ಎ.ಕೆ.ಎಂ. ಅಶ್ರಫ್ಗೆ ಸಚಿವ ಸ್ಥಾನ ಸಾಧ್ಯತೆ: ಕಾಸರಗೋಡಿಗೆ ಮತ್ತೆ ಸಚಿವ ಪ್ರಾತಿನಿಧ್ಯ?
ಮಂಜೇಶ್ವರ, ಮೇ 7: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ 29,252 ಮತಗಳ ಭಾರೀ ಅಂತರದಲ್ಲಿ ಗೆಲುವು ಸಾಧಿಸಿರುವ ಎ.ಕೆ.ಎಂ. ಅಶ್ರಫ್ ಅವರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಕಳೆದ ಐದು ವರ್ಷಗಳಿಂದ ಕಾಸರಗೋಡು ಜಿಲ್ಲೆಗೆ ಸಚಿವ ಪ್ರಾತಿನಿಧ್ಯ ಇಲ್ಲದ ಹಿನ್ನೆಲೆಯಲ್ಲಿ, ಈ ಕೊರತೆಯನ್ನು ನೀಗಿಸುವ ಬಗ್ಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಸಮಿತಿ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 2016-21ರ ಅವಧಿಯಲ್ಲಿ ಇ. ಚಂದ್ರಶೇಖರನ್ ಕಂದಾಯ ಸಚಿವರಾಗಿದ್ದ ಬಳಿಕ ಜಿಲ್ಲೆಗೆ ಸಚಿವ…