ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎ.ಕೆ.ಎಂ. ಅಶ್ರಫ್: ಸಚಿವ ಸ್ಥಾನದ ನಿರೀಕ್ಷೆ ಭಗ್ನ
ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಭರ್ಜರಿ ಜಯಗಳಿಸಿರುವ ಎ.ಕೆ.ಎಂ. ಅಶ್ರಫ್, ಈ ಸಲ ಕೂಡಾ ಕೇರಳ ವಿಧಾನಸಭೆಯಲ್ಲಿ ಕನ್ನಡ ಭಾಷೆಯಲ್ಲಿಯೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕಾಸರಗೋಡಿನ ಭಾಷಾ ವೈವಿಧ್ಯತೆಯನ್ನು ಮತ್ತೊಮ್ಮೆ ಎತ್ತಿಹಿಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ಅವರು ಎಲ್ಲರ ಗಮನ ಸೆಳೆದರು. ಮತ್ತೊಂದೆಡೆ, ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಯುಡಿಎಫ್ ಗೆಲುವು ಸಾಧಿಸಿರುವುದರಿಂದ, ಹೊಸ ಸಚಿವ ಸಂಪುಟದಲ್ಲಿ ಕಾಸರಗೋಡು ಜಿಲ್ಲೆಗೆ ಸಚಿವ ಸ್ಥಾನ…
