ಮಂಜೇಶ್ವರದಲ್ಲಿ ಯುಡಿಎಫ್ ಪಂಚಾಯತ್ ಸಮಾವೇಶಗಳು ಪೂರ್ಣ

ಮಂಜೇಶ್ವರದ ಚುನಾವಣಾ ಗೆಲುವಿಗಾಗಿ ಆಯೋಜಿಸಲಾದ ಪಂಚಾಯತ್ ಸಮಾವೇಶಗಳು ಪೂರ್ಣಗೊಂಡಿವೆ. ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಅವರ ಚುನಾವಣೆಯ ಗೆಲುವಿಗಾಗಿ ಆಯೋಜಿಸಲಾದ ಪಂಚಾಯತ್ ಸಮಾವೇಶಗಳು ಪೂರ್ಣಗೊಂಡಿವೆ.ಇದರೊಂದಿಗೆ, ಪ್ರಚಾರವು ಎರಡನೇ ಹಂತವನ್ನು ತಲುಪಿದೆ. ಮಂಜೇಶ್ವರ ಪಂಚಾಯತ್ ಸಮಾವೇಶವನ್ನು ಕರ್ನಾಟಕ ಗೇರು ನಿಗಮದ ಅಧ್ಯಕ್ಷರಾದ ಶ್ರೀಮತಿ ಮಮತಾ ಗಟ್ಟಿ ಉದ್ಘಾಟಿಸಿದರು.ಯುಡಿಎಫ್ ಪಂಚಾಯತ್ ಅಧ್ಯಕ್ಷ ಹಝಿಜ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.ಸಂಚಾಲಕ ಹನೀಫ್ ಪಡಿ0ಜಾರ್ ಸ್ವಾಗತಿಸಿದರು. ಮಂಜುನಾಥ ಆಳ್ವ, ಹಝಿಜ್ ಮೇರಿಕೆ, ಸೋಮ ಶೇಖರ್, ಡಿಎಂಕೆ ಮುಹಮ್ಮದ್, ಲಕ್ಷ್ಮಣ್ ಪ್ರಭು, ಟಿ.ಎ. ಮೂಸಾ, ಎಂ.ಅಬ್ಬಾಸ್,…

Read More

​ಮರಳು ಮಾಫಿಯಾಗಳಿಗೆ ಪೊಲೀಸರ ‘ಸಿಂಹಸ್ವಪ್ನ’: ಗಡಿಪಾರು ಮತ್ತು ಜೈಲು ಶಿಕ್ಷೆಯ ಎಚ್ಚರಿಕೆ

​ಮಂಜೇಶ್ವರ: ಅನಧಿಕೃತ ಮರಳು ಸಾಗಾಟ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕುಂಬಳೆ ಪೊಲೀಸರು ಯುದ್ಧ ಘೋಷಿಸಿದ್ದು, ಕಠಿಣ ‘ಕಾಪಾ’ ಕಾಯ್ದೆಯಡಿ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಪಾಚಾಣಿ, ಉಳುವಾರು ಸೇರಿದಂತೆ ವಿವಿಧ ಹೊಳೆಗಳಿಂದ ಅವಿರತವಾಗಿ ನಡೆಯುತ್ತಿರುವ ಮರಳು ಲೂಟಿಯನ್ನು ತಡೆಯಲು ಇನ್ಸ್‌ಪೆಕ್ಟರ್ ಬೈಜು ಕೆ. ಥೋಮಸ್ ನೇತೃತ್ವದ ತಂಡ ಈ ಮುನ್ನೆಚ್ಚರಿಕೆ ನೀಡಿದೆ. ​ದಂಧೆಕೋರರನ್ನು ಕೇವಲ ಬಂಧಿಸುವುದಷ್ಟೇ ಅಲ್ಲದೆ, ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗುವುದು. ಒಂದು ವೇಳೆ ಗಡಿಪಾರು ಆದೇಶ ಉಲ್ಲಂಘಿಸಿದರೆ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲು…

Read More

ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಕನಿಲ: ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಏಪ್ರಿಲ್ 18ರಿಂದ 23ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಏಪ್ರಿಲ್ 26ರಿಂದ ಮೇ 3ರವರೆಗೆ ಭರಣಿ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಇಂದು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು. ಅಸ್ತ್ರ ಗ್ರೂಪ್ ಮಾಲಕ, ನಿರ್ಮಾಪಕ ಹಾಗೂ ನಟ ಲಂಚುಲಾಲ್ ಕೆ.ಎಸ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ಕುದುರು, ಜೀರ್ಣೋದ್ಧಾರ ಸಮಿತಿಯ…

Read More

ಉದ್ಯಾವರದಲ್ಲಿ ಜೈ ವೀರ ಮಾರುತಿ ವ್ಯಾಯಾಮಶಾಲೆಯ 31ನೇ ಭಜನೋತ್ಸವ

ಉದ್ಯಾವರ: ಶ್ರೀ ಅರಸು ಮಂಜಿಷ್ಣಾರ್ ಕೃಪಾ ಜೈ ವೀರ ಮಾರುತಿ ವ್ಯಾಯಾಮಶಾಲೆಯ ವತಿಯಿಂದ 31ನೇ ವಾರ್ಷಿಕ ಭಜನೋತ್ಸವವು ಮಾರ್ಚ್ 28 ಮತ್ತು 29ರಂದು ಭಕ್ತಿಭಾವದಿಂದ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.ಮಾರ್ಚ್ 28ರಂದು ಸಂಜೆ 6:40ಕ್ಕೆ ಶ್ರೀ ಶಂಭು ನಂಬೂದಿರಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಭಕ್ತಿಗೀತೆಗಳೊಂದಿಗೆ ಭಜನೆ ನಡೆಯಲಿದೆ. ಮಾರ್ಚ್ 29ರಂದು ಮಧ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತರಿಗೆ ಪ್ರಸಾದ…

Read More

ಮಲಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹ: ಕಾಸರಗೋಡಿನಲ್ಲಿ ದುಂಡುಮೇಜಿನ ಪರಿಷತ್ತು

ಕಾಸರಗೋಡು: ಮಲಯಾಳಂ ಭಾಷಾ ಮಸೂದೆ–2025ರಲ್ಲಿ ಕನ್ನಡ ಭಾಷಾ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಮಾರ್ಚ್ 28ರಂದು ದುಂಡುಮೇಜಿನ ಪರಿಷತ್ತು ನಡೆಯಲಿದೆ. ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆಗೆ ಸಂಬಂಧಿಸಿದಂತೆ ಕನ್ನಡಿಗರ ಹಕ್ಕುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಕಾಸರಗೋಡು ಭಾಗದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳು ಒಗ್ಗೂಡಿ ಮನವಿಯನ್ನು ಸಿದ್ಧಪಡಿಸಿ, ಸಹಿ ಸಂಗ್ರಹ ಅಭಿಯಾನ ಆರಂಭಿಸಲು ತೀರ್ಮಾನಿಸಲಾಗಿದೆ. ಮುಂದಿನ ಕೇರಳ ವಿಧಾನಸಭಾ ಚುನಾವಣೆಯ ಬಳಿಕ ಆಯ್ಕೆಯಾಗುವ…

Read More

ಕಾಸರಗೋಡಿನಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ: ಮಾರ್ಚ್ 28ರಂದು ಮಕ್ಕಳ ಕಲರವ

ಕಾಸರಗೋಡು: ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುತ್ತಾ ಬಂದಿರುವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಮಾರ್ಚ್ 28ರಂದು ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯೋತ್ಸವ ಜರಗಲಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ನೇತೃತ್ವದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ಈ ಉತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಸಂಜೆ 4 ಗಂಟೆಗೆ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸಚಿನ್…

Read More

ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ; ಹೋಟೆಲ್ ಕಾರ್ಮಿಕ ಸಾವು

​ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಹೊಸಂಗಡಿ ಎಕ್ಸಿಟ್ ಪಾಯಿಂಟ್ ಬಳಿ ಗುರುವಾರ ಮಧ್ಯಾಹ್ನ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಯಾಬಜಾರ್‌ನ ಯು.ಕೆ. ಫ್ಲಾಟ್ ನಿವಾಸಿ ಇಮಾನುಲ್ಲಾ (19) ಸಾವನ್ನಪ್ಪಿದ ದುರ್ದೈವಿ.ಮೃತ ಯುವಕ ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವನಾಗಿದ್ದು, ಸ್ಥಳೀಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಹೊಸಂಗಡಿ ಜಂಕ್ಷನ್ ಬಳಿ ಚಲಿಸುತ್ತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಮಾನುಲ್ಲಾ ಅವರನ್ನು ತಕ್ಷಣ…

Read More

​ಜಿಲ್ಲಾ ಮತದಾರರ ಪಟ್ಟಿ ಪ್ರಕಟ: ಮಂಜೇಶ್ವರದಲ್ಲಿ 2.30 ಲಕ್ಷ ಮತದಾರರು

​ಮಂಜೇಶ್ವರ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಧಿಕೃತ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಮಂಜೇಶ್ವರ ಕ್ಷೇತ್ರವು ಅತಿ ಹೆಚ್ಚು ಅಂದರೆ 2,30,113 ಮತದಾರರನ್ನು ಒಳಗೊಂಡಿದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರ ಪ್ರಾಬಲ್ಯ ಎದ್ದು ಕಾಣುತ್ತಿದೆ. ​ ಉದುಮ ಕ್ಷೇತ್ರದಲ್ಲಿ ಗರಿಷ್ಠ 2,58,512 ಮತದಾರರಿದ್ದು, ಇಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೊಸದುರ್ಗದಲ್ಲಿ 2,23,980 ಹಾಗೂ ಕಾಸರಗೋಡು ಕ್ಷೇತ್ರದಲ್ಲಿ 2,10,923 ಮತದಾರರಿದ್ದಾರೆ. ತೃಕರಿಪುರದಲ್ಲಿ ಕನಿಷ್ಠ 2,10,090 ಮತದಾರರು ನೋಂದಾಯಿಸಿಕೊಂಡಿದ್ದಾರೆ.​ವಿಶೇಷವೆಂದರೆ ಉದುಮ, ಹೊಸದುರ್ಗ ಮತ್ತು ತೃಕರಿಪುರ ಕ್ಷೇತ್ರಗಳಲ್ಲಿ ಒಟ್ಟು 12 ಮಂಗಳಮುಖಿ ಮತದಾರರು…

Read More

ಶಾಹುಲ್ ಹಮೀದ್ ತಂಗಳ್ ಸ್ಮರಣಾರ್ಥ ಪ್ರಾರ್ಥನಾ ಸಭೆ

ದುಬೈ ಮಲಬಾರ್ ಕಲಾಸಾಂಸ್ಕೃತಿಕ ವೇದಿಕೆ ವತಿಯಿಂದ ಕಾಸರಗೋಡು ಮೂಲದ ಖ್ಯಾತ ಸಮಾಜಸೇವಕ ಶಾಹುಲ್ ಹಮೀದ್ ತಂಗಳ್ ಅವರ ಸ್ಮರಣಾರ್ಥ ಪ್ರಾರ್ಥನಾ ಸಭೆಯನ್ನು ಕುಂಬಳೆ ರಾಯಲ್ ಖುಬಾ ರೆಸ್ಟೋರಂಟ್‌ನಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಸಿ. ಕಮರುದ್ದೀನ್ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಅವರು, ಕುಂಬಳ ಸಾರ್ವಜನಿಕ ಕ್ಷೇತ್ರದಲ್ಲಿ ಶಾಹುಲ್ ಹಮೀದ್ ತಂಗಳ್ ನಿಸ್ವಾರ್ಥ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಅವರ ಅಕಾಲಿಕ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. ಪ್ರಾರ್ಥನಾ ಸಭೆಗೆ ಸಯ್ಯಿದ್ ಯಾಹಿಯ ತಂಗಳ್…

Read More

ಕಾಸರಗೋಡಿನ ಕನ್ನಡ ಭವನ ಗದಗ ಘಟಕ ಪದಗ್ರಹಣ ಕಾರ್ಯಕ್ರಮ ಯಶಸ್ವಿ

ಕಾಸರಗೋಡಿನ ಕನ್ನಡ ಭವನ, ಗ್ರಂಥಾಲಯ (ರಿ) ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಶಿರಹಟ್ಟಿಯ ಫಕೀರೇಶ್ವರ ನಗರದ ಎಚ್.ಎಂ. ದೇವಗಿರಿ ಅವರ ನಿವಾಸದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಸಂಗಮೇಶ ತಮ್ಮನಗೌಡ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೊಸ ಪದಾಧಿಕಾರಿಗಳನ್ನು ಅಧಿಕೃತವಾಗಿ ಘೋಷಿಸಲಾಯಿತು. ಡಾ. ಸಂಗಮೇಶ ತಮ್ಮನಗೌಡ್ರ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಪೂಜ್ಯಶ್ರೀ ಶಾಂತಲಿಂಗ ಮಹಾಸ್ವಾಮೀಜಿಗಳು ಹಾಗೂ ಪೂಜ್ಯಶ್ರೀ ರಮೇಶ ಮಹಾಸ್ವಾಮಿಗಳು ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ರತ್ನಾ ಗಿರೋಸಾ ಬದಿ, ಕಾರ್ಯದರ್ಶಿಯಾಗಿ ಸುಭಾಷ್…

Read More
error: Content is protected !!