ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆದ ಬ್ರಹ್ಮಕಲಶಾಭಿಷೇಕೋತ್ಸವ – ಭರಣಿ ಮಹೋತ್ಸವಕ್ಕೆ ಸಜ್ಜು

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಕನಿಲ ಶ್ರೀ ಭಗವತೀ ಕ್ಷೇತ್ರದಲ್ಲಿ ಶ್ರೀ ಭಗವತೀ ಮಾತೆ ಹಾಗೂ ಪರಿವಾರ ದೈವಗಳ ಪುನರ್‌ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕೋತ್ಸವವು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು.ಬಡಾಜೆ ಬೂಡು ಶ್ರೀ ಮಹಾಗಣಪತಿ ದೇವರ ಅನುಗ್ರಹದಿಂದ ಹಾಗೂ ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿ ಅವರ ದಿವ್ಯಹಸ್ತದಿಂದ, ಡಾ ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಏಪ್ರಿಲ್ 18ರಿಂದ 23ರವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವವು ಜರುಗಿತು ಏಪ್ರಿಲ್ 18ರಂದು ಹಸಿರು ಹೊರೆಕಾಣಿಕೆ…

Read More

ಅಕ್ರಮ ಮರಳು ದಂಧೆ: ಇಬ್ಬರ ಬಂಧನ – ಲಾರಿ ವಶಕ್ಕೆ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ವ್ಯಾಪ್ತಿಯಲ್ಲಿ ಅಕ್ರಮವಾಗಿ ನದಿಯಿಂದ ಮರಳು ಕದ್ದೊಯ್ಯುತ್ತಿದ್ದ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಅಮೀನಡ್ಕ ಕಲ್ಲಿಗೆ ಹೌಸ್‌ನ ಸದಾನಂದ (55) ಹಾಗೂ ಟಿಪ್ಪರ್ ಲಾರಿ ಚಾಲಕ ಬಡಾಜೆ ಕನಿಲ ಹೌಸ್‌ನ ಸಾಕೀರ್ (31) ಬಂಧಿತರು. ಪೊಲೀಸ್ ಉಪನಿರೀಕ್ಷಕ ವೈಷ್ಣವ್ ರಾಮಚಂದ್ರ ಅವರ ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಮರಳು ಸಾಗಣೆಗೆ ಬಳಸಿದ್ದ ಟಿಪ್ಪರ್ ಲಾರಿಯನ್ನೂ ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಅಕ್ರಮ ಮರಳು ದಂಧೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಹಲವು ಬಾರಿ ಎಚ್ಚರಿಕೆ…

Read More

ಪೊಸೋಟ್ ಸೇತುವೆ ಕೆಳಗೆ ಶೌಚಾಲಯ ಮಲಿನ ನೀರು – ಸ್ಥಳೀಯರಲ್ಲಿ ಆತಂಕ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೊಸೋಟ್ ಸೇತುವೆ ಕೆಳಭಾಗದಲ್ಲಿ ರಾತ್ರಿ ವೇಳೆ ಟ್ಯಾಂಕರ್ ಲಾರಿಗಳ ಮೂಲಕ ಶೌಚಾಲಯ ಮಲಿನ ನೀರನ್ನು ನದಿಗೆ ಬಿಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ಸುತ್ತಮುತ್ತಲಿನ ನೂರಕ್ಕೂ ಹೆಚ್ಚು ಮನೆಗಳ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸ್ಥಳೀಯರ ಪ್ರಕಾರ, ಮಲಿನ ನೀರು ನದಿಗೆ ಹರಿಯುವುದರಿಂದ ದುರ್ವಾಸನೆ ವ್ಯಾಪಕವಾಗಿ ಹರಡುತ್ತಿದ್ದು, ಜನರು ಮೂಗು ಮುಚ್ಚಿಕೊಂಡೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಮನೆಗಳ ಬಾವಿಗಳಿಗೂ ಈ ಮಲಿನ ನೀರು ಸೇರಿಕೊಂಡಿರುವುದಾಗಿ ಆರೋಪಿಸಲಾಗಿದೆ. ಇದೇ ಪ್ರದೇಶದಲ್ಲಿ…

Read More

ಕುಂಜತ್ತೂರಿನಲ್ಲಿ ಅಪರೂಪದ ಹಣ್ಣುಗಳ ತೋಟ – ಪ್ರವಾಸಿ ಸನ ಸಲೀಂ ಅವರ ಹಸಿರು ಸಾಧನೆ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಜತ್ತೂರಿನಲ್ಲಿ ಅಪರೂಪದ ಹಣ್ಣುಗಳ ತೋಟವು ಎಲ್ಲರ ಗಮನ ಸೆಳೆಯುತ್ತಿದೆ. ಈ ವಿಶಿಷ್ಟ ತೋಟವು ಸ್ಥಳೀಯ ಉದ್ಯಮಿ ಹಾಗೂ ಪ್ರವಾಸಿ ಸನಾ ಸಲೀಂ ಅವರ ಮನೆಯ ಆವರಣದಲ್ಲಿ ಬೆಳೆದು ನಿಂತಿದೆ. ಇಲ್ಲಿ ಕಣ್ಣಿಗೆ ಹಬ್ಬದಂತೆ ಕಾಣುವ ಈಂತಪ್ಪಳ (ಖರ್ಜೂರ) ಮರಗಳು ತುಂಬು ಫಲಗಳಿಂದ ಕಂಗೊಳಿಸುತ್ತಿವೆ. ಈ ತೋಟದಲ್ಲಿ ಬದಾಮ್ ಮಾವು, ಮಲ್ಲಿಕಾ ಮಾವು, ಕಾಲಪ್ಪಾಡಿ ಮಾವು, ಕೆನಿಯನ್ ಮಾವು ಸೇರಿದಂತೆ ವಿವಿಧ ಮಾವಿನ ತಳಿಗಳು ಬೆಳೆಸಲಾಗಿದೆ. ಜೊತೆಗೆ ಚಾಂಪೆ, ಮಲ್ಬೆರಿ, ಮಿರಾಕಲ್ ಫ್ರೂಟ್…

Read More

ಕೇರಳ ಸರಕಾರದ ನೂತನ ಮುಖ್ಯಮಂತ್ರಿಗಳಿಗೆ ಮಲಯಾಳ ಭಾಷಾ ಬಿಲ್ಸ್ – 2025 ಮರು ಪರಿಶೀಲಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮನವಿಗೆ ನಿರ್ಧಾರ

ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ. ಭಾಷಾ ಅಲ್ಪಸಂಖ್ಯಾಕರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಿಕೊಳ್ಳುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ. ರಾಜ್ಯಗಳು ಅಧಿಕೃತ ಭಾಷೆಯನ್ನು ಕಡ್ಡಾಯಗೊಳಿಸುವಾಗ ಈ ಹಕ್ಕುಗಳಿಗೆ ಧಕ್ಕೆಯಾಗದಂತೆ ನೀತಿ – ಕಾನೂನುಗಳನ್ನು ರೂಪಿಸಬೇಕಾಗುತ್ತದೆ. ಭಾಷಾ ಅಲ್ಪ ಸಂಖ್ಯಾಕರ ಮಕ್ಕಳಿಗೆ…

Read More

​ಬೆಳಿಂಜ ಗುತ್ತು: ಪರಂಪರೆಯ ಪುನರುತ್ಥಾನ ಹಾಗೂ ಧರ್ಮ ನೇಮೋತ್ಸವದ ಭಕ್ತಿ ಸಂಭ್ರಮ

​ತುಳುನಾಡಿನ ದೈವಿಕ ಶಕ್ತಿ ಮತ್ತು ಸಾಂಸ್ಕೃತಿಕ ಹಿರಿಮೆಯ ಪ್ರತೀಕಗಳಾದ ‘ಗುತ್ತು’ ಮನೆತನಗಳು, ನಂಬಿಕೆ ಮತ್ತು ಪರಂಪರೆಯ ಜೀವಂತ ನೆಲೆಗಳು. ಅಂತಹ ಶ್ರದ್ಧಾ ಕೇಂದ್ರಗಳಲ್ಲಿ ಒಂದಾದ ಕಾಸರಗೋಡಿನ ಪುಣ್ಯಭೂಮಿಯ ‘ ಬೆಳಿಂಜ ಗುತ್ತು’ ಇಂದು ನವಚೇತನದೊಂದಿಗೆ ಕಂಗೊಳಿಸುತ್ತಿದೆ.​ಹಸಿರು ಸಿರಿಯ ಮಡಿಲಲ್ಲಿರುವ ಈ ಪವಿತ್ರ ತರವಾಡು ಮನೆತನವು ದೈವಿಕ ಸಂಕಲ್ಪದಂತೆ ನವವೈಭವದೊಂದಿಗೆ ಮರುಜನ್ಮ ಪಡೆಯುತ್ತಿದೆ. ವಿದ್ವಾನ್ ಶ್ರೀ ಕೆ. ಬಾಬು ರೈ ಅವರ ಆಶೀರ್ವಚನ ಹಾಗೂ ದೈವಜ್ಞ ಶ್ರೀ ಶಶಿಧರ ಮಾಂಗಾಡ್ ಅವರ ಮಾರ್ಗದರ್ಶನದಂತೆ, ಶ್ರೀ ಬಾಲಕೃಷ್ಣ ಆಳ್ವ ಅವರ…

Read More

ಶಿರಿಯ ಹೊಳೆಯಲ್ಲಿ ಅನಧಿಕೃತ ಮರಳು ಸಂಗ್ರಹ: ಪರಾರಿಯಾಗಿದ್ದ ಲಾರಿ ಮಾಲೀಕ ಬಂಧನ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ವ್ಯಾಪ್ತಿಯ ಶಿರಿಯ ಹೊಳೆಯ ಹೇರೂರು ಪೈಯಾರ್‌ಕಡವಿನಲ್ಲಿ ಅನಧಿಕೃತವಾಗಿ ಮರಳು (ಹೊಯ್ಗೆ) ಸಂಗ್ರಹಿಸುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಇದೀಗ ತಲೆಮರೆಸಿಕೊಂಡಿದ್ದ ಲಾರಿ ಮಾಲೀಕ ಎಂ. ಅಶ್ರಫ್‌ನನ್ನು ಬಂಧಿಸಿದ್ದಾರೆ. ಕಳೆದ ಮಾರ್ಚ್ 30ರಂದು ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ ವೇಳೆ, ಲಾರಿಯಲ್ಲಿದ್ದ ಅಶ್ರಫ್ ಹಾಗೂ ಮರಳು ತುಂಬಿಸುತ್ತಿದ್ದ ಐವರು ಕಾರ್ಮಿಕರು ವಾಹನ ಮತ್ತು ಉಪಕರಣಗಳನ್ನು ಬಿಟ್ಟು ಪರಾರಿಯಾಗಿದ್ದರು. ಬಳಿಕ ಪೊಲೀಸರು ಸ್ಥಳದಲ್ಲಿದ್ದ ಮರಳು ತುಂಬಿದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರು. ಈ…

Read More

ಉಪ್ಪಳ ಎಕ್ಸ್‌ಪೋ–26 ಆರಂಭ: ಮನರಂಜನೆ, ಸ್ಪರ್ಧೆಗಳು, ಫ್ಲವರ್ ಶೋಗೆ ಸಜ್ಜು

ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಅವಧಿ ಕಾಲವನ್ನು ಮನರಂಜನೆಯಿಂದ ಕಳೆಯಲು ‘ಉಪ್ಪಳ ಎಕ್ಸ್‌ಪೋ–26’ ನಾಳೆಯಿಂದ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮವನ್ನು ಏಷಿಯನ್ ಟೂರ್ಸ್ ಆಂಡ್ ಟ್ರಾವೆಲ್ಸ್ ಸಂಸ್ಥೆ ಪ್ರಾಯೋಜಿಸಿದೆ. ಪ್ರತಿದಿನ ಸಂಜೆ 3 ಗಂಟೆಯಿಂದ ರಾತ್ರಿ 10.30ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 8ರಿಂದ 10.30ರವರೆಗೆ ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದರು ಭಾಗವಹಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಕ್ಕಳು ಹಾಗೂ ಹಿರಿಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು ಮತ್ತು ತಕ್ಷಣದ ಬಹುಮಾನ ವಿತರಣೆ ವ್ಯವಸ್ಥೆಯೂ ಇರಲಿದೆ. ಇದರೊಂದಿಗೆ ಫ್ಲವರ್ ಶೋ ಹಾಗೂ ಅಪರೂಪದ…

Read More

5 ವರ್ಷಗಳಿಂದ ಖಾಸಗಿ ಜಾಗದಲ್ಲೇ ಸೇತುವೆ ಸ್ಲಾಬ್‌ಗಳು: ಪಂಚಾಯತ್ ನಿರ್ಲಕ್ಷ್ಯ ಬಯಲು

​ಮಂಜೇಶ್ವರ: ಅಭಿವೃದ್ಧಿ ಕಾಮಗಾರಿಗಳಿಗಾಗಿ ತಂದಿರಿಸಿದ ಸಾಮಗ್ರಿಗಳನ್ನು ಸಕಾಲದಲ್ಲಿ ಬಳಸದಿದ್ದರೆ ಅದು ಸಾರ್ವಜನಿಕರಿಗೆ ಹೇಗೆ ಹೊರೆಯಾಗಬಹುದು ಎಂಬುದಕ್ಕೆ ಮಂಜೇಶ್ವರ ಗ್ರಾಮ ಪಂಚಾಯತ್‌ನ 23ನೇ ವಾರ್ಡ್ ಒಂದು ಜ್ವಲಂತ ಉದಾಹರಣೆಯಾಗಿದೆ. ಇಲ್ಲಿನ ನಿವಾಸಿ ಸನ್ನಿ ಎಂಬುವವರ ಖಾಸಗಿ ಜಾಗದಲ್ಲಿ ಕಾಲು ಸೇತುವೆಗೆ ಬಳಸಬೇಕಾದ ಸ್ಲಾಬ್‌ಗಳನ್ನು ತಂದಿರಿಸಿ ಬರೋಬ್ಬರಿ 5 ವರ್ಷಗಳು ಕಳೆದಿವೆ. ಆದರೆ, ಈವರೆಗೆ ಆ ಸ್ಲಾಬ್‌ಗಳನ್ನು ಅಲ್ಲಿಂದ ತೆರವುಗೊಳಿಸದೆ ಪಂಚಾಯತ್ ಆಡಳಿತವು ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತಿದೆ.​​ಸುಮಾರು ಐದು ವರ್ಷಗಳ ಹಿಂದೆ ಸ್ಥಳೀಯವಾಗಿ ಕಾಲು ಸೇತುವೆಯೊಂದನ್ನು ನಿರ್ಮಿಸುವ ಉದ್ದೇಶದಿಂದ…

Read More

ಡಾ. ಸಚಿನ್ ಬೇಕಲ್‌ಗೆ “ಭರವಸೆಯ ಭಾರತ ರತ್ನ ಪ್ರಶಸ್ತಿ 2026” ಗೌರವ

ಕಾಸರಗೋಡು : ಆಲ್ ಇಂಡಿಯಾ ಲೆವೆಲ್ನಲ್ಲಿ ರಾಂಕ್ ಗಳಿಸಿ ಮುಂಬೈಯ ಕೆ. ಇ. ಎಮ್. ಆಸ್ಪತ್ರೆಯಲ್ಲಿ ನ್ಯೂರೋಸರ್ಜರಿ ಎಮ್. ಸಿ. ಎಚ್. ಉಪರಿಪಠನಕ್ಕೆ ಆಯ್ಕೆಯಾದ ಕಾಸರಗೋಡು ಅನಂಗೂರು ನಿವಾಸಿಯಾದ, ಡಾ. ಸಚಿನ್ ಬೇಕಲ್ ಇವರೀಗೆ ಕಾಸರಗೋಡು ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ದಂಪತಿಗಳು “ಭರವಸೆಯ ಭಾರತ ರತ್ನ ” ಅಭಿನಂದನಾ ಪ್ರಶಸ್ತಿ ನೀಡಿ ಗೌರವಿಸಿದರು. ಧಾರ್ಮಿಕ ರತ್ನ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದ ಕನ್ನಡ ಭವನ…

Read More
error: Content is protected !!