11 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ನಿವೃತ್ತ ಪೊಲೀಸ್ ಸಿಬ್ಬಂದಿ ಬಂಧನ

ಕಾಸರಗೋಡು:ಆಟವಾಡಲು ಹೋದ ಹನ್ನೊಂದರ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿದ ಘಟನೆ ವರದಿ. ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ಪೊಲೀಸ್ ನೌಕರನನ್ನು ಪೋಕ್ಸೋ ಕೇಸು ದಾಖಲಿಸಿ ಬಂಧಿಸಲಾಗಿದೆ. ಪಯ್ಯನ್ನೂರಿನ ಕಾಪುಮ್ಮೇಲ್ ಇಳಯಡತ್ತ್ ನಿವಾಸಿ ಇ. ವಿ. ಗೋಪಿನಾಥ್ (62) ಬಂಧಿತ ವ್ಯಕ್ತಿ. ಪರಿಯಾರಂ ಪೊಲೀಸ್ ಇನ್ಸ್ಪೆಕ್ಟರ್ ಕೆ. ಪಿ. ಸತೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಬಂಧಿತ ವ್ಯಕ್ತಿಯು ಸುದೀರ್ಘ ಕಾಲ ಪೊಲೀಸ್ ಇಲಾಖೆಯಲ್ಲಿ ಫೋಟೋಗ್ರಾಫರ್ ಆಗಿ ಸೇವೆ ಸಲ್ಲಿಸಿ ನಿವೃತ್ತನಾಗಿದ್ದನು.ಬುಧವಾರ ಮಧ್ಯಾಹ್ನ ಈ ಅಮಾನುಷ ಕೃತ್ಯ ನಡೆದಿದೆ…

Read More

ಕಾಸರಗೋಡಿನಲ್ಲಿ ಕನ್ನಡ ಪತ್ರಿಕಾ ದಿನಾಚರಣೆ; ಹಿರಿಯ ವಿತರಕ ಶ್ಯಾಮಪ್ರಸಾದ್‌ಗೆ ‘ಪತ್ರಿಕಾ ದಿನ’ ಪ್ರಶಸ್ತಿ

ವಸ್ತುನಿಷ್ಠ ವರದಿಗಾರಿಕೆ ಪತ್ರಿಕೆಗಳ ಹೊಣೆಗಾರಿಕೆ: ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಕಾಸರಗೋಡು, ಜು. 2: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ‘ಪತ್ರಿಕಾ ದಿನ’ ಪ್ರಶಸ್ತಿ ಪ್ರದಾನ ಸಮಾರಂಭವು ಕುಂಬಳೆ ಸಮೀಪದ ನಾಯ್ಕಾಪುವಿನ ಲಿಟಲ್ ಲಿಲ್ಲಿ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ…

Read More

ಕುಂಬಳೆ ಪಂಚಾಯತ್ ವಿರುದ್ಧ ವ್ಯಾಪಾರಿಗಳ ಹೋರಾಟ; ಜು. 6ರಂದು ಪಂಚಾಯತ್ ಕಚೇರಿಗೆ ಪ್ರತಿಭಟನಾ ಮೆರವಣಿಗೆ

ಪಟ್ಟಣದ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ; ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ಕುಂಬಳೆ, ಜು. 2: ಕುಂಬಳೆ ಪಟ್ಟಣದ ವಿವಿಧ ಸಮಸ್ಯೆಗಳ ಕುರಿತು ಪಂಚಾಯತ್ ಹಾಗೂ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಕುಂಬಳೆ ಘಟಕ ಹಾಗೂ ಮರ್ಚೆಂಟ್ ಯೂತ್ ವಿಂಗ್ ಜುಲೈ 6ರಂದು ಕುಂಬಳೆ ಪಂಚಾಯತ್ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿವೆ. ಕುಂಬಳೆಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ ಸಂಘಟನೆಯ ಪದಾಧಿಕಾರಿಗಳು, ಬೆಳಿಗ್ಗೆ 10…

Read More

ಕುಂಬಳೆ ಕಂಚಿಕಟ್ಟೆ ಸೇತುವೆ ಸಮೀಪ ರಸ್ತೆ ಕುಸಿತ ಭೀತಿ; ತುರ್ತು ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ತಡೆಗೋಡೆ ಬಿರುಕು, ಮರ ಉರುಳುವ ಆತಂಕ; ₹72 ಕೋಟಿ ಸೇತುವೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ ಮಂಜೇಶ್ವರ, ಜು. 2: ಕುಂಬಳೆ ಕಂಚಿಕಟ್ಟೆ ಸೇತುವೆ ಸಮೀಪದ ರಸ್ತೆ ತೀವ್ರ ಹಾನಿಗೊಳ್ಳುವ ಹಂತ ತಲುಪಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಆತಂಕದ ನಡುವೆ ಸಂಚರಿಸುವಂತಾಗಿದೆ. ಸೇತುವೆಯಿಂದ ಸುಮಾರು 250 ಮೀಟರ್ ದೂರದಲ್ಲಿ ನಿರ್ಮಿಸಲಾಗಿದ್ದ ಕಲ್ಲಿನ ತಡೆಗೋಡೆ ಬಿರುಕು ಬಿಟ್ಟು ಕುಸಿದಿದೆ. ರಸ್ತೆಬದಿಯ ಮರದ ಬುಡದ ಮಣ್ಣು ಜರಿದಿರುವುದರಿಂದ ಮರ ಹಾಗೂ ತಡೆಗೋಡೆ ಯಾವುದೇ ಕ್ಷಣದಲ್ಲಿ ರಸ್ತೆಗೆ ಉರುಳುವ ಅಪಾಯ ಎದುರಾಗಿದೆ….

Read More

ಕಾಸರಗೋಡಿನಲ್ಲಿ ಗುಡ್ಡ ಕುಸಿತ; ಕಾರಿನ ಮೇಲೆ ಬಿದ್ದ ಬಂಡೆಕಲ್ಲು, ಪ್ರಯಾಣಿಕರು ಅಪಾಯದಿಂದ ಪಾರು

ಚಳಿಯಂಗೋಡು ಬಳಿ ಭಾರಿ ಮಳೆಯಿಂದ ಘಟನೆ; ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಂಚಾರ ಪುನಃ ಆರಂಭ ಕಾಸರಗೋಡು, ಜು. 2: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕಾಸರಗೋಡು–ಕಾಞಂಗಾಡ್ ಕೆಎಸ್‌ಟಿಪಿ ರಸ್ತೆಯ ಚಳಿಯಂಗೋಡು ಸಮೀಪ ಗುಡ್ಡ ಕುಸಿದು ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಯಿತು. ಮಣ್ಣು ತಡೆಯಲು ನಿರ್ಮಿಸಲಾಗಿದ್ದ ಕಾಂಕ್ರೀಟ್ ತಡೆಗೋಡೆಯ ಮೇಲ್ಭಾಗದಿಂದ ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ಏಕಾಏಕಿ ರಸ್ತೆಗೆ ಜರಿದುಬಿದ್ದವು. ಇದೇ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬಂಡೆಕಲ್ಲು ಬಿದ್ದ ಪರಿಣಾಮ ಕಾರಿನ ಮುಂಭಾಗ…

Read More

ರಸ್ತೆಗೆ ಉರುಳಿದ ಬೃಹತ್ ಮರ ತೆರವು; ಸಂಚಾರ ಪುನಃಸ್ಥಾಪಿಸಿದ ಎಸ್‌ಡಿಪಿಐ ರೆಸ್ಕ್ಯೂ ತಂಡ

ಮಂಜೇಶ್ವರ, ಜು. 2: ಮಂಜೇಶ್ವರದ ಹೊಸಂಗಡಿ–ಆನಪಳ್ಳ ರಸ್ತೆಯ ಕಡಂಬಾರಿನ ಅರಣ್ಯ ಪ್ರದೇಶದಲ್ಲಿ ಬೃಹತ್ ಮರವೊಂದು ರಸ್ತೆಗೆ ಧರೆಗುರುಳಿದ ಪರಿಣಾಮ ವಿದ್ಯುತ್ ಲೈನ್ ಕಡಿತಗೊಂಡು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಎಸ್‌ಡಿಪಿಐ ಮಂಜೇಶ್ವರ ಪಂಚಾಯತ್ ರೆಸ್ಕ್ಯೂ ತಂಡ ತಕ್ಷಣ ಕಾರ್ಯಾಚರಣೆ ಆರಂಭಿಸಿತು. ತೀವ್ರ ಪರಿಶ್ರಮದ ಬಳಿಕ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು. ರಕ್ಷಣಾ ಕಾರ್ಯಾಚರಣೆಯ ನೇತೃತ್ವವನ್ನು ಎಸ್‌ಡಿಪಿಐ ಮಂಜೇಶ್ವರ ಪಂಚಾಯತ್ ಸಮಿತಿ ಉಪಾಧ್ಯಕ್ಷ ಸಲಾಮ್…

Read More

ಕಾಸರಗೋಡಿನಲ್ಲಿ ಜುಲೈ 6ರಂದು ಖಾಸಗಿ ಬಸ್ ಮುಷ್ಕರ

ಕಾಸರಗೋಡು: ಕೆಎಸ್ಸಾರ್ಟೀಸಿ ‘ಪ್ರಿಯದರ್ಶಿನಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜಾರಿಯಾದ ಬಳಿಕ ಖಾಸಗಿ ಬಸ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಉದ್ಯಮವನ್ನು ಸಂರಕ್ಷಿಸುವಂತೆ ಆಗ್ರಹಿಸಿ ಜುಲೈ 6ರಂದು ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಲಿವೆ. ಕೇರಳ ಪ್ರೈವೇಟ್ ಬಸ್ ಆಪರೇಟರ್ಸ್ ಫೆಡರೇಷನ್‌ನ ಕಾಸರಗೋಡು ಜಿಲ್ಲಾ ಘಟಕ ಹಾಗೂ ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಬಸ್ ಮಾಲೀಕರು ಮತ್ತು ಸಿಬ್ಬಂದಿ…

Read More

ಅರೆಕೆರೆ ಬೈಲು ತರವಾಡು ಮನೆ ಗೃಹಪ್ರವೇಶದ ಅಂಗವಾಗಿ ಲಕ್ಕಿ ಕೂಪನ್ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

ಇಚ್ಲಂಗೋಡಿನಲ್ಲಿ 2027ರ ಜನವರಿಯಲ್ಲಿ ಗೃಹಪ್ರವೇಶ; ಕೈಕಂಬದಲ್ಲಿ ನಡೆದ ಕಾರ್ಯಕ್ರಮಕ್ಕೆ ಗಣ್ಯರ ಸಮ್ಮುಖ ಇಚ್ಲಂಗೋಡು, ಜು. 2: ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನ, ಇಚ್ಲಂಗೋಡು ಕುಟುಂಬಸ್ಥರ ಅರೆಕೆರೆ ಬೈಲು ತರವಾಡು ಮನೆಯ ಗೃಹಪ್ರವೇಶವು 2027ರ ಜನವರಿಯಲ್ಲಿ ನಡೆಯಲಿದ್ದು, ಅದರ ಅಂಗವಾಗಿ ವಿಜ್ಞಾಪನಾ ಪತ್ರ ಹಾಗೂ ಲಕ್ಕಿ ಕೂಪನ್ ಬಿಡುಗಡೆ ಕಾರ್ಯಕ್ರಮವು ಕೈಕಂಬದ ಪಂಚಮಿ ಹಾಲ್‌ನಲ್ಲಿ ನಡೆಯಿತು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿಶ್ವನಾಥ್ ಕುಬನೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳ ಹಾಗೂ ಕಾರ್ನವರ…

Read More

ಶಿರಿಯ ನದಿ ಉಕ್ಕಿ ಹರಿದ ಪರಿಣಾಮ ಶಂಕರ ನಾರಾಯಣ ದೇವಸ್ಥಾನ ಜಲಾವೃತ

ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬಂದ್ಯೋಡ್ ಸಮೀಪದ ಶಿರಿಯ ನದಿ ಅಪಾಯದ ಮಟ್ಟ ಮೀರಿ ಉಕ್ಕಿ ಹರಿದಿದ್ದು, ನದಿ ತೀರದ ಬಯಲು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಪ್ರವಾಹದ ನೀರು ನದಿಯಿಂದ ಸುಮಾರು 500 ಮೀಟರ್ ದೂರದಲ್ಲಿರುವ ಪುರಾಣ ಪ್ರಸಿದ್ಧ ಶಿರಿಯ ಸೀರೆ ಶ್ರೀ ಶಂಕರ ನಾರಾಯಣ ದೇವಸ್ಥಾನಕ್ಕೂ ನುಗ್ಗಿದ್ದು, ಕ್ಷೇತ್ರದ ಪರಿಸರ ಸಂಪೂರ್ಣ ನೀರಿನಿಂದ ಆವರಿಸಿಕೊಂಡಿದೆ. ದೇವಸ್ಥಾನದ ಆವರಣ ಸೇರಿದಂತೆ ಗರ್ಭಗುಡಿಯವರೆಗೂ ಸುಮಾರು 3 ರಿಂದ 4 ಅಡಿ ಎತ್ತರದ ನೀರು ನಿಂತಿರುವುದರಿಂದ ಭಕ್ತರು ಮತ್ತು…

Read More

ಕಾಸರಗೋಡಿನ ಶಾಲಾ ಮೈದಾನದಲ್ಲಿ ಅಪಾಯಕಾರಿ ಕಾರ್ ರೇಸಿಂಗ್; ವಾಹನವನ್ನು ವಶಪಡಿಸಿಕೊಂಡ ಪೊಲೀಸರು

ಕಾಸರಗೋಡು : ಕಾಸರಗೋಡಿನ ಪಳ್ಳಿಕರ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಕಾರುಗಳು ಅಪಾಯಕಾರಿ ರೀತಿಯಲ್ಲಿ ರೇಸಿಂಗ್ ನಡೆಸಿದವು. ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ಮನೆಗೆ ಮರಳುತ್ತಿದ್ದ ಸಂದರ್ಭದಲ್ಲೇ ಈ ರೇಸಿಂಗ್ ನಡೆದಿತ್ತು. ಅತಿವೇಗ ಮತ್ತು ಅಪಾಯಕಾರಿ ಚಾಲನೆ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ತಲುಪಿದ ಪೊಲೀಸರ ಮೇಲೆಯೂ ದಾಳಿ ನಡೆದಿದೆ. ರೇಸಿಂಗ್ ನಿಲ್ಲಿಸಲು ಸೂಚಿಸಿದ ಪ್ರೊಬೇಷನ್ ಎಸ್‌ಐ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದರೆ. ಎಸ್‌ಐ ಪ್ರಿನ್ಸ್ ಜಾನ್ ಕಾಞ್ಞಂಗಾಡ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಈ ಘಟನೆಯಲ್ಲಿ…

Read More
error: Content is protected !!