ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನಿಗೂಢ ನಾಪತ್ತೆ

​ಮಂಜೇಶ್ವರ: ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಯುವಕನೊಬ್ಬ ಕಳೆದ ಎರಡು ವರ್ಷಗಳಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೋಡಿಬೈಲು ಕೊಡಂಗೆ ನಿವಾಸಿ ಸಚಿನ್ ಕುಮಾರ್ (34) ನಾಪತ್ತೆಯಾದವರು. ​ಸಚಿನ್ ಕುಮಾರ್ 2024ರ ಮಾರ್ಚ್‌ನಲ್ಲಿ ಮಂಗಳೂರಿನ ಹೋಟೆಲ್ ಒಂದರಲ್ಲಿ ಕೆಲಸಕ್ಕೆ ಸೇರುತ್ತಿರುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ್ದಾರೆನ್ನಲಾಗಿದೆ. ಆದರೆ ನಂತರ ಅವರು ಮನೆಗೆ ಮರಳಿಲ್ಲ, ಅವರ ಮೊಬೈಲ್ ಸಹ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. ಸೋದರಿ ಸಾರಿಕಾ ರೂಪರಾಜ್ ಶೆಟ್ಟಿ ಅವರು ಹಲವು ಬಾರಿ ಹುಡುಕಾಟ ನಡೆಸಿದರೂ ಫಲ ನೀಡಿಲ್ಲ. ಕೆಲಸ ಮಾಡುತ್ತಿದ್ದ…

Read More

ಮಂಗಲ್ಪಾಡಿ ಕುಲಾಲ ಸಂಘದ ವಾರ್ಷಿಕೋತ್ಸವ ಸಂಭ್ರಮ: ಕೃಷಿರತ್ನ ಬಿರುದು ಪ್ರದಾನ, ಪ್ರತಿಭಾವಂತರಿಗೆ ಸನ್ಮಾನ

ಮಂಗಲ್ಪಾಡಿ : ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.) ಮಂಗಲ್ಪಾಡಿ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 24/05/2026ನೇ ರವಿವಾರ ಬೆಳಿಗ್ಗೆ 10ಗಂಟೆಗೆ ಕುಬಣೂರು ಶ್ರೀ ರಾಮ ಎ.ಯು.ಪಿ.ಶಾಲಾ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹು ವಿಜ್ರಂಭಣೆಯಿಂದ ಜರುಗಿತು.ಮೊದಲಿಗೆ ಸಭಾ ಕಾರ್ಯಕ್ರಮವನ್ನು ಪ್ರೇಮಲತಾ ಬೊಳ್ಳಾರು ಮತ್ತು ಬಳಗದವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು.ಶ್ರೀ ಬಾಲಕೃಷ್ಣ ಪಯ್ಯಾರ್ ಅತಿಥಿಯವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಈ ಸಭಾ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಮಂಗಲ್ಪಾಡಿ ಶಾಖೆಯ ಅಧ್ಯಕ್ಷರಾದ ಶ್ರೀ ಸತೀಶ್ ಎಂ.ಹೇರೂರು ವಹಿಸಿದರು.ಶ್ರೀ ಶಂಕರ…

Read More

ವಾರಂಟ್ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ:ಪರಾರಿಯಾಗಿದ್ದ ಸುಹೈಲ್‌ನನ್ನು ಹರಸಾಹಸಪಟ್ಟು ಬಂಧಿಸಿದ ಪೊಲೀಸ್

​ಮಂಜೇಶ್ವರ: ಹೊಸದುರ್ಗ ಪೊಲೀಸ್ ಠಾಣೆಯ ವಾರಂಟ್ ಆರೋಪಿಯನ್ನು ಬಂಧಿಸಲು ಉಪ್ಪಳ ಮಣಿಮಂಡಕ್ಕೆ ತೆರಳಿದ್ದ ಪೊಲೀಸ್ ತಂಡದ ಮೇಲೆ ಹಲ್ಲೆ ನಡೆಸಿ, ಆರೋಪಿಯನ್ನು ಬಿಡಿಸಿಕೊಂಡು ಹೋದ ಆರೋಪಿಯನ್ನು ಹರಸಾಹಸ ಪಟ್ಟು ಪೋಲೀಸರು ಬಂಧಿಸಿದ್ದಾರೆ. ​ಹೊಸದುರ್ಗ ಪೊಲೀಸ್ ಠಾಣೆಯ ಕೇಸೊಂದಕ್ಕೆ ಸಂಬಂಧಿಸಿದಂತೆ ಸುಹೈಲ್ ಎಂಬಾತನನ್ನು ಬಂಧಿಸಲು ಕಾಸರಗೋಡಿನಿಂದ ಪೊಲೀಸ್ ತಂಡ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ವಿಶೇಷ ದಳ ತೆರಳಿತ್ತು. ಈತ ಮಂಗಳೂರಿನ ಕೆ.ಸಿ. ರೋಡ್‌ನಲ್ಲಿ ನಡೆದ ಗ್ಯಾಂಗ್ ವಾರ್‌ನಲ್ಲಿ ಹತ್ಯೆಯಾದ ಕುಖ್ಯಾತ ರೌಡಿ ಕಾಲಿಯ ರಫೀಕ್‌ನ ಪುತ್ರನಾಗಿದ್ದು, ಹಲವು…

Read More

ಮೇ 31ರಂದು ನೀರ್ಚಾಲಿನಲ್ಲಿ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನ

ನೀರ್ಚಾಲು: ಕನ್ನಡದ ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅವರ 85ನೇ ಅಭಿನಂದನಾ ಪೂರ್ವಕವಾಗಿ ‘ಮಂಜೇಶ್ವರದ ಮುತ್ತು’ ಸಾಕ್ಷ್ಯಚಿತ್ರ ಬಿಡುಗಡೆ, ಕುಟ್ಟಿಯಾನ ಮುಹಮ್ಮದ್ ಅವರ ‘ಕನಸುಗಳ ಭೂಮಿಗೆ ಯಾತ್ರೆ’ ಕೃತಿ ಬಿಡುಗಡೆ ಹಾಗೂ ‘ಕನ್ನಡಿಯಲ್ಲಿ ಕನ್ನಡಿಗ’ ಕೃತಿ ಸರಣಿಯ 7ನೇ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮೇ 31ರಂದು ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ನಡೆಯಲಿದೆ. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನದಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಗಡಿನಾಡಿನ ಕನ್ನಡ ಚಟುವಟಿಕೆಗಳಿಗೆ…

Read More

​ಗಡಿನಾಡಿನ ಸಾಹಿತ್ಯ-ಸಾಂಸ್ಕೃತಿಕ ಕಣ್ಮಣಿ ಫಾದರ್ ಬಾಸಿಲ್ ವಾಸ್ ಅವರಿಗೆ ಭಾವುಕ ವಿದಾಯ

​ಕಾಸರಗೋಡು: ಗಡಿನಾಡ ಕಾಸರಗೋಡಿನ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರಂತರ ಬೆಂಬಲ ನೀಡುತ್ತಾ, ಅಂತರಧರ್ಮೀಯ ಸೌಹಾರ್ದದ ಪ್ರತೀಕವಾಗಿ ಗುರುತಿಸಿಕೊಂಡಿದ್ದ ವರ್ಕಾಡಿ ಸೇಕ್ರೆಡ್ ಹಾರ್ಟ್ ಆಫ್ ಜೀಸಸ್ ಚರ್ಚ್‌ನ ಧರ್ಮಗುರು ಅತೀ ವಂದನೀಯ ಫಾದರ್ ಬಾಸಿಲ್ ವಾಸ್ ಅವರು ಇದೀಗ ಹೊಸ ಜವಾಬ್ದಾರಿಯೊಂದಿಗೆ ಮಂಗಳೂರಿನ ಬೊಂದೆಲ್ ಚರ್ಚ್‌ಗೆ ವರ್ಗಾವಣೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕನ್ನಡ ಕಾರ್ಯನಿರತ ಪತ್ರಕರ್ತರ ಶ್ರೇಯೋಭಿವೃದ್ಧಿ ಸಂಘ ಮತ್ತು ವಿವಿಧ ಕನ್ನಡ ಸಂಘಟನೆಗಳ ವತಿಯಿಂದ ಅದ್ಧೂರಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ​ಕನ್ನಡ ಪತ್ರಕರ್ತರ ಸಂಘದ…

Read More

ರಸಗೊಬ್ಬರ ದರ ಏರಿಕೆ ವಿರುದ್ಧ ರೈತಸಂಘದ ಪ್ರತಿಭಟನೆ:“ಕೇಂದ್ರ ಸರ್ಕಾರದ ರೈತದ್ರೋಹಿ ನೀತಿ ಖಂಡನೀಯ” – ಕೆ.ಆರ್. ಜಯಾನಂದ

ಬಾಯಾರು : ರಸಗೊಬ್ಬರದ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ರೈತಸಂಘದ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಬಾಯಾರು ಪದವಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಯನ್ನು ರೈತಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಉದ್ಘಾಟಿಸಿ ಮಾತನಾಡಿ, ರಸಗೊಬ್ಬರ ದರ ಏರಿಕೆಯಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ತೀವ್ರವಾಗಿ ಖಂಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಂದ್ರಹಾಸ ಶೆಟ್ಟಿ ಮಾಸ್ಟರ್ ವಹಿಸಿದ್ದರು. ಏರಿಯಾ ಕಾರ್ಯದರ್ಶಿ ಅಶೋಕ ಭಂಡಾರಿ…

Read More

ಕೇರಳದಲ್ಲಿ ಮೂರನೇ ಪರ್ಯಾಯಕ್ಕೆ ಮನ್ನಣೆ: ವಿ.ಕೆ. ಸಜೀವನ್

ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶವು ರಾಜ್ಯದಲ್ಲಿ ಮೂರನೇ ಪರ್ಯಾಯಕ್ಕೆ ಸಿಕ್ಕ ಮನ್ನಣೆಯನ್ನು ಸೂಚಿಸುತ್ತದೆ ಎಂದು ಬಿಜೆಪಿ ರಾಜ್ಯ ಸೆಲ್ ಕೋರ್ಡಿನೇಟರ್ ಹಾಗೂ ಕೋಝಿಕ್ಕೋಡ್ ಮೇಘಲಾ ಪ್ರಭಾರಿ ವಿ.ಕೆ. ಸಜೀವನ್ ಹೇಳಿದ್ದಾರೆ. ಡಾ. ಶ್ಯಾಮಪ್ರಸಾದ್ ಮುಖರ್ಜಿ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೇರಳದಲ್ಲಿ 30 ಲಕ್ಷ ಮತಗಳು ಮತ್ತು ಮೂವರು ಶಾಸಕರು ಲಭಿಸಿರುವುದು ಜನತೆ ಬಿಜೆಪಿಯನ್ನು ಒಪ್ಪಿಕೊಳ್ಳುತ್ತಿರುವುದಕ್ಕೆ ಪುರಾವೆಯಾಗಿದೆ. ಈ ಯಶಸ್ಸು ಬಿಜೆಪಿ ಮುನ್ನಡೆಸುತ್ತಿರುವ ಅಭಿವೃದ್ಧಿ ರಾಜಕಾರಣಕ್ಕೆ ಸಿಕ್ಕ ಮನ್ನಣೆಯೂ ಹೌದು….

Read More

ಮರೆತವರ ಮಡಿಲಲ್ಲಿ ಮರೆಯಾಗುತ್ತಿದೆ ಬಂಗ್ರ ಮಂಜೇಶ್ವರ: ಅಭಿವೃದ್ಧಿಗಾಗಿ ಎಚ್ಚೆತ್ತುಕೊಳ್ಳುವುದೇ ಆಡಳಿತ?

​ಮಂಜೇಶ್ವರ: ಭವ್ಯ ಪರಂಪರೆ, ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಕೋಮು ಸೌಹಾರ್ದದ ಪ್ರತೀಕವಾಗಿರುವ ‘ಬಂಗ್ರ ಮಂಜೇಶ್ವರ’ ಇಂದು ಅಭಿವೃದ್ಧಿಯ ದೃಷ್ಟಿಯಿಂದ ಸಂಪೂರ್ಣ ಕಡೆಗಣಿಸಲ್ಪಟ್ಟಿದೆ. ದಶಕಗಳಿಂದಲೂ ಇಲ್ಲಿನ ಜನಾಂಗದ ಆಶೋತ್ತರಗಳು ಜನಪ್ರತಿನಿಧಿಗಳ ನಿರ್ಲಕ್ಷ್ಯದ ಸುಳಿಯಲ್ಲಿ ಸಿಲುಕಿ ನಲುಗುತ್ತಿವೆ. ​ಐತಿಹಾಸಿಕ ಹಿರಿಮೆ ಮತ್ತು ಸಾಂಸ್ಕೃತಿಕ ಸಂಪತ್ತು​ಬಂಗ್ರ ಮಂಜೇಶ್ವರವು ಕೇವಲ ಒಂದು ಪ್ರದೇಶವಲ್ಲ, ಇದೊಂದು ಇತಿಹಾಸದ ಭಂಡಾರ. ಇಲ್ಲಿನ 161 ವರ್ಷಗಳ ಹಳೆಯದಾದ ಕಟ್ಟಡವು ಇಂದಿಗೂ ಯಾವುದೇ ಹಾನಿಗಳಿಲ್ಲದೆ ಅಚಲವಾಗಿ ನಿಂತಿದ್ದು, ಅಂದಿನ ವಾಸ್ತುಶಿಲ್ಪದ ವೈಭವವನ್ನು ಸಾರುತ್ತಿದೆ. ಒಂದು ಕಾಲದಲ್ಲಿ ಭವ್ಯವಾಗಿ ನಡೆಯುತ್ತಿದ್ದ…

Read More

ಅಪಾಯದ ಅಂಚಿನಲ್ಲಿ ಒಣಗಿದ ಕಜುವರಿನ ಮರ: ಮಂಜೇಶ್ವರ ಕಡಲತೀರದಲ್ಲಿ ಸಂಭವನೀಯ ದುರಂತದ ಆತಂಕ

​ಮಂಜೇಶ್ವರ: ಮಂಜೇಶ್ವರ ಕಡಲತೀರದಲ್ಲಿರುವ ಓಷನ್ ವಾಟರ್ ಪಾರ್ಕ್‌ನ ಮುಂಭಾಗದಲ್ಲಿರುವ ಬೃಹತ್ ಕಜುವರಿನಾ ಮರವು ಯಾವುದೇ ಕ್ಷಣದಲ್ಲಿ ಧರೆಗುರುಳುವ ಸ್ಥಿತಿಯಲ್ಲಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಒಣಗಿ ಶಿಥಿಲವಾಗಿರುವ ಈ ಮರವು ಭಾರಿ ಅನಾಹುತಕ್ಕೆ ಮುನ್ಸೂಚನೆಯಾಗಿದೆ ಎಂದು ಸ್ಥಳೀಯರು ಮತ್ತು ಪ್ರವಾಸಿಗರು ಕಳವಳ ವ್ಯಕ್ತಪಡಿಸಿದ್ದಾರೆ. ​ವಾಟರ್ ಪಾರ್ಕ್‌ನ ಎದುರಿನ ಸಣ್ಣ ಅಂಗಡಿಯ ಸಮೀಪವೇ ಈ ಮರವು ಸ್ಥಿತವಾಗಿದ್ದು, ಪ್ರತಿದಿನ ಸಂಜೆಯ ವೇಳೆ ಕಡಲ ತಂಗಾಳಿಯನ್ನು ಸವಿಯಲು ಮತ್ತು ಸಮಯ ಕಳೆಯಲು ನೂರಾರು ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿನ ಕಡಲ…

Read More

ಪೆರ್ಲದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಆರೋಪ: ಮೂವರ ವಿರುದ್ಧ ಪ್ರಕರಣ

ಬದಿಯಡ್ಕ: ಮಖಾಂಗೆ ತೆರಳಿ ಪ್ರಾರ್ಥನೆ ನಡೆಸಿದ ಹಿನ್ನೆಲೆಯಲ್ಲಿ ಪೆರ್ಲದಲ್ಲಿರುವ ಬಟ್ಟೆ ಅಂಗಡಿಗೆ ನುಗ್ಗಿ ಇಬ್ಬರು ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿ ₹65,000 ಕಳೆದುಹೋಗುವಂತೆ ಮಾಡಿದ ಆರೋಪದಲ್ಲಿ ಮೂವರ ವಿರುದ್ಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಬಟ್ಟಂಪಾಡಿ ನಿವಾಸಿ ಕೆ.ಎಂ. ಮೊಹಮ್ಮದ್ ಅಶ್ರಫ್ (45) ಹಾಗೂ ಭುವನಚಂದ್ರನ್ (48) ಗಾಯಗೊಂಡವರಾಗಿದ್ದಾರೆ. ಈ ಕುರಿತು ಮೊಹಮ್ಮದ್ ಅಶ್ರಫ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ಸಂಜೆ ಸುಮಾರು 5.30ರ ವೇಳೆಗೆ ಪೆರ್ಲದಲ್ಲಿ ಭುವನಚಂದ್ರನ್ ಹಾಗೂ ಅಶ್ರಫ್ ಮಾತನಾಡುತ್ತಿದ್ದ ವೇಳೆ ಆರೋಪಿಗಳು…

Read More
error: Content is protected !!