ಕೊಪ್ಪಳದ ಸಾಹಿತಿ ದಂಪತಿಗಳಾದ ಮಹೇಶ್ ಮನ್ನಾಪುರ–ಅನ್ನಪೂರ್ಣರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’

ಕಾಸರಗೋಡು, ಜು.15: ಕೊಪ್ಪಳ ಜಿಲ್ಲೆಯ ಶ್ರೇಷ್ಠ ಸಾಹಿತಿಗಳಾದ ಶ್ರೀ ಮಹೇಶ್ ಮನ್ನಾಪುರ ಹಾಗೂ ಶ್ರೀಮತಿ ಅನ್ನಪೂರ್ಣ ಮಹೇಶ್ ಮನ್ನಾಪುರ ದಂಪತಿಗಳಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ. ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26ರಂದು ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ…

Read More

ಶಸ್ತ್ರಚಿಕಿತ್ಸೆಯ ವೇಳೆ 9 ವರ್ಷದ ಬಾಲಕನ ದಾರುಣ ಅಂತ್ಯ

​ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ವೇಳೆ 9 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಬೇಡಕಂ ತಲೇಕುನ್ನಿನ ಅಶ್ರಫ್ ಮುಸ್ಲಿಯಾರ್ ಅವರ ಪುತ್ರ ಮುಹಮ್ಮದ್ ಇಯಾಸ್ ಮೃತ ಬಾಲಕ.ಈತ ಕುಂಡಂಕುಳಿ ಸರ್ಕಾರಿ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.

Read More

ವ್ಯಕ್ತಿಯನ್ನು ಹುಡುಕುವ ನೆಪದಲ್ಲಿ ಬಂದ ದುಷ್ಕರ್ಮಿಯಿಂದ ವೃದ್ಧೆಯ ಕುತ್ತಿಗೆಯಿಂದ ಸರ ಕಳವು

​ ಕಾಸರಗೋಡು/ಕಣ್ಣೂರು: ಕಣ್ಣೂರಿನ ತಳಿಪರಂಬಿನ ಪೂಮಂಗಲಂನಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರವನ್ನು ಕಿತ್ತುಕೊಂಡು ದುಷ್ಕರ್ಮಿಯೊಬ್ಬ ಪರಾರಿಯಾದ ಘಟನೆ ನಡೆದಿದೆ. ಸಿಪಿಎಂ ತಳಿಪರಂಬು ಏರಿಯಾ ಸಮಿತಿ ಸದಸ್ಯ ಕೆ. ನಾರಾಯಣನ್ ಅವರ ಸಹೋದರಿ ಕಲ್ಯಾಣಿ (80) ಹಲ್ಲೆಗೊಳಗಾದವರು. ​ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಕಲ್ಯಾಣಿಯವರ ಮನೆಯ ಪಕ್ಕದಲ್ಲಿ ವಾಸವಿರುವ, ಚಿತ್ರಮಂದಿರದಲ್ಲಿ ಕೆಲಸ ಮಾಡುವ ಕಾಸರಗೋಡು ಮೂಲದ ವ್ಯಕ್ತಿಯನ್ನು ಹುಡುಕಿಕೊಂಡು ಬಂದವನಂತೆ ಮುಖಗವಸು ಧರಿಸಿದ ವ್ಯಕ್ತಿ ನಟಿಸಿದ್ದಾನೆ. ಆತನಿಗೆ ಕೂಲಿ ಕೊಡಬೇಕಿದೆ, ಆದರೆ ಕರೆ ಮಾಡಿದರೂ ಬಾಗಿಲು ತೆರೆಯುತ್ತಿಲ್ಲ…

Read More

ಕಾಸರಗೋಡು ಮಕ್ಕಳ ಹಕ್ಕುಗಳ ಆಯೋಗ ಸಿಟ್ಟಿಂಗ್: 30 ದೂರುಗಳಲ್ಲಿ 20 ಇತ್ಯರ್ಥ,10 ಪ್ರಕರಣ ಮುಂದೂಡಿಕೆ

ಕಾಸರಗೋಡು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಜಿಲ್ಲಾ ಮಟ್ಟದ ಸಿಟ್ಟಿಂಗ್ ಕಲೆಕ್ಟೇಟ್ ಕಾನ್ಸರೆನ್ಸ್ ಹಾಲ್‌ನಲ್ಲಿ ಜರಗಿತು. ಅಧ್ಯಕ್ಷ ಕೆ.ವಿ. ಮನೋಜ್ ಕುಮಾ‌ರ್ ಅಧ್ಯಕ್ಷತೆ ವಹಿಸಿದರು. ಆಯೋಗದ ಸದಸ್ಯ ಕೆ.ಬಿ. ಮೋಹನ್ ಕುಮಾರ್ ಹಿಯರಿಂಗ್ ನಡೆಸಿದರು. ಪರಿಗಣಿಸಿದ 30 ದೂರುಗಳ ಪೈಕಿ 20 ದೂರುಗಳನ್ನು ಇತ್ಯರ್ಥಗೊಳಿಸಲಾಯಿತು. 10 ಪ್ರಕರಣಗಳನ್ನು ಆಯೋಗದ ಆದೇಶ ಹಾಗೂ ನಿರ್ದೇಶಕ್ಕಾಗಿ ಮುಂದೂಡಲಾಗಿದೆ. ಚೆಂಬರಿಕ ಜಿಎಲ್‌ಪಿ ಶಾಲೆಯ ಕಂಪೌಂಡ್ ನಿರ್ಮಿಸುವಂತೆ ಹೈಕೋರ್ಟ್ ಆದೇಶದಂತೆ ಆಯೋಗ ಚೆಮ್ನಾಡ್ ಪಂ. ಕಾರ್ಯದರ್ಶಿಗೆ ನಿರ್ದೇಶ ನೀಡಿದೆ. ಅದ್ರುಕಳಿ ಜಿಎಲ್‌ಪಿ…

Read More

​ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಆರೋಪಿ ಬಂಧನ

ಕಾಸರಗೋಡು: ಶಾಲೆಯಿಂದ ಮನೆಗೆ ತೆರಳಲು ವಾಹನಕ್ಕಾಗಿ ಕಾಯುತ್ತಿದ್ದ 15 ವರ್ಷದ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ನಡೆದಿದೆ. ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರವಾಸಿ ಇಲ್ಯಾಸ್ ಇಸ್ಮಾಯಿಲ್ (34) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ​ಮಂಗಳವಾರ ಸಂಜೆ 4:30ರ ಸುಮಾರಿಗೆ ಬಾಲಕಿ ಮನೆಗೆ ತೆರಳಲು ಕಾಯುತ್ತಿದ್ದಾಗ, ಆರೋಪಿಯು ಆಕೆಯ ಫೋಟೋ ತೆಗೆಯಲು ಯತ್ನಿಸಿ, ನಂತರ ಬಲವಂತವಾಗಿ ಅತಿಕ್ರಮಣ ನಡೆಸಿದ್ದಾನೆ. ಬಾಲಕಿ ಪ್ರತಿರೋಧ ವ್ಯಕ್ತಪಡಿಸಿದರೂ ಆರೋಪಿ ಕಿರುಕುಳ ಮುಂದುವರಿಸಿದಾಗ…

Read More

ಮನೆಗಳ್ಳತನ: 110 ಗ್ರಾಂ ಚಿನ್ನಾಭರಣ ಮತ್ತು ನಗದು ಕಳವು; ತನಿಖೆ ಚುರುಕು

ಮಂಜೇಶ್ವರ: ಮನೆಯವರು ದೇವಸ್ಥಾನದ ಭೇಟಿ ಮತ್ತು ಶಾಲಾ-ಕಾಲೇಜುಗಳಿಗೆ ತೆರಳಿದ್ದ ಸಮಯವನ್ನು ಬಳಸಿಕೊಂಡು, ಮನೆ ಬಾಗಿಲು ಮುರಿದು ಭಾರಿ ಕಳ್ಳತನ ನಡೆಸಿರುವ ಘಟನೆ ನಡೆದಿದೆ. ಪೈವಳಿಕೆ ಕುರುಡಪದವಿನ ಸುಬ್ರಾಯ ಸಾಯ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಸುಮಾರು 110 ಗ್ರಾಂ ಚಿನ್ನಾಭರಣಗಳು ಹಾಗೂ 20,000 ರೂ. ನಗದು ಕಳವಾಗಿದೆ. ಈ ತಿಂಗಳ 9 ರಿಂದ 23ರ ನಡುವಿನ ಅವಧಿಯಲ್ಲಿ ಈ ಕಳ್ಳತನ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸುಬ್ರಾಯ ಸಾಯ ಮತ್ತು ಅವರ ಪತ್ನಿ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ…

Read More

ಕೇರಳದಲ್ಲಿ ವಿ.ಡಿ. ಸತೀಶನ್ ಪೊಲೀಸ್ ಕೂಡ ಪಿಣರಾಯಿ ಪೊಲೀಸರ ಹಾದಿಯಲ್ಲಿ: ಎಂ.ಎಲ್. ಅಶ್ವಿನಿ

ಕಾಸರಗೋಡು: ಕೇರಳದಲ್ಲಿ ಪ್ರಸ್ತುತ ವಿ.ಡಿ. ಸತೀಶನ್ ಅವರ ಪೊಲೀಸರು ಸಹ ಪಿಣರಾಯಿ ಪೊಲೀಸರ ಹಾದಿಯಲ್ಲೇ ಸಾಗುತ್ತಿದ್ದಾರೆ. ಧಾರ್ಮಿಕ ಉಗ್ರಗಾಮಿಗಳಿಗೆ, ಮಾವೋವಾದಿಗಳಿಗೆ ಮತ್ತು ಭಯೋತ್ಪಾದಕರಿಗೆ ಕೇರಳವು ಸುರಕ್ಷಿತ ತಾಣವಾಗಿ ಮಾರ್ಪಟ್ಟಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದ್ದಾರೆ. ಕರ್ನಾಟಕದ ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೊಚ್ಚಿಯಿಂದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ನಡೆದು ನಾಲ್ಕು ವರ್ಷಗಳು…

Read More

ಖಾಸಗಿ ಬಸ್ ಮಾಲಿಕರ ಸಂಕಷ್ಟ: ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ

ಕಾಸರಗೋಡು : ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವುದರಿಂದ ಖಾಸಗಿ ಬಸ್ ಮಾಲೀಕರು ಎದುರಿಸುತ್ತಿರುವ ನಷ್ಟದ ಬಗ್ಗೆ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಮಾಜಿ ಸಾರಿಗೆ ಆಯುಕ್ತ ಕೆ. ಪದ್ಮಕುಮಾರ್ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಿದೆ. ​ತಿರುವನಂತಪುರದಲ್ಲಿ ಸಚಿವ ಸಿ.ಪಿ. ಜೋನ್ ಅವರು ಖಾಸಗಿ ಬಸ್ ಮಾಲೀಕರ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ, ಬಸ್ ಮಾಲೀಕರ ಸಮಸ್ಯೆಗಳನ್ನು ಪರಿಹರಿಸಲು ಹಲವು ಕ್ರಮಗಳ ಭರವಸೆ ನೀಡಿದರು. ತೆರಿಗೆ ಪಾವತಿಯಲ್ಲಿ ಸರಳೀಕರಣ ಮತ್ತು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅನುಮತಿ…

Read More

ಸರ್ಕಾರಿ ಪರೀಕ್ಷೆಯಲ್ಲಿ ಮೊಬೈಲ್ ಚೀಟಿಂಗ್; ಕೆಎಸ್‌ಇಬಿ ಸಿಬ್ಬಂದಿ ಅರೆಸ್ಟ್

​ಮಂಜೇಶ್ವರ: ಮಟ್ಟನ್ನೂರು ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಕೇರಳ ಸರ್ಕಾರಿ ಪ್ರಮಾಣಪತ್ರ ಪರೀಕ್ಷೆಯಲ್ಲಿ, ಮೊಬೈಲ್ ಫೋನ್ ಬಳಸಿ ನಕಲು ಮಾಡುತ್ತಿದ್ದ ಆರೋಪದಡಿ ಕೆಎಸ್‌ಇಬಿ ತಾತ್ಕಾಲಿಕ ನೌಕರ ಎಸ್. ಜನಾರ್ಧನ (34) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಕುರುಡಪದವು ಸಾದಂಗಯ ನಿವಾಸಿಯಾದ ಈತ, ಖಾಯಂ ಉದ್ಯೋಗ ಪಡೆಯುವ ಉದ್ದೇಶದಿಂದ ಪರೀಕ್ಷೆಗೆ ಹಾಜರಾಗಿದ್ದನೆನ್ನಲಾಗಿದೆ. ​ಪರೀಕ್ಷಾ ಕೇಂದ್ರದ ಮೇಲ್ವಿಚಾರಕರ ದೂರಿನ ಮೇರೆಗೆ ಕೂತುಪರಂಬ ಎಸಿಪಿ ಸಿಬಿ ಟೋಮ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ತಾತ್ಕಾಲಿಕ ನೌಕರರ ವಾಟ್ಸಪ್ ಗ್ರೂಪ್‌ನ ಅಡ್ಮಿನ್ ಆಗಿರುವ ವಡಗರ ನಿವಾಸಿ ಸುರೇಶ್…

Read More

ಕಾಸರಗೋಡಿನಲ್ಲಿ ಭೀಕರ ಕಾರು ಅಪಘಾತ – ಏರ್‌ಬ್ಯಾಗ್‌ಗಳಿಂದ ಪ್ರಯಾಣಿಕರ ಜೀವ ಉಳಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾಸರಗೋಡಿನಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಲವು ಬಾರಿ ಉರುಳಿ ರಸ್ತೆಯ ಬದಿಯಲ್ಲಿ ನಿಂತಿದೆ. ಅಪಘಾತದ ತೀವ್ರತೆ ಭಾರೀ ಆಗಿದ್ದರೂ, ಕಾರಿನಲ್ಲಿದ್ದ ಏರ್‌ಬ್ಯಾಗ್‌ಗಳು ಕ್ಷಣಾರ್ಧದಲ್ಲಿ ತೆರೆದುಕೊಂಡ ಪರಿಣಾಮ ಒಳಗಿದ್ದ ಪ್ರಯಾಣಿಕರು ಗಂಭೀರ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ಭೀಕರತೆ…

Read More
error: Content is protected !!