ಮಂಜೇಶ್ವರ ಎಕ್ಸೈಸ್ ಚೆಕ್ಪೋಸ್ಟ್ನಲ್ಲಿ ಭರ್ಜರಿ ಬೇಟೆ: 595.68 ಗ್ರಾಂ ಚಿನ್ನದೊಂದಿಗೆ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ
ಮಂಜೇಶ್ವರ: ಮಂಜೇಶ್ವರ ಎಕ್ಸೈಸ್ ಚೆಕ್ಪೋಸ್ಟ್ನಲ್ಲಿ ನಡೆಸಿದ ವಾಹನ ತಪಾಸಣೆಯ ವೇಳೆ, ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 595.68 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪಶ್ಚಿಮ ಬಂಗಾಳ ಮೂಲದ ಸುರ್ಜಿತ್ ಖೋರಾಯ್ ಎಂಬಾತನನ್ನು ಎಕ್ಸೈಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ (KA 19 F 3416) ಈತ ಚಿನ್ನವನ್ನು ಸಾಗಿಸುತ್ತಿದ್ದನು. ಖಚಿತ ಮಾಹಿತಿಯ ಮೇರೆಗೆ ತಪಾಸಣೆ ನಡೆಸಿದ ಮಂಜೇಶ್ವರ ಎಕ್ಸೈಸ್ ಚೆಕ್ಪೋಸ್ಟ್ ಸರ್ಕಲ್ ಇನ್ಸ್ಪೆಕ್ಟರ್ ಜೋಸೆಫ್ ಪಿ.ಎ. ಮತ್ತು ಅವರ…
