ಕೋರ್ಟ್ ತೀರ್ಪು ಪ್ರಕಟಿಸುವ ಮೊದಲು ಆರಿಕ್ಕಾಡಿಯಲ್ಲಿ ಟೋಲ್ ವಸೂಲಿ ಆರಂಭ, ಕುಂಬಳೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಟೋಲ್ ವಸೂಲಿ ಯತ್ನ – ಸಂಘರ್ಷಕ್ಕೆ ತಿರುಗಿದ ಘಟನೆ

ಕುಂಬಳೆ : ಕುಂಬಳೆ ಟೋಲ್ ಬೂತ್ ಪ್ರಕರಣದ ತೀರ್ಪು ಮುಂದೂಡಲ್ಪಟ್ಟ ಹಿನ್ನಲೆಯಲ್ಲಿ, ಬುಧವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ವಸೂಲಿಯನ್ನು ಆರಂಭಿಸಿದೆ. ಪೊಲೀಸ್ ಭದ್ರತೆಯ ಮಧ್ಯೆ ಟೋಲ್ ವಸೂಲಿ ಆರಂಭವಾಗಿದ್ದು, ವಾಹನಗಳನ್ನು ನಿಲ್ಲಿಸಿ ಶುಲ್ಕ ವಸೂಲಿ ಮಾಡಲು ಪ್ರಾರಂಭಿಸಿದ ತಕ್ಷಣ ಸಮರ ಸಮಿತಿಯ ಪದಾಧಿಕಾರಿಗಳು ಟೋಲ್ ಬೂತ್ ಬಳಿ ಆಗಮಿಸಿದ್ದರು. ವಾಹನಗಳನ್ನು ತಡೆದು ಟೋಲ್ ವಸೂಲಿ ಆರಂಭಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳ ದೀರ್ಘ ಸಾಲುಗಳು ಕಂಡುಬಂದವು. ಸಂಜೆವರೆಗೆ…

Read More

ಅಗಸರ ಯಾನೆ ಮಡಿವಾಳರ ಸಂಘದಿಂದ ಸಮಾಜೋತ್ಸವ ಹಾಗೂ ಮಾಚಿದೇವ ಜಯಂತಿ ದಿನಾಚರಣೆ – ಫೆ.1ರಂದು

ಕಾಸರಗೋಡು : ಅಗಸರ ಯಾನೆ ಮಡಿವಾಳರ ಸಂಘ, ಕಾಸರಗೋಡು ಜಿಲ್ಲೆ ಇವರ ಆಶ್ರಯದಲ್ಲಿ ಸಮಾಜೋತ್ಸವ ಹಾಗೂ ಗುರು ಮಾಚಿದೇವ ಜಯಂತಿ ದಿನಾಚರಣೆ ಕಾರ್ಯಕ್ರಮವು ಫೆಬ್ರವರಿ 1, 2026 (ಭಾನುವಾರ) ರಂದು ಆಯೋಜಿಸಲಾಗಿದೆ.ಕಾರ್ಯಕ್ರಮವು ಕಣ್ಣೂರು, ಎಡನಾಡು ಸೇವಾ ಸಹಕಾರಿ ಬ್ಯಾಂಕ್ ಹಾಲ್, ಸೂರಂಬೈಲ್ನಲ್ಲಿ ನಡೆಯಲಿದ್ದು, ವಿವಿಧ ಘನಾತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಮಾಜದ ಮಕ್ಕಳಿಂದ ನೃತ್ಯ ವೈವಿಧ್ಯ…

Read More

ಯುವ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ 2026 ಫೆ. 22ರಂದು ಬೆಳಗ್ಗೆ 7 ಗಂಟೆಯಿಂದ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ಕಾಸರಗೋಡು- ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಚುಟುಕು ಯುವ ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಕೆಳಗಿನವರಾಗಿರಬೇಕು. ಒಬ್ಬರಿಗೆ…

Read More

ಚುಟುಕು ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ 2026 ಫೆ. 22ರಂದು ಬೆಳಗ್ಗೆ 7 ಗಂಟೆಯಿಂದ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಚುಟುಕು ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಒಬ್ಬರಿಗೆ…

Read More

ನಡೆದಾಡುವ ದಾರಿಯಿಲ್ಲದೆ ನರಕಯಾತನೆ ಅನುಭವಿಸುತ್ತಿರುವ ಬಾವುಟಿ ಮೂಲೆ ಸುರುಮತ್ತೋಡ್ ನಿವಾಸಿಗಳು

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತು ವ್ಯಾಪ್ತಿಯ 17ನೇ ವಾರ್ಡ್‌ನ ಬಾವುಟಿ ಮೂಲೆ ಸುರುಮತ್ತೋಡ್ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 10 ಕುಟುಂಬಗಳ ಬದುಕು ಇಂದು ಆಡಳಿತದ ನಿರ್ಲಕ್ಷ್ಯದ ಸಂಕೇತವಾಗಿ ಮಾರ್ಪಟ್ಟಿದೆ. ಮೂಲಭೂತ ಸೌಲಭ್ಯವೆನಿಸುವ ನಡೆಯಲು ಸರಿಯಾದ ದಾರಿಯೇ ಇಲ್ಲದ ಸ್ಥಿತಿಯಲ್ಲಿ ಈ ಕುಟುಂಬಗಳು ದಿನನಿತ್ಯದ ಜೀವನವನ್ನು ಕಳೆಯುವಂತಾಗಿದೆ. ಈ ಪ್ರದೇಶದಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಜೀವ ಪಣಕ್ಕಿಡಬೇಕಾದ ಸ್ಥಿತಿ ಎದುರಿಸುತ್ತಿದ್ದಾರೆ. ಗರ್ಭಿಣಿಯರು ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳುವುದು ಅಸಾಧ್ಯಕ್ಕೆ ಸಮಾನವಾಗಿದ್ದು, ವೃದ್ಧರು ಹಾಗೂ ಭಿನ್ನಚೇತನರು ಮನೆಯೊಳಗೆ…

Read More

ಮಂಜೇಶ್ವರ: ಸುರೇಂದ್ರನ್ ಸಕ್ರಿಯತೆ ಹೆಚ್ಚಳ – ಬಿಜೆಪಿ ಅಧ್ಯಕ್ಷೆ ಅಶ್ವಿನಿಯ ಅವಕಾಶಕ್ಕೆ ಸವಾಲು?

ಮಂಜೇಶ್ವರ: ಮುಂದಿನ ವಿಧಾನಸಭಾ ಚುನಾವಣೆಗೆ ಮಂಜೇಶ್ವರ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸಕ್ರಿಯರಾಗುತ್ತಿದ್ದಂತೆ, ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿಯ ಅವಕಾಶ ಕುಗ್ಗುತ್ತಿರುವ ಸೂಚನೆಗಳಿವೆ. ಈ ಕ್ಷೇತ್ರದಲ್ಲೇ ತನಗೆ ಅವಕಾಶ ನೀಡಬೇಕೆಂದು ಅಶ್ವಿನಿ ಪಕ್ಷದ ನಾಯಕರಿಗೆ ಈಗಾಗಲೇ ಮನವಿ ಸಲ್ಲಿಸಿದ್ದರು. ಇದೇ ವೇಳೆ, ಸುರೇಂದ್ರನ್ ಅಭ್ಯರ್ಥಿತ್ವಕ್ಕೆ ಪಕ್ಷದ ಒಂದು ವರ್ಗ ವಿರೋಧ ವ್ಯಕ್ತಪಡಿಸಿದೆ. ಮೂರು ಬಾರಿ ಸೋಲು ಕಂಡ ಸುರೇಂದ್ರನ್ ಬದಲಿಗೆ ಈ ಬಾರಿ ಅಶ್ವಿನಿಗೆ ಅವಕಾಶ ನೀಡಬೇಕೆಂದು ಅವರ ಒತ್ತಾಯವಾಗಿದೆ. ಇದನ್ನು ಮನಗಂಡ…

Read More

ಮಂಜೇಶ್ವರ: ಉಪ್ಪಳ–ಬದಿಯಡ್ಕದಲ್ಲಿ ಕಳ್ಳತನ ಅಟ್ಟಹಾಸ, ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿ

ಮಂಜೇಶ್ವರ: ಕುಂಬಳೆ ಕಳವು ಪ್ರಕರಣದ ತನಿಖೆ ಮುಂದುವರಿಯುತ್ತಿರುವ ಮಧ್ಯೆ ಉಪ್ಪಳ ಹಾಗೂ ಬದಿಯಡ್ಕದಲ್ಲಿ ಕಳ್ಳರು ನಗ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಉಪ್ಪಳ ಬಪ್ಪಾಯಿತೊಟ್ಟಿಯ ಅಹಮ್ಮದ್ ಮಂಜಿಲ್‌ನ ರುಕ್ಸಾನ ಅವರ ಮನೆಯಿಂದ 23.5 ಪವನ್ ಚಿನ್ನಾಭರಣಗಳು ಕಳವಿಗೀಡಾಗಿದೆ. ಜನವರಿ 15ರಿಂದ 21ರ ನಡುವೆ ಕಳವು ನಡೆದಿದ್ದು, ಮಗಳ ಮದುವೆ ದಿನ ಈ ವಿಷಯ ಗೊತ್ತಾಗಿದೆ. ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ.ಬದಿಯಡ್ಕ ಕನ್ಯಪ್ಪಾಡಿಯ ನಿಲೋಫರ್ ಮಹಲ್‌ನಲ್ಲಿ ಬೀಗ ಮುರಿದು ಒಳನುಗ್ಗಿದ ಕಳ್ಳರು 8,300 ರೂ. ನಗದು ಕಳವು ಮಾಡಿದ್ದಾರೆ. ಫಸೀಲ…

Read More

ಮಂಜೇಶ್ವರ: ಪೈವಳಿಕೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಂಜೇಶ್ವರ : ಪೈವಳಿಕೆಯಲ್ಲಿ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಸಾವನ್ನಪ್ಪಿದ್ದಾನೆ. ಮೂಲತಃ ಕೊಚ್ಚಿ ಆಲುವಾ ನಿವಾಸಿ ಹಾಗೂ ಕಳೆದ 20 ವರ್ಷಗಳಿಂದ ಪೈವಳಿಕೆ ಮರಿಕೆಯಲ್ಲಿ ವಾಸಿಸುತ್ತಿದ್ದ ಬಾಬು ಕೆ.ಯು (46) ಸಾವನ್ನಪ್ಪಿದ ದುರ್ದೈವಿ. ಈ ಹಿಂದೆ ಟೈಲ್ಸ್ ಹಾಸುವ ಕೆಲಸ ಮಾಡುತ್ತಿದ್ದ ಈತ ಬಳಿಕ ಪೈವಳಿಕೆ ಪಂಚಾಯತ್‌ನ ಉದ್ಯೋಗ ಖಾತರಿ ಯೋಜನೆಯಲ್ಲಿ ಕಾರ್ಮಿಕನಾಗಿದ್ದಾನೆನ್ನಲಾಗಿದೆ. ಈ ತಿಂಗಳ 19ರಂದು ಸಂಜೆ ಪತ್ನಿ ಮನೆಗೆ ಬಂದಾಗ ಕಾಣೆಯಾಗಿದ್ದ ಬಾಬು, ಬಳಿಕ…

Read More

ವರ್ಕಾಡಿ ಬೋಳದ ಪದವು: ಶ್ರೀ ಬ್ರಹ್ಮ ಮುಗೇರ–ಕೊರಗಜ್ಜ ಗುಳಿಗ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಕಾಡಿ :ವರ್ಕಾಡಿ ಬೋಳದ ಪದವಿನಲ್ಲಿ ನೆಲೆಸಿರುವ ಶ್ರೀ ಬ್ರಹ್ಮ ಮುಗೇರ ಹಾಗೂ ಕೊರಗಜ್ಜ ಗುಳಿಗ ದೈವಗಳ ಸಾನಿಧ್ಯದಲ್ಲಿ ನಡೆಯಲಿರುವ ನೇಮೋತ್ಸವವು ದಿನಾಂಕ 29/03/2026ನೇ ಆದಿತ್ಯವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ವರ್ಕಾಡಿ ಸಂತೋಷ್ ತಂತ್ರಿಯವರು ಕ್ಷೇತ್ರದ ವಠಾರದಲ್ಲಿ ಬಿಡುಗಡೆಗೊಳಿಸಿದರು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ರೈ ಅಡ್ಕ ವಹಿಸಿದ್ದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ರವಿ ಮುಡಿಮಾರು, ಕೋಶಾಧಿಕಾರಿ ಮನೋಜ್ ಭಂಡಾರ ಮನೆ ವರ್ಕಾಡಿ, ಗೌರವ ಸಲಹೆಗಾರರಾದ…

Read More

ಮಂಗಲ್ಪಾಡಿಯಲ್ಲಿ ಅಪಾಯಕರ ಸೇತುವೆ: ತಕ್ಷಣ ನವೀಕರಣಕ್ಕೆ ಸ್ಥಳೀಯರ ಒತ್ತಾಯ

ಉಪ್ಪಳ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಪ್ರಮುಖ ಜಲಸ್ರೋತಗಳಲ್ಲಿ ಒಂದಾದ ಸ್ವರ್ಣಗಿರಿ ತೋಡಿನ ಮೇಲೆ ನಿರ್ಮಿಸಲಾದ ಮಾಣಿಬಿತ್ತಿಲು ವಿ.ಸಿ.ಬಿ ಕಮ್ ಬ್ರಿಡ್ಜ್ ಗಂಭೀರ ಜೀರ್ಣಾವಸ್ಥೆಗೆ ತಲುಪಿದ್ದು, ಕುಸಿತದ ಭೀತಿಯನ್ನು ಎದುರಿಸುತ್ತಿದೆ.ನಾಲ್ಕು ದಶಕಕ್ಕೂ ಹೆಚ್ಚು ಹಳೆಯದಾದ ಈ ಸೇತುವೆಯನ್ನು ನವೀಕರಿಸಿ ಮರುನಿರ್ಮಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಮುಟ್ಟಂ,ಬೇರಿಕೆ ಹಾಗೂ ಕುಕ್ಕಾರ್ ಭಾಗದ ನೂರಾರು ಎಕರೆ ಕೃಷಿಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಮೈನರ್ ಇರಿಗೇಷನ್ ಅಣೆಕಟ್ಟು ಹಾಗೂ ಅದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ–ಸೇತುವೆಯನ್ನು ನಿರ್ಮಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿಯಿಂದ ನೇರವಾಗಿ…

Read More
error: Content is protected !!