ಕೇರಳ ರಾಜ್ಯ-ಕಾಸರಗೋಡು ಜಿಲ್ಲಾ ಕನ್ನಡ ಸಂಘಟನೆಗಳ ಡೈರೆಕ್ಟರಿ ಪ್ರಕಟಣೆ; ಮಾಹಿತಿ ಕೋರಿಕೆ

ಕಾಸರಗೋಡು: ಕೇರಳ ರಾಜ್ಯದ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ತನ್ನ 36ನೇ ಸಂಸ್ಥಾಪನಾ ವರ್ಷಾಚರಣೆಯ ಅಂಗವಾಗಿ ಕೇರಳ ರಾಜ್ಯ ಹಾಗೂ ಕಾಸರಗೋಡು ಜಿಲ್ಲಾ ಕನ್ನಡ ಸಂಘಟನೆಗಳ ವಿಳಾಸಗಳ ಡೈರೆಕ್ಟರಿಯ 2ನೇ ಪರಿಷ್ಕೃತ ಆವೃತ್ತಿಯನ್ನು ಪ್ರಕಟಿಸಲು ನಿರ್ಧರಿಸಿದೆ. ಈ ಡೈರೆಕ್ಟರಿಯಲ್ಲಿ ಕೇರಳ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಕಾಸರಗೋಡು ಜಿಲ್ಲೆಯ ಸುಮಾರು 500ಕ್ಕೂ ಅಧಿಕ ಕನ್ನಡ, ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಕನ್ನಡಪರ ಸಂಘಟನೆಗಳು,…

Read More

ಮಲಯಾಳಂ ಭಾಷಾ ಮಸೂದೆಯ ಕನ್ನಡ ವಿರೋಧಿ ಅಂಶಗಳ ಕುರಿತು ಸಚಿವ ಕೆ.ಎಂ. ಶಾಜಿಗೆ ಮನವಿ

ಕಾಸರಗೋಡು: ಕೇರಳ ಸರ್ಕಾರದ ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯಲ್ಲಿರುವ ಕನ್ನಡ ವಿರೋಧಿ ಅಂಶಗಳ ಕುರಿತು ಕರ್ನಾಟಕ ಸಮಿತಿಯ ನಿಯೋಗವು ರಾಜ್ಯ ಸ್ಥಳೀಯ ಆಡಳಿತ ಹಾಗೂ ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಾಜಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮನವಿಯಲ್ಲಿ ಮಸೂದೆಯಲ್ಲಿರುವ ಕೆಲವು ಅಂಶಗಳು ಕನ್ನಡ ಭಾಷಿಕರ ಹಿತಾಸಕ್ತಿಗೆ ಧಕ್ಕೆಯುಂಟುಮಾಡುವ ಸಾಧ್ಯತೆ ಇರುವುದನ್ನು ವಿವರಿಸಿ, ರಾಜ್ಯದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರನ್ನು ಒತ್ತಾಯಿಸಲಾಯಿತು. ನಿಯೋಗದಲ್ಲಿ ಕರ್ನಾಟಕ ಸಮಿತಿ…

Read More

ಪ್ರಿಯದರ್ಶಿನಿ ಯೋಜನೆ ಜಾರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ

ಕಾಸರಗೋಡು, ಕೇರಳದ ಯುಡಿಎಫ್ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯಕ್ಕೆ ಸೋಮವಾರ ಚಾಲನೆ ದೊರೆಯಿತು. ಉಪ್ಪಳ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಯೋಜನೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಜೆ. ಸೋಮಶೇಖರ ಸೇರಿದಂತೆ ಯುಡಿಎಫ್ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ರಾಜ್ಯಮಟ್ಟದ ಉದ್ಘಾಟನಾ ಕಾರ್ಯಕ್ರಮವು ತಿರುವನಂತಪುರದಲ್ಲಿ ನಡೆಯಿದ್ದು, ಮುಖ್ಯಮಂತ್ರಿ ವಿ.ಡಿ. ಸತೀಶನ್ ಮಹಿಳಾ ಪ್ರಯಾಣಿಕರೊಬ್ಬರಿಗೆ ‘ಶೂನ್ಯ ದರ’ದ…

Read More

ಕ್ಯಾನ್ಸರ್ ಪೀಡಿತ ಮಹಿಳೆಯ ಚಿಕಿತ್ಸೆಗೆ ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆಯಿಂದ ಆರ್ಥಿಕ ನೆರವು

ಮಂಜೇಶ್ವರ: ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ (ರಿ) ಮಂಜೇಶ್ವರ ತನ್ನ 102ನೇ ಸಮಾಜಮುಖಿ ಯೋಜನೆಯ ಅಂಗವಾಗಿ ಮಂಜೇಶ್ವರ ತಾಲೂಕಿನ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಒಳ್ಳಪಟ್ಟ ಸುಳ್ಯಮೆ ನಿವಾಸಿ ಮೀನಾಕ್ಷಿ ಅವರಿಗೆ ಚಿಕಿತ್ಸಾ ವೆಚ್ಚಕ್ಕಾಗಿ ಆರ್ಥಿಕ ನೆರವು ನೀಡಿತು. ಕೆಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮೀನಾಕ್ಷಿ ಅವರು ಪತಿ ಹಾಗೂ ಮಗನನ್ನು ಕಳೆದುಕೊಂಡಿದ್ದು, ಹೆಣ್ಣು ಮಕ್ಕಳೇ ಅವರಿಗೆ ಆಸರೆಯಾಗಿದ್ದಾರೆ. ಅವರ ಸಂಕಷ್ಟದ ಕುರಿತು ಸ್ವಾತಿ ಬಾಲಕೃಷ್ಣ ಅವರ ಪುತ್ರ ಇಶಾನ್ ಸುಳ್ಯಮೆ ಸಂಸ್ಥೆಗೆ ಮಾಹಿತಿ…

Read More

ಬೇಕಲ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

​ಕಾಸರಗೋಡು: ಬೇಕಲ ಕೋಟೆ ಸಮೀಪದ ಪಳ್ಳಿಕರೆ ಬೀಚ್‌ನಲ್ಲಿ ಭಾನುವಾರ ಸಂಜೆ ನಡೆದ ದುರ್ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾಗಿದ್ದಾರೆ. ಕೊಟ್ಟಾಯಂ ಚಂಗನಾಶೇರಿಯ ನಿವಾಸಿಗಳಾದ ಅಂಗಿತ್ (20) ಮತ್ತು ಅಪ್ಪು ಟಿ. ಎಬ್ರಹಾಂ (20) ಕಾಣೆಯಾದ ವಿದ್ಯಾರ್ಥಿಗಳು. ​ಘಟನೆ ನಡೆದಾಗ ನಾಲ್ವರು ವಿದ್ಯಾರ್ಥಿಗಳ ತಂಡ ಸಮುದ್ರದಲ್ಲಿ ಈಜಲು ಇಳಿದಿತ್ತು. ಈ ವೇಳೆ ಬಲವಾದ ಅಲೆಗಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಉಳಿದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಜೆ ಸುಮಾರು 6:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ವಿಷಯ ತಿಳಿದ…

Read More

ನಾಪತ್ತೆಯಾದ ಕುಂಜತ್ತೂರಿನ ಇಬ್ಬರು ಬಾಲಕರು ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಸುರಕ್ಷಿತವಾಗಿ ಪತ್ತೆ

​ಮಂಜೇಶ್ವರ: ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕುಂಜತ್ತೂರಿನ ಇಬ್ಬರು ಬಾಲಕರು ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ​ಕುಂಜತ್ತೂರು ಸ್ವಾಗತ್ ಹೋಟೆಲ್ ಸಮೀಪದ ನಿವಾಸಿಗಳಾದ ಇಬ್ರಾಹಿಂ ಅಶ್ರಫ್ ಅವರ ಪುತ್ರ ಯಾಸೀನ್ (13) ಮತ್ತು ಅಮೀರ್ ಅವರ ಪುತ್ರ ಸುಲ್ತಾನ್ (14) ನಾಪತ್ತೆಯಾಗಿದ್ದ ಬಾಲಕರು. ಶನಿವಾರ ಸಂಜೆ 5 ಗಂಟೆಯ ಬಳಿಕ ಇವರು ನಾಪತ್ತೆಯಾಗಿದ್ದರು. ​​ಬಾಲಕರು ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳೀಯರು ಮತ್ತು ಸಂಬಂಧಿಕರು ಜಂಟಿ ಕಾರ್ಯಾಚರಣೆ ನಡೆಸಿದರು….

Read More

ಮ್ಯಾಜೇಶ್ವರ : ಇಬ್ಬರು ಬಾಲಕರ ನಾಪತ್ತೆ

ಮಂಜೇಶ್ವರ : ಕುಂಜತ್ತೂರಿನ ಇಬ್ಬರು ಬಾಲಕರು ನಿನ್ನೆ ಶನಿವಾರ 5 ಗಂಟೆಯ ಬಳಿಕ ನಾಪತ್ತೆಯಾಗಿರುವ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರು ಸ್ವಾಗತ್ ಹೋಟೆಲ್ ಪರಿಸರವಾಸಿಗಳಾದ ಇಬ್ರಾಹಿಂ ಅಶ್ರಫ್ ಎಂಬವರ ಪುತ್ರ ಯಾಸೀನ್ (13) ಹಾಗೂ ಅಮೀರ್ ಎಂಬವರ ಪುತ್ರ ಸುಲ್ತಾನ್ (14) ಎಂಬಿವರು ನಾಪತ್ತೆಯಾಗಿರುವುದಾಗಿ ದೂರು ದಾಖಲಾಗಿದೆ.ಈ ಚಿತ್ರದಲ್ಲಿರುವ ಬಾಲಕರು ಎಲ್ಲಿಯಾದರೂ ಪತ್ತೆಯಾದಲ್ಲಿ ಮಂಜೇಶ್ವರ ಪೊಲೀಸ್ ಠಾಣೆ ಅಥವಾ ಪೋಷಕರ 8921429442 – 9746149372 ಮೊಬೈಲ್ ಸಂಖ್ಯೆ ಸಂಪರ್ಕಿಸುವಂತೆ ಕೋರಲಾಗಿದೆ.

Read More

2015ರ ಪ್ರಕರಣದ ಆರೋಪಿ 10 ವರ್ಷಗಳ ಬಳಿಕ ಪೊಲೀಸರ ಬಲೆಗೆ

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ‌ಪೊಲೀಸರು‌ ಬಂಧಿಸಿದ್ದಾರೆ. ಪುತ್ತೂರು ನಗರ ಠಾಣಾ ಅ.ಕ್ರ:100/2015, ಕಲಂ:447, 427, 504 & 506 ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ  ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸ್ವರೂಪ್ @ಸ್ವರೂಪ್ ಅಮೀನ್ ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು, ಕೇರಳ ರಾಜ್ಯದ ಮಂಜೇಶ್ವರ ಪಾವೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

​ಪಯ್ಯನ್ನೂರು ಚಿನ್ನಾಭರಣ ದರೋಡೆ ಪ್ರಕರಣ: ಉಪ್ಪಳದಿಂದ ಬಿಜೆಪಿ ಪ್ರಾದೇಶಿಕ ನಾಯಕನ ಬಂಧನ

ಮಂಜೇಶ್ವರ: ಪಯ್ಯನ್ನೂರು ಎಡಾಟ್‌ನಲ್ಲಿ ಸ್ವರ್ಣೋದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣವನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪ್ರಮುಖ ಆರೋಪಿಯನ್ನು ಉಪ್ಪಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ​ಕಣ್ಣೂರು ಅಂಜಾಪೀಡಿಗ ನಿವಾಸಿ, ಬಿಜೆಪಿ ಪ್ರಾದೇಶಿಕ ನಾಯಕ ಸನು ಅಲಿಯಾಸ್ ಸಂತೋಷ್ ಬಂಧಿತ ಆರೋಪಿ. ಈತನ ಬಂಧನವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ಪಡೆದಿದೆ. ಮೂಲತಃ ಮಹಾರಾಷ್ಟ್ರದವರಾಗಿದ್ದು, ತಲಕ್ಕೇರಿಯಲ್ಲಿ ಚಿನ್ನಾಭರಣ ಸಂಸ್ಥೆಯನ್ನು ನಡೆಸುತ್ತಿದ್ದ ಕುಟುಂಬವು ಜೂನ್ 2ರಂದು ಪ್ರಯಾಣಿಸುತ್ತಿದ್ದಾಗ, ಎಡಾಟ್‌ನಲ್ಲಿ ದುಷ್ಕರ್ಮಿಗಳು ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ದರೋಡೆ ನಡೆಸಿದ್ದರು….

Read More

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಜೇಶ್ವರ, ಜೂ.12: ಸುಮಾರು ಎರಡು ದಶಕಗಳ ಕಾಲ ಕಾನೂನಿನ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹೊಸಂಗಡಿ ನಿವಾಸಿ ಪ್ರಶಾಂತ್ (44) ಬಂಧಿತ ಆರೋಪಿ. 2006ರ ಅಬಕಾರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಶಾಂತ್, ಜಾಮೀನು ಪಡೆದು ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಕರ್ನಾಟಕಕ್ಕೆ ಪರಾರಿಯಾಗಿದ್ದನು. ಈ ಹಿನ್ನೆಲೆಯಲ್ಲಿ 2010ರಲ್ಲಿ ನ್ಯಾಯಾಲಯ ಆತನನ್ನು ಘೋಷಿತ ಆರೋಪಿಯಾಗಿ ಘೋಷಿಸಿತ್ತು. ಖಚಿತ ಮಾಹಿತಿ ಆಧರಿಸಿ ಕುಂಬಳೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಬೈಜು ಕೆ. ಜೋಸ್ ನೇತೃತ್ವದಲ್ಲಿ ಚಂದ್ರನ್,…

Read More
error: Content is protected !!