ಕೇರಳ ವಿಧಾನಸಭಾ ಚುನಾವಣೆ: ಕಾಸರಗೋಡು ಕ್ಷೇತ್ರದಲ್ಲಿ ಅಶ್ವಿನಿ ಎಂ.ಎಲ್‌ಗೆ ಬಿಜೆಪಿ ಅವಕಾಶ

ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತಿದ್ದು, ಕಾಸರಗೋಡು ಕ್ಷೇತ್ರಕ್ಕೆ M L Ashwini ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದಕ್ಕೂ ಮೊದಲು ಬಿಡುಗಡೆಗೊಂಡ ಮೊದಲ ಪಟ್ಟಿಯಲ್ಲಿ ಮಂಜೇಶ್ವರ ಕ್ಷೇತ್ರಕ್ಕೆ K Surendran ಅವರನ್ನು ಕಣಕ್ಕಿಳಿಸಲಾಗಿದ್ದು, ಇದೀಗ ಕಾಸರಗೋಡು ಕ್ಷೇತ್ರದಲ್ಲಿ ಅಶ್ವಿನಿ ಎಂ.ಎಲ್ ಹೆಸರು ಪ್ರಮುಖವಾಗಿ ಹೊರಹೊಮ್ಮಿದೆ. ಬಿಜೆಪಿ ರಾಜ್ಯ ಘಟಕದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಅಶ್ವಿನಿ, ಕಾಸರಗೋಡು ಜಿಲ್ಲಾ ಅಧ್ಯಕ್ಷೆಯಾಗಿ ಗುರುತಿಸಿಕೊಂಡಿದ್ದು, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆಯಾಗಿಯೂ ಸೇವೆ…

Read More

ಮೈಸೂರಿನ ನಾ. ನಾಗಚಂದ್ರರಿಗೆ ಕಾಸರಗೋಡಿನಲ್ಲಿ “ಕನ್ನಡ ಪಯಸ್ವಿನಿ ಪ್ರಶಸ್ತಿ”

ಕಾಸರಗೋಡು: ಮೈಸೂರಿನ ಖ್ಯಾತ ನಟ, ನಾಟಕಕಾರ, ನಿರ್ದೇಶಕ ಹಾಗೂ ರಂಗ ಸಂಘಟಕರಾದ ನಾ . ನಾಗಚಂದ್ರ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್‌ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ” ಪ್ರದಾನ ಮಾಡಲಾಗುತ್ತಿದೆ. ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಅಂಡ್ ಲೈಬ್ರರಿ y ಕಾಸರಗೋಡ್ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ Dr ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ಈ ಗೌರವ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಮಾರ್ಚ್…

Read More

​ಕುಂಬ್ಳೆ: ಎ.ಕೆ.ಪಿ.ಎ ವತಿಯಿಂದ ಐಡಿ ಕಾರ್ಡ್ ವಿತರಣೆ ಹಾಗೂ ಇಫ್ತಾರ್ ಕೂಟ

​ಮಂಜೇಶ್ವರ: ಎ.ಕೆ.ಪಿ.ಎ (AKPA) ಕುಂಬ್ಳೆ ವಲಯದ ಆಭಿಮುಖದಡಿಯಲ್ಲಿ ಐಡಿ ಕಾರ್ಡ್ ವಿತರಣೆ ಮತ್ತು ಇಫ್ತಾರ್ ಕಾರ್ಯಕ್ರಮವನ್ನು ಮಾರ್ಚ್ 18 ರಂದು ಹೊಸಂಗಡಿಯ ಅಲೋರ್ ಪಾರ್ಟಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ​ವಲಯದ ಅಧ್ಯಕ್ಷರಾದ ಕರೀಂ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಧ್ಯಕ್ಷರಾದ ಸುಗುಣನ್ ಇರಿಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಪ್ರಜಿತ್ ಮತ್ತು ಇನ್-ಚಾರ್ಜ್ ಮನು ಎಲ್ಲೋರ ಅವರು ಮಾತನಾಡಿದರು.​ಕಾರ್ಯಕ್ರಮದಲ್ಲಿ ಹೊಸ ಸದಸ್ಯರಾದ ದೀಪಕ್, ಕಲರ್ ಜಯಪ್ರಕಾಶ್ ಮತ್ತು ವಿನ್ಸನ್ ಕಯ್ಯಾರ್ ಅವರಿಗೆ ಐಡಿ…

Read More

ಮಂಜೇಶ್ವರದ ಪೊಸೋಟು ಸರ್ವೀಸ್ ರಸ್ತೆಯಲ್ಲಿ ತೆರೆದ ಗುಂಡಿ – ತಪ್ಪದ ಅಪಾಯ, ಸಾರ್ವಜನಿಕರ ಆಕ್ರೋಶ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಪೊಸೋಟು ಸೇತುವೆಗೆ ತಾಗಿಕೊಂಡಿರುವ ಸರ್ವೀಸ್ ರಸ್ತೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಬಲಿಯಾಗುತ್ತಿದ್ದಾರೆ. ನೀರು ಪೋಲಾಗುವುದನ್ನು ತಡೆಯಲು ತಿಂಗಳುಗಳ ಹಿಂದೆ ತೋಡಲಾದ ಗುಂಡಿಯನ್ನು ಇದುವರೆಗೆ ಮುಚ್ಚದ ಕಾರಣ, ಈ ಪ್ರದೇಶವು ಈಗ ಅಪಘಾತಗಳ ತಾಣವಾಗಿ ಮಾರ್ಪಟ್ಟಿದೆ. ​​ಕೆಲವು ತಿಂಗಳುಗಳ ಹಿಂದೆ ಈ ಸರ್ವೀಸ್ ರಸ್ತೆಯ ಅಡಿಯಲ್ಲಿ ಹಾದುಹೋಗುವ ಜಲಮಂಡಳಿಯ ಪೈಪ್‌ಲೈನ್ ಒಡೆದು ನೀರು ಪೋಲಾಗುತ್ತಿತ್ತು. ಇದನ್ನು ದುರಸ್ತಿ ಮಾಡುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಗೆ ತೀರಾ ಹತ್ತಿರದಲ್ಲೇ ದೊಡ್ಡ ಗುಂಡಿಯೊಂದನ್ನು ತೋಡಲಾಗಿತ್ತು. ಆದರೆ, ದುರಸ್ತಿ ಕಾರ್ಯ…

Read More

ಕಾಸರಗೋಡಿನಲ್ಲಿ ಮಾರ್ಚ್ 28ರಂದು ಜಿಲ್ಲಾ ಚುಟುಕು ಸಾಹಿತ್ಯೋತ್ಸವ

ಕಾಸರಗೋಡು: ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಹೆಸರಾದ ಕನ್ನಡ ಗ್ರಾಮದಲ್ಲಿ 2026ರ ಮಾರ್ಚ್ 28ರಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವವನ್ನು ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಹಾಗೂ ಕನ್ನಡ ಗ್ರಾಮ ಸಹಯೋಗದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಗೋ-ಕುಟೀರದಲ್ಲಿ ಮಧ್ಯಾಹ್ನ 2.30ರಿಂದ 4 ಗಂಟೆಯವರೆಗೆ ಚುಟುಕು ಸಾಹಿತ್ಯೋತ್ಸವ, ಬಹುಭಾಷಾ ಕವಿಗೋಷ್ಠಿ, ಚುಟುಕು ಕವಿಗೋಷ್ಠಿ…

Read More

ಅಂಗಡಿಪದವಿನಲ್ಲಿ ಮಾರ್ಚ್ 22ರಂದು ಬೃಹತ್ ರಕ್ತದಾನ ಶಿಬಿರ

ಹೊಸಂಗಡಿ: ಅಂಗಡಿಪದವು, ಶ್ರೀ ಆದಿಶಕ್ತಿ ಭಜನ ಮಂಡಳಿ, ಆದಿಶಕ್ತಿ ತರವಾಡು ಕ್ಷೇತ್ರ, ಚೇತನ್ ನಗರ ಅಂಗಡಿಪದವು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ ಈ ಶಿಬಿರ ನಡೆಯಲಿದೆ. ಮಾರ್ಚ್ 22ರಂದು ಆದಿತ್ಯವಾರ ಬೆಳಗ್ಗೆ 10.00 ಗಂಟೆಗೆ ನಡೆಯಲಿರುವ ಈ ಶಿಬಿರವು ದಿ. ಪ್ರಜ್ವಲ್ ಅವರ ದ್ವಿತೀಯ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಶಿಬಿರವು ಆದಿಶಕ್ತಿ ತರವಾಡು ಕ್ಷೇತ್ರ, ಚೇತನ್ ನಗರ, ಅಂಗಡಿಪದವು ಪ್ರದೇಶದಲ್ಲಿ ನಡೆಯಲಿದ್ದು, ಸಾರ್ವಜನಿಕರು…

Read More

ಮಂಜೇಶ್ವರದಲ್ಲಿ ಎನ್‌ಡಿಎ ಪ್ರಚಾರಕ್ಕೆ ಚಾಲನೆ: ಸುರೇಶ್ ಗೋಪಿ ಗೋಡೆ ಬರಹ

ಮಂಜೇಶ್ವರ: ವಿಧಾನಸಭಾ ಚುನಾವಣೆಯನ್ನು ಹಿನ್ನೆಲೆ ಮಾಡಿಕೊಂಡು ಎನ್‌ಡಿಎ ಪ್ರಚಾರ ಚಟುವಟಿಕೆಗಳು ಮಂಜೇಶ್ವರ ಕ್ಷೇತ್ರದಲ್ಲಿ ವೇಗ ಪಡೆದುಕೊಂಡಿವೆ. ಇದರ ಭಾಗವಾಗಿ ಕೇಂದ್ರ ಸಚಿವರಾದ ಸುರೇಶ್ ಗೋಪಿ ಅವರು ಕುಂಬಳೆ ಪಟ್ಟಣದಲ್ಲಿ ಗೋಡೆ ಬರಹದ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಜೇಶ್ವರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್, ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ಎನ್‌ಡಿಎ ಸಂಯೋಜಕ ವಿಜಯ್ ಕುಮಾರ್ ರೈ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಇದೇ ವೇಳೆ ರಾಜ್ಯ…

Read More

ಶಿರಿಯ ಮುಸ್ಲಿಂ ಲೀಗ್ ವತಿಯಿಂದ ರoಝಾನ್ ನೆರವು ವಿತರಣೆ: ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಸಹಾಯ

ಶಿರಿಯ: ಪವಿತ್ರ ರoಝಾನ್ ತಿಂಗಳ ಅಂಗವಾಗಿ ಶಿರಿಯ ಮುಸ್ಲಿಂ ಲೀಗ್ ಸಮಿತಿಯ ವತಿಯಿಂದ ರಮಝಾನ್ ನೆರವು ವಿತರಣೆ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ರಹ್ಮಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಅರ್ಹ ಕುಟುಂಬಗಳಿಗೆ ನೆರವು ಕಿಟ್‌ಗಳನ್ನು ಹಾಗೂ ಸುಮಾರು 50 ಮಕ್ಕಳಿಗೆ ಈದ್ ಹಬ್ಬದ ಉಡುಪುಗಳನ್ನು ವಿತರಿಸಲಾಯಿತು. ಮಂಗಲ್ಪಾಡಿ ಮುಸ್ಲಿಂ ಲೀಗ್ ಪಂಚಾಯತ್ ಅಧ್ಯಕ್ಷ ಶಾಹುಲ್ ಹಮೀದ್ ಬಂದಿಯೋಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಾಮಾಜಿಕ ಸೇವಾ ಕಾರ್ಯಗಳ ಅಂಗವಾಗಿ ಕುಡಿಯುವ…

Read More

ಕಾಸರಗೋಡು ಜಿಲ್ಲೆ ಚುನಾವಣೆಗೆ ಸಜ್ಜು: ಎಲ್ಲಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ -ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಹೇಳಿಕೆ

ಕಾಸರಗೋಡು: ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 11,00,036 ಮತದಾರರಿದ್ದು, ಇವರಲ್ಲಿ 5,57,163 ಮಹಿಳೆಯರು, 5,42,861 ಪುರುಷರು ಹಾಗೂ 12 ಟ್ರಾನ್ಸ್‌ಜೆಂಡರ್ ಮತದಾರರು ಸೇರಿದ್ದಾರೆ. ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 1,141 ಮತಗಟ್ಟೆಗಳು ಸ್ಥಾಪಿಸಲಾಗಿದ್ದು, ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಕ್ಷೇತ್ರವಾರು ಮತಗಟ್ಟೆಗಳ ವಿವರದಲ್ಲಿ ಮಂಜೇಶ್ವರ –…

Read More

ಮಂಜೇಶ್ವರ ಬಿಜೆಪಿ ಬೆಳವಣಿಗೆಯ ಹಂತಗಳು – ತುಳುನಾಡ ಮಣ್ಣಿನ ಐತಿಹಾಸಿಕ ಕ್ಷಣಗಳು

ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಯ ಬೆಳವಣಿಗೆ ಹಲವು ಹಂತಗಳನ್ನು ದಾಟಿ ಇಂದು ಬಲಿಷ್ಠವಾಗುತ್ತಿದೆ. 2001ರಲ್ಲಿ ಕಾಸರಗೋಡು ಜಿಲ್ಲಾ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದೇಶದ ಇಂದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಜೇಶ್ವರ ಕ್ಷೇತ್ರದ ಚುನಾವಣಾ ಕಾರ್ಯಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆ ಸಮಯದಲ್ಲಿ ಮಂಜೇಶ್ವರ ಚುನಾವಣಾ ಉಸ್ತುವಾರಿಯಾಗಿ ಕೆ. ಸುರೇಂದ್ರನ್ ಕೂಡ ಕಾರ್ಯನಿರ್ವಹಿಸುತ್ತಿದ್ದರು. ಆ ಸಭೆ ನಡೆಯುತ್ತಿದ್ದ ವೇಳೆ ನರೇಂದ್ರ ಮೋದಿ ಅವರಿಗೆ ತಕ್ಷಣ ಗುಜರಾತ್‌ಗೆ ಬರಬೇಕೆಂದು ಕರೆ ಬಂದಿತ್ತು. ಎರಡು ದಿನಗಳ ಬಳಿಕ ನರೇಂದ್ರ ಮೋದಿ…

Read More
error: Content is protected !!