ಉಪ್ಪಳದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ

ಮಂಜೇಶ್ವರ: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ ಹಾಗೂ ಶಾಫಿ ಬಂಡಸಾಲೆ ಅವರ ಕೃತಿ ಪರಿಚಯ ಕಾರ್ಯಕ್ರಮ ಶನಿವಾರ ಉಪ್ಪಳ ವ್ಯಾಪಾರಿ ಭವನದಲ್ಲಿ ನಡೆಯಿತು. ಸಮಾರಂಭವನ್ನು ಕಲಿಕೋಪಕರಣ ವಿತರಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು, ರಾಷ್ಟಿçÃಯತೆ ಬೆಳೆದಂತೆ ಗಡಿಗಳಿಗೆ ಹೆಚ್ಚು ಮಹತ್ವವಿಲ್ಲ. ಆದರೂ ಸ್ಥಳೀಯ ಸಂಸ್ಕೃತಿ ಉಳಿಸಲು ಪ್ರಯತ್ನಗಳು ಬೇಕು. ಈ ನಿಟ್ಟಿನಲ್ಲಿ…

Read More

ಚುನಾವಣಾ ಗೆಲುವು ಸೋಲು ಪ್ರಕ್ರಿಯೆಯ ಭಾಗ.. ಸಮಾಜ ಸೇವೆ ನಿರಂತರ ವಾಗಬೇಕು-ಆದರ್ಶ ಬಿ ಎಂ

ಉದ್ಯಾವರ : ಸಮಾಜ ಸೇವೆ ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯ, ಅದು ಸ್ಥಳೀಯ ಜನತೆಯ ಅಗ್ರಹ, ಬೇಡಿಕೆ, ನಂಬಿಕೆ,ಮತ್ತು ವಿಶ್ವಾಸ ಪ್ರಕ್ರಿಯೆ ಆಗಬೇಕು, ಚುನಾವಣೆಯಲ್ಲಿ ಸೋಲು, ಗೆಲುವು ಪ್ರಕ್ರಿಯೆ ಯ ಭಾಗ ಆದರೆ ಸಮಾಜ ಸೇವೆ ನಿರಂತರ ವಾಗಿರಬೇಕೆಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಮಂಜೇಶ್ವರ ಪಂಚಾಯತ್ ಬೂತ್ 14ರ ವತಿಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಆದರ್ಶ ಬಿ ಎಂ ಮಾತನಾಡಿದರು.ಸಮಾಜ ಸೇವಕ ನ್ಯಾ ನವೀನ್…

Read More

ಆರ್ಥಿಕ ಸಂಕಷ್ಟದ ನಡುವೆ ಕೃಷಿಕ ಕೆರೆಗೆ ಹಾರಿ ಆತ್ಮಹತ್ಯೆ

ಮಂಜೇಶ್ವರ : ಕೊಟ್ಟಂಗುಳಿಯಲ್ಲಿ ಕೃಷಿಕರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಟ್ಟಂಗುಳಿಯ ಅಜಿತ್ ಕುಮಾರ್ (43) ಸಾವನ್ನಪ್ಪಿದ ದುರ್ದೈವಿ. ಶನಿವಾರ ಬೆಳಿಗ್ಗೆ ಅಜಿತ್ ನಾಪತ್ತೆಯಾಗಿದ್ದರಿಂದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಮನೆ ಸಮೀಪದ ಅಡಿಕೆ ತೋಟದ ಕೆರೆಯಲ್ಲಿ ಶವ ಪತ್ತೆಯಾಗಿದೆ. ಕೆರೆಗೆ ಹಾರುವ ಮುನ್ನ ಅವರು ಕೈಯ ನರ ಕತ್ತರಿಸಿಕೊಂಡಿರುವ ಸಾಧ್ಯತೆಯೂ ಇದೆ ಎಂದು ಶಂಕಿಸಲಾಗಿದೆ. ​ಮಡಿಕೇರಿಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಅಜಿತ್, ವ್ಯಾಪಾರದಲ್ಲಿ ಉಂಟಾದ ಭಾರಿ ನಷ್ಟದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಬಳಿಕ ಊರಿಗೆ ಮರಳಿ ಕೃಷಿ…

Read More

​ಮಂಜೇಶ್ವರ ಗ್ರಾಮ ಪಂಚಾಯತ್ ಅಧಿಕೃತ ವೆಬ್‌ಸೈಟ್ ಲೋಕಾರ್ಪಣೆ: ಇನ್ನು ಮುಂದೆ ಸಾರ್ವಜನಿಕ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ ಆಡಳಿತವನ್ನು ಮತ್ತಷ್ಟು ಪಾರದರ್ಶಕಗೊಳಿಸುವ ಮತ್ತು ಸಾರ್ವಜನಿಕರಿಗೆ ಸೇವೆಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ, ಪಂಚಾಯತ್‌ನ ಅಧಿಕೃತ ವೆಬ್‌ಸೈಟ್ ಅನ್ನು ಪಂಚಾಯತು ಅಧ್ಯಕ್ಷ ಬಶೀರ್ ಕನಿಲ ಅಧಿಕೃತವಾಗಿ ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಫಾತಿಮತ್ ಝವುರಾ ಹಾಗೂ ಪಂಚಾಯತ್ ಸದಸ್ಯರುಗಳು ಸಿಬ್ಬಂದಿಗಳು ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡರು. ​ಈ ಡಿಜಿಟಲ್ ಉಪಕ್ರಮದ ಮೂಲಕ ಇನ್ನು ಮುಂದೆ ಪಂಚಾಯತ್‌ಗೆ ಸಂಬಂಧಿಸಿದ ವಿವಿಧ ಸೇವೆಗಳನ್ನು ನಾಗರಿಕರು ಮನೆಯಲ್ಲೇ ಕುಳಿತು ಪಡೆಯಬಹುದಾಗಿದೆ.ಪ್ರಮುಖವಾಗಿ ಜನನ ಪ್ರಮಾಣಪತ್ರ, ಮರಣ ಪ್ರಮಾಣಪತ್ರ…

Read More

ಮಂಜೇಶ್ವರದ ಸರ್ಕಾರಿ ಎಲ್.ಪಿ. ಶಾಲೆಯಲ್ಲಿ ವರ್ಣರಂಜಿತ ಶಾಲಾ ಪ್ರವೇಶೋತ್ಸವ

​ಮಂಜೇಶ್ವರ: ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಅಭಿಯಾನದ ಭಾಗವಾಗಿ ‘ಸಮಗ್ರ ಶಿಕ್ಷಾ ಕೇರಳ’ದ ನೇತೃತ್ವದಲ್ಲಿ ಮಂಜೇಶ್ವರದ ಹೊಸಬೆಟ್ಟು ಸರ್ಕಾರಿ ಎಲ್.ಪಿ. ಶಾಲೆಯಲ್ಲಿ ಶಾಲಾ ಪ್ರವೇಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ​ಶಾಲಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಲೆಗೆ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಮಂಜೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಶೀರ್ ಕನಿಲ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಸಯ್ಯದ್ ಯು.ಕೆ. ಸೈಫುಲ್ಲಾ ತಂಙಳ್ ಅವರು ಪ್ರವೇಶೋತ್ಸವವನ್ನು ಉದ್ಘಾಟಿಸಿದರು….

Read More

ಶಿಸ್ತು, ಪಾಂಡಿತ್ಯದ ಮೂಲಕ ಯಕ್ಷಗಾನಕ್ಕೆ ಹೊಸ ಆಯಾಮ ನೀಡಿದವರು ಡಾ. ರಮಾನಂದ ಬನಾರಿ: ಡಾ. ಪುರುಷೋತ್ತಮ ಬಿಳಿಮಲೆ

ನೀರ್ಚಾಲು: ಯಕ್ಷಗಾನ, ತಾಳಮದ್ದಳೆ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಕವಿ ಮತ್ತು ಅರ್ಥಧಾರಿ ಡಾ. ರಮಾನಂದ ಬನಾರಿ ಅವರ 85ನೇ ಜನ್ಮವರ್ಷದ ಅಭಿನಂದನಾ ಸಮಾರಂಭ, ಸಾಕ್ಷ್ಯಚಿತ್ರ ಬಿಡುಗಡೆ ಹಾಗೂ ಕನ್ನಡ ಸಾಹಿತ್ಯ–ಸಂಸ್ಕೃತಿ ಸಮ್ಮೇಳನವು ರವಿವಾರ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ವೈಭವದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು, ವೈದ್ಯಕೀಯ ವೃತ್ತಿಯಲ್ಲಿ ಅಗತ್ಯವಾದ ಶಿಸ್ತು ಮತ್ತು ನಿಷ್ಠೆಯನ್ನು ಯಕ್ಷಗಾನ, ತಾಳಮದ್ದಳೆ ಹಾಗೂ ಸಾಹಿತ್ಯ…

Read More

DYFI ಕುಳೂರು ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯಶಸ್ವಿ

ಕುಳೂರು, ಜೂನ್ 1: DYFI ಕುಳೂರು ಯೂನಿಟ್ ಸಮಿತಿಯ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ವಾರ್ಡ್ ಸದಸ್ಯೆ ಶರ್ಮಿಳಾ ಎಂ. ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿಲೇಜ್ ಕಾರ್ಯದರ್ಶಿ ಉದಯ್ CH, ಬ್ಲಾಕ್ ಜಂಟಿ ಕಾರ್ಯದರ್ಶಿ ಪದ್ಮಜಾ ಹಾಗೂ ಬ್ರಾಂಚ್ ಕಾರ್ಯದರ್ಶಿ ದಯಾನಂದ ಕುಳೂರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿಲೇಜ್ ಸಮಿತಿ ಸದಸ್ಯ ಪ್ರವೀಣ್ ಸ್ವಾಗತಿಸಿದರು. ಯೂನಿಟ್ ಅಧ್ಯಕ್ಷ ಪ್ರಜ್ವಲ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ SSLC ಹಾಗೂ ದ್ವಿತೀಯ ಪಿಯುಸಿ (+2) ಪರೀಕ್ಷೆಗಳಲ್ಲಿ…

Read More

ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜೂನ್ 10 ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ “ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿ” ಪ್ರದಾನ

ಕರ್ನಾಟಕ ರಾಜಧಾನಿಯ ಹಿರಿಯ ಸಂಘಟನೆಯಾದ ವಿ. ಕೆ. ಎಂ. ಕಲಾವಿದರು(ರಿ.), ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ನಡೆಯುವ ಡಾ. ಬಿ. ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾo ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳ – ರಂಗೋತ್ಸವ ಮತ್ತು ನಿರಂತರ 45ನೇ ವರ್ಷದ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2026 ಜೂನ್ 8 ರಿಂದ 10 ರ ತನಕ ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಜೂನ್ 10…

Read More

ಬಾಳುವ ಮುನ್ನವೇ ಬಾಡಿದ ಹೂವು: ಕೆರೆಗೆ ಬಿದ್ದು ಎರಡೂವರೆ ವರ್ಷದ ಬಾಲಕನ ಅಂತ್ಯ

​ಮಂಜೇಶ್ವರ: ಕಾರಡ್ಕ ಕಾರ್ಲೆಯಲ್ಲಿ ಆಟವಾಡುತ್ತಾ ಮನೆಯ ಅಂಗಳದಲ್ಲಿ ಸಂಭ್ರಮಿಸಬೇಕಿದ್ದ ಕಂದನೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾನೆ.ಲೋಹಿತ್ ಶೆಟ್ಟಿ-ದಿವ್ಯ ದಂಪತಿಯ ಎರಡೂವರೆ ವರ್ಷದ ಪುತ್ರ ದೇವನಂದ ಸಾವನ್ನಪ್ಪಿದ ದುರ್ದೈವಿ. ​ ನಾಪತ್ತೆಯಾಗಿದ್ದ ಬಾಲಕನಿಗಾಗಿ ಹುಡುಕಾಟ ನಡೆಸಿದಾಗ, ಮನೆಯಿಂದ 300 ಮೀಟರ್ ದೂರದ ತೆಂಗಿನ ತೋಟದ ಆವರಣವಿಲ್ಲದ ಕೆರೆಯಲ್ಲಿ ಶವ ಪತ್ತೆಯಾಗಿದೆ. ಆಟವಾಡುತ್ತಾ ಹೋಗಿದ್ದ ಮಗು, ನೀರಿನ ಸೆಳೆತಕ್ಕೆ ಸಿಲುಕಿ ಬಲಿಯಾಗಿರಬಹುದು ಎಂದು ಶಂಕಿಸಲಾಗಿದೆ. ಚೆಂಗಳದ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಅಸುರಕ್ಷಿತ ಕೆರೆ…

Read More

ಕಾಸರಗೋಡಿನಲ್ಲಿ ನವವಧು ಆತ್ಮಹತ್ಯೆ ; ಮರಣದ ಕಾರಣದ ಕುರಿತು ತನಿಖೆ

​ಕಾಸರಗೋಡು : ಮದುವೆಯಾದ ಕೇವಲ ಒಂದು ತಿಂಗಳಲ್ಲೇ ನವವಧುವೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಕುಟ್ಟಿಕೋಲ್‌ನ ಅಶ್ವತಿ (25) ಸಾವನ್ನಪ್ಪಿದ ದುರ್ದೈವಿ. ಖಾಸಗಿ ಆಸ್ಪತ್ರೆಯ ದಾದಿಯಾಗಿದ್ದ ಈಕೆ, ಮೇ 18ರಂದು ಮನೆಯಲ್ಲಿ ಅಸ್ವಸ್ಥರಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಹಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ​ಅಶ್ವತಿಯು ಪರಕ್ಕಳಾಯಿಯ ರೂಪೇಶ್ ಎಂಬುವರನ್ನು ಇತ್ತೀಚೆಗಷ್ಟೇ ಮದುವೆಯಾಗಿದ್ದರು. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಾಸರಗೋಡು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ…

Read More
error: Content is protected !!