ಉಪ್ಪಳದಲ್ಲಿ ₹3.90 ಕೋಟಿ ವೆಚ್ಚದ ಪೈವಳಿಕೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಕಟ್ಟಡ ಉದ್ಘಾಟನೆ

ಉಪ್ಪಳ. ಕೆಐಐಎಫ್‌ಬಿ ನಿಧಿಯಿಂದ 3.90 ಕೋಟಿ ರೂ.ಗಳನ್ನು ಬಳಸಿಕೊಂಡು ಆಧುನಿಕ ರೀತಿಯಲ್ಲಿ ನಿರ್ಮಿಸಲಾದ ಬಹುಮಹಡಿ ಪೈವಳಿಕೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ, ಕಟ್ಟಡವನ್ನು ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸಿದರು. ಮಂಜೇಶ್ವರಂ ಬ್ಲಾಕ್ ಪಂಚಾಯತ್ ಅಧ್ಯಕ್ಷ ಯು.ಕೆ. ಸೈಫುಲ್ಲಾ ತಂಗಲ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಕಿರಣಂ ಯೋಜನೆಯಡಿ ರಾಜ್ಯ ಸರ್ಕಾರದ ಸಾರ್ವಜನಿಕ ಶಿಕ್ಷಣ ರಕ್ಷಣಾ ಕಾರ್ಯಕ್ರಮದ ಭಾಗವಾಗಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಕೇರಳದಲ್ಲಿ ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಶ್ರೇಷ್ಠತೆಯ ಹಾದಿಯಲ್ಲಿದೆ ಹಾಗೂ ದೇಶದಲ್ಲಿ ರಸ್ತೆಗಳು ಹಾಗೂ ಸೇತುವೆಗಳು ಇಲ್ಲದಿದ್ದಾಗ ನಮ್ಮ…

Read More

ಮಂಜೇಶ್ವರದಲ್ಲಿ ದುರ್ಘಟನೆ: ಅಸೌಖ್ಯದಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಮೃತ್ಯು

ಮಂಜೇಶ್ವರ: ಅಸೌಖ್ಯದಿಂದ ಬಳಲುತಿದ್ದ ಚಕ್ಕಿಗುಡ್ಡೆ ನಿವಾಸಿ ಮಧ್ಯವಯಸ್ಕ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದೆ. ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 20ನೇ ವಾರ್ಡ್‌ನ ಚಕ್ಕಿಗುಡ್ಡೆಯಲ್ಲಿ ಈ ಘಟನೆ ವರದಿಯಾಗಿದೆ. ಚಕ್ಕಿಗುಡ್ಡೆ ನಿವಾಸಿ ಗೀತಾ ಎಂಬುವವರೇ ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಗೀತಾ ಅವರು ಮನೆಯ ಸಮೀಪದ ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ. ​ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ…

Read More

ಬಲ್ಲಂಗುಡೇಲು ಶ್ರೀ ಪಾಡಾಂಗರೆ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವಕ್ಕೆ ಭವ್ಯ ಚಾಲನೆ

ಇತಿಹಾಸ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಬಲ್ಲಂಗುಡೇಲು ಶ್ರೀ ಪಾಡಾoಗರೆ ಭಗವತೀ ಕ್ಷೇತ್ರ ಪಟ್ಟತ್ತೂರುವಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕಳಿಯಾಟ ಮಹೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮಾರ್ಚ್ 1ರಿಂದ ಪ್ರಾರಂಭವಾಗುವ ಕಳಿಯಾಟ ಉತ್ಸವವು ಮಾರ್ಚ್ 08ರ ವರೆಗೆ ನಡೆಯಲಿದೆ . ತರುವಾಯ ನಿನ್ನೆ ಬೆಳಗ್ಗೆ 5:30ಕ್ಕೆ ಕೆಂಡಸೇವೆ , ಬಲಿ ಮೂರ್ತಿದರ್ಶನ, 9:00ಕ್ಕೆ ಧ್ವಜಾರೋಹಣ ಮದ್ಯಾಹ್ನ 12:00ರಿಂದ ಕ್ಷೇತ್ರದ ವತಿಯಿಂದ ಅನ್ನದಾನ ಸೇವೆ ನಡೆಯಿತು,ಮಧ್ಯಾಹ್ನ 2:00ಗೆ “ಚೀರುoಭ ಭಗವತಿ ” ಭಜನಾ ತಂಡ ಉಳ್ಳಾಲ ಇವರಿಂದ ಭಜನೆ…

Read More

ಮಂಜೇಶ್ವರದಲ್ಲಿ ಕೆಂಪುಕಲ್ಲು–ಮರ ಕಳ್ಳಸಾಗಣೆ ಮುಂದುವರಿಕೆ: ಕೇಶವನಾಯಕ್ ಚುನಾವಣೆಗೆ

ಕುಂಬಳೆ : ನಿರಂತರವಾಗಿ ವಿನಂತಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ, ಮಂಜೇಶ್ವರ ಕ್ಷೇತ್ರದ ವಿವಿಧ ಭಾಗಗಳಿಂದ ಕೆಂಪುಕಲ್ಲು ಹಾಗೂ ಮರದ ಕಳ್ಳಸಾಗಣೆ ತಡೆಯಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಹೋರಾಟದ ಭಾಗವಾಗಿ, ಕುಂಬಳೆ ಆರ್‌ಟಿಐ ಕಾರ್ಯಕರ್ತ ಕೇಶವನಾಯಕ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಅವರು ವರ್ಷಗಳಿಂದ ವಿವಿಧ ಸಾಮಾಜಿಕ ಹಾಗೂ ನೈಸರ್ಗಿಕ ಶೋಷಣೆಗಳ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅನಂತಪುರಂ, ಬಾಯಾರ್ ಹಾಗೂ ಪಾದಕಲ್ಲುವಿನ ವಿವಿಧ ಸ್ಥಳಗಳಿಂದ ಕೆಂಪುಕಲ್ಲು ಹಾಗೂ ಮರಗಳನ್ನು ಕರ್ನಾಟಕ ಹಾಗೂ ತಮಿಳುನಾಡಿಗೆ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಅವರು…

Read More

ಮಾತೃತ್ವದ ಹಾದಿಯಲ್ಲಿ ವಿದ್ಯಾರ್ಥಿಗಳ ಹೆಜ್ಜೆ: ಕುಂಜತ್ತೂರು-ಹೊಸಂಗಡಿ ಪೀಸ್ ಕ್ರಿಯೇಟಿವ್ ಶಾಲೆ ವತಿಯಿಂದ ರಂಜಾನ್ ಕಿಟ್ ವಿತರಣೆ

ಮಂಜೇಶ್ವರ : ಪವಿತ್ರ ರಂಜಾನ್ ತಿಂಗಳು ಕೇವಲ ಉಪವಾಸಕ್ಕಷ್ಟೇ ಸೀಮಿತವಲ್ಲ, ಅದು ದಾನ-ಧರ್ಮ ಹಾಗೂ ಪರಸ್ಪರ ಸಹಕಾರದ ಸಂಕೇತವೂ ಹೌದು ಎಂಬುದನ್ನು ಕುಂಜತ್ತೂರು ಹಾಗು ಹೊಸಂಗಡಿ ಪೀಸ್ ಕ್ರಿಯೇಟಿವ್ ಶಾಲೆಯ ವಿದ್ಯಾರ್ಥಿಗಳು ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದ್ದಾರೆ. ಪವಿತ್ರ ಮಾಸದ ಹಿನ್ನೆಲೆಯಲ್ಲಿ ಸಮಾಜದ ದುರ್ಬಲ ವರ್ಗದವರ ಕಣ್ಣೀರು ಒರೆಸುವ ಮಹತ್ತರ ಉದ್ದೇಶದೊಂದಿಗೆ, ಶಾಲಾ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಹಸಿದವರಿಗೆ ಅನ್ನ, ಬಟ್ಟೆ ಹಾಗೂ ಧಾರ್ಮಿಕ ಮಾರ್ಗದರ್ಶನದ ಹರಿಕಾರರಾಗಿ ಹೊರಹೊಮ್ಮಿದ್ದಾರೆ. ವಿದ್ಯಾರ್ಥಿಗಳು ಶ್ರಮವಹಿಸಿ ಸಂಗ್ರಹಿಸಿದ ಹಾಗು ಸಿದ್ಧಪಡಿಸಲಾದ ದಿನಬಳಕೆಯ ಅಗತ್ಯ ದಿನಸಿ ಪದಾರ್ಥಗಳನ್ನೊಳಗೊಂಡ…

Read More

ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ರೀಗೆ ” ಭರತ ಭೂಷಣ ಆದರ್ಶ ಕನ್ನಡ ದಂಪತಿ”ರಾಷ್ಟ್ರ ಪ್ರಶಸ್ತಿ. ಘೋಷಣೆ.

ವಿಶ್ವ ರಾಮಕ್ಷತ್ರಿಯ ಮಹಾಸಂಘ ಉಪಾಧ್ಯಕ್ಷರು ಹಾಗೂ ಕನ್ನಡ ಭವನ ಕಾಸರಗೋಡು, ಸೀತಮ್ಮ ಪುರುಷನಾಯಕ ಸ್ಮಾರಕ ಗ್ರಂಥಾಲಯ, ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕ ಸಂಚಾಲಕರು ಆದ ಕಾಸರಗೋಡು ನುಲ್ಲಿಪ್ಪಾಡಿಯ ಡಾ. ವಾಮನ್ ರಾವ್ ಬೇಕಲ್ ಇವರೀಗೆ ಕರ್ನಾಟಕ ರಾಜ್ಯ ಈ ಶ್ರೀ ಲಕ್ಕಮದೇವಿ ಕಲಾ ಪೋಷಕ ಸಂಘ (ರಿ.)ಭ್ಯಾಕೂಡ,ಈ ಸಂಸ್ಥೆ ಬೆಳಗಾವಿ ಯಲ್ಲಿ ನಡೆಯುವ ಅಖಿಲ ಕರ್ನಾಟಕ ಭಾವೈಕತಾ ಸಮ್ಮೇಳನದಲ್ಲಿ ಕನ್ನಡ ನಾಡಿನ ನೆಲ, ಜಲ, ಭಾಷೆ ಮತ್ತು ಸಾಂಸ್ಕೃತಿಕ ನಿಟ್ಟಿನಲ್ಲಿ ಸಾಧನೆ ಗೈಯುತ್ತಿರುವ…

Read More

ಕಾಸರಗೋಡು ಗೋ-ಕುಟೀರಕ್ಕೆ ಲಾಂಛನ: ಹಿರಿಯ ಕಲಾವಿದ ಜಿ.ಎಂ. ಹೆಗಡೆ ತಾರಗೋಡ ರಚನೆ

ಕಾಸರಗೋಡು:- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ- ಕುಟೀರ”ವನ್ನು ಸದಾ ನೆನಪಿಸುವ ಲಾಂಛನ (ಲೋಗೋ )ವನ್ನು ಖ್ಯಾತ ಹಿರಿಯ ಚಿತ್ರ ಕಲಾವಿದ, ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಜಿ.ಎಂ.ಹೆಗಡೆ ತಾರಗೋಡ ಅವರು ರಚಿಸಿದ್ದಾರೆ. ಕರ್ನಾಟಕ ಕಲಾ ವಲಯದಲ್ಲಿ ಜಿ.ಎಂ. ಹೆಗಡೆ ತಾರಗೋಡ ಶಿರಸಿ ತಮ್ಮ ಕಲಾ ಪ್ರಕಾರಗಳ ಸಾಂಪ್ರದಾಯಿಕವಲ್ಲದೇ, ಆಧುನಿಕ ಶೈಲಿ, ನವ್ಯ ಹಾಗೂ ಸಂಪ್ರದಾಯಗಳ ಮಿಶ್ರಣದ ಶೈಲಿ ಇವರದೇ ಶೈಲಿಯಲ್ಲಿ…

Read More

ರಾಜ್ಯದಾದ್ಯಂತ 70ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳ ಆರೋಪಿ, ಕುಖ್ಯಾತ ಕಳ್ಳ ‘ಶಟರ್’ ಜಲೀಲ್ ಪೊಲೀಸ್ ಬಲೆಗೆ

ಮಂಜೇಶ್ವರ: ಕೇರಳದಾದ್ಯಂತ ಕಳ್ಳತನ ನಡೆಸಿ ಪೊಲೀಸರಿಗೆ ತಲೆನೋವಾಗಿದ್ದ ಕುಖ್ಯಾತ ಕಳ್ಳ ‘ಶಟರ್’ ಜಲೀಲ್ ಹಾಗೂ ಅವನ ಸಹಚರನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ಬೇಕಲ ಡಿವೈಎಸ್ಪಿ ಎಂ.ಪಿ. ಆಜಾದ್ ನೇತೃತ್ವದ ತಂಡ ನಡೆಸಿದ ತಾಂತ್ರಿಕ ಕಾರ್ಯಾಚರಣೆಯಲ್ಲಿ ಈ ಖತರ್ನಾಕ್ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಕುಂಬಳೆ ಹಾಗೂ ಪೆರಿಯಾದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಗಳನ್ನು ಬೆನ್ನಟ್ಟಿದ ಪೊಲೀಸರು, ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ​ಪಾಲಕ್ಕಾಡ್ ಚಿತ್ತೂರು ನಿವಾಸಿ ‘ಶಟರ್’ ಜಲೀಲ್ ಅಲಿಯಾಸ್ ಅಯಿರೂರ್ ಕೊಳಕ್ಕಪರಂಬಿಲ್ ಜಲೀಲ್ (36) ಹಾಗೂ ಕದ್ದ ಮಾಲುಗಳನ್ನು ಮಾರಾಟ…

Read More

ಪಳ್ಳಿಕ್ಕರದಲ್ಲಿ ಭಯಭಕ್ತಿಯ ಒತ್ತೆಕೋಲ: ಜ್ವಾಲೆಯ ನಡುವೆ ವಿಷ್ಣುಮೂರ್ತಿಯ ಅಗ್ನಿ ಪ್ರವೇಶ

ಕಾಸರಗೋಡು ಜಿಲ್ಲೆಯ ಪಳ್ಳಿಕ್ಕರ ಪಂಚಾಯತ್ ವ್ಯಾಪ್ತಿಯ ಚೇಟ್ಟುಕುಂಡು ಭಾಗದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಒತ್ತೆಕೋಲ ಸೇವೆಯು ಶನಿವಾರ ನಡೆಯಿತು .ಸಾಮಾನ್ಯವಾಗಿ ಭೂತಾರಾಧನೆಯಲ್ಲಿ ಉಳಿದ ತೆಯ್ಯಮ್ ಗಳಿಗಿಂತ ಭಿನ್ನವಾಗಿ ಈ ಒತ್ತೆಕೋಲ ನಡೆಯುವುದು ವಾಡಿಕೆಯಾಗಿದೆ. ಒತ್ತೆಕೋಲದಲ್ಲಿ ಶ್ರೀ ವಿಷ್ಣು ಮೂರ್ತಿ ದೈವದ ನಿಗಿ ನಿಗಿಯುವ ಅಗ್ನಿಯ ಪ್ರವೇಶದ ದೃಶ್ಯ ನೋಡುಗರ ಕಣ್ಣಲ್ಲಿ ಭಯ ಭಕ್ತಿಯನ್ನು ತುಂಬುತ್ತದೆ . ಧನೀಷ್ ಪಣಿಕ್ಕರ್ ವಿಷ್ಣು ಮೂರ್ತಿ ಕೋಲಧಾರಿಯಾಗಿದ್ದರು . ಕೇಸರಿ ಮುಖವರ್ಣಿಕೆಯ ಈ ದೈವವು ಶ್ರೀ ವಿಷ್ಣುವಿನ ಅವತಾರವೆಂದು ಐತಿಹ್ಯ ಕಥೆಗಳು…

Read More

ಕಾಸರಗೋಡು -ಕರ್ನಾಟಕ ಸಾಹಿತ್ಯ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳರೀಗೆ ಎಡನೀರು ಶ್ರೀ ಗಳಿಂದ ಸಮ್ಮೇಳನ ವಿಶೇಷ ಸನ್ಮಾನ -ಗೌರವಾರ್ಪಣೆ.

ಕಾಸರಗೋಡು : ಕಾಸರಗೋಡು ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ವಾರ್ಷಿಕೋತ್ಸವದ ಭಾಗವಾಗಿ ನಡೆದ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಡಾ. ವಾಮನ್ ರಾವ್ ಬೇಕಲ್ ಸ್ಥಾಪಿತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಡಾ. ಎಮ್. ಜಿ. ಆರ್. ಅರಸ್ “ವೇದಿಕೆಯಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಮ್ಮೇಳನ ದ ಸರ್ವತೋಮುಖ ಯಶಸ್ವಿಗೆ ಅಹೋರಾತ್ರಿ ಶ್ರಮಿಸಿದ, ತನು -ಮನ -ಧನ ದಿಂದ ಶ್ರಮಿಸಿದ ಕಾಯಕ ಯೋಗಿ ಡಾ….

Read More
error: Content is protected !!