ಸಮಾಜದಲ್ಲಿ ಕಷ್ಟ ಕಾರ್ಪಣ್ಯಗಳಿಂದ ಬಳಲಿ ಬೆಂಡಾಗಿರುವ ಅದೆಷ್ಟೋ ಜೀವಗಳಿವೆ. ಬಡತನ ಇನ್ನಷ್ಟು ಅವರ ಜೀವ ಹಿಂಡುತ್ತದೆ. ಯಾವುದಾದರೂ ಕಾಣುವ ಕೈಗಳ ಸಹಾಯಕ್ಕೆ ಕಾಯುತ್ತವೆ. ಆದರೆ ಎಲ್ಲರೂ ಮರುಗುವರೇ ಹೊರತು ಸಹಾಯಕ್ಕಾಗಿ ಮುಂದೆ ಬರುವುದು ವಿರಳ. ಇಂತಹ ಸಂದರ್ಭಗಳಲ್ಲಿ ನಮಗೆ ಹೊಳೆಯುವ ಹೆಸರೆಂದರೆ‌ ಅದು ಡಾ. ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ. ತಮ್ಮ ನಿಸ್ವಾರ್ಥವಾದ ಸಮಾಜ ಸೇವೆ ಇಂದು ಅವರನ್ನು ಬಹಳ ಎತ್ತರಕ್ಕೆ ತಂದು ನಿಲ್ಲಿಸಿದೆ.‌ ಜಾತಿ-ಮತ-ಧರ್ಮ ಎನ್ನುವ ಯಾವುದೇ ಭೇದವಿಲ್ಲದೆ ಸಮಾಜದಲ್ಲಿನ ಅಸಕ್ತರಿಗೆ…

Read More

ಪ್ರಶಾಂತಿಯಲ್ಲಿ ದೈವಿಕ ಅನುಗ್ರಹದೊಂದಿಗೆ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭ

ಬಾಯಾರು, ಜೂನ್ 2: ಬಾಯಾರಿನ ಪ್ರಶಾಂತಿ ವಿದ್ಯಾ ಕೇಂದ್ರವು ತನ್ನ 2025-2026ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವವನ್ನು ಸಾಂಪ್ರದಾಯಿಕ ಸಂಸ್ಕೃತಿ ಆಚಾರಗಳ ವಿಧಿವಿಧಾನ ದೊಂದಿಗೆ ಉತ್ಸಾಹ ಮತ್ತು ಆಧ್ಯಾತ್ಮಿಕ ವೈಭವದೊಂದಿಗೆ ಆಚರಿಸಲಾಯಿತು. ಹೊಸ ಶೈಕ್ಷಣಿಕ ವರ್ಷಕ್ಕೆ ದೈವಿಕ ಆಶೀರ್ವಾದವನ್ನು ಕೋರುತ್ತಾ, ಅರ್ಚಕ ವೇದಮೂರ್ತಿ ಶ್ರೀ ನವನೀತ ಕೃಷ್ಣ ಬೋಳoತಕೋಡಿ ಮತ್ತು ಸಹ-ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನ ಮತ್ತು ಸರಸ್ವತಿ ಹವನದೊಂದಿಗೆ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿವಿದ್ಯಾರ್ಥಿಗಳು ಮತ್ತು ಶಿಕ್ಷಕರು ನೀಡಿದ ಭಾವಪೂರ್ಣ ಭಕ್ತಿಪೂರ್ವ ಭಜನೆಗಳಿಂದ ಪ್ರಶಾಂತ ವಾತಾವರಣವು ಸಮೃದ್ಧವಾಗಿತ್ತು. ನಂತರ…

Read More

ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆ

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆಯು ಇತ್ತೀಚೆಗೆ ಕಯ್ಯಾರು ಪರಂಬಳ ಭಾರತಾ ಮಾತಾ ಸೇವಾ ಟ್ರಸ್ಟ್ ಸಭಾ ಭವನದಲ್ಲಿ ದಲ್ಲಿ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ರಮ್ಯಾ .ಯನ್ ಸೀತಾ0ಗೊಳಿ ಮಕ್ಕಳ ಸಹಾಯ ವಾಣಿ ಕೇಂದ್ರದ ಮುಖ್ಯಸ್ಥೆ , ಗೌರವ ಮಾರ್ಗದರ್ಶಕಿ ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇವರು ವಹಿಸಿದರು. ಸಭೆಯನ್ನು ಕುಂಬಳೆ ಪೊಲೀಸ್ ಸ್ಟೇಷನ್ ಇದರ ಸರ್ಕಲ್ ಇನ್ಸ್ಪೆಕ್ಟರ್ ಶ್ರೀ…

Read More

33.5ಕಿಲೋ ಗಾಂಜಾ ಸಹಿತ ಸೋಂಕಾಲ್ ನಿವಾಸಿಯ ಬಂಧನ

ಕುಂಬಳೆ: ಕಾಸರಗೋಡು ಜಿಲ್ಲೆಯ ಗಾಂಜಾ ವಿತರಣಾ ಜಾಲದ ಪ್ರಮುಖ ಕೊಂಡಿಯೆನ್ನಲಾದ ಉಪ್ಪಳ ಸಮೀಪದ ಸೋಂಕಾಲ್ ನಿವಾಸಿಯನ್ನು ಬಂಧಿಸಲಾಗಿದೆ. ಮಂಜೇಶ್ವರ ಪೋಲೀಸ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ್ಪಳ ಸೋಂಕಾಲಿನ ಎ.ಅಶೋಕ(45) ಎಂಬಾತನನ್ನು ಬಂಧಿಸಿ, ಈತ ಮಲಗುವ ಮಂಚದಡಿಯಲ್ಲಿ ದಾಸ್ತಾನಿರಿಸಿದ್ದ 33.5ಕಿಲೋ ಗಾಂಜ ನಶಪಡಿಸಲಾಗಿದೆ.ಕಾಸರಗೋಡು ಜಿಲ್ಲೆಯ ಗಾಂಜಾ ವಿತರಣಾ ಜಾಲದ ಪ್ರಮುಖ ಕೊಂಡಿಗಳಲ್ಲಿ ಈತನೂ ಒಬ್ಬನೆಂದು ಪೋಲೀಸರು ತಿಳಿಸಿದ್ದಾರೆ. ಮಂಜೇಶ್ವರ ಎಸ್.ಐ.ಕೆ.ಆರ್.ಉಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

Read More

ಬ್ಲಾಕ್ ಸ್ಟಾಲೋನ್ಸ್ ಆರ್ಟ್ಸ್ ಆಂಡ್ ಸ್ಟೋರ್ಟ್ಸ್ ಕ್ಲಬ್ ತಲೇಕಲ ಇದರ 10ನೇ ವಾರ್ಷಿಕೋತ್ಸವ, ಆರೋಗ್ಯ ತಪಾಸಣೆ ಹಾಗೂ ಉಚಿತ ವೈದ್ಯಕೀಯ ಶಿಬಿರ

ಬ್ಲಾಕ್ ಸ್ಟಾಲೋನ್ಸ್ ಆರ್ಟ್ಸ್ ಆಂಡ್ ಸ್ಟೋರ್ಟ್ಸ್ ಕ್ಲಬ್ ತಲೇಕಲ ಇದರ 10ನೇ ವಾರ್ಷಿಕೋತ್ಸವದ ಪ್ರಯುಕ್ತನಾಯರ್‌ ಮೂಲೆ ಫ್ಯಾಮಿಲಿ ಅಸೋಸಿಯೇಷನ್ ಕುಟುಂಬ ವೈದ್ಯರಿಂದ ಮೀಯಪದವು ಶಾಲಾವಠಾರದಲ್ಲಿ ಆರೋಗ್ಯ ತಪಾಸಣೆ ಹಾಗೂ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಶಿಬಿರದಲ್ಲಿ ನೂರಾರು ಮಂದಿ ಫಲಾನುಭವಿಗಳು ಪಾಲ್ಗೊಂಡರು. ಶಿಬಿರವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ ಆಶ್ರಫ್ ಉದ್ಘಾಟಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಮೀಂಜ ಗ್ರಾಮ ಪಂಚಾಯತು ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ, ನಿವೃತ ಜಿಲ್ಲಾ ನ್ಯಾಯಾಧೀಶಹಾಜಿ ಮೂಸ ಕುಂಞ ನಾಯರ್ ಮೂಲೆ, ಡಾಕ್ಟರ್ ಉಮರ್…

Read More

ಡಾ| ಬಿ.ಆರ್ ಕಲಾ ಸಂಘ ಅಂಬೇಡ್ಕರ್ ನಗರ ಕುಬಣೂರು ಇದರ ವತಿಯಿಂದ ಸತತ 19ನೇ ವರ್ಷದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕಲಿಕೋಪಕರಣದ ವಿತರಣಾ ಕಾರ್ಯಕ್ರಮ

ಡಾ, ಬಿ.ಆರ್ ಕಲಾ ಸಂಘ ,ಅಂಬೇಡ್ಕರ್ ನಗರ ಕುಬಣೂರು ಇದರ ವತಿಯಿಂದ ಸತತ 19ನೇ ವರ್ಷದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕಲಿಕೋಪಕರಣದ ವಿತರಣಾ ಕಾರ್ಯಕ್ರಮ ಕಲಾ ಸಂಘದಲ್ಲಿ ಜರಗಿತು. ಯುವ ಕವಿ ಹಾಗೂ ಅಧ್ಯಾಪಕರಾದ ಶ್ರೀ ಹರೀಶ್ ಸುಲಾಯಿ ಒಡ್ಡoಬೆಟ್ಟು,ಅಧ್ಯಾಪಕರಾದ ಶ್ರೀ ಅಶೋಕ್ ಮಾಸ್ಟರ್ ಕೊಡ್ಲಮೊಗರು,ಅಧ್ಯಾಪಕಿ ಸುಹಾಸಿನಿ ಟೀಚರ್,ಅಧ್ಯಾಪಕಿ ನಿವೇದಿತಾ ಟೀಚರ್, ಕಲಾ ಸಂಘದ ಅಧ್ಯಕ್ಷ ಶಿವಪ್ರಸಾದ್,ಮಹಿಳಾಸಂಘದ ಅಧ್ಯಕ್ಷೆ ಸಾವಿತ್ರಿ,ರೈಲ್ವೆ ಉದ್ಯೋಗಿ ಸದಾನಂದ ಕುಬಣೂರು ಶುಭಾಶಂಸನೆಗೈದರು. ವಿಶ್ವನಾಥ್ ಮಾಸ್ತರ್ ಸ್ವಾಗತಿಸಿ,ಮೋಹಿನಿ ಟೀಚರ್ ವಂದಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿಯಿಂದ…

Read More
error: Content is protected !!