ಬಂಗ್ರಮಂಜೇಶ್ವರದಲ್ಲಿ ‘ವಿಶ್ವ ರೂಪಂ’ ಯುವಜನೋತ್ಸವದ ಮಹಾಸಮಾರೋಪ

ಬಂಗ್ರಮಂಜೇಶ್ವರ: ಇಲ್ಲಿನ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದ ಆಶ್ರಯದಲ್ಲಿ, ಓಜ ಸಾಹಿತ್ಯ ಕೂಟದ ನೇತೃತ್ವದಲ್ಲಿ ಕಳೆದ 12 ವಾರಗಳಿಂದ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಹಬ್ಬ “ವಿಶ್ವ ರೂಪಂ’ ಯುವಜನ ಓಜಸ್ವರೂಪಂ – ಸೀಸನ್ 2.0 (2025-26) ರ ಸಂಭ್ರಮದ ಸಮಾರೋಪ ಸಮಾರಂಭವು ಇದೇ ಬರುವ ಫೆಬ್ರವರಿ 1, 2026ರಂದು ಜರುಗಲಿದೆ. ಈ ಭವ್ಯ ಸಮಾರೋಪ ಸಮಾರಂಭವು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನದೊಂದಿಗೆ ಸಂಪನ್ನಗೊಳ್ಳಲಿದೆ….

Read More

ಕಾಸರಗೋಡು ಆಡಳಿತ ಕೇಂದ್ರಗಳಿಗೆ ಬಾಂಬ್ ಬೆದರಿಕೆ: ತನಿಖೆ ತೀವ್ರ

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಸಂಜೆ ಬಂದ ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ಪೊಲೀಸ್‌, ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ಸ್ಕ್ವಾಡ್ ತಂಡಗಳು ಸಿವಿಲ್ ಸ್ಟೇಷನ್‌ನಲ್ಲಿ ವ್ಯಾಪಕ ತಪಾಸಣೆ ನಡೆಸಿದವು. ಪರಿಶೀಲನೆಯಲ್ಲಿ ಬಾಂಬ್‌ಗೆ ಸಂಬಂಧಿಸಿದ ಯಾವುದೇ ಸುಳಿವುಗಳು ಪತ್ತೆಯಾಗದಿದ್ದರೂ, ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಎಚ್ಚರಿಕೆಯಿಂದ ಮುಂದುವರಿದಿದ್ದಾರೆ. ಉಕ್ರೇನ್‌ನಿಂದ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಸಂದೇಶದ ಮೂಲವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಇತ್ತೀಚೆಗೆ ಕಾಸರಗೋಡು ನ್ಯಾಯಾಲಯ ಸಂಕೀರ್ಣಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ…

Read More

ಅನಂತಪುರ ಕೈಗಾರಿಕಾ ಪ್ರದೇಶದ ಪ್ರೈವುಡ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ

ಮಂಜೇಶ್ವರ: ಅನಂತಪುರ ಕೈಗಾರಿಕಾ ಪ್ರದೇಶದಲ್ಲಿರುವ ಮಾರ್ಕ್ ವುಡ್ ಪ್ರೈವುಡ್ ಕಾರ್ಖಾನೆಯಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪೇರಾಲ್ ಕಣ್ಣೂರಿನ ಅಬ್ದುಲ್ ರಹಿಮಾನ್ ಅವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಬೆಳಗಿನ ಜಾವ ಸುಮಾರು ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ಮುನ್ನ ನಿನ್ನೆ ರಾತ್ರಿ ಸುಮಾರು 12 ಗಂಟೆಯವರೆಗೆ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಿ ಬಳಿಕ ಮನೆಗೆ ತೆರಳಿದ್ದರು. ಬೆಂಕಿಯ ತೀವ್ರತೆ ಹೆಚ್ಚಿದ ಹಿನ್ನೆಲೆ ಕಾಸರಗೋಡು, ಉಪ್ಪಳ, ಕಾಞಂಗಾಡು ಸೇರಿದಂತೆ ವಿವಿಧ ಕಡೆಗಳಿಂದ ಎಂಟು…

Read More

ಮಂಜೇಶ್ವರ: ವಸತಿಗೃಹ ದಾಳಿ–ಬೆದರಿಕೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸ್ ವಶ

ಮಂಜೇಶ್ವರ: ವಸತಿಗೃಹಕ್ಕೆ ಅತಿಕ್ರಮಿಸಿ ನುಗ್ಗಿ ಯುವಕ ಹಾಗೂ ಗೆಳತಿಯ ಅರೆನಗ್ನ ವೀಡಿಯೋ–ಫೋಟೋ ಚಿತ್ರೀಕರಿಸಿ ಬೆದರಿಸಿ ಹಣ ಮತ್ತು ಮೊಬೈಲ್ ಅಪಹರಿಸಿದ ಪ್ರಕರಣದಲ್ಲಿ ಮತ್ತೊಬ್ಬನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಡಾಜೆ ಕಾಜೂರ್ ಮಾಲಿ ನಿವಾಸಿ ಟಿ.ಕೆ. ಮೊಹಮ್ಮದ್ ಫೈಸಲ್ (42) ಬಂಧಿತ ಆರೋಪಿ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಮಂಜೇಶ್ವರ ಪಿರಾರಮೂಲೆ ನಿವಾಸಿ ಕೆ.ಎ. ಹಾರಿಸ್ (40) ಬಂಧಿತನಾಗಿದ್ದ. ಜನವರಿ 14ರಂದು ನಡೆದ ಘಟನೆಯಲ್ಲಿ ನಾಲ್ಕು ಮಂದಿಯ ತಂಡ…

Read More

ಮಂಜೇಶ್ವರ: ಕಾರು–ಬೈಕ್ ಡಿಕ್ಕಿ; ಇಬ್ಬರು ಯುವಕರು ಗಂಭೀರ ಗಾಯ

ಮಂಜೇಶ್ವರ : ಕಾರು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಬೈಕ್ ಸವಾರ ಬೇಳ ಪೆರಿಯಡ್ಕ ನಿವಾಸಿ ಶಶಿಕುಮಾರ್ (24) ಹಾಗೂ ಕಿಣ್ಣಂಗಾರಿನ ಕಿರಣ್ ರಾಜ್ (27) ಎಂಬಿವರನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಬಳೆ ಕೃಷ್ಣ ಭವಣ್ ಹೋಟೆಲಿನ ಸಮೀಪದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಸಂಚರಿಸುತ್ತಿದ್ದ ಬೈಕ್ ಗೆ ಎದುರಿನಿಂದ ಆಗಮಿಸಿದ ಕಾರು ಡಿಕ್ಕಿ ಹೊಡೆದಿದೆ.ರಸ್ತೆಗೆಸೆಯಲ್ಪಟ್ಟ ಇಬ್ಬರ ತಲೆಗೂ ಗಂಭೀರ ಗಾಯ ಉಂಟಾಗಿದೆ.

Read More

ಕನ್ನಡ ಗ್ರಾಮದಲ್ಲಿ ಕಾಸರಗೋಡು ಗೋ-ಕುಟೀರದ ನಿರ್ಮಾಣಕ್ಕೆ ಚಾಲನೆ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕರಾದ ಶಿವರಾಮ ಕಾಸರಗೋಡು ಅವರ 60ನೇ ಜನ್ಮ ವರ್ಷಾಚರಣೆಯನ್ನು ಗೋ-ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಮಹತ್ವದ ಧಾರ್ಮಿಕ ಕಾರ್ಯಕ್ಕೆ ಚಾಲನೆ ನೀಡಲಾಯಿತು. 2025ರ ನವೆಂಬರ್ 4ರಂದು ಕಾಸರಗೋಡು ಕನ್ನಡ ಗ್ರಾಮದ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ **“ಕಾಸರಗೋಡು ಗೋ-ಕುಟೀರ”**ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭೂಮಿ ಪೂಜೆ ನೆರವೇರಿಸಿ, ಗೋ-ಕುಟೀರ…

Read More

ಸಹಕಾರಿ ಪಿಂಚಣಿದಾರರ ಬೇಡಿಕೆಗಳಿಗೆ ಧ್ವನಿ: ಮಂಜೇಶ್ವರದಲ್ಲಿ ಅನಿಶ್ಚಿತಾವಧಿ ಹೋರಾಟಕ್ಕೆ ಚಾಲನೆ

ಮಂಜೇಶ್ವರ: ಸಹಕಾರಿ ಪಿಂಚಣಿದಾರರ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟು ಕೇರಳ ಸಹಕಾರಿ ಪಿಂಚಣಿದಾರರ ಸಂಘಟನೆಯಾದ ಕೇರಳ ಕೋ-ಆಪರೇಟಿವ್ ಸರ್ವೀಸ್ ಪೆನ್ಷನರ್ಸ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅನಿಶ್ಚಿತಾವಧಿ ಹೋರಾಟಕ್ಕೆ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಚಾಲನೆ ದೊರಕಿತು. ರಾಜ್ಯ ಸಮರ ಪ್ರಚಾರ ವಾಹನ ಜಾಥಾಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಂಡೂರು ರಾಮಕೃಷ್ಣನ್ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ವಾಹನ ಜಾಥೆಯ ಕಾಸರಗೋಡು ಜಿಲ್ಲಾ ಉದ್ಘಾಟನೆ ಹೊಸಂಗಡಿಯಲ್ಲಿ ನಡೆಯಿತು.ಕೆ.ಆರ್. ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ಶ್ರೀಮತಿ ಎ.ಎಂ….

Read More

ಸಂಗೀತ ಲೋಕದ ಶಾಸ್ತ್ರೀಯ ಕಲಾ ತಪಸ್ವಿಗಳಾದ ಉಷಾ, ಈಶ್ವರ ಭಟ್ ದಂಪತಿಗಳಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಘೋಷಣೆ.

ಕಾಸರಗೋಡು : ಕೇರಳ ಸಂಗೀತ ಅಕಾಡೆಮಿಯ ಸ್ಕಾಲರ್ಷಿಪ್, ಇಂಡಿಯನ್ ಪೀಪಲ್ ಥೀಯೇಟರ್ ನ “ಗಾನ ಸುಧಾ “ಪ್ರಶಸ್ತಿ ವಿಜೇತೆ 1997ರಿಂದಲೇ ಕಾಸರಗೋಡಿನಲ್ಲಿ “ಶ್ರೀ ಗೋಪಾಲಕೃಷ್ಣ ಸಂಗೀತ ವಿದ್ಯಾಲಯ ಸ್ಥಾಪಿಸಿ ಸಾವಿರಾರು ಸಂಗೀತ ವಿದ್ಯಾರ್ಥಿಗಳಿಗೆ ಪ್ರತಿಭೆ ಬೆಳಗಿಸಲು ಸಂಗೀತ ಉಪಕರಣ ವಿಧಗ್ದ ತನ್ನ ಪತಿ ಶ್ರೀ ಈಶ್ವರ ಭಟ್ ಇವರ ಪ್ರೋಸ್ತಾಹದಿಂದ ಕಲಾ ತಪಸ್ಸು ಮಾಡುತ್ತಿರುವ ಹಾಗೂ ನೆರೆಯ ಹೊಸದುರ್ಗದಲ್ಲಿ ಸದ್ಗುರು ತ್ಯಾಗ ಬ್ರಹ್ಮ ಸಭಾ ” ಹುಟ್ಟು ಹಾಕುವಲ್ಲಿ ಪಾಲುಗೊಂಡು, ಕರ್ನಾಟಕ, ಕೇರಳ, ತಮಿಳುನಾಡಿನ ಸಭಾ ಗಳಲ್ಲಿ…

Read More

ಕಾಸರಗೋಡು ಜಿಲ್ಲಾ ಮೊಗೇರ ಸಂಘದಿಂದ ತ್ರಿಸ್ತರ ಪಂಚಾಯತ್ ಚುನಾಯಿತರಿಗೆ ಅಭಿನಂದನೆ

ಬದಿಯಡ್ಕ : ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವತಿಯಿಂದ ಇತ್ತೀ ಚೆಗೆ ನಡೆದ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಚುನಾಯಿತರಾದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಬಂದ್ಯೋಡ್ ಸಮುದಾಯ ಭವನದಲ್ಲಿ ನಿನ್ನೆ ಜರಗಿತು.ಕಾರ್ಯಕ್ರಮ ವನ್ನು ದೇವಸ್ವಬೋರ್ಡ್ ಸದಸ್ಯ ಎ ಕೆ ಶಂಕರ ಆದೂರ್ ಉದ್ಘಾಟಿಸಿದರು. ಬದಿಯಡ್ಕ ಪಂಚಾಯತ್ ಅಧ್ಯಕ್ಷ ಡಿ ಶಂಕರ.ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಅಜಕೊಡು ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ನಾಗೇಶ್ ಮಂಜೇಶ್ವರ.ಜಿಲ್ಲಾ ಪಂಚಾಯತ್ ಸದಸ್ಯ ರಾಮಪ್ಪ ಮಂಜೇಶ್ವರ, ಕಾಸರಗೋಡು ಅಗ್ನಿಶಾಮಕದಳ ಸಿಬ್ಬಂದಿ ಹರ್ಷ ಕನಿಯಾಲ…

Read More

ಫೆ.1ರಂದು ಹೊಸಂಗಡಿಯಲ್ಲಿ ರಾಷ್ಟ್ರ ಮಟ್ಟದ A ಗ್ರೇಡ್ ಕಬಡ್ಡಿ ಕ್ರೀಡಾಕೂಟ

ಕಾಸರಗೋಡು :ಕಾಸರಗೋಡಿನ ಕಬಡ್ಡಿ ಇತಿಹಾಸದಲ್ಲಿ ದಾಖಲೆಯನ್ನು ನಿರ್ಮಿಸಿದ ಶ್ರೀ ಅಯ್ಯಪ್ಪ ಕೃಪಾ ವೀರಮಾರುತಿ ವ್ಯಾಯಾಮ ಶಾಲೆ (ರಿ.), ಹೊಸಂಗಡಿ ಇವರ ವತಿಯಿಂದ ರಾಷ್ಟ್ರ ಮಟ್ಟದ A ಗ್ರೇಡ್ ಕಬಡ್ಡಿ ಕ್ರೀಡಾಕೂಟವು ದಿನಾಂಕ ಫೆಬ್ರವರಿ 1, 2026 ರಂದು ಆಯೋಜಿಸಲಾಗಿದೆ.ಕಬಡ್ಡಿ ಕ್ರೀಡಾಕೂಟವು ವೀರಮಾರುತಿ ವ್ಯಾಯಾಮ ಶಾಲೆ ಪರಿಸರದಲ್ಲಿ ನಡೆಯಲಿದ್ದು, ಕಾಸರಗೋಡು ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ. ಈ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪ್ರೊ ಕಬಡ್ಡಿ ಆಟಗಾರರು ಸೇರಿದಂತೆ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ…

Read More
error: Content is protected !!