ರಾತ್ರಿ 10 ಬಳಿಕ ಧ್ವನಿವರ್ಧಕ ಬಳಸಿದರೆ ಕಠಿಣ ಕ್ರಮ: ಪೊಲೀಸರಿಂದ ಎಚ್ಚರಿಕೆ

ಮಂಜೇಶ್ವರ: ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕ ಬಳಸುವ ಸಮಾರಂಭಗಳು ಮತ್ತು ಕಾರ್ಯಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಜಾರಿಯಲ್ಲಿದ್ದ ನಿಯಮ ಪಾಲನೆಯಾಗದ ಹಿನ್ನೆಲೆಯಲ್ಲಿ, ಅತಿಯಾದ ಶಬ್ದದಿಂದ ಸಾರ್ವಜನಿಕರಿಗೆ ಕಿರಿಕಿರಿ ಹೆಚ್ಚಿದಂತೆ ದೂರುಗಳು ಹೆಚ್ಚಾಗಿವೆ. ಈ ಹಿನ್ನೆಲೆ ಎಲ್ಲಾ ಪೊಲೀಸ್ ಠಾಣೆಗಳಿಗೆ ರಾತ್ರಿ 10 ನಂತರ ಧ್ವನಿವರ್ಧಕ ಬಳಕೆಯಾದಲ್ಲಿ ಅದನ್ನು ವಶಪಡಿಸಿಕೊಂಡು ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಈಗಾಗಲೇ ರಾತ್ರಿ ಗಸ್ತು ಬಿಗುಗೊಳಿಸಲಾಗಿದ್ದು, ದೂರು ಬಂದರೆ ಅಥವಾ ನೇರವಾಗಿ ಪತ್ತೆಯಾದರೆ…

Read More

ಬಂಗ್ರಮಂಜೇಶ್ವರದಲ್ಲಿ ‘ವಿಶ್ವ ರೂಪಂ’ ಯುವಜನೋತ್ಸವದ ಮಹಾಸಮಾರೋಪ ಸಂಪನ್ನ

ಬಂಗ್ರಮಂಜೇಶ್ವರ: ಇಲ್ಲಿನ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದ ಆಶ್ರಯದಲ್ಲಿ, ಓಜ ಸಾಹಿತ್ಯ ಕೂಟದ ನೇತೃತ್ವದಲ್ಲಿ ಕಳೆದ 12 ವಾರಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಹಬ್ಬ “ವಿಶ್ವ ರೂಪಂ’ ಯುವಜನ ಓಜಸ್ವರೂಪಂ – ಸೀಸನ್ 2.0 (2025–26) ರ ಭವ್ಯ ಸಮಾರೋಪ ಸಮಾರಂಭವು ಫೆಬ್ರವರಿ 1, 2026ರಂದು ವಿಜೃಂಭಣೆಯಿಂದ ಜರುಗಿತು. ಈ ಭವ್ಯ ಸಮಾರೋಪ ಸಮಾರಂಭವು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನದೊಂದಿಗೆ ಸಂಪನ್ನಗೊಂಡಿತು. ಪೂಜ್ಯ…

Read More

ಮೇರು ಕವಯತ್ರಿ ಲತಾ ಧನು ಸೀತಾಂಗೋಳಿ ಯವರೀಗೆ “ಚುಟುಕು ಸಿರಿ ರತ್ನ “ಪ್ರಶಸ್ತಿ.

ಮೇರು ಕವಯತ್ರಿ ಲತಾ ಧನು ಸೀತಾಂಗೋಳಿ ಇವರೀಗೆ, ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ ” ಭವ್ಯ ಸಮ್ಮೇಳನ ವೇದಿಕೆಯಲ್ಲಿ “ಚುಟುಕು ಸಿರಿ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಪರಿಷತ್ತು ಸಂಸ್ಥಾಪಕರಾದ ಡಾ….

Read More

ಪ್ರಯಾಣಿಕರಿಗೆ ರಿಲೀಫ್: ಕಾಸರಗೋಡು–ಮಂಗಳೂರು ಮಾರ್ಗದ ಟೋಲ್ ರದ್ದು, ಬಸ್ ದರ ಹಿಂಪಡೆ

ಮಂಜೇಶ್ವರ: ಕ್ರಿಯಾ ಸಮಿತಿಯ ಹೋರಾಟಕ್ಕೆ ಮಣಿದು ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಕಾಸರಗೋಡು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತವಾಗಿ ಜಾರಿಯಲ್ಲಿದ್ದ ಟೋಲ್ ವಸೂಲಾತಿಯನ್ನು ಕೇಂದ್ರ ಹೆದ್ದಾರಿ ಇಲಾಖೆ ರದ್ದುಪಡಿಸಿ ಆದೇಶ ಹೊರಡಿಸಿದೆ. ಇದರ ಪರಿಣಾಮ, ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇತ್ತೀಚೆಗೆ ಜಾರಿಗೊಳಿಸಿದ್ದ ಟಿಕೆಟ್ ದರ ಏರಿಕೆ ಹಿಂಪಡೆಯಲಾಗಿದೆ. ಈ ಕುರಿತು ಕರ್ನಾಟಕ ಸಾರಿಗೆ ಇಲಾಖೆಯ ಮಂಗಳೂರು ವಿಭಾಗ ಅಧಿಕೃತ ಪ್ರಕಟಣೆ ಹೊರಡಿಸಿದೆ. ಟೋಲ್ ಗೇಟ್ ಆರಂಭವಾದಂದಿನಿಂದ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ನೇತಾರರು, ಸಾರಿಗೆ ಸಂಘಟನೆಗಳು ಹಾಗೂ ಸಾರ್ವಜನಿಕರು…

Read More

ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ : ಡಾ. ಡಿ. ವೀರೇಂದ್ರ ಹೆಗ್ಗಡೆ

ಕಾಸರಗೋಡು : ಯಕ್ಷಗಾನ ಬೊಂಬೆಯಾಟವೂ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜ ವಾಬ್ದಾರಿ ನಮ್ಮೆಲ್ಲರಿಗಿದೆ. ಈ ನಿಟ್ಟಿನಲ್ಲಿ ಮಾದರಿಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿರುವ ಕಾಸರಗೋಡಿನ ಕೆ. ವಿ. ರಮೇಶ ಅಭಿ ನಂದನಾರ್ಹರು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಗೋಪಾಲಕೃಷ್ಣಯಕ್ಷಗಾನ ಬೊಂಬೆಯಾಟ ಸಂಘದ ನೂತನ ಅಭಿಯಾನವಾದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಧರ್ಮಸ್ಥಳ ದೇವಸ್ಥಾನದ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಾ. ಹೆಗ್ಗಡೆಯವರಯ…

Read More

ಮಂಜೇಶ್ವರ: ಫೈನ್ ಇಂಡಿಯಾ ಫೈಬರ್ ನೆಟ್ LLP ಸಂಸ್ಥೆಯ ಕಾರ್ಯಾರಂಭ

ಮಂಜೇಶ್ವರ: ಫೈನ್ ಇಂಡಿಯಾ ಫೈಬರ್ ನೆಟ್ LLP ಸಂಸ್ಥೆಯ ಕಾರ್ಯಾರಂಭವು ಉಪ್ಪಳದ ಲಂಸ್ ಬೇಕರಿ ಅಂಡ್ ರೆಸ್ಟೋರೆಂಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆಯಿತು. ಸಮಾರಂಭವನ್ನು ಸಿಒಎ ಜಿಲ್ಲಾ ಅಧ್ಯಕ್ಷ ವಿ.ವಿ. ಮನೋಜ್ ಕುಮಾರ್ ಉದ್ಘಾಟಿಸಿದರು. KCCL ನಿರ್ದೇಶಕ ಎಂ. ಲೋಹಿತಾಕ್ಷನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜಿಲ್ಲೆಯಲ್ಲಿ ಹಿರಿಯ ಕೇಬಲ್ ಟಿವಿ ಆಪರೇಟರ್ ಹಾಗೂ ಫೈನ್ ಟಿವಿ ಮಾಲೀಕರಾದ ಉಸ್ಮಾನ್ ಪಾಂಡಿಯಾಲ್ ಅಧ್ಯಕ್ಷತೆ ವಹಿಸಿದ್ದರು. ಏಕೀಕೃತ ವ್ಯವಸ್ಥೆಯನ್ನು ಅಳವಡಿಸುವ ಉದ್ದೇಶದಿಂದ ವ್ಯಕ್ತಿಗತ ನಿಯಂತ್ರಣದಲ್ಲಿದ್ದ ಫೈನ್ ಟಿವಿ ಇದೀಗ LLP ರೂಪದಲ್ಲಿ…

Read More

ಬಾಕುಡ ಸಮುದಾಯ ಕುರಿತು ತಪ್ಪು ಮಾಹಿತಿ ಹರಡಿದ ಆರೋಪ: ನವೀನ್ ಸೂರಿಂಜೆ ವಿರುದ್ಧ ಖಂಡನೆ:ಬಾಲಕೃಷ್ಣ ವಿ.ಎನ್.(ಬಾಕುಡ ಪ್ರತಿನಿಧಿ)

ಕಾಸರಗೋಡು: ಬಾಕುಡ ಸಮುದಾಯದ ದೈವದಪಾತ್ರಿ–ಕಾರ್ನವರ ಒಕ್ಕೂಟದ ಇತ್ತೀಚಿನ ವಾರ್ಷಿಕ ಸಭೆಯಲ್ಲಿ ಮುಖ್ಯ ಧಾರ್ಮಿಕ ಭಾಷಣಗಾರರಾಗಿ ಭಾಗವಹಿಸಿದ್ದ ಪತ್ರಕರ್ತ ನವೀನ್ ಸೂರಿಂಜೆ ಅವರು ತಮ್ಮ ಸಾಮಾಜಿಕ ಜಾಲತಾಣದ ಮುಖಪುಟದಲ್ಲಿ ಹಂಚಿಕೊಂಡ ಭಾಷಣದ ಕೆಲವು ಭಾಗಗಳು ವಿವಾದಕ್ಕೆ ಕಾರಣವಾಗಿವೆ. ಕರಾವಳಿಯ ನಾಗಬನಗಳ ಮೇಲಿನ ಅಧಿಕಾರ ಬಾಕುಡರಿಗೆ ಮಾತ್ರ ಇದ್ದು, ಕೋಟಿಗಟ್ಟಲೆ ಆದಾಯದ ವ್ಯವಹಾರವನ್ನು ಬ್ರಾಹ್ಮಣರು ಕಸಿದುಕೊಂಡಿದ್ದಾರೆ, ಬಾಕುಡರ ಹಕ್ಕಿನ ನಾಗಾರಾಧನೆಯಿಂದ ಅವರನ್ನು ಹೊರಹಾಕಲಾಗಿದೆ, ಬಾಕುಡರ ಜಮೀನನ್ನು ಬ್ರಾಹ್ಮಣರು ಕಬಳಿಸಿದ್ದಾರೆ ಎಂಬ ರೀತಿಯ ಅಕ್ಷರಶಃ ಸುಳ್ಳು ಮಾಹಿತಿಯನ್ನು ಅವರು ಹರಡಿದ್ದಾರೆ ಎಂದು…

Read More

ಮಂಜೇಶ್ವರ: ಅರಿಕ್ಕಾಡಿ ಟೋಲ್ ಗೇಟ್‌ನಲ್ಲಿ ಪೊಲೀಸ್ ದೌರ್ಜನ್ಯ ಆರೋಪ—ಡಿಜಿಪಿ ತನಿಖೆಗೆ ಆದೇಶ

ಮಂಜೇಶ್ವರ: ಅರಿಕ್ಕಾಡಿ ಟೋಲ್ ಗೇಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸುತಿದ್ದಂತೆ ಟೋಲ್ ಪ್ಲಾಜಾದಲ್ಲಿ ನಡೆದ ಪೊಲೀಸ್ ದೌರ್ಜನ್ಯ ಆರೋಪಗಳು ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಹಾಗೂ ನ್ಯಾಯವಾದಿ ಕುಳತ್ತೂರು ಜೈಸಿಂಗ್ ಅವರು ಮುಖ್ಯಮಂತ್ರಿಗೆ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ, ರಾಜ್ಯ ಡಿಜಿಪಿ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಮಾನವ ಹಕ್ಕು ಆಯೋಗವು ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.ಟೋಲ್ ಪ್ಲಾಜಾದಲ್ಲಿ ಬೋವಿಕಾನ ಆಲೂರು ನಿವಾಸಿಯೊಬ್ಬರನ್ನು ಪೊಲೀಸರು ಕಾರಿನಿಂದ ಬಲವಂತವಾಗಿ ಎಳೆದೊಯ್ಯುವ…

Read More

ಕುಂಬಳೆ ಎಕ್ಸೈಸ್ ದಾಳಿ: 130 ಟೆಟ್ರಾ ಪ್ಯಾಕ್ ಮದ್ಯದೊಂದಿಗೆ ಯುವಕ ಅರೆಸ್ಟ್

ಕುಂಬಳೆ : ಮಂಗಲ್ಪಾಡಿ ಅಡ್ಕ ಪ್ರದೇಶದಲ್ಲಿ 23.4 ಲೀಟರ್ ಕರ್ನಾಟಕ ವಿದೇಶಿ ಮದ್ಯದೊಂದಿಗೆ ಯುವಕನನ್ನು ಕುಂಬಳೆ ಎಕ್ಸೈಸ್ ರೇಂಜ್ ಪ್ರಿವೆಂಟಿವ್ ಅಧಿಕಾರಿ ಜಿಜಿನ್ ಎಂ.ವಿ. ಅವರು ಬಂಧಿಸಿದ್ದಾರೆ. ಬಂಧಿತನನ್ನು ಮಂಗಲ್ಪಾಡಿ ಅಡ್ಕ ಭಗವತಿ ನಗರ ನಿವಾಸಿ ಹರೀಶ್ ಎ. ಎಂದು ಗುರುತಿಸಲಾಗಿದೆ. ಅಡ್ಕ ಅಂಗನವಾಡಿ ಸಮೀಪ 180 ಮಿಲಿ ಗಾತ್ರದ 130 ಟೆಟ್ರಾ ಪ್ಯಾಕೆಟ್ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಈ ದಾಳಿಯಲ್ಲಿ ಪ್ರಿವೆಂಟಿವ್ ಅಧಿಕಾರಿಗಳಾದ ಮೊಯ್ತೀನ್ ಸಾದಿಕ್, ಕಬೀರ್ ಹಾಗೂ ಸಿವಿಲ್…

Read More

ನೋವು–ದುಃಖದ ಮಧ್ಯೆ ಮಯ್ಯತ್ ನಮಾಜ್: ಮಂಜೇಶ್ವರದಲ್ಲಿ ಇಬ್ಬರ ಅಂತಿಮ ವಿಶ್ರಾಂತಿ

ಮಂಜೇಶ್ವರ: ಮಂಜೇಶ್ವರದ ತೂಮಿನಾಡು ಹಿಲ್‌ಟಾಪ್‌ನಲ್ಲಿ ನಡೆದ ದಾರುಣ ಕುಟುಂಬ ಕಲಹದಲ್ಲಿ ಜೀವ ಕಳೆದುಕೊಂಡ ಜುಮೈಲ ಹಾಗೂ ಆಕೆಯ ಚಿಕ್ಕಪ್ಪ ಶೇಕುಂಞ ಅವರಿಗೆ ಕಣ್ಣೀರಿನೊಂದಿಗೆ ಅಂತಿಮ ವಿದಾಯ ದೊರೆಯಿತು. ನೋವು ಮತ್ತು ದುಃಖದಿಂದ ತುಂಬಿದ ವಾತಾವರಣದಲ್ಲಿ ಇಬ್ಬರನ್ನೂ ಬಂಗ್ರ ಮಂಜೇಶ್ವರ ಮುಯ್ಯುದ್ದೀನ್ ಜುಮಾ ಮಸೀದಿ ಖಬರ್‌ಸ್ಥಾನದಲ್ಲಿ ಅಂತಿಮ ವಿಶ್ರಾಂತಿಗೆ ಒಪ್ಪಿಸಲಾಯಿತು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಪೋಸ್ಟ್‌ಮಾರ್ಟಂ ಪ್ರಕ್ರಿಯೆ ಪೂರ್ಣಗೊಂಡ ನಂತರ ಮಂಗಳವಾರ ಸಂಜೆ ಮೃತದೇಹಗಳನ್ನು ತೊಮಿನಾಡಿನಲ್ಲಿರುವ ಮನೆಗೆ ತರಲಾಯಿತು. ಅಂತಿಮ ದರ್ಶನಕ್ಕಾಗಿ ಬಂಧುಗಳು, ಸ್ನೇಹಿತರು ಹಾಗೂ ಸ್ಥಳೀಯರು ಸೇರಿದಂತೆ…

Read More
error: Content is protected !!