ಯುಡಿಎಫ್ ಬಜೆಟ್: ಕಾಸರಗೋಡಿಗೆ ವಿಶೇಷ ಪ್ಯಾಕೇಜ್; ಎಂಡೋಸಲ್ಫಾನ್ ಸಂತ್ರಸ್ತರಿಗೆ ಭರವಸೆ

​ ಕಾಸರಗೋಡು : ಹತ್ತು ವರ್ಷಗಳ ಬಳಿಕ ಅಧಿಕಾರಕ್ಕೆ ಮರಳಿದ ಯುಡಿಎಫ್ ಸರ್ಕಾರ, ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ನೇತೃತ್ವದಲ್ಲಿ ಮಹತ್ವಾಕಾಂಕ್ಷೆಯ ಚೊಚ್ಚಲ ಬಜೆಟ್ ಮಂಡಿಸಿದೆ. ರಾಜ್ಯದ ಹಿಂದುಳಿದ ಜಿಲ್ಲೆಗಳಾದ ಕಾಸರಗೋಡು, ವಯನಾಡು ಮತ್ತು ಇಡುಕ್ಕಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ವಿಶೇಷವಾಗಿ ಕಾಸರಗೋಡಿನ ಎಂಡೋಸಲ್ಫಾನ್ ಸಂತ್ರಸ್ತರ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದ್ದು, ವೈದ್ಯಕೀಯ ಕಾಲೇಜು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ​ಸಾಮಾಜಿಕ ಭದ್ರತೆಗೆ ಒತ್ತು ನೀಡಿದ ಬಜೆಟ್‌ನಲ್ಲಿ, ‘ಉಮ್ಮನ್ ಚಾಂಡಿ ಆರೋಗ್ಯ ವಿಮೆ’…

Read More

ವಿ.ಡಿ. ಸತೀಶನ್ ಮಂಡಿಸಿದ ಬಜೆಟ್‌ನಲ್ಲಿ ಜಿಲ್ಲೆಗೆ ನಿರಾಶೆಯಷ್ಟೇ ಬಾಕಿ: ಎಂ.ಎಲ್. ಅಶ್ವಿನಿ

ಕಾಸರಗೋಡು: 13 ವರ್ಷಗಳಾಗುತ್ತಾ ಬಂದರೂ ನಿರ್ಮಾಣ ಕಾರ್ಯ ಪೂರ್ಣಗೊಳ್ಳದ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸಂಪೂರ್ಣವಾಗಿ ಸುಸಜ್ಜಿತಗೊಳಿಸಲು ಯಾವುದೇ ಅನುದಾನ ನೀಡದೆ, ದಕ್ಷಿಣ ಕೇರಳದಲ್ಲಿ ಹೊಸದಾಗಿ ಎರಡು ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿರುವುದು ಜಿಲ್ಲೆಯ ಬಗ್ಗೆ ಯು.ಡಿ.ಎಫ್. ಸರ್ಕಾರಕ್ಕಿರುವ ಕಡೆಗಣನೆಗೆ ಸ್ಪಷ್ಟ ಪುರಾವೆಯಾಗಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ವಲಯದಲ್ಲಾಗಲಿ ಅಥವಾ ಖಾಸಗಿ ವಲಯದಲ್ಲಾಗಲಿ ಒಂದೇ ಒಂದು ವೈದ್ಯಕೀಯ ಕಾಲೇಜು ಇಲ್ಲದಿರುವಾಗ, ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಸರ್ಕಾರವೊಂದು ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡುತ್ತಿರುವುದು ತರ್ಕಕ್ಕೆ ನಿಲುಕದ…

Read More

ಹರಿತ ಕರ್ಮ ಸೇನಾ ಕಾರ್ಯಕರ್ತರು ಮನೆ ಮನೆಗಳಿಂದ ಹಣ ಪಡೆದು ಸಂಗ್ರಹಿಸುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ದಾರಿ ಮಧ್ಯೆಯೇ ಉಪೇಕ್ಷಿಸುತ್ತಿರುವುದಾಗಿ ಆರೋಪ: ಆತಂಕದಲ್ಲಿ ಸಾರ್ವಜನಿಕರು

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ಹರಿತ ಕರ್ಮ ಸೇನೆ’ಯ ಹೆಸರಿನಲ್ಲಿ ಮನೆಗಳಿಂದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವವರು, ಸಾರ್ವಜನಿಕರ ಹಿತದೃಷ್ಟಿಯನ್ನು ಮರೆತು ದಾರಿ ಮಧ್ಯೆಯೇ ತ್ಯಾಜ್ಯಗಳನ್ನು ಎಸೆದು ಹೋಗುತ್ತಿರುವ ಘಟನೆಗಳು ವರದಿಯಾಗುತ್ತಿದ್ದು, ಇದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಹರಿತ ಕರ್ಮ ಸೇನೆಯವರು ಪ್ರತಿ ಮನೆಗಳಿಂದ 50 ರೂಪಾಯಿ ಶುಲ್ಕ ಪಡೆದು ತ್ಯಾಜ್ಯವನ್ನು ಸಂಗ್ರಹಿಸುತ್ತಾರೆ. ಆದರೆ, ನಿಗದಿತ ಸ್ಥಳಕ್ಕೆ ತ್ಯಾಜ್ಯವನ್ನು ಸಾಗಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು, ದಾರಿ ಮಧ್ಯೆಯೇ ಅದನ್ನು…

Read More

ಪ್ರತಿ ಮನೆಯಲ್ಲೂ ಗ್ರಂಥಾಲಯವಿರಬೇಕು.. ಡಾ. ವಾಮನ್ ರಾವ್ ಬೇಕಲ್

ಕಾಸರಗೋಡು : ನಗರದ ಬಿ. ಇ. ಎಮ್ ಪ್ರೌಢ ಶಾಲಾ ಅಧ್ಯಾಪಕ, ವಿದ್ಯಾರ್ಥಿಗಳಿಂದ “. ವಾಚನ ವಾರಾಚಾರಣೆಯ ಪ್ರಯುಕ್ತ ಜೀವನದಲ್ಲಿ ಪುಸ್ತಕದ ಪ್ರಸಕ್ತಿ “ಎಂಬ ಕಾರ್ಯಕ್ರಮದ ಬಾಗವಾಗಿ ವಿಚಾರ ಗೋಷ್ಠಿ ನಡೆಯಿತು. ನಗರದ ನುಳ್ಳಿಪ್ಪಾಡಿಯ ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಮುಖ್ಯ ಅತಿಥಿಯಾಗಿ ಆಗಮಿಸಿ ವಿಚಾರ ಮಂಡನೆ ಮಾಡಿದರು. ವಿದ್ಯಾಭ್ಯಾಸಕ್ಕಾಗಿ ಓದುವ ಪುಸ್ತಕಗಳೊಂದಿಗೆ, ಶ್ರೇಷ್ಠ ಜ್ಞಾನ ಪ್ರಾಪ್ತಿಗಾಗಿ ವಿದ್ವತ್ ಪುಸ್ತಕ ಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿ ಮನೆಯಲ್ಲಿ ಪುಟ್ಟ…

Read More

ಕನ್ನಡ ಭವನದಿಂದ ವಿದ್ಯಾರ್ಥಿ ಹಾಗೂ ಅಧ್ಯಾಪಕರಿಗೆ ಪ್ರತಿಭಾ ಪುರಸ್ಕಾರಕ್ಕೆ ಅಹ್ವಾನ.

ಕಾಸರಗೋಡು : ಕಾಸರಗೋಡು ಜಿಲ್ಲೆ ಹಾಗೂ ಕೇರಳ ರಾಜ್ಯದ ರಾಮಕ್ಷತ್ರಿಯ ಸಮಾಜದ ಕಳೆದ ವಾರ್ಷಿಕ ಎಸ್. ಎಸ್. ಎಲ್. ಸಿ. ಹಾಗೂ ಪಿ. ಯು. ಸಿ. ಪರೀಕ್ಷೆಗಳಲ್ಲಿ 90.ಯಾ ಅಧಿಕ ಅಂಕ ಗಳಿಸಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಬಾನ್ವಿತ ವಿದ್ಯಾರ್ಥಿಗಳಿಗೆ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಸಾರತ್ಯದ “ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಪಾಂಗೋಡು…

Read More

ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ ಪ್ರತಿನಿಧಿಗಳ 10ನೇ ಮಹಾಮೇಳ, ಕಾಸರಗೋಡಿನಿಂದ ಸೋಲಾಪುರಕ್ಕೆ ಕನ್ನಡ ಯಾತ್ರೆ

ಕೇರಳ ರಾಜ್ಯದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಪರಂಪರೆಯನ್ನು ರಾಜ್ಯ ಅಂತರ ರಾಜ್ಯದಾದ್ಯಂತ ದೇಶ ವಿದೇಶಗಳಲ್ಲಿ ಪ್ರಚಾರ ಪಡಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ 1990 ರಲ್ಲಿ ಸ್ಥಾಪನೆಗೊಂಡಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕಾಸರಗೋಡು ಇದರ ಆಶ್ರಯದಲ್ಲಿ ಸಾಂಸ್ಕೃತಿಕ ವಿನಿಮಯಕ್ಕಾಗಿ ಐತಿಹಾಸಿಕ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ -ಕರ್ನಾಟಕ ಉತ್ಸವ, ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7 ಮತ್ತು 8ರಂದು ಹಮ್ಮಿಕೊಳ್ಳಲಾಗಿದೆ.ಈ…

Read More

ರವಿ ನಾಯ್ಕಾಪು ಅವರಿಗೆ ನಿರೂಪಣಾ ಕೌಸ್ತುಭ ಪ್ರಶಸ್ತಿ : 28 ಕ್ಕೆ ಮುಂಬಯಿಯಲ್ಲಿ ಪ್ರದಾನ

ಕಾಸರಗೋಡು : ನಿರೂಪಕ, ಸಂಘಟಕ, ಲೇಖಕ ರವಿ ನಾಯ್ಕಾಪು ಅವರಿಗೆ ‘ನಿರೂಪಣಾ ಕೌಸ್ತುಭ’ ಪ್ರಶಸ್ತಿಯ ಗರಿ. ನಿರೂಪಣಾ ಕ್ಷೇತ್ರದ ಅವರ ಬಹುಮುಖ ಸಾಧನೆ, ಸಾಮರ್ಥ್ಯವನ್ನು ಪರಿಗಣಿಸಿ ಮುಂಬಯಿಯ ಅಂಧೇರಿ ಕರ್ನಾಟಕ ಸಂಘವು ಈ ಪ್ರಶಸ್ತಿ ಘೋಷಿಸಿದೆ. ಈ ತಿಂಗಳ 28 ರಂದು ಅಂಧೇರಿ ಕರ್ನಾಟಕ ಸಂಘದ ಆಶ್ರಯದಲ್ಲಿ ಮುಂಬಯಿಯ ಕುರ್ಲಾ ಬಂಟರ ಭವನದಲ್ಲಿ ಜರಗಲಿರುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ 2026 ಕಾರ್ಯಕ್ರಮದಲ್ಲಿ ಈ ಪ್ರತಿಷ್ಟಿತ ಪ್ರಶಸ್ತಿ ಪ್ರದಾನ ಮಾಡುವುದಾಗಿ ಸಂಘದ ಸಂಸ್ಥಾಪಕರಾಗಿರುವ ಕೃಷ್ಣ.ಬಿ. ಶೆಟ್ಟಿ ಅವರು…

Read More

ದೇವಸ್ಥಾನದ ಭೂಮಿಯ ತೆರಿಗೆ ಪಾವತಿಗೆ ಲಂಚ ಪಡೆಯುತ್ತಿದ್ದ ಗ್ರಾಮ ಕಚೇರಿ ಸಿಬ್ಬಂದಿ ವಿಜಿಲೆನ್ಸ್ ಬಲೆಗೆ

​ ಮಂಜೇಶ್ವರ :: ದೇವಸ್ಥಾನಕ್ಕೆ ಭಕ್ತರೊಬ್ಬರು ದಾನವಾಗಿ ನೀಡಿದ ಭೂಮಿಯನ್ನು ಸಮಿತಿಯ ಹೆಸರಿಗೆ ವರ್ಗಾಯಿಸಿ, ತೆರಿಗೆ ಪಾವತಿಸಲು ಸಹಾಯ ಮಾಡುವುದಾಗಿ ನಂಬಿಸಿ ಲಂಚ ಪಡೆಯುತ್ತಿದ್ದ ಉಪ್ಪಳ ಗ್ರೂಪ್ ಗ್ರಾಮ ಕಚೇರಿಯ ಕ್ಯಾಶುಯಲ್ ಸ್ವೀಪರ್ ಓರ್ವನನ್ನು ಕಾಸರಗೋಡು ವಿಜಿಲೆನ್ಸ್ ತಂಡವು ಕೈಯಾರೆ ಬಂಧಿಸಿದೆ. ಕೊಡಿಬೈಲ್ ನಿವಾಸಿ ಶಿವಪ್ರಸಾದ್ ಕೆ. ಬಂಧಿತ ಆರೋಪಿ. ​ಮಂಗಲ್ಪಾಡಿ ಯ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು ಭೂಮಿಯ ವರ್ಗಾವಣೆ ಮತ್ತು ತೆರಿಗೆ ಪಾವತಿಗಾಗಿ ಒಂದು ತಿಂಗಳ ಹಿಂದೆ ಉಪ್ಪಳ ಗ್ರಾಮ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ತೆರಿಗೆ…

Read More

ವಿಟ್ಲದಲ್ಲಿ ದಾರುಣ ಘಟನೆ: ಲಾರಿ ದುರಸ್ತಿ ಮಾಡುವಾಗ ಚಕ್ರದ ಅಡಿಗೆ ಸಿಲುಕಿ ಚಾಲಕ ಸಾವು

​ ಮಂಜೇಶ್ವರ : ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಟಿಪ್ಪರ್ ಲಾರಿ ಚಾಲಕನೊಬ್ಬ ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಅಕ್ರಮ ಬಾಕ್ಸೈಟ್ ಸಾಗಣೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಲಾರಿಯನ್ನು ಸರಿಪಡಿಸಲು ಮಹೇಶ್ ಅವರು ವಾಹನದ ಕೆಳಗೆ ಹೋಗಿ ಕೆಲಸ ಮಾಡುತ್ತಿದ್ದಾಗ, ಅನಿರೀಕ್ಷಿತವಾಗಿ ಲಾರಿ ಮುಂದಕ್ಕೆ ಚಲಿಸಿದೆ. ಪರಿಣಾಮ ಚಾಲಕ…

Read More

ಕಾಸರಗೋಡು ಜಿಲ್ಲೆಗೆ ಹೊಸ ಎಸ್ಪಿ: ಇತಿಹಾಸ ನಿರ್ಮಿಸಿದ ನಿತಿನ್ ರಾಜ್

​ಕಾಸರಗೋಡು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ನಿತಿನ್ ರಾಜ್ ಪಿ. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ಪಿ ಬಿ.ವಿ. ವಿಜಯ್ ಭರತ್ ರೆಡ್ಡಿ ಅವರಿಂದ ಅವರು ಅಧಿಕಾರದ ಹೊಣೆಗಾರಿಕೆಯನ್ನು ವಹಿಸಿಕೊಂಡರು. ​ಈ ನೇಮಕವು ಜಿಲ್ಲೆಯ ಇತಿಹಾಸದಲ್ಲಿ ವಿಶೇಷ ಮಹತ್ವ ಪಡೆದಿದೆ. ಕಾಸರಗೋಡು ಜಿಲ್ಲೆ ಅಸ್ತಿತ್ವಕ್ಕೆ ಬಂದು 44 ವರ್ಷಗಳ ಬಳಿಕ, ಇದೇ ಮೊದಲ ಬಾರಿಗೆ ಸ್ಥಳೀಯರೊಬ್ಬರು ಜಿಲ್ಲೆಯ ಪೊಲೀಸ್ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ರಾವಣೇಶ್ವರಂ ಮೂಲದ ಇವರು ಕಾಞಂಗಾಡು ದುರ್ಗಾ ಹೈಸ್ಕೂಲಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ….

Read More
error: Content is protected !!