ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ; ಚಾಲಕನ ವಿರುದ್ಧ ಪ್ರಕರಣ ದಾಖಲು
ಕಾಸರಗೋಡು: ಅಜಾಗರೂಕತೆಯಿಂದ ಕಾರು ಚಲಾಯಿಸಿ ಇಬ್ಬರು ವಿದ್ಯಾರ್ಥಿಗಳ ಗಂಭೀರ ಗಾಯಕ್ಕೆ ಕಾರಣವಾದ ಘಟನೆಗೆ ಸಂಬಂಧಿಸಿ ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಳ್ಳೇರಿಯ ವಿವೇಕಾನಂದನಗರದ ಶ್ರೀಯಾನ್ (5) ಮತ್ತು ದೀಕ್ಷಾ (17) ಗಾಯಗೊಂಡ ವಿದ್ಯಾರ್ಥಿಗಳು.ಕಳೆದ ಮಂಗಳವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ಗಜಾನನ ಶಾಲೆ ಸಮೀಪದ ರಸ್ತೆಯಲ್ಲಿ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾಗ, ಅತೀ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದೆ. ದೀಕ್ಷಾ ಮುಳ್ಳೇರಿಯ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದು, ಶ್ರೀಯಾನ್ ಪ್ರೀ…
