ಸಂಧ್ಯಾರಾಣಿ ಟೀಚರ್ ಅವರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಘೋಷಣೆ
ಕಾಸರಗೋಡು:ಗಡಿನಾಡು ಕಾಸರಗೋಡಿನ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕನ್ನಡ ಭವನ ಸಮೂಹ ಸಂಸ್ಥೆಗಳ ಮುಖ್ಯಸ್ಥೆ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ 2026ನೇ ಸಾಲಿನ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶಿರೂರು ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ ಮತ್ತು ಕಥಾಬಿಂದು ಸಾಹಿತ್ಯ ವೇದಿಕೆಯ ಆಶ್ರಯದಲ್ಲಿ ಏಪ್ರಿಲ್ 12ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ ‘ಕಥಾಬಿಂದು ಸಾಹಿತ್ಯ ಸಮ್ಮೇಳನ 2026’ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಸಮ್ಮೇಳನವನ್ನು ಶಿರೂರು…
