ಡಾ. ವಾಮನ್ ರಾವ್ ಬೇಕಲ್ ದಂಪತಿಗೆ “ಕರುನಾಡ ಕನ್ನಡ ಗಡಿನಾಡು ಪೋಷಕ ರತ್ನ ಪ್ರಶಸ್ತಿ-2026”

ಕಾಸರಗೋಡು : ಡಾ ಎಸ್. ಡಿ. ಮುಡೆಣ್ಣವರ, ಸ್ಥಾಪಕ ರಾಜ್ಯಾಧ್ಯಕ್ಷರು ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ (ರಿ.)ಇವರ ಸಾರತ್ಯದಲ್ಲಿ, 25.5.2026ರಂದು ಹಾವೇರಿಯಲ್ಲಿ “ಡಾ. ಅಂಬೇಡ್ಕರ್ ಸಭಾ ಭವನ ಹಾವೇರಿ ಇಲ್ಲಿ ಕರ್ನಾಟಕ ರಾಜ್ಯ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಯಾಗಿ ನಡೆಯಿತು. ಕರ್ನಾಟಕ ವಿಧಾನ ಪರಿಷತ್ತು ಸಭಾಧ್ಯಕ್ಷರಾದ ಬಸವರಾಜ್ ಹೊರಟ್ಟಿಯವರು ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದರು. ಹಲವು ಶಾಸಕರು, ಸಾಹಿತಿ, ಕನ್ನಡ ಗಣ್ಯಾತಿಗಣ್ಯರು ಭಾಗವಹಿಸಿದ್ದರು. ಹಾವೇರಿ ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ…

Read More

ಪೆರ್ಮುದೆಯಲ್ಲಿ ಭೀಕರ ರಸ್ತೆ ಅಪಘಾತ; ಯುವಕ ಸಾವು, ತಂದೆಗೆ ಗಂಭೀರ ಗಾಯ

ಕುಂಬ್ಳೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆ–ಬದಿಯಡ್ಕ ರಸ್ತೆಯ ಪೆರ್ಮುದೆ ಪೆರಿಯಡ್ಕ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಅವರ ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತರನ್ನು ಚಿಪ್ಪಾರ್ ಬಾಯಾರ್‌ನ ನೇತ್ರಗುಳಿ ಹೌಸ್ ನಿವಾಸಿ ಎನ್. ಕಿಶನ್ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ತಂದೆ ಮಾಧವ ದೇವಾಡಿಗ (55) ಅವರನ್ನು ಚಿಕಿತ್ಸೆಗಾಗಿ ಮಂಗಳೂರುದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಬೆಳಗ್ಗೆ ಕಿಶನ್ ಅವರು ತಂದೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ…

Read More

ಉಳಿಯತ್ತಡ್ಕ: 24ನೇ ವರ್ಷದ ವೈದಿಕ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಸಂಪನ್ನ

​ಉಳಿಯತ್ತಡ್ಕ: ಗುರುಕೃಪಾ ವೈದಿಕ ಶಿಕ್ಷಣ ಸಮಿತಿ ಉಳಿಯತ್ತಡ್ಕ ಇದರ ವತಿಯಿಂದ ವಿಶ್ವಬ್ರಾಹ್ಮಣ ಸಮಾಜದ ಮಕ್ಕಳಿಗೆ ವೈದಿಕ ಧಾರ್ಮಿಕ ಸಂಸ್ಕಾರವನ್ನು ಒದಗಿಸುವ 24 ನೇ ವರ್ಷದ “ವೈದಿಕ ಶಿಕ್ಷಣ ಶಿಬಿರ”ವು ಇಲ್ಲಿನ ಗುರುಕೃಪಾ ನಿವಾಸದಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ​ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಬ್ರಹ್ಮ ಶ್ರೀ ಪುರೋಹಿತರತ್ನ ಬಿ. ಕೇಶವ ಆಚಾರ್ಯ ಅವರು, “ನಿತ್ಯ ನೈಮಿತ್ತಿಕ ಕರ್ಮಾನುಷ್ಠಾನವನ್ನು ಬಾಲ್ಯದಲ್ಲಿಯೇ ಅಳವಡಿಸಿಕೊಂಡಿದ್ದಲ್ಲಿ ಸಮಾಜವು ಬಲಿಷ್ಟವಾಗಿ ಬೆಳೆಯುವುದು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಧಾರೆ…

Read More

ಇತಿಹಾಸ ಪ್ರಸಿದ್ಧ ಸಂತಡ್ಕ ಮಾಡದಲ್ಲಿ ಜೂನ್ 6–7 ರಂದು ಭವ್ಯ ‘ರುದ್ರಯಾಗ’ ಹಾಗೂ ‘ಗಿರಿಜಾ ಕಲ್ಯಾಣೋತ್ಸವ

ಸಂತಡ್ಕ: ಇತಿಹಾಸ ಪ್ರಸಿದ್ಧ ಸಂತಡ್ಕ ಮಾಡದ ಶ್ರೀ ಅರಸು ಸಂಕಲ ದೈವ ಕ್ಷೇತ್ರದಲ್ಲಿ ಲೋಕಕಲ್ಯಾಣ ಹಾಗೂ ಭಕ್ತರ ಅಭಿಷ್ಟಾರ್ಥ ಸಿದ್ಧಿಗಾಗಿ ಶ್ರೀ ರುದ್ರಯಾಗ, ಗಿರಿಜಾ ಕಲ್ಯಾಣೋತ್ಸವ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನಾ ಸಮಾರಂಭವು ಜೂನ್ 6 ಮತ್ತು 7 ರಂದು ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ. ಜೂನ್ 6ರಂದು ಭವ್ಯ ಶೋಭಾಯಾತ್ರೆ ಜೂನ್ 6ರ ಶನಿವಾರ ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಚಿಗುರುಪಾದೆಯಿಂದ ರುದ್ರಯಾಗ ಮತ್ತು ಗಿರಿಜಾ ಕಲ್ಯಾಣೋತ್ಸವದಲ್ಲಿ…

Read More

ಮಂಜೇಶ್ವರದಲ್ಲಿ ಯುವಕನ ನಿಗೂಢ ಸಾವು: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಮಂಜೇಶ್ವರ ವ್ಯಾಪ್ತಿಯ ಪೈವಳಿಕೆ ಬಾಯಾರುಪದವಿನ ನಿವಾಸಿ ಮೊಹಮ್ಮದ್ ಆಸಿಫ್ (29) ಅವರ ನಿಗೂಢ ಸಾವು ಪ್ರಕರಣ ಇದೀಗ ಹೈಕೋರ್ಟ್ ಗಮನ ಸೆಳೆದಿದೆ. 2025ರ ಜನವರಿ 15ರಂದು ಫೋನ್ ಕರೆ ಸ್ವೀಕರಿಸಿ ಮನೆಯಿಂದ ಹೊರಬಂದಿದ್ದ ಆಸಿಫ್, ಕೆಲವೇ ಗಂಟೆಗಳ ಬಳಿಕ ಗಂಭೀರ ಗಾಯಗಳೊಂದಿಗೆ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಪ್ರಕರಣವನ್ನು ಪೊಲೀಸರು ಆರಂಭದಲ್ಲಿ ಅಸಹಜ ಸಾವು ಎಂದು ದಾಖಲಿಸಿಕೊಂಡಿದ್ದರು. ಆದರೆ, ಘಟನೆ ನಡೆದ ಸ್ಥಳದ ಸಮೀಪ ಲಾರಿ ಹಾಗೂ ಅದರ…

Read More

ಎಂಡಿಎಂಎ ಹಾಗೂ ಅರ್ಧಲಕ್ಷದಷ್ಟು ಹಣದೊಂದಿಗೆ ಯುವಕ ಸೆರೆ

ಮಂಜೇಶ್ವರ : ಮಾದಕ ವಸ್ತುಗಳ ವಿರುದ್ಧ ಕಠಿಣ ಸಮರ ಸಾರಿರುವ ಮಂಜೇಶ್ವರ ಪೊಲೀಸರು, ಮತ್ತೊಂದು ಕಾರ್ಯಾಚರಣೆಯಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆಯ ಬಿಸ್ಮಿಲ್ಲಾ ಮಂಜಿಲ್ ನಿವಾಸಿ ಮೊಹಮ್ಮದ್ ಸಮೀರ್ ಪಿ.ಎ (30) ಬಂಧಿತ ಆರೋಪಿ. ​ಖಚಿತ ಮಾಹಿತಿ ಮೇರೆಗೆ ಬಪ್ಪಾಯಿತೊಟ್ಟಿಯಲ್ಲಿ ನಡೆಸಿದ ದಾಳಿಯ ವೇಳೆ, ಈತನಿಂದ 5.080 ಗ್ರಾಂ ಎಂಡಿಎಂಎ ಹಾಗೂ ಮಾರಾಟದ ಹಣ 55,860 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ವರ ಪೋಲೀಸರ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಆರೋಪಿಯ…

Read More

ಪಿಣರಾಯಿ ವಿಜಯನ್ ವಿರುದ್ಧದ ‘ರಾಜಕೀಯ ಬೇಟೆ’ ಖಂಡಿಸಿ ಹೊಸಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಹೊಸಂಗಡಿ: ಕೇರಳದ ವಿರೋಧ ಪಕ್ಷ ನಾಯಕರು ಹಾಗೂ ಸಿಪಿಐಎಂ ಪೊಲಿಟ್ ಬ್ಯೂರೋ ಸದಸ್ಯರಾದ Pinarayi Vijayan ಅವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆ ED ಅನ್ನು ಬಳಸಿಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಬೇಟೆ ನಡೆಸುತ್ತಿವೆ ಎಂದು ಆರೋಪಿಸಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಟೌನ್‌ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು. ಪ್ರಜಾಪ್ರಭುತ್ವದ…

Read More

ಬಾಳಿಯೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಅವಧಿ ವಿಸ್ತರಣೆ

ಬಾಳಿಯೂರು: ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳಿಯೂರಿನಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಶಿಬಿರದ ಅವಧಿಯನ್ನು ವಿಸ್ತರಿಸಲಾಗಿದೆ. ಶಿಬಿರದ ಫಲಾನುಭವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಹುಜನರ ಅಪೇಕ್ಷೆಯ ಮೇರೆಗೆ ಇನ್ನಷ್ಟು ಜನರಿಗೆ ಇದರ ಪ್ರಯೋಜನ ದೊರಕಲೆಂದು ಶಿಬಿರವನ್ನು ಮೇ 27, 2026ರ ಬುಧವಾರದವರೆಗೆ ಮುಂದುವರಿಸಲು ವ್ಯವಸ್ಥಾಪಕರು ತೀರ್ಮಾನಿಸಿದ್ದಾರೆ. ಆರೋಗ್ಯ ಸಂಬಂಧಿತ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಥೆರಪಿ ಸಹಕಾರಿಯಾಗುತ್ತಿದೆ ಎಂದು ಶಿಬಿರದಲ್ಲಿ ಭಾಗವಹಿಸಿದವರು ಅಭಿಪ್ರಾಯಪಟ್ಟಿದ್ದಾರೆ….

Read More

​ಬಂಗ್ರ ಮಂಜೇಶ್ವರ: ಶಿಥಿಲಗೊಂಡ ಸೇತುವೆ; ಮಹಾ ದುರಂತಕ್ಕೆ ಕಾಯುತ್ತಿದೆಯೇ ಆಡಳಿತ ವ್ಯವಸ್ಥೆ?

​ಮಂಜೇಶ್ವರ: ಸುಮಾರು 70 ವರ್ಷಗಳ ಇತಿಹಾಸವಿರುವ ಬಂಗ್ರ ಮಂಜೇಶ್ವರದ ಸೇತುವೆ ಇದೀಗ ತೀವ್ರ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಭೀತಿಯಲ್ಲಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ. ಸೇತುವೆಯ ಅಡಿಭಾಗದ ಕಂಬಗಳು ತುಕ್ಕು ಹಿಡಿದು ಬಿರುಕು ಬಿಟ್ಟಿದ್ದು, ಸಂಬಂಧಪಟ್ಟ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.​ಈ ಸೇತುವೆಯು ದಶಕಗಳ ಹಿಂದೆಯೇ ನಿರ್ಮಾಣವಾಗಿದ್ದು, ಕಾಲದ ಹೊಡೆತಕ್ಕೆ ಸಿಲುಕಿ ಸಂಪೂರ್ಣ ದುರ್ಬಲಗೊಂಡಿದೆ ಎನ್ನಲಾಗುತ್ತಿದೆ. ಸೇತುವೆಯ ಮೇಲಿಂದ ಘನ ವಾಹನಗಳು ಸಂಚರಿಸುವಾಗ ಅದು ಅಲುಗಾಡುತ್ತಿದ್ದು, ಪ್ರಯಾಣಿಕರಲ್ಲಿ ಭಯದ ವಾತಾವರಣ…

Read More

ಅಂಬೇಡ್ಕರ್ ನಗರ ಕುಬಣೂರಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಅಂಬೇಡ್ಕರ್ ನಗರ ಕುಬಣೂರಿನ ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕೋಪಕರಣ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಂಗನವಾಡಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಸುಮಾರು 60 ವಿದ್ಯಾರ್ಥಿಗಳಿಗೆ ಪುಸ್ತಕಗಳು ಮತ್ತು ಅಗತ್ಯ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮಕ್ಕೆ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸಾಕ್ಷಿ ಶೆಟ್ಟಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಗ್ರಾಮ ವಿಕಸನ ಕಲಾ ವೇದಿಕೆ ಮಂಗಲ್ಪಾಡಿ ಅಧ್ಯಕ್ಷ ಶ್ರೀ ಕಿಶೋರ್ ಕುಮಾರ್ ಮಂಗಲ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…

Read More
error: Content is protected !!