ಮಂಜೇಶ್ವರ ಕ್ಷೇತ್ರದಲ್ಲಿ ಸುರೇಂದ್ರನ್ ಪರ ರಾಜೇಶ್ ನಾಯ್ಕ್ ಮತಯಾಚನೆ

ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಅವರ ಪರವಾಗಿ ಮತ ನೀಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾ.26 ರಂದು ಗುರುವಾರ ಬೆಳಿಗ್ಗೆಯಿಂದ ವರ್ಕಾಡಿ ಗ್ರಾ.ಪಂ‌.ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು.ಬಂಟ್ವಾಳ ವಿಧಾನಸಭಾ ಕ್ಷೇತ್ರದ ಹತ್ತಿರದ ಕ್ಷೇತ್ರವಾಗಿರುವ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ವರ್ಕಾಡಿ ಗ್ರಾಮದಲ್ಲಿರುವ ವರ್ಕಾಡಿ ಬಿಜೆಪಿ ಕಚೇರಿಗೆ ಬೇಟಿ ನೀಡಿದ ಅವರು ಕಾರ್ಯಕರ್ತರ ಜೊತೆ ಚರ್ಚಿಸಿದರು. ಬಳಿಕ ಕಾರ್ಯಕರ್ತರ ಜೊತೆಗೆ ತೆರಳಿದ ಅವರು ಮತದಾರರ ಮನವೊಲಿಸಿ ಮತನೀಡುವಂತೆ ಮನವಿ ಮಾಡಿದರು. ಬಿಜೆಪಿ…

Read More

28ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

ಕಾಸರಗೋಡು: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ ಮಾರ್ಚ್ 28ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರಗಲಿದೆ. ಅಪರಾಹ್ನ 2.30ಕ್ಕೆ ಚುಟುಕು ಸಾಹಿತ್ಯ ಪರಿಷತ್ ಕೇಂದ್ರಸಮಿತಿ ಪ್ರಧಾನ ಸಂಚಾಲಕ ಡಾ. ಎಂ.ಜಿ.ಆರ್ ಅರಸ್ ಮೈಸೂರು ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸುವರು. ರಾಧಾಕೃಷ್ಣ. ಕೆ. ಉಳಿಯತಡ್ಕ ದಿಕ್ಸೂಚಿ…

Read More

ಮಂಜೇಶ್ವರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ನಾಮಪತ್ರ ಹಿಂಪಡೆದು, ಪಕ್ಷದ ಸ್ಥಾನಗಳಿಗೆ ರಾಜೀನಾಮೆ

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿದ್ದ ಕೆಎಂ ಅಶ್ರಫ್ ಅವರು ತಮ್ಮ ನಾಮನಿರ್ದೇಶನ ಪತ್ರಿಕೆಯನ್ನು ಹಿಂಪಡೆದಿದ್ದಾರೆ. ಗುರುವಾರ ಬೆಳಿಗ್ಗೆ ಉಪ್ಪಳದಲ್ಲಿ ಎಸ್‌ಡಿಪಿಐ ರಾಜ್ಯ ಅಧ್ಯಕ್ಷ ಲತೀಫ್ ಅವರ ಸಾನ್ನಿಧ್ಯದಲ್ಲಿ ನಡೆದ ಸಭೆಯಲ್ಲಿ ಈ ವಿಚಾರದ ಬಗ್ಗೆ ತೀವ್ರ ಚರ್ಚೆಗಳು ನಡೆದಿರುವುದಾಗಿ ತಿಳಿದುಬಂದಿದೆ. ಸಭೆಯಿಂದ ಹೊರಬಂದ ಬಳಿಕ ಮಧ್ಯಾಹ್ನ ವೇಳೆಗೆ ಅಶ್ರಫ್ ಅವರು ಕಲೆಕ್ಟರೇಟ್‌ಗೆ ತೆರಳಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಪಕ್ಷದ ಅಭ್ಯರ್ಥಿತ್ವ ಹಿಂಪಡೆಯುವ ವಿಚಾರವಾಗಿ ನಡೆದ ಸಭೆಯಲ್ಲಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು ಎನ್ನಲಾಗುತ್ತಿದೆ. “ಪಕ್ಷದ ಸೂಚನೆಯ ಮೇರೆಗೆ…

Read More

ಕಾಸರಗೋಡು: ಅನಧಿಕೃತ ಮರಳು ಸಾಗಾಟ – ಟಿಪ್ಪರ್ ಚಾಲಕ, ಮಾಲೀಕ ಬಂಧನ

ಕಾಸರಗೋಡು: ಅನಧಿಕೃತವಾಗಿ ನದಿ ಮರಳನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕ ಮತ್ತು ಮಾಲೀಕರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ನದಿ ತೀರ ಪ್ರದೇಶಗಳಲ್ಲಿ ಮರಳು ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಕುಂಬಳ ಇನ್‌ಸ್ಪೆಕ್ಟರ್ ಬೈಜು ಕೆ ಜೋಸ್ ಅವರ ಸೂಚನೆಯಂತೆ ಎಸ್‌ಐಗಳಾದ ಕೆ ಸನಿತ್ ಹಾಗೂ ಅನಂತಕೃಷ್ಣನ್ ಆರ್ ಮೇನನ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ….

Read More

ಕೇರಳ ಜಲ ಪ್ರಾಧಿಕಾರದ ಎಡವಟ್ಟು: ಸಂಪರ್ಕ ಕಡಿತವಾದರೂ ಗ್ರಾಹಕನಿಗೆ ಸಾವಿರಾರು ರೂಪಾಯಿ ಬಿಲ್

ಮಂಜೇಶ್ವರ: ಕೇರಳ ಜಲ ಪ್ರಾಧಿಕಾರದ ಆಡಳಿತಾತ್ಮಕ ದೋಷವೊಂದು ಇದೀಗ ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ನೀರಿನ ಸಂಪರ್ಕವನ್ನು ಅಧಿಕೃತವಾಗಿ ಕಡಿತಗೊಳಿಸಿ, ಬಾಕಿ ಮೊತ್ತವನ್ನೂ ಸಂಪೂರ್ಣವಾಗಿ ಪಾವತಿಸಿದ ಬಳಿಕವೂ ಗ್ರಾಹಕನೊಬ್ಬನಿಗೆ ಸಾವಿರಾರು ರೂಪಾಯಿ ಬಿಲ್ ಕಳುಹಿಸಿರುವ ಘಟನೆ ಮಂಜೇಶ್ವರದಲ್ಲಿ ಬೆಳಕಿಗೆ ಬಂದಿದೆ. ಮಂಜೇಶ್ವರ ಚೌಕಿ ನಿವಾಸಿ, ದೃಶ್ಯ ಮಾಧ್ಯಮ ಕ್ಯಾಮರಾಮನ್ ಮೊಹಮ್ಮದ್ ಹನೀಫ್ ಈ ಸಮಸ್ಯೆಗೆ ಒಳಗಾದ ಗ್ರಾಹಕರಾಗಿದ್ದಾರೆ. ಹನೀಫ್ ಅವರು ನಿಯಮಾನುಸಾರವಾಗಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಇಲಾಖೆಗೆ ಅರ್ಜಿ ಸಲ್ಲಿಸಿ, ಅಂದಿನವರೆಗೆ ಬಾಕಿ ಇದ್ದ ಸಂಪೂರ್ಣ ಮೊತ್ತವನ್ನು ಪಾವತಿಸಿದ್ದರು….

Read More

ಮಂಜೇಶ್ವರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಸಾಧ್ಯತೆ: ರಾಜಕೀಯ ವಲಯದಲ್ಲಿ ಚರ್ಚೆ

ಮಂಜೇಶ್ವರ: ತ್ರಿಕೋಣ ಸ್ಪರ್ಧೆ ನಡೆಯುತ್ತಿರುವ ಮಂಜೇಶ್ವರ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಕೆ.ಎಂ. ಅಶ್ರಫ್ ಅವರು ಇಂದು ತಮ್ಮ ನಾಮಪತ್ರವನ್ನು ಹಿಂಪಡೆಯುವ ಸಾಧ್ಯತೆ ಇರುವುದಾಗಿ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ. ಒಟ್ಟು 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವ ಈ ಕ್ಷೇತ್ರದಲ್ಲಿ, ಎಸ್‌ಡಿಪಿಐ ಸ್ಪರ್ಧೆ ಮುಂದುವರಿಸಿದರೆ ಅದು ಬಿಜೆಪಿಗೆ ಲಾಭವಾಗಬಹುದು ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಅಭ್ಯರ್ಥಿತ್ವ ಹಿಂಪಡೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಎಸ್‌ಡಿಪಿಐ ಮಂಜೇಶ್ವರದಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಸಂಘಟನೆಯೊಳಗೂ ಎರಡು ಭಿನ್ನ ಅಭಿಪ್ರಾಯಗಳು ಇರುವುದಾಗಿ ಹೇಳಲಾಗುತ್ತಿದೆ. ಇದಲ್ಲದೆ, ಮುಸ್ಲಿಂ…

Read More

ರಾಮನವಮಿ ಪ್ರಯುಕ್ತ ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್

ರಾಮನವಮಿ ಹಬ್ಬದ ಪ್ರಯುಕ್ತ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಮಂಜೇಶ್ವರ ಕಣ್ವತೀರ್ಥ ಮಠದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು. ಜೊತೆಗೆ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ.ಎಂ., ಮುಖಂಡರಾದ ಯಾದವ ಬಡಾಜೆ, ಕಾರ್ತಿಕ್ ಶೆಟ್ಟಿ, ಕುಂಜತೂರು ಸುರೇಶ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು….

Read More

ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಹರಿಕಥಾ ಸಪ್ತಾಹ:ಇಂದುಎರಡನೇ ದಿನದ ಕಾರ್ಯಕ್ರಮ

ಹೊಸಂಗಡಿ: ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ನಡೆಯುತ್ತಿರುವ ಹರಿಕಥಾ ಸಪ್ತಾಹದ ಅಂಗವಾಗಿ ಇಂದು (ಮಾ. 26, ಗುರುವಾರ) ಸಂಜೆ 6:00 ಗಂಟೆಗೆ ಎರಡನೇ ದಿನದ ಕಾರ್ಯಕ್ರಮ ಜರುಗಲಿದೆ. ಈ ದಿನದ ಪ್ರಮುಖ ಆಕರ್ಷಣೆಯಾಗಿ ಹರಿದಾಸ ಜಯಾನಂದ ಹೊಸದುರ್ಗ ಅವರು ‘ಸತ್ಯದಾಸ ಸಾವಿತ್ರಿ’ ಎಂಬ ಹರಿಕಥೆಯನ್ನು ಪ್ರಸ್ತುತಪಡಿಸಲಿದ್ದಾರೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಸಾರುವ ಈ ಹರಿಕಥಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಕಲಾಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

Read More

ಕಾಸರಗೋಡು: ಅನಂಗೂರ್ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಧರ್ಮ ನೇಮ ಏಪ್ರಿಲ್ 5ರಂದು

ಕಾಸರಗೋಡು ನಗರದ ಸಮೀಪದ ನುಳ್ಳಿಪ್ಪಾಡಿಯ ಪಿ.ಎಂ.ಎಸ್. ರಸ್ತೆಯಲ್ಲಿರುವ ಅನಂಗೂರ್ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಧರ್ಮ ನೇಮ ಕಾರ್ಯಕ್ರಮವು ಈ ಬಾರಿ ಏಪ್ರಿಲ್ 5, ಭಾನುವಾರ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಮಾರ್ಚ್ 27, 2026ರಂದು ತಂಬಿಲ ಸೇವೆ ನಡೆಯಲಿದ್ದು, ಏಪ್ರಿಲ್ 4 ಶನಿವಾರ ಸಂಜೆ 7ಕ್ಕೆ ಗುಳಿಗನ ಕೋಲ ಹಾಗೂ ರಾತ್ರಿ 8ಕ್ಕೆ ಯಕ್ಷಗಾನ ಬಯಲಾಟ ಏರ್ಪಡಿಸಲಾಗಿದೆ. ಏಪ್ರಿಲ್ 5 ಭಾನುವಾರ ಬೆಳಿಗ್ಗೆ 9ರಿಂದ ಧೂಮಾವತಿ ದೈವ ಕೋಲ ಮತ್ತು ಅನ್ನಸಂತರ್ಪಣೆ ನಡೆಯಲಿದ್ದು, ಮಧ್ಯಾಹ್ನ…

Read More

ಅಶ್ರಫ್ ವಿರುದ್ಧ ಸುರೇಂದ್ರನ್ ದೂರು: ಭರತ್ ಶೆಟ್ಟಿ ಕುರಿತು ವಿವಾದಾತ್ಮಕ ಹೇಳಿಕೆ

ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿರುವ ನಡುವೆ, ಶಾಸಕ ಹಾಗೂ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ವಿರುದ್ಧ ಎನ್‌ಡಿಎ ಅಭ್ಯರ್ಥಿ ಕೆ ಸುರೇಂದ್ರನ್ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕದ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಪ್ರಚೋದನಕಾರಿ ಹಾಗೂ ಮತೀಯ ವಿಭಜನೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಂಜೇಶ್ವರ ಕ್ಷೇತ್ರದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಆಗಮಿಸಿದ್ದ ಭರತ್ ಶೆಟ್ಟಿ ಕುರಿತು ಈ ಹೇಳಿಕೆ ನೀಡಲಾಗಿದೆ ಎನ್ನಲಾಗಿದೆ. ಎಕೆಎಂ ಅಶ್ರಫ್ ಯೂಟ್ಯೂಬ್ ಚಾನೆಲ್ ವೊಂದಕ್ಕೆ…

Read More
error: Content is protected !!