ನಾಯಕತ್ವದ ಹೆಜ್ಜೆಗುರುತುಗಳು: ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಮತ್ತು ಸನ್ಮಾನ ಸಮಾರಂಭ.
ಮಂಜೇಶ್ವರ : ಗಡಿ ಪ್ರದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂಜತ್ತೂರು ಹಾಗೂ ಹೊಸಂಗಡಿ ಪೀಸ್ ಕ್ರಿಯೇಟಿವ್ ಕೇಂದ್ರೀಯ ಶಾಲೆಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭ ಹಾಗೂ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಸನ್ಮಾನ ಸಮಾರಂಭ ಜರುಗಿತು.ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುವ ಮತ್ತು ಗುರುಹಿರಿಯರಿಗೆ ಗೌರವ ಸಲ್ಲಿಸುವ ಉದಾತ್ತ ಉದ್ದೇಶವನ್ನು ಹೊಂದಿತ್ತು. ಶಾಲೆಯ ನೂತನ ವಿದ್ಯಾರ್ಥಿ ನಾಯಕ, ನಾಯಕಿಯರು ಮತ್ತು ವಿವಿಧ ವಿಭಾಗಗಳ ಪದಾಧಿಕಾರಿಗಳಿಗೆ ಶಾಲಾ ಆಡಳಿತ ಮಂಡಳಿಯು ಗೌರವಯುತವಾಗಿ ಬಾವುಟ ಮತ್ತು ಪದಕಗಳನ್ನು ನೀಡಿ…
