ಮಾರ್ಚ್ 23ರಂದು ಎನ್‌ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ನಾಮಪತ್ರ ಸಲ್ಲಿಕೆ

ಕಾಸರಗೋಡು: ಕಾಸರಗೋಡು ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಅವರು ಮಾರ್ಚ್ 23ರಂದು (ಸೋಮವಾರ) ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಪಕ್ಷದ ಹಿರಿಯ ನಾಯಕರು, ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಚುನಾವಣಾ ಚಟುವಟಿಕೆಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ.

Read More

ನಾಮಪತ್ರ ಸಲ್ಲಿಕೆಗೆ ಮುನ್ನ ಪೂಜೆ ಸಲ್ಲಿಸಿದ ಕೆ. ಸುರೇಂದ್ರನ್

ಮಂಜೇಶ್ವರ: 2026ರ ಕೇರಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ಸಂದರ್ಭದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರು ನಾಮಪತ್ರ ಸಲ್ಲಿಸುವ ಮೊದಲು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿರುವ ಕೆ. ಸುರೇಂದ್ರನ್ ಅವರು ಮಂಜೇಶ್ವರ ಕ್ಷೇತ್ರದಲ್ಲಿ ತಮ್ಮ ನಾಮಪತ್ರ ಸಲ್ಲಿಸುವ ಮುನ್ನ ಕುಂಜತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಪಡೆದು ಆಶೀರ್ವಾದ ಪಡೆದ ನಂತರ ಅವರು ಚುನಾವಣಾ…

Read More

ಬಂದಿಯೋಡ್ ರಸ್ತೆ ಬದಿಯಲ್ಲಿ ಮೂಡಿದ ನಯನಮನೋಹರ ದೃಶ್ಯಕ್ಕೆ ಜನರ ಮೆಚ್ಚುಗೆ

ಬಂದಿಯೋಡ್: ನೀಲಿ ಆಕಾಶದ ಹಿನ್ನೆಲೆಯಲ್ಲೇ ಕೆಂಪು ಮತ್ತು ಹಳದಿ ಹೂಗಳಿಂದ ಕಂಗೊಳಿಸುವ ಮರಗಳ ಮನಮೋಹಕ ದೃಶ್ಯ ಇಲ್ಲಿ ಕಣ್ಮನ ಸೆಳೆಯುತ್ತದೆ. ಮೇಲ್ಭಾಗದಲ್ಲಿ ಕೆಂಪು ಹೂಗಳಿಂದ ಅರಳಿರುವ ‘ಕೃಷ್ಣಚೂಡ’ ಮರ ಮತ್ತು ಕೆಳಭಾಗದಲ್ಲಿ ಹಳದಿ ಹೂಗಳಿಂದ ಕಂಗೊಳಿಸುವ ‘ಕಣಿಕ್ಕೊನ್ನ’ ಮರ ಪರಸ್ಪರ ಆಲಿಂಗಿಸಿಕೊಂಡಂತೆ ಕಾಣಿಸುತ್ತವೆ. ಸಾಮಾನ್ಯವಾಗಿ ಈ ಮರಗಳು ಬೇಸಿಗೆ ಕಾಲದಲ್ಲಿ ಅರಳುತ್ತವೆ. ವಿಶೇಷವಾಗಿ ಏಪ್ರಿಲ್ ತಿಂಗಳಲ್ಲಿ ಕಣಿಕ್ಕೊನ್ನ ಹೂವು ಅರಳುವುದು ವಿಷು ಹಬ್ಬದ ಆಗಮನದ ಸಂಕೇತವಾಗಿದೆ. ಈ ನಯನಮನೋಹರ ದೃಶ್ಯವು ಬಂದಿಯೋಡ್ ಸಮೀಪದ ರಸ್ತೆ ಬದಿಯಲ್ಲಿ ಕಾಣಸಿಗುತ್ತದೆ….

Read More

ಯುವಕನ ಆತ್ಮಹತ್ಯೆ: ಉದ್ಯಾವರದಲ್ಲಿ ದುರ್ಘಟನೆ

ಮಂಜೇಶ್ವರ: ಉದ್ಯಾವರ ನಿವಾಸಿ 22 ವರ್ಷದ ಯುವಕನೊಬ್ಬ ತನ್ನ ಮನೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.​ಮಂಜೇಶ್ವರ ಉದ್ಯಾವರ ತಹಾನಿ ಮಂಜಿಲ್ ನ್ಯೂ ಮಸಲ್ ಹೌಸ್ ನಿವಾಸಿ ಮುಹಮ್ಮದ್ ತಾಹಾ (22) ಮೃತಪಟ್ಟ ಯುವಕ.ಮನೆಯವರು ಸಂಬಂಧಿಕರ ಮನೆಗೆ ಹೋಗಿ ವಾಪಸ್ ಬಂದಾಗ ತಾಹಾ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ​ಮೃತರು ತಂದೆ ಮುಹಮ್ಮದ್ ಅಶ್ರಫ್, ತಾಯಿ ತಾಹಿರಾ ಹಾಗೂ ಸಹೋದರಿಯರಾದ ತಹಾನಿ ಮತ್ತು ತನ್ಸಿ ಅವರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ…

Read More

ಪೈವಳಿಕೆ ಪೇಟೆಯಲ್ಲಿ ಬಿ.ಜೆ.ಪಿ ಅಭ್ಯರ್ಥಿ ಕೆ. ಸುರೇಂದ್ರನ್ ರೋಡ್ ಶೋ

ಮಂಜೇಶ್ವರ: ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಚುನಾವಣಾ ಪ್ರಚಾರದ ಅಂಗವಾಗಿ ಪೈವಳಿಕೆ ಪೇಟೆಯಲ್ಲಿ ಭರ್ಜರಿ ರೋಡ್ ಶೋ ಕಾರ್ಯಕ್ರಮ ನಡೆಯಿತು. ರೋಡ್ ಶೋ ವೇಳೆ ಕಾರ್ಯಕರ್ತರು ಹಾಗೂ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಅಭ್ಯರ್ಥಿಗೆ ಉತ್ಸಾಹಭರಿತ ಸ್ವಾಗತ ಕೋರಿದರು. ಘೋಷಣೆಗಳು, ಪಕ್ಷದ ಧ್ವಜಗಳು ಮತ್ತು ಸಂಗೀತದ ನಡುವೆ ರೋಡ್ ಶೋ ಜೋರಾಗಿ ಸಾಗಿತು. ಈ ವೇಳೆ ಮಾತನಾಡಿದ ಕೆ. ಸುರೇಂದ್ರನ್, ಕ್ಷೇತ್ರದ ಅಭಿವೃದ್ಧಿಗೆ ಬಿ.ಜೆ.ಪಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದಾಗಿ ಭರವಸೆ ನೀಡಿದರು….

Read More

ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಭರ್ಜರಿ ರೋಡ್ ಶೋ ಇಂದು

ಮಂಜೇಶ್ವರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ K. Surendran (ಕೆ. ಸುರೇಂದ್ರನ್) ಅವರ ನೇತೃತ್ವದಲ್ಲಿ ಇಂದು ಸಂಜೆ ೪:೦೦ ಗಂಟೆಗೆ ಭರ್ಜರಿ ರೋಡ್ ಶೋ ಆಯೋಜಿಸಲಾಗಿದೆ. ಬಾಯಿಕಟ್ಟೆಯಿಂದ ಪ್ರಾರಂಭವಾಗುವ ಈ ಬೃಹತ್ ರೋಡ್ ಶೋ ಪೈವಳಿಕೆ ಪೇಟೆತನಕ ಸಾಗಲಿದ್ದು, ಮಾರ್ಗಮಧ್ಯೆ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಪಕ್ಷದ ನಾಯಕರು ಮಾತುಕತೆ ನಡೆಸಿ ಮತಯಾಚನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ Captain Brijesh Chowta (ಕ್ಯಾಪ್ಟನ್ ಬ್ರಿಜೇಶ್ ಚೌಟ), ಉಡುಪಿ ಕ್ಷೇತ್ರದ ಸಂಸದ…

Read More

ಮಂಜೇಶ್ವರಾಧ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಜೇಶ್ವರ: ಪವಿತ್ರ ರಮಝಾನ್ ತಿಂಗಳ ಉಪವಾಸ ವ್ರತಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಮಂಜೇಶ್ವರದ ಮುಸ್ಲಿಂ ಬಾಂಧವರು ಇಂದು ಭಕ್ತಿಭಾವ ಹಾಗೂ ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ತಾಲೂಕಿನಾದ್ಯಂತ ಜುಮಾ ಮಸೀದಿಗಳು ಹಾಗೂ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಧಾರ್ಮಿಕ ಪ್ರವಚನಗಳು ಮತ್ತು ಶುಭಾಶಯ ವಿನಿಮಯ ಕಾರ್ಯಕ್ರಮಗಳು ನಡೆದವು. ಹಬ್ಬದ ಅಂಗವಾಗಿ ನೆರೆಮನೆಯವರ ಹಾಗೂ ಬಂಧುಗಳ ಮನೆಗಳಿಗೆ ಭೇಟಿ ನೀಡಿ ಪರಸ್ಪರ ಸೌಹಾರ್ದತೆ ಪ್ರದರ್ಶಿಸಲಾಯಿತು. ಶುಕ್ರವಾರ ಮುಂಜಾನೆಯೇ ಹೊಸ ವಸ್ತ್ರ ಧರಿಸಿದ ಭಕ್ತಾದಿಗಳು ಉದ್ಯಾವರ ಜುಮಾ…

Read More

ಬಾಲಕಿಗೆ ಲೈಂಗಿಕ ಕಿರುಕುಳ: ಬಂಟ್ವಾಳದ ಯುವಕನ ಬಂಧನ

ಮಂಜೇಶ್ವರ: 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಟ್ವಾಳ ಮೂಲದ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಸಜಿಪಮೂಡು ನಿವಾಸಿ ಅಬ್ದುಲ್ ರಹಿಮಾನ್ (26) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಗೆ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಜೇಶ್ವರ ಸಿಐ ಜಿಜೀಶ್ ನೇತೃತ್ವದ ತಂಡ ತಲಪ್ಪಾಡಿ ಪ್ರದೇಶದಲ್ಲಿ…

Read More

ಮಂಜೇಶ್ವರದಲ್ಲಿ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್‌ಗೆ ಭರ್ಜರಿ ಸ್ವಾಗತ

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ AKM Ashraf ಅವರಿಗೆ ಮಿಂಜಾ ಪಂಚಾಯತ್ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತ ದೊರೆಯಿತು. ಅಶ್ರಫ್ ಅವರು ಮಿಂಜಾ ಪಂಚಾಯತ್ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಉತ್ಸಾಹದಿಂದ ಬರಮಾಡಿಕೊಂಡರು. ಮನ್ನಾಥ್ ಅಳುವ ಅಜೀಸ್ ಆಜಿ ಮೇರಿಕೆ , .ಎ.ಕೆ. ಆರಿಫ್ ಸೇರಿದಂತೆ ಹಲವು ಪ್ರಮುಖರು ಅವರೊಂದಿಗೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರೋಡ್‌ಶೋ ಹಾಗೂ ಜನಸಂಪರ್ಕ ಕಾರ್ಯಕ್ರಮವೂ ನಡೆಯಿತು. ಯುಡಿಎಫ್ ಪರ ಮತದಾರರನ್ನು ಸೆಳೆಯುವ ಉದ್ದೇಶದಿಂದ…

Read More

ಕಾಸರಗೋಡು ಜಿಲ್ಲೆಯ ಕುಲಾಲ ಸಮಾಜದ ಮಕ್ಕಳಿಗೆ ಸವಲತ್ತುಗಳನ್ನು ಮರು ಸ್ಥಾಪಿಸಿದ ಕೇರಳ ಸರಕಾರ

ಕಳೆದ ವರ್ಷದಿಂದ ಕೇರಳ ಸರಕಾರದ e-disrict OEC portal ನಲ್ಲಿ ಕುಲಾಲ ಹೆಸರು ಕೈ ಬಿಟ್ಟ ಕಾರಣ ಜಾತಿ ಪ್ರಮಾಣಪತ್ರ ನೀಡಲು ಸಂಬಂಧಪಟ್ಟ ಅಧಿಕಾರಿಗಳು ನಿರಾಕರಿಸುತ್ತಿದ್ದರು. ಇದರಿಂದ ಕುಲಾಲ ಸಮಾಜದ ಮಕ್ಕಳಿಗೆ ಸರಕಾರದಿಂದ ಯಾವುದೇ ಸವಲತ್ತುಗಳು ಸಿಗುತ್ತಿರಲಿಲ್ಲ. ಇದನ್ನು ಮನಗಂಡು ಕುಲಾಲ ವೇದಿಕೆ ಮಂಜೇಶ್ವರದ ನೇತೃತ್ವದಲ್ಲಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು. ಈ ಮನವಿಯ ಒಂದು ಪ್ರತಿಯನ್ನು ಸಿಪಿಐಎಂ ನೇತಾರ ಕೆ ಆರ್ ಜಯಾನಂದರವರಿಗೂ ನೀಡಿದ್ದರು. ಈ ಮನವಿಯನ್ನು ಪುರಸ್ಕರಿಸಿ ಜಯಾನಂದರವರು ಸರಕಾರವನ್ನು ಒತ್ತಾಯಿಸಿ ಮರುಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ…

Read More
error: Content is protected !!