ಉಪ್ಪಳದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ
ಮಂಜೇಶ್ವರ: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ ಹಾಗೂ ಶಾಫಿ ಬಂಡಸಾಲೆ ಅವರ ಕೃತಿ ಪರಿಚಯ ಕಾರ್ಯಕ್ರಮ ಶನಿವಾರ ಉಪ್ಪಳ ವ್ಯಾಪಾರಿ ಭವನದಲ್ಲಿ ನಡೆಯಿತು. ಸಮಾರಂಭವನ್ನು ಕಲಿಕೋಪಕರಣ ವಿತರಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು, ರಾಷ್ಟಿçÃಯತೆ ಬೆಳೆದಂತೆ ಗಡಿಗಳಿಗೆ ಹೆಚ್ಚು ಮಹತ್ವವಿಲ್ಲ. ಆದರೂ ಸ್ಥಳೀಯ ಸಂಸ್ಕೃತಿ ಉಳಿಸಲು ಪ್ರಯತ್ನಗಳು ಬೇಕು. ಈ ನಿಟ್ಟಿನಲ್ಲಿ…
