ಎಂಡಿಎಂಎ–ಗಾಂಜಾ ವಶ, ಮೂವರು ಬಂಧನ

ಮಂಜೇಶ್ವರ : ಜಿಲ್ಲೆಯಲ್ಲಿ ಪೊಲೀಸರು ಹಾಗೂ ಅಬಕಾರಿ ಇಲಾಖೆ ನಡೆಸಿದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಭಾರೀ ಪ್ರಮಾಣದ ಮಾದಕದ್ರವ್ಯ ಮತ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿಯವರ ನಿರ್ದೇಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಮಂಗಲ್ಪಾಡಿ ಸೋಂಕಾಲ್‌ನಲ್ಲಿ ವಾಹನದಲ್ಲಿ ಸಾಗಿಸುತ್ತಿದ್ದ 54 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಮಂಗಲ್ಪಾಡಿ ಅಂಬಾರ್‌ಪಳ್ಳಂ ನಿವಾಸಿ ಇದ್ದೀನ್ ಕುಂಣಿ ಯಾನೆ ಇರ್ಷಾದ್ (34) ಎಂಬಾತನನ್ನು ಬಂಧಿಸಲಾಗಿದೆ. ಇದೇ ರೀತಿ ಬೇಕಲ ಪೊಲೀಸರು ಕೋಟಿಕುಳಂ ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 1.894 ಕಿಲೋಗ್ರಾಂ ಗಾಂಜಾ ವಶಪಡಿಸಿಕೊಂಡು,…

Read More

ಉದ್ಯಾವರ ಅಲ್ ಸಖಾಫ್ ಶಾಲೆಯ 27ನೇ ವಾರ್ಷಿಕೋತ್ಸವ ವಿಜೃಂಭಣೆಯಿಂದ ಸಂಪನ್ನ

ಮಂಜೇಶ್ವರ : 1998 ರಲ್ಲಿ ಉದ್ಯಾವರ ಸಾವಿರ ಜಮಾಹತಿನ ಅಧೀನದಲ್ಲಿ ಆರಂಭಗೊಂಡು ಗಡಿ ಪ್ರದೇಶದ ಶೈಕ್ಷಣಿಕ ರಂಗದಲ್ಲಿ ತನ್ನದೇ ಆದ ಶೈಲಿಯಲ್ಲಿ ವಿವಿಧ ರೀತಿಯ ಚಟುವಟಿಕೆಗಳಲ್ಲಿ ಜಿಲ್ಲೆಯಲ್ಲೇ ಎಲ್ಲರ ಗಮನ ಸೆಳೆದಿರುವ ಉದ್ಯಾವರ ಅಲ್ ಸಖಾಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025 – 26 ನೇ ಅಧ್ಯಯನ ವರ್ಷದ 27ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮ ಹಾಗೂ ಸಡಗರದೊಂದಿಗೆ ಭಾರೀ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಎಲ್ಲಾ ವರ್ಷಕ್ಕಿಂತಲೂ ಭಿನ್ನವಾಗಿ ಈ ವರ್ಷ ಕೂಡಾ ಕೂಡಾ ಶಾಲಾ ವಾರ್ಷಿಕೋತ್ಸವವು ಅತ್ಯಂತ ಸ್ಮರಣೀಯ…

Read More

ಎಲ್‌ಡಿಎಫ್ ಉತ್ತರ ವಲಯ ಜಾಥಾಗೆ ಕುಂಬಳೆಯಿಂದ ಚಾಲನೆ; ಕೇಂದ್ರದ ನಿರ್ಲಕ್ಷ್ಯ ವಿರುದ್ಧ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ:

ಕಾಸರಗೋಡು: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರ ಸಾರಥ್ಯದಲ್ಲಿ ನಡೆಯುವ ಎಲ್‌ಡಿಎಫ್ ಉತ್ತರ ವಲಯ ಜಾಥೆಗೆ ತುಳುನಾಡಿನ ನೆಲ ಕುಂಬಳೆಯಿಂದ ಆದಿತ್ಯವಾರ ಚಾಲನೆ ದೊರಕಿತು. ಜಾಥಾ ನಾಯಕ ಎಂ.ವಿ. ಗೋವಿಂದನ್ ಅವರಿಗೆ ಕೇರಳಾಭಿವೃದ್ಧಿಯ ಮಿನಿಯೇಚರ್ ನೀಡಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜಾಥಾವನ್ನು ಉದ್ಘಾಟಿಸಿದರು. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕಳೆದ ಹತ್ತು ವರ್ಷಗಳ ಎಡರಂಗ ಸರ್ಕಾರದ ಸಾಧನೆಗಳನ್ನು ವಿವರಿಸಿ, ಕೇಂದ್ರ ಸರ್ಕಾರ ಕೇರಳದ ವಿರುದ್ಧ ತೋರಿಸುತ್ತಿರುವ ನಿರ್ಲಕ್ಷ್ಯ ಧೋರಣೆಯನ್ನು ತೀವ್ರವಾಗಿ ಟೀಕಿಸಿದರು. ಇತ್ತೀಚಿನ ಕೇಂದ್ರ ಬಜೆಟ್‌ನಲ್ಲಿ ಕೇರಳವನ್ನು…

Read More

ಹಕ್ಕುಗಳ ಘೋಷಣೆ ಯಾತ್ರೆ ಮುಕ್ತಾಯ-ಏಕತೆ ಮತ್ತು ರಾಜಕೀಯ ಅಧಿಕಾರ ಈ ಹೊತ್ತಿನ ಅಗತ್ಯಃ ತೀಯಾ ವೆಲ್ಫೇರ್ ಸೊಸೈಟಿ:

ತಿರುವನಂತಪುರಂಃ ತೀಯಾ ಸಮುದಾಯದ ಏಕತೆ ಮತ್ತು ರಾಜಕೀಯ ಬಲವು ಇಂದಿನ ಅಗತ್ಯವಾಗಿದೆ.ತೀಯಾ ಸಮುದಾಯದ ಹಕ್ಕುಗಳನ್ನು ಪುನರ್ಸ್ಥಾಪಿಸಲು ಮತ್ತು ಸಾಮಾಜಿಕ-ರಾಜಕೀಯ ಜಾಗೃತಿಯನ್ನು ಬಲಪಡಿಸುವ ಗುರಿಯನ್ನು ಹೊಂದಿ ತೀಯಾ ವೆಲ್ಫೇರ್ ಸೊಸೈಟಿ ಆಯೋಜಿಸಿದ್ದ ಹಕ್ಕುಗಳ ಘೋಷಣೆ ಯಾತ್ರೆಯು ತ್ರಿಕ್ಕರಿಪ್ಪೂರಿನಲ್ಲಿ ಮುಕ್ತಾಯಗೊಂಡಿತು. ಜನವರಿ 25ರಂದು ಕುಂಬಳೆ ಶ್ರೀ ಸದ್ಗುರು ನಿತ್ಯಾನಂದ ಮಠದಿಂದ ಪ್ರಾರಂಭವಾದ ಯಾತ್ರೆಯನ್ನು ತೀಯಾ ಕ್ಷೇಮಾ ಸಭೆಯ ರಾಜ್ಯ ಅಧ್ಯಕ್ಷ ರವಿ ಕುಲಂಗರ ಅವರ ನೇತೃತ್ವದಲ್ಲಿ ತೀಯಾ ವೆಲ್ಫೇರ್ ಅಸೋಸಿಯೇಶನ್ನ ಅಧ್ಯಕ್ಷ ಗಣೇಶ್ ಪಾವೂರ್ ಉದ್ಘಾಟಿಸಿದ್ದರು. ಜಿಲ್ಲೆಯ ವಿವಿಧ ಕ್ಷೇತ್ರಗಳ…

Read More

ಕುಂಬಳೆ ಆರಿಕ್ಕಾಡಿಯಲ್ಲಿ ಶ್ರೀಉಳ್ಳಾಲ್ತಿ ನಾಗಬ್ರಹ್ಮ 18 ದೈವಸ್ಥಾನದ ದೈವದ ಪಾತ್ರಿ–ಕಾನಾ೯ವರ ಒಕ್ಕೂಟದ 2ನೇ ವಾರ್ಷಿಕೋತ್ಸವ:

ಶ್ರೀಉಳ್ಳಾಲ್ತಿ ನಾಗಬ್ರಹ್ಮ18 ದೈವಸ್ಥಾನದ ದೈವದ ಪಾತ್ರಿ ಮತ್ತು ಕಾನಾ೯ವರ ಒಕ್ಕೂಟ (ರಿ) ಇದರ 2ನೇ ವರ್ಷದ ವಾರ್ಷಿಕೋತ್ಸವವು ನಿನ್ನೆ ಕುಂಬಳೆಯ ಆರಿಕ್ಕಾಡಿ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀ ಶಂಕರ ಅಡ್ಕ ವಹಿಸಿದ್ದರು. ಪ್ರಧಾನ ಭಾಷಣಗಾರರಾದ ಶ್ರೀ ನವೀನ್ ಸೂರಿಂಜೆ ,ಶ್ರೀ ಹರೀಶ್ ಶೆಟ್ಟಿ ಮಾಡ,ಶ್ರೀ ಸದಾನಂದ ಕಾರ್ನವರು,ಶ್ರೀ ಸುರೇಶ ದೈವದ ಪಾತ್ರಿ,ಶ್ರೀ ಆನಂದ ದೈವದ ಪಾತ್ರಿ,ಶ್ರಿ ಬಾಬು ಕುಬನೂರು,ಶ್ರೀ ನವೀನ್ ಮಂಗಳೂರು,ಸಮಾಜದ ಕೇಂದ್ರ ಸಮಿತಿಯ ಅಧ್ಯಕ್ಷ ತುಳಸಿದಾಸ್ ,ಶ್ರೀವಿಜಯ ಪಂಡಿತ್,…

Read More

ಶ್ರೀ ವಿದ್ಯಾವರ್ಧಕ ಶಾಲೆ–ಮಾಸ್ಟರ್ಸ್ ಕ್ಲಬ್ ನೇತೃತ್ವದಲ್ಲಿ ಮೀಯಪದವಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ :

ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆ, ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆ ಮೀಯಪದವು,ಮಾಸ್ಟರ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಕ್ಲಬ್,(ರಿ)ವಿಕಾಸ ಮೀಯಪದವು ಇದರ ನೇತೃತ್ವದಲ್ಲಿ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠo ಚಾರಿಟೇಬಲ್ ಟ್ರಸ್ಟ್ ಕೊಂಡೆವೂರು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು ,ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಒನ್ ಸೈಟ್ ಎಸ್ಸಿ ಲೋರ್ ಲಕ್ಸೋಟಿಕ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ…

Read More

ಚೇವಾರು ಶ್ರೀ ಶಾರದಾ ಎ.ಯು.ಪಿ. ಶಾಲೆಯಲ್ಲಿ ಸಂಭ್ರಮದ ‘ಶಾಲಾ ವಾರ್ಷಿಕೋತ್ಸವ’

ಮಂಜೇಶ್ವರ: ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಶಾಲಾ ಆವರಣದಲ್ಲಿ ಬಹಳ ಸಂಭ್ರಮದಿಂದ ಜರುಗಿತು.ಸಂಜೆ 6:30ಕ್ಕೆ ಆರಂಭಗೊಂಡ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೈವಳಿಕೆ ಪಂಚಾಯತ್‌ನ ಚೇವಾರು ವಾರ್ಡ್ ಸದಸ್ಯರಾದ ಶ್ರೀ ಅಬ್ದುಲ್ ಅಸೀಸ್ ಸಿ. ಎಂ. ಅವರು ವಹಿಸಿದ್ದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಶಾಲೆಯ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಪೈವಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬದ್ರುನ್ನಿಸಾ ಸಲೀಂ, ಮಂಜೇಶ್ವರ…

Read More

ಬಜೆಟ್ ನಲ್ಲಿ ಮಂಜೇಶ್ವರ ಕ್ಕೆ ನಯ ಪೈಸೆ ನೀಡಿಲ್ಲ -ಬಿಜೆಪಿ ಆರೋಪ

ಪೈವಳಿಕೆ : ಕೇರಳ ಬಜೆಟ್ 2026 ಮಂಜೇಶ್ವರ ಕ್ಕೆ ಅತ್ಯಂತ ನಿರಾಶೆದಾಯಕ ಬಜೆಟ್, ಮಂಜೇಶ್ವರ ವಿ ಸಾ ಕ್ಷೇತ್ರದ ಯಾವುದೇ ಅಭಿವೃದ್ಧಿ ಗೆಬೇಕಾಗಿ ನಯ ಪೈಸೆ ಮೀಸಲು ಇಟ್ಟಿಲ್ಲ. ಇದು ಕೇರಳ ರಾಜ್ಯ ಆಡಳಿತ ಮಾಡುವ ಎಡರಂಗ ಹಾಗೂ ಮಂಜೇಶ್ವರ ಶಾಸಕರ ಬೇಜವಾಬ್ದಾರಿ ಕಾರ್ಯ ವೈಖರಿ ಗೆ ಸ್ಪಷ್ಟ ನಿದರ್ಶನ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಆದರ್ಶ ಬಿ ಎಂ ಆರೋಪಿಸಿದರು. ಖಾಸಗಿ ಕಟ್ಟಡ ಮೂರನೇ ಮಹಡಿ ಯಲ್ಲಿರುವ ತಾಲೂಕು ಕಚೇರಿಗೆ ಒಂದು ಸ್ವಂತ ಕಟ್ಟಡ…

Read More

ಮಂಜೇಶ್ವರ ಗ್ರಾಮ ಪಂಚಾಯತ್ 2025–26 ಯೋಜನೆ: ಹಿರಿಯ ನಾಗರಿಕರಿಗಾಗಿ ಮೆಗಾ ವೈದ್ಯಕೀಯ ಶಿಬಿರ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ 2025–26 ವಾರ್ಷಿಕ ಯೋಜನೆಯ ಭಾಗವಾಗಿ ಗ್ರಾಮ ಪಂಚಾಯತ್ ಹಾಗೂ ಮಂಜೇಶ್ವರ ಬ್ಲಾಕ್ ಫ್ಯಾಮಿಲಿ ಹೆಲ್ತ್ ಸೆಂಟರ್ ಸಂಯುಕ್ತವಾಗಿ ಹಿರಿಯ ನಾಗರಿಕರಿಗಾಗಿ ಮೆಗಾ ವೈದ್ಯಕೀಯ ಶಿಬಿರವನ್ನು ಆಯೋಜಿಸಿತು. ಜನವರಿ 31ರಂದು ಮಂಜೇಶ್ವರ ಎ.ಕೆ. ಗಾರ್ಡನ್ಸ್‌ನಲ್ಲಿ ನಡೆದ ಈ ಶಿಬಿರಕ್ಕೆ ಪ್ರದೇಶದ ಹಿರಿಯ ನಾಗರಿಕರಿಂದ ಭಾರಿ ಸ್ಪಂದನೆ ಲಭಿಸಿತು. ಬ್ಲಾಕ್ ಫ್ಯಾಮಿಲಿ ಹೆಲ್ತ್ ಸೆಂಟರ್‌ನ ಹೆಲ್ತ್ ಇನ್ಸ್‌ಪೆಕ್ಟರ್ ಶ್ರೀ ದಿಲೀಪ್ ಸ್ವಾಗತ ಭಾಷಣ ಮಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಬಶೀರ್ ಕನಿಲ ಅಧ್ಯಕ್ಷತೆ…

Read More

ಕಡ್ಡಾಯ ಟೋಲ್ ವಸೂಲಿಗೆ ವಿರೋಧ: ಟೋಲ್ ಗೇಟ್‌ನಲ್ಲಿ ಸಂಘರ್ಷ ಆರೋಪ : 10 ಮಂದಿಯ ವಿರುದ್ಧ ಕೇಸು

ಮಂಜೇಶ್ವರ: ಹೈಕೋರ್ಟ್ ವಿಚಾರಣೆ ಮುಂದೂಡಿದ ಹಿನ್ನೆಲೆ ಕಡ್ಡಾಯ ಟೋಲ್ ವಸೂಲಿ ಪುನರಾರಂಭವಾದುದನ್ನು ವಿರೋಧಿಸಿ ಮಂಜೇಶ್ವರ ಟೋಲ್ ಪ್ಲಾಝದಲ್ಲಿ ಗಲಾಟೆ ನಡೆದಿದ್ದು, ಟೋಲ್ ಗೇಟ್ ಮೇನೇಜರ್ ನ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇರೆಗೆ ಟೋಲ್ ವಿರೋಧಿ ಕ್ರಿಯಾ ಸಮಿತಿ ನಾಯಕರೊಬ್ಬರು ಸೇರಿ ಹತ್ತು ಮಂದಿಯ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹರಿಯಾಣ ಮೂಲದ ಟೋಲ್ ಬೂತ್ ಮೇನೇಜರ್ ಅಮಿತ್ ಕುಮಾರ್ ನೀಡಿದ ದೂರಿನ ಪ್ರಕಾರ, ಜ.28ರ ರಾತ್ರಿ ಗುಂಪಾಗಿ ಬಂದವರು ಟೋಲ್ ಗೇಟ್‌ನಲ್ಲಿ…

Read More
error: Content is protected !!