28 ವರ್ಷದ ಕೃಷಿ ಸಾಧನೆ — ಪೆರ್ಮುದೆಯ ಸುಬ್ಬಣ್ಣ ನಾಯ್ಕ ಮಾದರಿ ರೈತ

ಉಪ್ಪಳ, ಏಪ್ರಿಲ್:ಮಣ್ಣಿನೊಂದಿಗೆ ಮನಸ್ಸು ಸೇರಿಸಿದರೆ ಯಶಸ್ಸು ಖಚಿತ ಎಂಬುದನ್ನು ಪೆರ್ಮುದದ ರೈತ ಸುಬ್ಬಣ್ಣ ನಾಯ್ಕ ಅವರು ತಮ್ಮ 28 ವರ್ಷದ ಕೃಷಿ ಜೀವನದ ಮೂಲಕ ಸಾಬೀತುಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೃಷಿಯನ್ನು ಜೀವನದ ಭಾಗವನ್ನಾಗಿಸಿಕೊಂಡಿರುವ ಅವರು, ವೈವಿಧ್ಯಮಯ ಬೆಳೆಗಳ ಮೂಲಕ ಸ್ಥಳೀಯ ರೈತರಿಗೆ ಮಾದರಿಯಾಗಿದ್ದಾರೆ. ಒಂದು ಬೆಳೆಗೇ ಸೀಮಿತವಾಗದೆ, ಪೇರಲೆ, ಪಪ್ಪಾಯಿ, ದಾಳಿಂಬೆ ಸೇರಿದಂತೆ ವಿವಿಧ ಹಣ್ಣುಗಳು, ಹರಿವೆ ಸೊಪ್ಪು (ಚೀರ), ಬೆಂಡೆಕಾಯಿ , ಮಲ್ಲಿಗೆ ಸೇರಿದಂತೆ ತರಕಾರಿ ಹಾಗೂ ಸುಗಂಧ ದ್ರವ್ಯಗಳನ್ನು ಬೆಳೆಸುತ್ತಿದ್ದಾರೆ. ಇದರ ಜೊತೆಗೆ…

Read More

ಬೇಸಿಗೆ ರಜೆಯಲ್ಲಿ ಕುಂಡು ಕೊಳಕೆ ಕಡಲತೀರಕ್ಕೆ ಜನಸಾಗರ

ಮಂಜೇಶ್ವರ :ಕಾಸರಗೋಡು ಜಿಲ್ಲೆಯ ಗಡಿ ಭಾಗವಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿ ಹೊರಹೊಮ್ಮುತ್ತಿದೆ. ಅರಬ್ಬಿ ಸಮುದ್ರದ ನೀಲಿ ಅಲೆಗಳು ಹಾಗೂ ಹಸಿರು ಪ್ರಕೃತಿಯ ನಡುವೆ ಇರುವ ಈ ಕಡಲತೀರವು ಬೇಸಿಗೆ ರಜೆಯ ಸಂದರ್ಭದಲ್ಲಿಯೇ ಜನರಿಂದ ಕಿಕ್ಕಿರಿದು ತುಂಬುತ್ತಿದೆ. ಈ ತಾಣದ ಪ್ರಮುಖ ಆಕರ್ಷಣೆ ‘ಓಷನ್ ವಾಟರ್ ಪಾರ್ಕ್’ ಆಗಿದ್ದು, ಶಾಲಾ ರಜೆಯ ಸಂಭ್ರಮದಲ್ಲಿರುವ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಮನರಂಜನೆಯ ಕೇಂದ್ರವಾಗಿದೆ. ಮಕ್ಕಳಿಗಾಗಿ ಸುರಕ್ಷಿತ ಸ್ಲೈಡ್‌ಗಳು ಹಾಗೂ ವಿವಿಧ ಜಲ ಕ್ರೀಡೆಗಳ…

Read More

ಕಾಸರಗೋಡು ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರದ 2 ನೇ ಹಂತದ ಕಾಮಗಾರಿ 5 ತಿಂಗಳಲ್ಲಿ ಪೂರ್ಣ

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 36ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಸರಗೋಡು ಗೋ-ಕುಟೀರದ ಕಾಮಗಾರಿಯು ಮತ್ತೊಂದು ಮಹತ್ವದ ಹಂತಕ್ಕೆ ತಲುಪಿರುತ್ತದೆ.ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯ ನೆನಪಿಗಾಗಿ ಶಾಶ್ವತವಾದ ಕಾಸರಗೋಡು ಗೋ-ಕುಟೀರದ ನಿರ್ಮಾಣದ ಮೂಲಕ ಸಾರ್ಥಕ ಸೇವೆಯನ್ನು ಗುರುತಿಸಿಕೊಳ್ಳುವುದಕ್ಕಾಗಿ 2025 ನವಂಬರ್ 4 ರಂದು ಕಾಸರಗೋಡು…

Read More

ಇತಿಹಾಸ ಪ್ರಸಿದ್ಧವಾದ ಕೂಡ್ಲು ಶ್ರೀ ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಏಪ್ರಿಲ್ 19ಕ್ಕೆ ಸಿದ್ಧತೆ

ಕಾಸರಗೋಡಿನ ಇತಿಹಾಸ ಪ್ರಸಿದ್ಧವಾದ ಕಾರಣಿಕವುಳ್ಳ ಕೂಡ್ಲು ಮಾರಿಗುಡಿಯೆಂದು ಖ್ಯಾತಿ ಪಡೆದಿರುವ ಕಾಸರಗೋಡು ರಾಮದಾಸನಗರದ ಕೂಡ್ಲು ಚಾಮುಂಡೇಶ್ವರಿ ಕಾಲಭೈರವ ದೇವಸ್ಥಾನದ ವಾರ್ಷಿಕ ಶುದ್ದಿ ಕಲಶ ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ ಸಂಕೀರ್ತನಾ ಕಾರ್ಯಕ್ರಮಗಳೊಂದಿಗೆ ಇದೇ 2026 ಏಪ್ರಿಲ್ 19 ಆದಿತ್ಯವಾರದಂದು ತಂತ್ರೀವರ್ಯರಾದ ಬ್ರಹ್ಮಶ್ರೀ ವಿಷ್ಣು ಪ್ರಕಾಶ ಪಟ್ಟೇರಿ ಕಾವುಮಠ ಇವರ ಮಾರ್ಗದರ್ಶನದಲ್ಲಿ ನಡೆಯಲಿರುವುದು.ಕಾಸರಗೋಡು ದಕ್ಷಿಣ ಕನ್ನಡ ಉಡುಪಿ ಕೊಡಗು ಜಿಲ್ಲೆಯ ಭಗವದ್ಭಕ್ತರು ಹಾಗೂ ಕುಟುಂಬಸ್ಥರು ಆಸ್ತಿಕ ಮಹಾಜನರು,ಊರ ಪರವೂರಿನ ಭಕ್ತಾಧಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.ಧಾರ್ಮಿಕ,ತಾಂತ್ರಿಕ ಸoಪ್ರದಾಯದ ಪ್ರಕಾರ ನಡೆಯುವ…

Read More

ಪ್ರಯಾಣಿಕರಿದ್ದಾಗಲೇ ಬಸ್‌ಗೆ ಇಂಧನ ತುಂಬಿಕೆ — ಸುರಕ್ಷತೆ ಬಗ್ಗೆ ಆತಂಕ

ಉಪ್ಪಳ :ಪ್ರಯಾಣಿಕರು ತುಂಬಿರುವ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ತುಂಬಲಾಗುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಗಂಭೀರ ಆತಂಕ ಉಂಟುಮಾಡಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ಗಳು ಕರ್ನಾಟಕದ ತೊಕ್ಕೊಟ್ಟು ಹಾಗೂ ಕೊಟ್ಟೆಕಾರು ಪ್ರದೇಶದ ಪಂಪ್‌ಗಳಲ್ಲಿ ಇಂಧನ ತುಂಬುತ್ತಿರುವುದಾಗಿ ತಿಳಿದುಬಂದಿದೆ. ಈ ವೇಳೆ ಸುಮಾರು 10 ನಿಮಿಷಗಳ ಕಾಲ ಬಸ್ ನಿಲುಗಡೆ ಆಗುತ್ತಿದ್ದು, ಬಳಿಕ ಟೋಲ್ ಪ್ಲಾಜಾಗಳಲ್ಲಿ ಮತ್ತಷ್ಟು ವಿಳಂಬ ಉಂಟಾಗುತ್ತಿರುವುದರಿಂದ ಪ್ರಯಾಣಿಕರಿಗೆ ಸಮಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರೂ, ಸಂಬಂಧಿಸಿದ…

Read More

ಪರಂಬಳ ಕಯ್ಯಾರಿನಲ್ಲಿ ಭಕ್ತಿಭಾವದ ದೀಪ ಪೂಜೆ

ದುರ್ಗಾ ಶಕ್ತಿ ಕುಣಿತ ಭಜನಾ ತಂಡ, ಪರಂಬಳ ಕಯ್ಯಾರು ಇವರ ವತಿಯಿಂದ ದೀಪ ಪೂಜನ ಕಾರ್ಯಕ್ರಮವು ಶ್ರೀ ಭಾರತ್ ಮಾತಾ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಭಕ್ತಿಭಾವದೊಂದಿಗೆ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಚೆನ್ನಪ್ಪ ಏರುಗಲ್ಲು, ಶ್ರೀ ಗಿರೀಶ್ ಕುಮಾರ್ ಕಯ್ಯಾರು, ಮಹೇಶ್ ಪುಣಿಯೂರು, ಶ್ರೀಮತಿ ರಮ್ಯಾ ಯನ್ ಸೀತಾಂಗೋಳಿ ಹಾಗೂ ಶೇಸಪ್ಪ ಮುಂಡಿತಡ್ಕ ಸೇರಿದಂತೆ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶ್ರೀ ಪುಂಡರೀಕಾಕ್ಷ ಬೆಳ್ಳೂರು (ಯೋಗಾಚಾರ್ಯರು, ಸಾಂದೀಪನಿ ಯೋಗಾಶ್ರಮ) ದೀಪ ಪೂಜನ ವಿಧಿಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ತಂಡದ…

Read More

ಮಂಜೇಶ್ವರ: ಸರ್ವರ್ ಸಮಸ್ಯೆಯಿಂದ ಸ್ಥಗಿತಗೊಂಡ ಸರ್ಕಾರಿ ಸೇವೆಗಳು: ಸಾರ್ವಜನಿಕರ ಪರದಾಟ

ಮಂಜೇಶ್ವರ ತಾಲೂಕಿನಾದ್ಯಂತ ಇಂದು ಬೆಳಗ್ಗೆಯಿಂದ ವಿಲೇಜ್ ಆಫೀಸ್‌ಗಳು ಹಾಗೂ ಅಕ್ಷಯ ಕೇಂದ್ರಗಳು ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳು ಸ್ಥಗಿತಗೊಂಡು ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾದರು. ಆನ್‌ಲೈನ್ ಪೋರ್ಟಲ್‌ಗಳು ತೆರೆಯದ ಕಾರಣ ದೂರದ ಪ್ರದೇಶಗಳಿಂದ ವಿವಿಧ ಅಗತ್ಯಗಳಿಗಾಗಿ ಬಂದ ನೂರಾರು ಜನರು ನಿರಾಶರಾಗಿ ಹಿಂತಿರುಗಬೇಕಾಯಿತು. ರೆವಿನ್ಯೂ ಇಲಾಖೆಯ ವೆಬ್‌ಸೈಟ್‌ಗಳು ಹಾಗೂ ಅಕ್ಷಯ ಕೇಂದ್ರಗಳ ಸರ್ವರ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು, ಆರ್‌ಟಿಸಿ (ಪಹಣಿ) ಸೇರಿದಂತೆ ಪ್ರಮುಖ ದಾಖಲೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಪ್ರತಿಗಳನ್ನು ಪಡೆಯಲು…

Read More

ಮಂಗಲ್ಪಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನ ಹಾಗೂ 29ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ

ಡಾ. ಬಿ ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ ಮಂಗಲ್ಪಾಡಿ ಇದರ 29ನೇ ವಾರ್ಷಿಕೋತ್ಸವ ಮತ್ತು ಸಂವಿದಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಇತ್ತೀಚಿಗೆ ಮಂಗಲ್ಪಾಡಿಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಸದಸ್ಯ ಶ್ರೀ ವಸಂತಕುಮಾರ್ ಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು ಹಾಗೂ ಅಂಬೇಡ್ಕರ್ ವಿಚಾರ ವೇದಿಕೆ ಬದಿಯಡ್ಕ ಇದರ ಸ್ಥಾಪಕ ಸದಸ್ಯರಾದ ಶ್ರೀ ನಾರಾಯಣ ಬಾರಡ್ಕ ಇವರು ಅಂಬೇಡ್ಕರ್ ತತ್ವ ಮತ್ತು ವಿಚಾರಗಳ ಬಗ್ಗೆ ಮಾತನಾಡಿದರು….

Read More

ಕನ್ನಡ ಭವನದ ರೂವಾರಿ ಸಂಧ್ಯಾರಾಣಿ ಟೀಚರಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ. 2026

ಕಾಸರಗೋಡು :ಕಥಾಬಿಂದು ಪ್ರಕಾಶನ, ಉಡುಪಿ ಶಿರೂರು ಶ್ರೀ ಮಠ, ಉಡುಪಿ ಶ್ರೀ ಕೃಷ್ಣ ಮಠ ಸಹಯೋಗದಲ್ಲಿ ನಡೆದ “ಕಥಾಬಿಂದು ಸಾಹಿತ್ಯ ಸಮ್ಮೇಳನ “ಉಡುಪಿ ಶ್ರೀ ಮಠದ ರಾಜಾ0ಗಣದಲ್ಲಿ 12.4.2026 ರಂದು ಉಡುಪಿ ಶ್ರೀ ಮಠದ ಶ್ರೀ ರಮಣ ಆಚಾರ್ಯ ಅವರ ಸರ್ವಾಧ್ಯಕ್ಷತೆಯಲ್ಲಿ, ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ, ಡಾ. ಹರಿಕೃಷ್ಣ ಪುನಃರೂರು, ಕ. ಸಾ. ಪ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಧ್ಯಕ್ಷ, ಕಲ್ಕೂರ ಪ್ರತಿಷ್ಠಾನ ರೂವಾರಿ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ…

Read More

ಬೆಜ್ಜ ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೋತ್ಸವ ಸಂಪನ್ನ

ಮಂಜೇಶ್ವರ : ಬೆಜ್ಜ ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವ ಭಕ್ತಿಭಾವದ ನಡುವೆ ಭವ್ಯವಾಗಿ ಸಂಪನ್ನಗೊಂಡಿತು .ಏಪ್ರಿಲ್ 1ರಂದು ಉತ್ಸವದ ಗೊನೆ ಮುಹೂರ್ತ, ಕೋಳಿಗೂಟ ಹಾಗೂ ಉತ್ಸವದ ಚೆಂಡು ಕಾರ್ಯಕ್ರಮಗಳೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗಿತ್ತು. ಏಪ್ರಿಲ್ 6ರಿಂದ 9ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಏಪ್ರಿಲ್ 6ರಂದು ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆದಿದ್ದು, ಶಾರದಾ ಆರ್ಟ್ಸ್ ತಂಡದಿಂದ ತುಳು ಹಾಸ್ಯಮಯ ನಾಟಕ “ಒಂತೆ ಲೇಟಾ0ಡ್…

Read More
error: Content is protected !!