ನರೇಂದ್ರ ಮೋದಿ ಸರ್ಕಾರ ಸುಶಾಸನದ ಮಾದರಿ: ನವ್ಯಾ ಹರಿದಾಸ್

ಪೆರ್ಲ: ನರೇಂದ್ರ ಮೋದಿ ಸರ್ಕಾರವು ಸುಶಾಸನಕ್ಕೆ ಜಗತ್ತಿನ ದೇಶಗಳಿಗೇ ಮಾದರಿಯಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳು ಸೇರಿದಂತೆ ಭಾರತ ಸಾಧಿಸಿರುವ ಪ್ರಗತಿಯು ಮುಂದುವರಿದ ದೇಶಗಳನ್ನೂ ಬೆರಗುಗೊಳಿಸಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ನವ್ಯಾ ಹರಿದಾಸ್ ತಿಳಿಸಿದ್ದಾರೆ. ಬಿಜೆಪಿ ಕುಂಬಳೆ ಮಂಡಲ ಹಮ್ಮಿಕೊಂಡಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ್ ಮಹಾ ಅಭಿಯಾನದ ದ್ವಿದಿನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದ ಅರ್ಧದಷ್ಟಿರುವ ಮಹಿಳಾ ಸಮಾಜದ ಕಲ್ಯಾಣವನ್ನು ಖಾತರಿಪಡಿಸಲು ನರೇಂದ್ರ ಮೋದಿ ಸರ್ಕಾರಕ್ಕೆ ಸಾಧ್ಯವಾಗಿದೆ ಎಂದು…

Read More

ಗ್ರಾಹಕರ ಪರ ಐತಿಹಾಸಿಕ ತೀರ್ಪು: ಹಣ ಮರುಪಾವತಿಸಿ ಪರಿಹಾರ ನೀಡಲು ಸೌತ್ ಇಂಡಿಯನ್ ಬ್ಯಾಂಕ್‌ಗೆ ಗ್ರಾಹಕ ಆಯೋಗದ ಆದೇಶ

ಕಾಸರಗೋಡು: ಗ್ರಾಹಕರ ಖಾತೆಯಿಂದ ಕಡಿತಗೊಳಿಸಿದ ಹಣವನ್ನು ಮರುಪಾವತಿಸುವುದರ ಜೊತೆಗೆ, ಉಂಟಾದ ಮಾನಸಿಕ ವೇದನೆ ಹಾಗೂ ಅನಾನುಕೂಲತೆಗೆ ಸೂಕ್ತ ಪರಿಹಾರವನ್ನು ನೀಡುವಂತೆ ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆಗೆ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ಆದೇಶ ನೀಡಿದೆ.ಈ ಆದೇಶವು ಸೌತ್ ಇಂಡಿಯನ್ ಬ್ಯಾಂಕ್, ಸೀತಾಂಗೋಳಿ ಶಾಖೆ ವಿರುದ್ಧ ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು ದಾಖಲಿಸಿದ್ದ ದೂರಿನ ವಿಚಾರಣೆಯ ಬಳಿಕ ಹೊರಬಿದ್ದಿದೆ. ದೂರಿನ ಪ್ರಕಾರ, ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು 2022ರಲ್ಲಿ ಸೌತ್ ಇಂಡಿಯನ್ ಬ್ಯಾಂಕ್‌ನ…

Read More

ಮಸೀದಿಯ ಕಾಣಿಕೆ ಹುಂಡಿ ಕಳ್ಳತನ : ಆರೋಪಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾಸರಗೋಡು : ​ಹೊಸದುರ್ಗದ ಕೋಟಚ್ಚೇರಿ ಟ್ರಾಫಿಕ್ ಸರ್ಕಲ್ ಸಮೀಪವಿರುವ ಬದ್ರಿಯಾ ಮಸೀದಿಯಲ್ಲಿ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಸೀದಿಯಲ್ಲಿ ಇರಿಸಲಾಗಿದ್ದ ಕಾಣಿಕೆ ಹುಂಡಿಯನ್ನು ದುಷ್ಕರ್ಮಿಯೊಬ್ಬ ಕೆಡವಿ, ಅದಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾನೆ. ಈ ಕೃತ್ಯದ ದೃಶ್ಯಗಳು ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದ್ದು, ಇದರ ಆಧಾರದ ಮೇಲೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ವ್ಯಕ್ತಿಯ ದೃಶ್ಯವನ್ನು ಪೊಲೀಸರು ಇದೀಗ ಸಾರ್ವಜನಿಕವಾಗಿ ಬಿಡುಗಡೆ ಮಾಡಿದ್ದಾರೆ. ಈ ವ್ಯಕ್ತಿಯ ಕುರಿತು ಯಾವುದೇ ಸುಳಿವು ಅಥವಾ ಮಾಹಿತಿ ದೊರೆತರೆ,…

Read More

ಮನೆಯ ಸಿಟ್ ಔಟ್‌ನಲ್ಲಿ ಪ್ರವಾಸಿ ಯುವಕನ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

​ಕಾಸರಗೋಡು : ಚಿತ್ತಾರಿ ಪೋಯ್ಯಕ್ಕರ ಕಲ್ಲಿಂಗಾಲದ ನಿವಾಸಿ ಕೆ.ವಿ. ಕೃಪೇಶ್ (38) ಎಂಬುವವರು ಶನಿವಾರ ಮುಂಜಾನೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆಲವು ತಿಂಗಳ ಹಿಂದೆಯಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದ ಕೃಪೇಶ್, ಇಂದು ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯ ಸಿಟ್ ಔಟ್‌ನಲ್ಲಿ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಮನೆಯವರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದರು. ವಿಷಯ ತಿಳಿಯುತ್ತಿದ್ದಂತೆ ಹೊಸದುರ್ಗ ಪೊಲೀಸರು ಸ್ಥಳಕ್ಕೆ ಧಾವಿಸಿ ಇನ್‌ಕ್ವೆಸ್ಟ್ ನಡೆಸಿದರು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಮಧ್ಯಾಹ್ನ…

Read More

ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಡಾ ಅನುರಾಧ ಕುರುಂಜಿ ಸುಳ್ಯರಿಗೆ ರಾಷ್ಟ್ರೀಯ ಪ್ರಶಸ್ತಿ. … !

ಕಾಸರಗೋಡು : ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಹಾಗೂ ಸಮಾಜಸೇವಕಿ ಡಾ. ಅನುರಾಧ ಕುರುಂಜಿ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಘೋಷಿಸಲಾಗಿದೆ. ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಕನ್ನಡ ಭವನ ಮತ್ತು ಗ್ರಂಥಾಲಯ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಡಾ. ಅನುರಾಧ ಕುರುಂಜಿ ಅವರಿಗೆ ನೀಡಲು ಆಯ್ಕೆ ಮಾಡಿದೆ. ವೃತ್ತಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ. ಅನುರಾಧ ಕುರುಂಜಿ…

Read More

ವ್ಯಾಯಾಮ ಶಾಲೆಯ ಬೀಗ ಮುರಿದು ಕಳವು; ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

​ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಶ್ರೀ ಅರಸು ಕೃಪಾ ವೀರ ಮಾರುತಿ ವ್ಯಾಯಾಮ ಶಾಲೆಯ ಕಾಣಿಕೆ ಡಬ್ಬಿಯನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ​ಇಂದು ಶನಿವಾರ ಸಂಜೆ ನಡೆಯಲಿರುವ ವಿಶೇಷ ಪೂಜೆಯ ಸಿದ್ಧತೆಗಾಗಿ ವ್ಯಾಯಾಮ ಶಾಲೆಯ ಪದಾಧಿಕಾರಿಯೊಬ್ಬರು ಇಂದು ನಸುಕಿನ ಜಾವ 5 ಗಂಟೆಗೆ ಸ್ಥಳಕ್ಕೆ ಆಗಮಿಸಿದಾಗ ಕಳವು ನಡೆದ ವಿಷಯ ಬೆಳಕಿಗೆ ಬಂದಿದೆ. ದುಷ್ಕರ್ಮಿಯು ವ್ಯಾಯಾಮ ಶಾಲೆಯ ಬಾಗಿಲನ್ನು ಮುರಿದು ಒಳನುಗ್ಗಿ, ಕಾಣಿಕೆ ಡಬ್ಬಿಯನ್ನು ದೋಚಿದ್ದಾನೆ. ಬಳಿಕ ಹಣವನ್ನು ದೋಚಿದ ಕಳ್ಳ, ಖಾಲಿ ಡಬ್ಬಿಯನ್ನು ವ್ಯಾಯಾಮ…

Read More

ವಿಜಯನಗರದ ಕೆ. ಎಸ್. ವೀರಭದ್ರಪ್ಪರಿಗೆ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’

ಕಾಸರಗೋಡು,: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಸಮಾಜಸೇವಕರು ಹಾಗೂ ಸಾಹಿತ್ಯ ಪರಿಪೋಷಕರಾದ ಶ್ರೀ ಕೆ. ಎಸ್. ವೀರಭದ್ರಪ್ಪ ಅವರಿಗೆ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪ ಅಂಗವಾಗಿ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ…

Read More

ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಎಡವಟ್ಟು: ಬಾಲಕನ ನಿಗೂಢ ಸಾವು: ರಾಜ್ಯ ಮಟ್ಟದ ವಿಶೇಷ ತಂಡದಿಂದ ತನಿಖೆಗೆ ಚಾಲನೆ

​ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ನಂತರ ಬೇಡಡ್ಕ ತಲೆಕುನ್ನಿನ 9 ವರ್ಷದ ಬಾಲಕ ಮುಹಮ್ಮದ್ ಇಯಾಸ್ ಸಾವನ್ನಪ್ಪಿದ ಪ್ರಕರಣ ವೈದ್ಯಕೀಯ ಲೋಪದ ಅನುಮಾನಗಳನ್ನು ಹುಟ್ಟುಹಾಕಿದ್ದು, ಇದೀಗ ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ತಂಡ ತನಿಖೆಗೆ ಚಾಲನೆ ನೀಡಿದೆ. ​ ಪೆರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಿಖರ ಕಾರಣ ತಿಳಿಯಲು ಆಂತರಿಕ ಅವಯವಗಳನ್ನು ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಪೊಲೀಸರು ಸದ್ಯ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಹಾಗೂ…

Read More

ರುಂಡವಿಲ್ಲದ ಶ*ವದ ಸುತ್ತ ಅನುಮಾನದ ಹುತ್ತ: ಪೊಲೀಸರ ತನಿಖೆಗೆ ಸವಾಲಾದ ಮರಣೋತ್ತರ ವರದಿ

​ಕಾಸರಗೋಡು: ನೆಲ್ಲಿಕುನ್ನು ಕಸಬಾ ಕಡಲತೀರದಲ್ಲಿ ಪತ್ತೆಯಾಗಿದ್ದ ರುಂಡವಿಲ್ಲದ ಅನಾಮಧೇಯ ಶವದ ಸುತ್ತಲಿನ ನಿಗೂಢತೆ ಇದೀಗ ಮತ್ತಷ್ಟು ಬಿಗಿಯಾಗಿದೆ. ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ನಡೆಸಲಾದ ಮರಣೋತ್ತರ ಪರೀಕ್ಷೆಯಲ್ಲಿ, ಈ ಮೃತದೇಹವನ್ನು ಈ ಹಿಂದೆಯೇ ಬೇರೊಂದು ಕಡೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂಬ ಅಚ್ಚರಿಯ ಸತ್ಯವನ್ನು ಫೋರೆನ್ಸಿಕ್ ವೈದ್ಯರು ದೃಢಪಡಿಸಿದ್ದಾರೆ. ​ಕೇರಳದ ಹೊರಗಡೆ, ಅಂದರೆ ಕರ್ನಾಟಕ ಅಥವಾ ಗೋವಾದ ಆಸ್ಪತ್ರೆಯೊಂದರಲ್ಲಿ ಮೊದಲ ಮರಣೋತ್ತರ ಪರೀಕ್ಷೆ ನಡೆದಿರಬಹುದೆಂದು ಶಂಕಿಸಲಾಗಿದೆ. ಅನಾಮಧೇಯ ಶವ ಶರೀರ ನಿಯಮಾನುಸಾರ ಮಣ್ಣುಮಾಡಿದ ಬಳಿಕ, ಅದು ಸಮುದ್ರದ ಪಾಲಾಗಿ…

Read More

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ರ‍್ಯಾಗಿಂಗ್ ಪಿಡುಗು: 13 ಹಿರಿಯ ವಿದ್ಯಾರ್ಥಿಗಳ ಅಮಾನತು

​ಕಾಸರಗೋಡು: ಇಲ್ಲಿನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ರ‍್ಯಾಗಿಂಗ್ ನಡೆಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ದ್ವಿತೀಯ ಹಾಗೂ ತೃತೀಯ ವರ್ಷದ 13 ಮಂದಿ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ವಿ.ಎಸ್. ಅನಿಲ್ ಕುಮಾರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ​ಜುಲೈ 13ರಂದು ಕ್ಯಾಂಪಸ್‌ನಲ್ಲಿ ಈ ದುಷ್ಕೃತ್ಯ ನಡೆದಿದ್ದು, ನವವಿದ್ಯಾರ್ಥಿಯನ್ನು ಅಡ್ಡಗಟ್ಟಿ ದೈಹಿಕ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಲಾಗಿದೆ. ಸಂತ್ರಸ್ತನ ದೂರಿನ ಅನ್ವಯ ಸಭೆ ಸೇರಿದ ‘ರ‍್ಯಾಗಿಂಗ್ ನಿಗ್ರಹ ಕೋಶ’ವು ಕಠಿಣ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದೆ. ಈ ಅಮಾನುಷ ಕೃತ್ಯದಲ್ಲಿ ಈ…

Read More
error: Content is protected !!